Homeಅಂತರಾಷ್ಟ್ರೀಯಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

ಅಫ್ಘಾನ್ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳಿಂದ ಗುಂಡಿನ ದಾಳಿ, ಹಲವು ಮಂದಿ ಸಾವು

- Advertisement -
- Advertisement -

ಅಫ್ಘಾನಿಸ್ತಾನದ ಅಸದಾಬಾದ್ ನಗರದಲ್ಲಿ ಗುರುವಾರ ನಡೆದ ಸ್ವಾತಂತ್ರ್ಯೋತ್ಸವದ ರ್‍ಯಾಲಿಯಲ್ಲಿ ತಾಲಿಬಾನಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರು ರಾಷ್ಟ್ರಧ್ವಜವನ್ನು ಹಾರಿಸಿದ್ದು ಗುಂಡಿನ ದಾಳಿಗೆ ಕಾರಣ ಎನ್ನಲಾಗಿದೆ. ಬುಧವಾರ ಇದೇ ರೀತಿಯ ಪ್ರತಿಭಟನೆಯಲ್ಲಿ ಮೂವರು ಸಾವನ್ನಪ್ಪಿದ್ದರು.

ಮಾಧ್ಯಮಗಳ ಪ್ರಕಾರ ಬಿಳಿ ತಾಲಿಬಾನ್ ಧ್ವಜಗಳನ್ನು ಕಿತ್ತುಹಾಕಿದ ಪ್ರತಿಭಟನಾಕಾರರು ಅಫ್ಘಾನ್ ಧ್ವಜವನ್ನು ಹಾರಿಸುತ್ತಿದ್ದರು. ಇದರಿಂದ ಕೋಪಗೊಂಡ ತಾಲಿಬಾನಿಗಳು ಪ್ರತಿಭಟನಾಕಾರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್‌ ಭಾನುವಾರ ವಶಪಡಿಸಿಕೊಂಡ ನಂತರ ಜನ ನಿಧಾನವಾಗಿ ವಿರೋಧಿಸಲು ಆರಂಭಿಸಿದ್ದಾರೆ.

ಅಸಾದಾಬಾದ್‌ನಲ್ಲಿನ ಸಾವುಗಳು ಗುಂಡಿನ ದಾಳಿಯಿಂದ ಉಂಟಾಗಿದೆಯೇ ಅಥವಾ ಗುಂಡಿನಿಂದ ತಪ್ಪಿಸಿಕೊಳ್ಳುವಾಗ ಉಂಟಾದ ಕಾಲ್ತುಳಿತದಿಂದ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಪ್ರತ್ಯಕ್ಷದರ್ಶಿ ಕುಹಾರ್ ಪ್ರಾಂತ್ಯದ ಮೊಹಮ್ಮದ್ ಸಲೀಂ ಹೇಳಿದ್ದಾರೆ.

ಇದನ್ನೂ ಓದಿ: ಅಫ್ಘಾನ್ ಜನರು ಪಾಕಿಸ್ತಾನಕ್ಕಿಂತಲೂ ಭಾರತದಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ- ಕಾಬೂಲ್‌ನಿಂದ ಬಂದ ಪತ್ರಕರ್ತೆ

“ನೂರಾರು ಜನರು ರ್‍ಯಾಲಿಯಲ್ಲಿ ಪಾಲ್ಗೊಳ್ಳಲು ಬೀದಿಗೆ ಬಂದರು. ಮೊದಲಿಗೆ ನಾನು ಹೆದರುತ್ತಿದ್ದೆ. ಆದರೆ ನನ್ನ ನೆರೆಹೊರೆಯವರೊಬ್ಬರು ರ್‍ಯಾಲಿಯಲ್ಲಿ ಸೇರಿಕೊಂಡಿದ್ದನ್ನು ನೋಡಿದಾಗ ನಾನು ಮನೆಯಲ್ಲಿರುವ ಧ್ವಜವನ್ನು ಹೊರತೆಗೆದೆ. ತಾಲಿಬಾನ್‌ಗಳ ಕಾಲ್ತುಳಿತ ಮತ್ತು ಗುಂಡಿನ ದಾಳಿಯಲ್ಲಿ ಹಲವಾರು ಜನರು ಸಾವನ್ನಪ್ಪಿದರು ಮತ್ತು ಗಾಯಗೊಂಡಿದ್ದಾರೆ” ಎಂದು ಮೊಹಮ್ಮದ್ ಸಲೀಂ ವಿವರಿಸಿದ್ದಾರೆ.

ಬುಧವಾರ, ಕೂಡ ಜಲಾಲಾಬಾದ್‌ನಲ್ಲಿ ಕಪ್ಪು, ಕೆಂಪು ಮತ್ತು ಹಸಿರು ಬಣ್ಣದ ರಾಷ್ಟ್ರೀಯ ಧ್ವಜವನ್ನು ಹಾರಿಸಿದ್ದ ಪ್ರತಿಭಟನಾಕಾರರ ಮೇಲೆ ತಾಲಿಬಾನಿಗಳು ಗುಂಡು ಹಾರಿಸಿದರು. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಸಾಕ್ಷಿಗಳು ಮತ್ತು ಮಾಧ್ಯಮಗಳು ವರದಿ ಮಾಡಿವೆ.

Three dead after anti-Taliban protests in Jalalabad - World - Aaj.tv

ತಾಲಿಬಾನ್ ವಿರುದ್ಧ ಜನರನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿರುವ ಉಪಾಧ್ಯಕ್ಷ ಅಮರುಲ್ಲಾ ಸಲೇಹ್ ಪ್ರತಿಭಟನೆಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ರಾಷ್ಟ್ರಧ್ವಜವನ್ನು ಹೊತ್ತುಕೊಂಡು ರಾಷ್ಟ್ರದ ಘನತೆಗಾಗಿ ನಿಂತವರಿಗೆ ಸೆಲ್ಯೂಟ್ ಮಾಡಿ” ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದರು.

ಅಫ್ಘಾನಿಸ್ತಾನವು 1919 ರ ಆಗಸ್ಟ್ 19 ರಂದು ಬ್ರಿಟಿಷ್ ನಿಯಂತ್ರಣದಿಂದ ಸ್ವಾತಂತ್ರ್ಯ ಪಡೆಯಿತು. ಹೀಗಾಗಿ ಆಗಸ್ಟ್ 19 ರಂದು ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ.


ಇದನ್ನೂ ಓದಿ: ಅಫ್ಘಾನ್: ಯಾರೊಂದಿಗೂ ದ್ವೇಷವಿಲ್ಲ, ಎಲ್ಲರಿಗೂ ಕ್ಷಮೆ ನೀಡಿದ್ದೇವೆ – ತಾಲಿಬಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...