Homeಕರ್ನಾಟಕಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ...

ಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ…

- Advertisement -
- Advertisement -

ಸಂವಿಧಾನ ಸಭೆಯಲ್ಲಿ ಮುಖ್ಯನ್ಯಾಯಾಧೀಶ ಹುದ್ದೆಯ ಅಧಿಕಾರದ ಬಗ್ಗೆ ಚರ್ಚೆಗಳಾಗುತ್ತಿದ್ದಾಗ ಡಾ. ಬಿ. ಆರ್. ಅಂಬೇಡ್ಕರ್ ’ನಾನೂ ವೈಯಕ್ತಿಕವಾಗಿ ಒಪ್ಪುತ್ತೇನೆ. ಮುಖ್ಯ ನ್ಯಾಯಾಧೀಶರು ಬಹಳ ಶ್ರೇಷ್ಠ ವ್ಯಕ್ತಿ. ಆದರೆ, ಎಷ್ಟಾದರೂ ಅವರು ನಮ್ಮಂತೆ ಮನುಷ್ಯರೇ. ಎಲ್ಲರಂತೆ ಲೋಪಗಳು, ಭಾವನೆಗಳು ಮತ್ತು ಪೂರ್ವಾಗ್ರಹಗಳನ್ನು ಹೊಂದಿರುತ್ತಾರೆ’ ಎಂದಿದ್ದರು. ಅವರ ಈ ಮಾತುಗಳಲ್ಲಿ ನ್ಯಾಯಾಧೀಶರಾದವರು ಈ ಸಮಾಜದ ಸಹಜ ಲೋಪಗಳನ್ನು ಸದಾ ಮೀರಬೇಕೆಂಬ ತುಡಿತವಿತ್ತು. ಭಾರತದ ಸಂವಿಧಾನ ಪೀಠಿಕೆಯೂ ಸಹ ಸಾಮಾಜಿಕ ನ್ಯಾಯವನ್ನು ಈ ನಿಟ್ಟಿನಲ್ಲಿಯೇ ಎತ್ತಿ ಹಿಡಿಯುತ್ತದೆ. ನ್ಯಾಯವನ್ನು ನೀಡುವ ಮನುಷ್ಯರು ಸಾಧ್ಯವಾದಷ್ಟು ಸಾಮಾಜಿಕ ಪಟ್ಟಭದ್ರ ಹಿತಾಸಕ್ತಿಗಳಿಂದ ದೂರವಿರಬೇಕಾದ್ದು ನ್ಯಾಯಾಂಗದ ಮೊಟ್ಟ ಮೊದಲ ಅರ್ಹತೆ. ಆದರೇನು ಮಾಡುವುದು ನಮ್ಮ ನ್ಯಾಯಾಂಗದ ನಡವಳಿಕೆಗಳು ಕೆಲವೊಮ್ಮೆ ಭಾರತದ ಸಂವಿಧಾನದ ಮೌಲ್ಯಗಳ ವಿರುದ್ಧವಿರುತ್ತದೆ.

ಮಲ್ಲಿಕಾರ್ಜುನ ಗೌಡ

ಕೆಳಹಂತದ ನ್ಯಾಯಾಧೀಶರ ಕತೆಗಳೊಂದಷ್ಟನ್ನು ಕೇಳಿಬಿಟ್ಟರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಒಂದೆರಡು ಉದಾಹರಣೆಗಳನ್ನು ನೋಡುವುದಾದರೆ, 2013ರಲ್ಲಿ ಅಲಹಾಬಾದ್‌ನಲ್ಲಿ ಜಿಲ್ಲಾ ನ್ಯಾಯಾಧೀಶರೊಬ್ಬರು ತಮಗೆ ಗೊತ್ತು ಮಾಡಿದ ಕೊಠಡಿಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದರಂತೆ. ಅದಕ್ಕೆ ಕಾರಣ ಈ ಹಿಂದೆ ಆ ಕೊಠಡಿಯಲ್ಲಿದ್ದದ್ದು ದಲಿತ ನ್ಯಾಯಾಧೀಶರು! ಇದೇ ವರ್ಷದಲ್ಲಿ ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಧೀಶರೊಬ್ಬರು ಎಲ್ಲಾ ಶಾಲಾಮಕ್ಕಳಿಗೂ ಬ್ರಾಹ್ಮಣ ಜ್ಯೋತಿಷಿಯ ಬಳಿ ಭವಿಷ್ಯ ಕೇಳಿಸಿ ಶಾಲೆಗೆ ದಾಖಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು. ಬಾಂಬೆ ಹೈಕೋರ್ಟ್ ಜ್ಯೋತಿಷ್ಯವನ್ನು ವಿಜ್ಞಾನವೆಂದು ತೀರ್ಪು ನೀಡಿತ್ತು. ಹೀಗಿದ್ದ ನ್ಯಾಯಾಧೀಶರು 2021ರಷ್ಟೊತ್ತಿಗೆ ಯಾವ ಮಟ್ಟ ತಲುಪಿದ್ದಾರೆ ನೋಡಿ. ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರೊಬ್ಬರು ’ಆಕ್ಸಿಜನ್‌ಅನ್ನು ಹೊರಹಾಕುವ ಏಕೈಕ ಪ್ರಾಣಿ ದನವಾಗಿದೆ’ ಎಂದಿದ್ದರು. ’ದನವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಬೇಕು’ ಎಂದಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರಾದ ಅಬ್ದುಲ್ ನಜೀರ್ ಸಾಬ್ ’ಮನು, ಚಾಣಕ್ಯರಂತಹ ದೇಸೀ ನ್ಯಾಯದಿಶಾರದರ ನ್ಯಾಯಸಂಹಿತೆಯನ್ನು ಅಳವಡಿಸಿಕೊಳ್ಳಬೇಕೆಂದು’ ಕರೆ ನೀಡಿದ್ದರು.

ಈ ಮೇಲಿನಂತೆ ನೂರಾರು ಹೇಳಿಕೆಗಳಿವೆ ಬಿಡಿ. ಇಂತಹ ನ್ಯಾಯಾಧೀಶರಿಂದ ಸಂವಿಧಾನ ಮೌಲ್ಯವನ್ನು ಎತ್ತಿಹಿಡಿಯಲಾಗುತ್ತದೆಯೇ ಎಂಬುದು ಮುಖ್ಯ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಮುಖಾಮುಖಿಯಾಗಿ ಮೊನ್ನೆ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ತಾರತಮ್ಯಪೂರಿತ ಅವಿವೇಕತನವನ್ನು ನೋಡಬೇಕಿದೆ. ಆತನಿಗೆ ಉದ್ಯೋಗ ನೀಡಿ ಕರ್ತವ್ಯಗಳ ಪಟ್ಟಿಯನ್ನು ನಿಗದಿಪಡಿಸಿರುವುದು ಭಾರತದ ಸಂವಿಧಾನವಾದರೂ ಅವರ ತಲೆಯಲ್ಲಿ ತುಂಬಿರುವುದು ಮಾತ್ರ ಭಾರತದ ವಿಲಕ್ಷಣ ಜಾತಿ ತಾರತಮ್ಯ ವ್ಯವಸ್ಥೆ. ನ್ಯಾಯಾಧೀಶನೊಬ್ಬ ಈ ಹಿಂದೆ ಇಂತಹ ತಾರತಮ್ಯ ಮಾಡಲು ಹಿಂದುಮುಂದು ನೋಡುತ್ತಿದ್ದನೇನೋ (ಕನಿಷ್ಟ 80-90 ರ ದಶಕದಲ್ಲಿ ಇದು ಸತ್ಯವಾಗಿರುತ್ತದೆ). ಕನಿಷ್ಠ ತನ್ನ ಇತರೆ ಜಾತಿಯ ಸಹವರ್ತಿಗಳು ತನ್ನ ಬಗ್ಗೆ ಏನೆಲ್ಲಾ ಭಾವಿಸಬಹುದು ಎಂದು ಅಳುಕುತ್ತಿದ್ದನೇನೋ. ಆದರೆ ಇಂದು ಪ್ರಭುತ್ವವೇ ಇಂತಹ ನ್ಯಾಯಾಧೀಶರ ಪರವಾಗಿ ನಿಂತಿದೆ. ಸುಪ್ರೀಂ ಕೋರ್ಟ್ ಎಸ್.ಸಿ ಮತ್ತು ಎಸ್.ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1989 (ಅಟ್ರಾಸಿಟಿ ತಡೆ ಕಾಯ್ದೆ) ಮತ್ತು ತಿದ್ದುಪಡಿ 2015 ಇದನ್ನು ದಲಿತರು ’ಅತಿರೇಕದ ದುರ್ಬಳಕೆ’ ಮಾಡಿಕೊಳ್ಳುತ್ತಿದ್ದಾರೆ ಎಂದು ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಇಂತಹ ಮನಸ್ಥಿತಿಗಳ ಹಿಂದೆ ಪ್ರಭುತ್ವದ ಒಪ್ಪಿಗೆ ಇರಲೇಬೇಕು. ಪ್ರಭುತ್ವದ ಧೋರಣೆಯೇ ಸಮಾಜದ ಧೋರಣೆಯೆಂದು ಬಿಂಬಿಸುವ ಜಾಗಟೆಗಳಿರಬೇಕು. ಆ ಜಾಗಟೆಗಳು ಇದನ್ನು ಸಾರ್ವತ್ರೀಕರಣಗೊಳಿಸಬೇಕು. ಹೀಗೆ ಪ್ರಭುತ್ವವೊಂದು ನಮ್ಮದೆಂದು ಜನತೆಗೆ ಅನಿಸಿದಾಗ ಪ್ರಭುತ್ವದ ವಿರೋಧಿಗಳೆಲ್ಲ ಜನರ ವಿರೋಧಿಗಳಾಗಿಯೂ ಪ್ರಭುತ್ವಕ್ಕೆ ಬಹುಪರಾಕು ಹೇಳುವವರೆಲ್ಲ ಜನನಾಯಕರಂತೆಯೂ ಕಾಣುತ್ತಾರೆ. ಅಲ್ಲಿಗೆ ಫ್ಯಾಸಿಸಂ ತನ್ನ ಬಲೆಗಳನ್ನು ದೊಡ್ಡದು ಮಾಡಿಕೊಳ್ಳುತ್ತಾ ಹೋಗುತ್ತಿರುತ್ತದೆ.

ಭಾರತದ ಸಂವಿಧಾನ ಜಾರಿಯಾದಾಗಿನಿಂದಲೂ ಅದರ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಎನ್ನುವುದನ್ನು ಒಪ್ಪಿಕೊಳ್ಳಲು ತಿಣುಕಾಡುತ್ತಿದ್ದ ಬೆರಳೆಣಿಕೆಯಷ್ಟು ಜನರ ಸಂಖ್ಯೆ ಇಂದು ಗಮನಾರ್ಹವಾಗಿ ಬೆಳೆದು ನಿಂತಿದೆ. ಸಂವಿಧಾನ ಸಭೆಯ ಚರ್ಚೆಗಳನ್ನು ಹೆಕ್ಕಿ ಮುಂದಿಟ್ಟರೂ ಸತ್ಯವನ್ನು ಅರಿಯಲು ಅವರಿಂದ ಸಾಧ್ಯವಾಗುತ್ತಿಲ್ಲ. ಮತ್ತೊಂದು ಕಡೆ ’ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ಸರ್ಕಾರದ ಪಾಲುದಾರನೇ ಹೇಳುತ್ತಿದ್ದರು ಅದನ್ನು ನಂಬಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ’ಗೋಹತ್ಯಾ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ’ಗಳು ಸೇರಿಕೊಳ್ಳಲು ಹೇಗೆ ಸಾಧ್ಯ? ಬ್ರಾಹ್ಮಣರಾದಿಯಾಗಿ ಮೇಲ್ಜಾತಿಗಳಿಗೆ ಕೇವಲ ಆರ್ಥಿಕ ಮಾನದಂಡದ ಆಧಾರದಲ್ಲಿ ಅವರ ಜನಸಂಖ್ಯೆಗಿಂತಲೂ ಹೆಚ್ಚಿಗೆ ಮೀಸಲಾತಿ ಕೊಡಲು ಹೇಗೆ ಸಾಧ್ಯ? 72 ವರ್ಷದ ನಂತರವೂ ಅಸ್ಪೃಶ್ಯತೆ ನಿಷೇಧವಾಗದಿರಲು ಹೇಗೆ ಸಾಧ್ಯ? ಕೇವಲ 10 ಶ್ರೀಮಂತರು ಭಾರತದ ಶೇ. 45 ರಷ್ಟು ಸಂಪತ್ತನ್ನು ಹೊಂದಲು ಹೇಗೆ ಸಾಧ್ಯ? ಈ ಪ್ರಶ್ನೆಗಳಿಗೆ ಉತ್ತರವೇನು? ಎಲ್ಲಾ ಭಾರತೀಯರಿಗಾಗಿ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಉಳ್ಳವರು ತಮ್ಮ ಪರವಾಗಿ ತಿದ್ದುಪಡಿ ಮಾಡಿಕೊಳ್ಳುತ್ತಿದ್ದಾರೆ ಎಂಬುದಲ್ಲವೇ?

ಅಬ್ದುಲ್ ನಜೀರ್ ಸಾಬ್

ಮೇಲಿನ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಾಗ ಮಾತ್ರ ಜಿಲ್ಲಾ ನ್ಯಾಯಾಧೀಶನೊಬ್ಬ ’ಸಂವಿಧಾನ ಶಿಲ್ಪಿಯ ಭಾವಚಿತ್ರವನ್ನು ಇಡಲು ಹಾಗೂ ಇಟ್ಟ ಭಾವಚಿತ್ರವನ್ನು ನಿರಾಕರಿಸಲು ಇರುವ ಕಾರಣಗಳನ್ನು ತಿಳಿಯಬಹುದಾಗಿದೆ. ಅಂದು ಅಂಬೇಡ್ಕರರ ಭಾವಚಿತ್ರಕ್ಕೆ ಆದ ಅವಮಾನಕ್ಕೆ ಅದೆಷ್ಟು ಜನ ಕೆಂಡಾಮಂಡಲರಾದರೋ ಬಹುಶಃ ಅದಕ್ಕಿಂತಲೂ ಹೆಚ್ಚು ಜನ ಒಳಗೊಳಗೇ ಖುಷಿಗೊಂಡಿಲ್ಲ ಎಂಬುದನ್ನು ಖಚಿತವಾಗಿ ಹೇಳುವ ಧೈರ್ಯ ಯಾರಿಗಿದೆ? ಇದು ಕೇವಲ ಭಾವಚಿತ್ರದ ಕತೆಯಲ್ಲ. ಇಡೀ ದೇಶದ ಕತೆ. ಭಾರತೀಯರ ಕತೆ. ಕೊಳೆತ ಹೆಣವನ್ನು ಹೂಳದೆ ಮಮ್ಮಿಯಾಗಿಸಿಕೊಂಡು ಅದನ್ನೇ ಪರಂಪರೆಯೆಂದು ಕೊಂಡಾಡುತ್ತ ಆಗಾಗ ಸುಗಂಧದ್ರವ್ಯವನ್ನು ಲೇಪಿಸಿಕೊಂಡಿರುವ ಸಮಾಜದಲ್ಲಿ ಸದಾ ಚಿಗುರುತ್ತಲೇ ಇರುವ ಅಂಬೇಡ್ಕರ್ ವಿಚಾರಧಾರೆಯನ್ನು ಸಹಿಸಿಕೊಳ್ಳುವುದಾದರೂ ಹೇಗೆ? ಹಾಗಾಗಿ ಒಮ್ಮೆ ಹೊಗಳಬೇಕು, ಹೊಗಳಿ ದೇವರಾಗಿಸಬೇಕು. ಇಲ್ಲವೇ ಆಗಾಗ ತೆಗಳಿ ಚಿಗುರನ್ನು ಚಿವುಟುತ್ತಿರಬೇಕು. ಈ ಎರಡೂ ಕೆಲಸವನ್ನು ಪ್ರಭುತ್ವ ಈಗಾಗಲೇ ಅಂಬೇಡ್ಕರರ ವಿಷಯದಲ್ಲಿ ಮಾಡಿದೆ, ಮಾಡುತ್ತಿದೆ. ಎರಡನೆಯದರ ಭಾಗವಾಗಿ ಮಲ್ಲಿಕಾರ್ಜುನ ಗೌಡ ತನ್ನ ಕೆಲಸವನ್ನು ಮುಂದುವರೆಸಿದ್ದಾರೆ. ಮೊದಲನೆಯದ್ದರ ಭಾಗವಾಗಿ ಪ್ರಭುತ್ವ ’ಪಂಚತೀರ್ಥ’ವನ್ನಾಗಿಸುತ್ತಿದೆ. ನಿಜವಾದ ಅಂಬೇಡ್ಕರ್ ಅನುಯಾಯಿಗಳ ಮುಂದಿರುವ ಆಯ್ಕೆ ಇವೆರಡರಲ್ಲಿ ಒಂದಾದರೆ ಅದು ಅಂಬೇಡ್ಕರ್ ಅವರಿಗೆ ಬಗೆದ ದ್ರೋಹವಾಗುತ್ತದೆ. ಹಾಗೆಂದರೆ ಮೂರನೆಯದೊಂದಿದೆಯೇ? ಎಂದು ಪ್ರಶ್ನಿಸಿದರೆ ಮೂರನೆಯದ್ದೋ.. ನಾಲ್ಕನೆಯದ್ದೋ.. ಐದನೆಯದ್ದೋ.. ಬನ್ನಿ ಜಾತಿವಿನಾಶದೆಡೆಗೆ ಹಲವು ಪ್ರಯೋಗ ಮಾಡುತ್ತಾ ಅಂಬೇಡ್ಕರರ ರಥವನ್ನು ಮುಂದೆಳೆಯೋಣ ಎಂದು ಹೇಳುತ್ತೇನೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...