Homeಅಂತರಾಷ್ಟ್ರೀಯಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

ಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

- Advertisement -
- Advertisement -

ಅಫ್ಘಾನಿಸ್ತಾನದ ಅಸದಾಬಾದ್ ನಗರದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರು ರಾಷ್ಟ್ರಧ್ವಜವನ್ನು ಹಾರಿಸಿದ್ದು ಗುಂಡಿನ ದಾಳಿಗೆ ಕಾರಣ ಎನ್ನಲಾಗಿದೆ. ಬುಧವಾರ ಇದೇ ರೀತಿಯ ಪ್ರತಿಭಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.

ಮಾಧ್ಯಮಗಳ ಪ್ರಕಾರ ಬಿಳಿ ತಾಲಿಬಾನ್ ಧ್ವಜಗಳನ್ನು ಕಿತ್ತುಹಾಕಿದ ಪ್ರತಿಭಟನಾಕಾರರು ಅಫ್ಘಾನ್ ಧ್ವಜವನ್ನು ಹಾರಿಸುತ್ತಿದ್ದರು. ಇದರಿಂದ ಕೋಪಗೊಂಡ ತಾಲಿಬಾನಿಗಳು ಪ್ರತಿಭಟನಾಕಾರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್‌ ಭಾನುವಾರ ವಶಪಡಿಸಿಕೊಂಡ ನಂತರ ಜನ ನಿಧಾನವಾಗಿ ವಿರೋಧಿಸಲು ಆರಂಭಿಸಿದ್ದಾರೆ.

ಅಸಾದಾಬಾದ್‌ನಲ್ಲಿನ ಸಾವುಗಳು ಗುಂಡಿನ ದಾಳಿಯಿಂದ ಉಂಟಾಗಿದೆಯೇ ಅಥವಾ ಗುಂಡಿನಿಂದ ತಪ್ಪಿಸಿಕೊಳ್ಳುವಾಗ ಉಂಟಾದ ಕಾಲ್ತುಳಿತದಿಂದ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಪ್ರತ್ಯಕ್ಷದರ್ಶಿ ಕುಹಾರ್ ಪ್ರಾಂತ್ಯದ ಮೊಹಮ್ಮದ್ ಸಲೀಂ ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

“ನೂರಾರು ಜನರು ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ಬೀದಿಗೆ ಬಂದರು. ಮೊದಲಿಗೆ ನಾನು ಹೆದರುತ್ತಿದ್ದೆ. ಆದರೆ ನನ್ನ ನೆರೆಹೊರೆಯವರೊಬ್ಬರು ರ್‍ಯಾಲಿಯಲ್ಲಿ ಸೇರಿಕೊಂಡಿದ್ದನ್ನು ನೋಡಿದಾಗ ನಾನು ಮನೆಯಲ್ಲಿರುವ ಧ್ವಜವನ್ನು ಹೊರತೆಗೆದೆ. ತಾಲಿಬಾನ್‌ಗಳ ಕಾಲ್ತುಳಿತ ಮತ್ತು ಗುಂಡಿನ ದಾಳಿಯಲ್ಲಿ ಹಲವಾರು ಜನರು ಸಾವನ್ನಪ್ಪಿದರು ಮತ್ತು ಗಾಯಗೊಂಡಿದ್ದಾರೆ” ಎಂದು ಮೊಹಮ್ಮದ್ ಸಲೀಂ ವಿವರಿಸಿದ್ದಾರೆ.

ಬುಧವಾರ, ಕೂಡ ಜಲಾಲಾಬಾದ್‌ನಲ್ಲಿ ಕಪ್ಪು, ಕೆಂಪು ಮತ್ತು ಹಸಿರು ಬಣ್ಣದ ರಾಷ್ಟ್ರೀಯ ಧ್ವಜವನ್ನು ಹಾರಿಸಿದ್ದ ಪ್ರತಿಭಟನಾಕಾರರ ಮೇಲೆ ತಾಲಿಬಾನಿಗಳು ಗುಂಡು ಹಾರಿಸಿದರು. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸಾಕ್ಷಿಗಳು ಮತ್ತು ಮಾಧ್ಯಮಗಳು ವರದಿ ಮಾಡಿವೆ.

Three dead after anti-Taliban protests in Jalalabad - World - Aaj.tv

ತಾಲಿಬಾನ್ ವಿರುದ್ಧ ಜನರನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿರುವ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಪ್ರತಿಭಟನೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ರಾಷ್ಟ್ರಧ್ವಜವನ್ನು ಹೊತ್ತುಕೊಂಡು ರಾಷ್ಟ್ರದ ಘನತೆಗಾಗಿ ನಿಂತವರಿಗೆ ಸೆಲ್ಯೂಟ್ ಮಾಡಿ” ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದರು.

ಅಫ್ಘಾನಿಸ್ತಾನವು 1919 ರ ಆಗಸ್ಟ್ 19 ರಂದು ಬ್ರಿಟಿಷ್ ನಿಯಂತ್ರಣದಿಂದ ಸ್ವಾತಂತ್ರ್ಯ ಪಡೆಯಿತು. ಹೀಗಾಗಿ ಆಗಸ್ಟ್ 19 ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ.


ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....