Homeಕರ್ನಾಟಕಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ...

ಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ…

- Advertisement -
- Advertisement -

ಸಂವಿಧಾನ ಸಭೆಯಲ್ಲಿ ಮುಖ್ಯನ್ಯಾಯಾಧೀಶ ಹುದ್ದೆಯ ಅಧಿಕಾರದ ಬಗ್ಗೆ ಚರ್ಚೆಗಳಾಗುತ್ತಿದ್ದಾಗ ಡಾ. ಬಿ. ಆರ್. ಅಂಬೇಡ್ಕರ್ ’ನಾನೂ ವೈಯಕ್ತಿಕವಾಗಿ ಒಪ್ಪುತ್ತೇನೆ. ಮುಖ್ಯ ನ್ಯಾಯಾಧೀಶರು ಬಹಳ ಶ್ರೇಷ್ಠ ವ್ಯಕ್ತಿ. ಆದರೆ, ಎಷ್ಟಾದರೂ ಅವರು ನಮ್ಮಂತೆ ಮನುಷ್ಯರೇ. ಎಲ್ಲರಂತೆ ಲೋಪಗಳು, ಭಾವನೆಗಳು ಮತ್ತು ಪೂರ್ವಾಗ್ರಹಗಳನ್ನು ಹೊಂದಿರುತ್ತಾರೆ’ ಎಂದಿದ್ದರು. ಅವರ ಈ ಮಾತುಗಳಲ್ಲಿ ನ್ಯಾಯಾಧೀಶರಾದವರು ಈ ಸಮಾಜದ ಸಹಜ ಲೋಪಗಳನ್ನು ಸದಾ ಮೀರಬೇಕೆಂಬ ತುಡಿತವಿತ್ತು. ಭಾರತದ ಸಂವಿಧಾನ ಪೀಠಿಕೆಯೂ ಸಹ ಸಾಮಾಜಿಕ ನ್ಯಾಯವನ್ನು ಈ ನಿಟ್ಟಿನಲ್ಲಿಯೇ ಎತ್ತಿ ಹಿಡಿಯುತ್ತದೆ. ನ್ಯಾಯವನ್ನು ನೀಡುವ ಮನುಷ್ಯರು ಸಾಧ್ಯವಾದಷ್ಟು ಸಾಮಾಜಿಕ ಪಟ್ಟಭದ್ರ ಹಿತಾಸಕ್ತಿಗಳಿಂದ ದೂರವಿರಬೇಕಾದ್ದು ನ್ಯಾಯಾಂಗದ ಮೊಟ್ಟ ಮೊದಲ ಅರ್ಹತೆ. ಆದರೇನು ಮಾಡುವುದು ನಮ್ಮ ನ್ಯಾಯಾಂಗದ ನಡವಳಿಕೆಗಳು ಕೆಲವೊಮ್ಮೆ ಭಾರತದ ಸಂವಿಧಾನದ ಮೌಲ್ಯಗಳ ವಿರುದ್ಧವಿರುತ್ತದೆ.

ಮಲ್ಲಿಕಾರ್ಜುನ ಗೌಡ

ಕೆಳಹಂತದ ನ್ಯಾಯಾಧೀಶರ ಕತೆಗಳೊಂದಷ್ಟನ್ನು ಕೇಳಿಬಿಟ್ಟರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಒಂದೆರಡು ಉದಾಹರಣೆಗಳನ್ನು ನೋಡುವುದಾದರೆ, 2013ರಲ್ಲಿ ಅಲಹಾಬಾದ್‌ನಲ್ಲಿ ಜಿಲ್ಲಾ ನ್ಯಾಯಾಧೀಶರೊಬ್ಬರು ತಮಗೆ ಗೊತ್ತು ಮಾಡಿದ ಕೊಠಡಿಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದರಂತೆ. ಅದಕ್ಕೆ ಕಾರಣ ಈ ಹಿಂದೆ ಆ ಕೊಠಡಿಯಲ್ಲಿದ್ದದ್ದು ದಲಿತ ನ್ಯಾಯಾಧೀಶರು! ಇದೇ ವರ್ಷದಲ್ಲಿ ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಧೀಶರೊಬ್ಬರು ಎಲ್ಲಾ ಶಾಲಾಮಕ್ಕಳಿಗೂ ಬ್ರಾಹ್ಮಣ ಜ್ಯೋತಿಷಿಯ ಬಳಿ ಭವಿಷ್ಯ ಕೇಳಿಸಿ ಶಾಲೆಗೆ ದಾಖಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು. ಬಾಂಬೆ ಹೈಕೋರ್ಟ್ ಜ್ಯೋತಿಷ್ಯವನ್ನು ವಿಜ್ಞಾನವೆಂದು ತೀರ್ಪು ನೀಡಿತ್ತು. ಹೀಗಿದ್ದ ನ್ಯಾಯಾಧೀಶರು 2021ರಷ್ಟೊತ್ತಿಗೆ ಯಾವ ಮಟ್ಟ ತಲುಪಿದ್ದಾರೆ ನೋಡಿ. ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರೊಬ್ಬರು ’ಆಕ್ಸಿಜನ್‌ಅನ್ನು ಹೊರಹಾಕುವ ಏಕೈಕ ಪ್ರಾಣಿ ದನವಾಗಿದೆ’ ಎಂದಿದ್ದರು. ’ದನವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಬೇಕು’ ಎಂದಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರಾದ ಅಬ್ದುಲ್ ನಜೀರ್ ಸಾಬ್ ’ಮನು, ಚಾಣಕ್ಯರಂತಹ ದೇಸೀ ನ್ಯಾಯದಿಶಾರದರ ನ್ಯಾಯಸಂಹಿತೆಯನ್ನು ಅಳವಡಿಸಿಕೊಳ್ಳಬೇಕೆಂದು’ ಕರೆ ನೀಡಿದ್ದರು.

ಈ ಮೇಲಿನಂತೆ ನೂರಾರು ಹೇಳಿಕೆಗಳಿವೆ ಬಿಡಿ. ಇಂತಹ ನ್ಯಾಯಾಧೀಶರಿಂದ ಸಂವಿಧಾನ ಮೌಲ್ಯವನ್ನು ಎತ್ತಿಹಿಡಿಯಲಾಗುತ್ತದೆಯೇ ಎಂಬುದು ಮುಖ್ಯ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಮುಖಾಮುಖಿಯಾಗಿ ಮೊನ್ನೆ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ತಾರತಮ್ಯಪೂರಿತ ಅವಿವೇಕತನವನ್ನು ನೋಡಬೇಕಿದೆ. ಆತನಿಗೆ ಉದ್ಯೋಗ ನೀಡಿ ಕರ್ತವ್ಯಗಳ ಪಟ್ಟಿಯನ್ನು ನಿಗದಿಪಡಿಸಿರುವುದು ಭಾರತದ ಸಂವಿಧಾನವಾದರೂ ಅವರ ತಲೆಯಲ್ಲಿ ತುಂಬಿರುವುದು ಮಾತ್ರ ಭಾರತದ ವಿಲಕ್ಷಣ ಜಾತಿ ತಾರತಮ್ಯ ವ್ಯವಸ್ಥೆ. ನ್ಯಾಯಾಧೀಶನೊಬ್ಬ ಈ ಹಿಂದೆ ಇಂತಹ ತಾರತಮ್ಯ ಮಾಡಲು ಹಿಂದುಮುಂದು ನೋಡುತ್ತಿದ್ದನೇನೋ (ಕನಿಷ್ಟ 80-90 ರ ದಶಕದಲ್ಲಿ ಇದು ಸತ್ಯವಾಗಿರುತ್ತದೆ). ಕನಿಷ್ಠ ತನ್ನ ಇತರೆ ಜಾತಿಯ ಸಹವರ್ತಿಗಳು ತನ್ನ ಬಗ್ಗೆ ಏನೆಲ್ಲಾ ಭಾವಿಸಬಹುದು ಎಂದು ಅಳುಕುತ್ತಿದ್ದನೇನೋ. ಆದರೆ ಇಂದು ಪ್ರಭುತ್ವವೇ ಇಂತಹ ನ್ಯಾಯಾಧೀಶರ ಪರವಾಗಿ ನಿಂತಿದೆ. ಸುಪ್ರೀಂ ಕೋರ್ಟ್ ಎಸ್.ಸಿ ಮತ್ತು ಎಸ್.ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1989 (ಅಟ್ರಾಸಿಟಿ ತಡೆ ಕಾಯ್ದೆ) ಮತ್ತು ತಿದ್ದುಪಡಿ 2015 ಇದನ್ನು ದಲಿತರು ’ಅತಿರೇಕದ ದುರ್ಬಳಕೆ’ ಮಾಡಿಕೊಳ್ಳುತ್ತಿದ್ದಾರೆ ಎಂದು ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಇಂತಹ ಮನಸ್ಥಿತಿಗಳ ಹಿಂದೆ ಪ್ರಭುತ್ವದ ಒಪ್ಪಿಗೆ ಇರಲೇಬೇಕು. ಪ್ರಭುತ್ವದ ಧೋರಣೆಯೇ ಸಮಾಜದ ಧೋರಣೆಯೆಂದು ಬಿಂಬಿಸುವ ಜಾಗಟೆಗಳಿರಬೇಕು. ಆ ಜಾಗಟೆಗಳು ಇದನ್ನು ಸಾರ್ವತ್ರೀಕರಣಗೊಳಿಸಬೇಕು. ಹೀಗೆ ಪ್ರಭುತ್ವವೊಂದು ನಮ್ಮದೆಂದು ಜನತೆಗೆ ಅನಿಸಿದಾಗ ಪ್ರಭುತ್ವದ ವಿರೋಧಿಗಳೆಲ್ಲ ಜನರ ವಿರೋಧಿಗಳಾಗಿಯೂ ಪ್ರಭುತ್ವಕ್ಕೆ ಬಹುಪರಾಕು ಹೇಳುವವರೆಲ್ಲ ಜನನಾಯಕರಂತೆಯೂ ಕಾಣುತ್ತಾರೆ. ಅಲ್ಲಿಗೆ ಫ್ಯಾಸಿಸಂ ತನ್ನ ಬಲೆಗಳನ್ನು ದೊಡ್ಡದು ಮಾಡಿಕೊಳ್ಳುತ್ತಾ ಹೋಗುತ್ತಿರುತ್ತದೆ.

ಭಾರತದ ಸಂವಿಧಾನ ಜಾರಿಯಾದಾಗಿನಿಂದಲೂ ಅದರ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಎನ್ನುವುದನ್ನು ಒಪ್ಪಿಕೊಳ್ಳಲು ತಿಣುಕಾಡುತ್ತಿದ್ದ ಬೆರಳೆಣಿಕೆಯಷ್ಟು ಜನರ ಸಂಖ್ಯೆ ಇಂದು ಗಮನಾರ್ಹವಾಗಿ ಬೆಳೆದು ನಿಂತಿದೆ. ಸಂವಿಧಾನ ಸಭೆಯ ಚರ್ಚೆಗಳನ್ನು ಹೆಕ್ಕಿ ಮುಂದಿಟ್ಟರೂ ಸತ್ಯವನ್ನು ಅರಿಯಲು ಅವರಿಂದ ಸಾಧ್ಯವಾಗುತ್ತಿಲ್ಲ. ಮತ್ತೊಂದು ಕಡೆ ’ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ಸರ್ಕಾರದ ಪಾಲುದಾರನೇ ಹೇಳುತ್ತಿದ್ದರು ಅದನ್ನು ನಂಬಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ’ಗೋಹತ್ಯಾ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ’ಗಳು ಸೇರಿಕೊಳ್ಳಲು ಹೇಗೆ ಸಾಧ್ಯ? ಬ್ರಾಹ್ಮಣರಾದಿಯಾಗಿ ಮೇಲ್ಜಾತಿಗಳಿಗೆ ಕೇವಲ ಆರ್ಥಿಕ ಮಾನದಂಡದ ಆಧಾರದಲ್ಲಿ ಅವರ ಜನಸಂಖ್ಯೆಗಿಂತಲೂ ಹೆಚ್ಚಿಗೆ ಮೀಸಲಾತಿ ಕೊಡಲು ಹೇಗೆ ಸಾಧ್ಯ? 72 ವರ್ಷದ ನಂತರವೂ ಅಸ್ಪೃಶ್ಯತೆ ನಿಷೇಧವಾಗದಿರಲು ಹೇಗೆ ಸಾಧ್ಯ? ಕೇವಲ 10 ಶ್ರೀಮಂತರು ಭಾರತದ ಶೇ. 45 ರಷ್ಟು ಸಂಪತ್ತನ್ನು ಹೊಂದಲು ಹೇಗೆ ಸಾಧ್ಯ? ಈ ಪ್ರಶ್ನೆಗಳಿಗೆ ಉತ್ತರವೇನು? ಎಲ್ಲಾ ಭಾರತೀಯರಿಗಾಗಿ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಉಳ್ಳವರು ತಮ್ಮ ಪರವಾಗಿ ತಿದ್ದುಪಡಿ ಮಾಡಿಕೊಳ್ಳುತ್ತಿದ್ದಾರೆ ಎಂಬುದಲ್ಲವೇ?

ಅಬ್ದುಲ್ ನಜೀರ್ ಸಾಬ್

ಮೇಲಿನ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಾಗ ಮಾತ್ರ ಜಿಲ್ಲಾ ನ್ಯಾಯಾಧೀಶನೊಬ್ಬ ’ಸಂವಿಧಾನ ಶಿಲ್ಪಿಯ ಭಾವಚಿತ್ರವನ್ನು ಇಡಲು ಹಾಗೂ ಇಟ್ಟ ಭಾವಚಿತ್ರವನ್ನು ನಿರಾಕರಿಸಲು ಇರುವ ಕಾರಣಗಳನ್ನು ತಿಳಿಯಬಹುದಾಗಿದೆ. ಅಂದು ಅಂಬೇಡ್ಕರರ ಭಾವಚಿತ್ರಕ್ಕೆ ಆದ ಅವಮಾನಕ್ಕೆ ಅದೆಷ್ಟು ಜನ ಕೆಂಡಾಮಂಡಲರಾದರೋ ಬಹುಶಃ ಅದಕ್ಕಿಂತಲೂ ಹೆಚ್ಚು ಜನ ಒಳಗೊಳಗೇ ಖುಷಿಗೊಂಡಿಲ್ಲ ಎಂಬುದನ್ನು ಖಚಿತವಾಗಿ ಹೇಳುವ ಧೈರ್ಯ ಯಾರಿಗಿದೆ? ಇದು ಕೇವಲ ಭಾವಚಿತ್ರದ ಕತೆಯಲ್ಲ. ಇಡೀ ದೇಶದ ಕತೆ. ಭಾರತೀಯರ ಕತೆ. ಕೊಳೆತ ಹೆಣವನ್ನು ಹೂಳದೆ ಮಮ್ಮಿಯಾಗಿಸಿಕೊಂಡು ಅದನ್ನೇ ಪರಂಪರೆಯೆಂದು ಕೊಂಡಾಡುತ್ತ ಆಗಾಗ ಸುಗಂಧದ್ರವ್ಯವನ್ನು ಲೇಪಿಸಿಕೊಂಡಿರುವ ಸಮಾಜದಲ್ಲಿ ಸದಾ ಚಿಗುರುತ್ತಲೇ ಇರುವ ಅಂಬೇಡ್ಕರ್ ವಿಚಾರಧಾರೆಯನ್ನು ಸಹಿಸಿಕೊಳ್ಳುವುದಾದರೂ ಹೇಗೆ? ಹಾಗಾಗಿ ಒಮ್ಮೆ ಹೊಗಳಬೇಕು, ಹೊಗಳಿ ದೇವರಾಗಿಸಬೇಕು. ಇಲ್ಲವೇ ಆಗಾಗ ತೆಗಳಿ ಚಿಗುರನ್ನು ಚಿವುಟುತ್ತಿರಬೇಕು. ಈ ಎರಡೂ ಕೆಲಸವನ್ನು ಪ್ರಭುತ್ವ ಈಗಾಗಲೇ ಅಂಬೇಡ್ಕರರ ವಿಷಯದಲ್ಲಿ ಮಾಡಿದೆ, ಮಾಡುತ್ತಿದೆ. ಎರಡನೆಯದರ ಭಾಗವಾಗಿ ಮಲ್ಲಿಕಾರ್ಜುನ ಗೌಡ ತನ್ನ ಕೆಲಸವನ್ನು ಮುಂದುವರೆಸಿದ್ದಾರೆ. ಮೊದಲನೆಯದ್ದರ ಭಾಗವಾಗಿ ಪ್ರಭುತ್ವ ’ಪಂಚತೀರ್ಥ’ವನ್ನಾಗಿಸುತ್ತಿದೆ. ನಿಜವಾದ ಅಂಬೇಡ್ಕರ್ ಅನುಯಾಯಿಗಳ ಮುಂದಿರುವ ಆಯ್ಕೆ ಇವೆರಡರಲ್ಲಿ ಒಂದಾದರೆ ಅದು ಅಂಬೇಡ್ಕರ್ ಅವರಿಗೆ ಬಗೆದ ದ್ರೋಹವಾಗುತ್ತದೆ. ಹಾಗೆಂದರೆ ಮೂರನೆಯದೊಂದಿದೆಯೇ? ಎಂದು ಪ್ರಶ್ನಿಸಿದರೆ ಮೂರನೆಯದ್ದೋ.. ನಾಲ್ಕನೆಯದ್ದೋ.. ಐದನೆಯದ್ದೋ.. ಬನ್ನಿ ಜಾತಿವಿನಾಶದೆಡೆಗೆ ಹಲವು ಪ್ರಯೋಗ ಮಾಡುತ್ತಾ ಅಂಬೇಡ್ಕರರ ರಥವನ್ನು ಮುಂದೆಳೆಯೋಣ ಎಂದು ಹೇಳುತ್ತೇನೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...