Homeಕರ್ನಾಟಕಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ...

ಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ…

- Advertisement -
- Advertisement -

ಸಂವಿಧಾನ ಸಭೆಯಲ್ಲಿ ಮುಖ್ಯನ್ಯಾಯಾಧೀಶ ಹುದ್ದೆಯ ಅಧಿಕಾರದ ಬಗ್ಗೆ ಚರ್ಚೆಗಳಾಗುತ್ತಿದ್ದಾಗ ಡಾ. ಬಿ. ಆರ್. ಅಂಬೇಡ್ಕರ್ ’ನಾನೂ ವೈಯಕ್ತಿಕವಾಗಿ ಒಪ್ಪುತ್ತೇನೆ. ಮುಖ್ಯ ನ್ಯಾಯಾಧೀಶರು ಬಹಳ ಶ್ರೇಷ್ಠ ವ್ಯಕ್ತಿ. ಆದರೆ, ಎಷ್ಟಾದರೂ ಅವರು ನಮ್ಮಂತೆ ಮನುಷ್ಯರೇ. ಎಲ್ಲರಂತೆ ಲೋಪಗಳು, ಭಾವನೆಗಳು ಮತ್ತು ಪೂರ್ವಾಗ್ರಹಗಳನ್ನು ಹೊಂದಿರುತ್ತಾರೆ’ ಎಂದಿದ್ದರು. ಅವರ ಈ ಮಾತುಗಳಲ್ಲಿ ನ್ಯಾಯಾಧೀಶರಾದವರು ಈ ಸಮಾಜದ ಸಹಜ ಲೋಪಗಳನ್ನು ಸದಾ ಮೀರಬೇಕೆಂಬ ತುಡಿತವಿತ್ತು. ಭಾರತದ ಸಂವಿಧಾನ ಪೀಠಿಕೆಯೂ ಸಹ ಸಾಮಾಜಿಕ ನ್ಯಾಯವನ್ನು ಈ ನಿಟ್ಟಿನಲ್ಲಿಯೇ ಎತ್ತಿ ಹಿಡಿಯುತ್ತದೆ. ನ್ಯಾಯವನ್ನು ನೀಡುವ ಮನುಷ್ಯರು ಸಾಧ್ಯವಾದಷ್ಟು ಸಾಮಾಜಿಕ ಪಟ್ಟಭದ್ರ ಹಿತಾಸಕ್ತಿಗಳಿಂದ ದೂರವಿರಬೇಕಾದ್ದು ನ್ಯಾಯಾಂಗದ ಮೊಟ್ಟ ಮೊದಲ ಅರ್ಹತೆ. ಆದರೇನು ಮಾಡುವುದು ನಮ್ಮ ನ್ಯಾಯಾಂಗದ ನಡವಳಿಕೆಗಳು ಕೆಲವೊಮ್ಮೆ ಭಾರತದ ಸಂವಿಧಾನದ ಮೌಲ್ಯಗಳ ವಿರುದ್ಧವಿರುತ್ತದೆ.

ಮಲ್ಲಿಕಾರ್ಜುನ ಗೌಡ

ಕೆಳಹಂತದ ನ್ಯಾಯಾಧೀಶರ ಕತೆಗಳೊಂದಷ್ಟನ್ನು ಕೇಳಿಬಿಟ್ಟರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಒಂದೆರಡು ಉದಾಹರಣೆಗಳನ್ನು ನೋಡುವುದಾದರೆ, 2013ರಲ್ಲಿ ಅಲಹಾಬಾದ್‌ನಲ್ಲಿ ಜಿಲ್ಲಾ ನ್ಯಾಯಾಧೀಶರೊಬ್ಬರು ತಮಗೆ ಗೊತ್ತು ಮಾಡಿದ ಕೊಠಡಿಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದರಂತೆ. ಅದಕ್ಕೆ ಕಾರಣ ಈ ಹಿಂದೆ ಆ ಕೊಠಡಿಯಲ್ಲಿದ್ದದ್ದು ದಲಿತ ನ್ಯಾಯಾಧೀಶರು! ಇದೇ ವರ್ಷದಲ್ಲಿ ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಧೀಶರೊಬ್ಬರು ಎಲ್ಲಾ ಶಾಲಾಮಕ್ಕಳಿಗೂ ಬ್ರಾಹ್ಮಣ ಜ್ಯೋತಿಷಿಯ ಬಳಿ ಭವಿಷ್ಯ ಕೇಳಿಸಿ ಶಾಲೆಗೆ ದಾಖಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು. ಬಾಂಬೆ ಹೈಕೋರ್ಟ್ ಜ್ಯೋತಿಷ್ಯವನ್ನು ವಿಜ್ಞಾನವೆಂದು ತೀರ್ಪು ನೀಡಿತ್ತು. ಹೀಗಿದ್ದ ನ್ಯಾಯಾಧೀಶರು 2021ರಷ್ಟೊತ್ತಿಗೆ ಯಾವ ಮಟ್ಟ ತಲುಪಿದ್ದಾರೆ ನೋಡಿ. ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರೊಬ್ಬರು ’ಆಕ್ಸಿಜನ್‌ಅನ್ನು ಹೊರಹಾಕುವ ಏಕೈಕ ಪ್ರಾಣಿ ದನವಾಗಿದೆ’ ಎಂದಿದ್ದರು. ’ದನವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಬೇಕು’ ಎಂದಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರಾದ ಅಬ್ದುಲ್ ನಜೀರ್ ಸಾಬ್ ’ಮನು, ಚಾಣಕ್ಯರಂತಹ ದೇಸೀ ನ್ಯಾಯದಿಶಾರದರ ನ್ಯಾಯಸಂಹಿತೆಯನ್ನು ಅಳವಡಿಸಿಕೊಳ್ಳಬೇಕೆಂದು’ ಕರೆ ನೀಡಿದ್ದರು.

ಈ ಮೇಲಿನಂತೆ ನೂರಾರು ಹೇಳಿಕೆಗಳಿವೆ ಬಿಡಿ. ಇಂತಹ ನ್ಯಾಯಾಧೀಶರಿಂದ ಸಂವಿಧಾನ ಮೌಲ್ಯವನ್ನು ಎತ್ತಿಹಿಡಿಯಲಾಗುತ್ತದೆಯೇ ಎಂಬುದು ಮುಖ್ಯ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಮುಖಾಮುಖಿಯಾಗಿ ಮೊನ್ನೆ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ತಾರತಮ್ಯಪೂರಿತ ಅವಿವೇಕತನವನ್ನು ನೋಡಬೇಕಿದೆ. ಆತನಿಗೆ ಉದ್ಯೋಗ ನೀಡಿ ಕರ್ತವ್ಯಗಳ ಪಟ್ಟಿಯನ್ನು ನಿಗದಿಪಡಿಸಿರುವುದು ಭಾರತದ ಸಂವಿಧಾನವಾದರೂ ಅವರ ತಲೆಯಲ್ಲಿ ತುಂಬಿರುವುದು ಮಾತ್ರ ಭಾರತದ ವಿಲಕ್ಷಣ ಜಾತಿ ತಾರತಮ್ಯ ವ್ಯವಸ್ಥೆ. ನ್ಯಾಯಾಧೀಶನೊಬ್ಬ ಈ ಹಿಂದೆ ಇಂತಹ ತಾರತಮ್ಯ ಮಾಡಲು ಹಿಂದುಮುಂದು ನೋಡುತ್ತಿದ್ದನೇನೋ (ಕನಿಷ್ಟ 80-90 ರ ದಶಕದಲ್ಲಿ ಇದು ಸತ್ಯವಾಗಿರುತ್ತದೆ). ಕನಿಷ್ಠ ತನ್ನ ಇತರೆ ಜಾತಿಯ ಸಹವರ್ತಿಗಳು ತನ್ನ ಬಗ್ಗೆ ಏನೆಲ್ಲಾ ಭಾವಿಸಬಹುದು ಎಂದು ಅಳುಕುತ್ತಿದ್ದನೇನೋ. ಆದರೆ ಇಂದು ಪ್ರಭುತ್ವವೇ ಇಂತಹ ನ್ಯಾಯಾಧೀಶರ ಪರವಾಗಿ ನಿಂತಿದೆ. ಸುಪ್ರೀಂ ಕೋರ್ಟ್ ಎಸ್.ಸಿ ಮತ್ತು ಎಸ್.ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1989 (ಅಟ್ರಾಸಿಟಿ ತಡೆ ಕಾಯ್ದೆ) ಮತ್ತು ತಿದ್ದುಪಡಿ 2015 ಇದನ್ನು ದಲಿತರು ’ಅತಿರೇಕದ ದುರ್ಬಳಕೆ’ ಮಾಡಿಕೊಳ್ಳುತ್ತಿದ್ದಾರೆ ಎಂದು ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಇಂತಹ ಮನಸ್ಥಿತಿಗಳ ಹಿಂದೆ ಪ್ರಭುತ್ವದ ಒಪ್ಪಿಗೆ ಇರಲೇಬೇಕು. ಪ್ರಭುತ್ವದ ಧೋರಣೆಯೇ ಸಮಾಜದ ಧೋರಣೆಯೆಂದು ಬಿಂಬಿಸುವ ಜಾಗಟೆಗಳಿರಬೇಕು. ಆ ಜಾಗಟೆಗಳು ಇದನ್ನು ಸಾರ್ವತ್ರೀಕರಣಗೊಳಿಸಬೇಕು. ಹೀಗೆ ಪ್ರಭುತ್ವವೊಂದು ನಮ್ಮದೆಂದು ಜನತೆಗೆ ಅನಿಸಿದಾಗ ಪ್ರಭುತ್ವದ ವಿರೋಧಿಗಳೆಲ್ಲ ಜನರ ವಿರೋಧಿಗಳಾಗಿಯೂ ಪ್ರಭುತ್ವಕ್ಕೆ ಬಹುಪರಾಕು ಹೇಳುವವರೆಲ್ಲ ಜನನಾಯಕರಂತೆಯೂ ಕಾಣುತ್ತಾರೆ. ಅಲ್ಲಿಗೆ ಫ್ಯಾಸಿಸಂ ತನ್ನ ಬಲೆಗಳನ್ನು ದೊಡ್ಡದು ಮಾಡಿಕೊಳ್ಳುತ್ತಾ ಹೋಗುತ್ತಿರುತ್ತದೆ.

ಭಾರತದ ಸಂವಿಧಾನ ಜಾರಿಯಾದಾಗಿನಿಂದಲೂ ಅದರ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಎನ್ನುವುದನ್ನು ಒಪ್ಪಿಕೊಳ್ಳಲು ತಿಣುಕಾಡುತ್ತಿದ್ದ ಬೆರಳೆಣಿಕೆಯಷ್ಟು ಜನರ ಸಂಖ್ಯೆ ಇಂದು ಗಮನಾರ್ಹವಾಗಿ ಬೆಳೆದು ನಿಂತಿದೆ. ಸಂವಿಧಾನ ಸಭೆಯ ಚರ್ಚೆಗಳನ್ನು ಹೆಕ್ಕಿ ಮುಂದಿಟ್ಟರೂ ಸತ್ಯವನ್ನು ಅರಿಯಲು ಅವರಿಂದ ಸಾಧ್ಯವಾಗುತ್ತಿಲ್ಲ. ಮತ್ತೊಂದು ಕಡೆ ’ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ಸರ್ಕಾರದ ಪಾಲುದಾರನೇ ಹೇಳುತ್ತಿದ್ದರು ಅದನ್ನು ನಂಬಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ’ಗೋಹತ್ಯಾ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ’ಗಳು ಸೇರಿಕೊಳ್ಳಲು ಹೇಗೆ ಸಾಧ್ಯ? ಬ್ರಾಹ್ಮಣರಾದಿಯಾಗಿ ಮೇಲ್ಜಾತಿಗಳಿಗೆ ಕೇವಲ ಆರ್ಥಿಕ ಮಾನದಂಡದ ಆಧಾರದಲ್ಲಿ ಅವರ ಜನಸಂಖ್ಯೆಗಿಂತಲೂ ಹೆಚ್ಚಿಗೆ ಮೀಸಲಾತಿ ಕೊಡಲು ಹೇಗೆ ಸಾಧ್ಯ? 72 ವರ್ಷದ ನಂತರವೂ ಅಸ್ಪೃಶ್ಯತೆ ನಿಷೇಧವಾಗದಿರಲು ಹೇಗೆ ಸಾಧ್ಯ? ಕೇವಲ 10 ಶ್ರೀಮಂತರು ಭಾರತದ ಶೇ. 45 ರಷ್ಟು ಸಂಪತ್ತನ್ನು ಹೊಂದಲು ಹೇಗೆ ಸಾಧ್ಯ? ಈ ಪ್ರಶ್ನೆಗಳಿಗೆ ಉತ್ತರವೇನು? ಎಲ್ಲಾ ಭಾರತೀಯರಿಗಾಗಿ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಉಳ್ಳವರು ತಮ್ಮ ಪರವಾಗಿ ತಿದ್ದುಪಡಿ ಮಾಡಿಕೊಳ್ಳುತ್ತಿದ್ದಾರೆ ಎಂಬುದಲ್ಲವೇ?

ಅಬ್ದುಲ್ ನಜೀರ್ ಸಾಬ್

ಮೇಲಿನ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಾಗ ಮಾತ್ರ ಜಿಲ್ಲಾ ನ್ಯಾಯಾಧೀಶನೊಬ್ಬ ’ಸಂವಿಧಾನ ಶಿಲ್ಪಿಯ ಭಾವಚಿತ್ರವನ್ನು ಇಡಲು ಹಾಗೂ ಇಟ್ಟ ಭಾವಚಿತ್ರವನ್ನು ನಿರಾಕರಿಸಲು ಇರುವ ಕಾರಣಗಳನ್ನು ತಿಳಿಯಬಹುದಾಗಿದೆ. ಅಂದು ಅಂಬೇಡ್ಕರರ ಭಾವಚಿತ್ರಕ್ಕೆ ಆದ ಅವಮಾನಕ್ಕೆ ಅದೆಷ್ಟು ಜನ ಕೆಂಡಾಮಂಡಲರಾದರೋ ಬಹುಶಃ ಅದಕ್ಕಿಂತಲೂ ಹೆಚ್ಚು ಜನ ಒಳಗೊಳಗೇ ಖುಷಿಗೊಂಡಿಲ್ಲ ಎಂಬುದನ್ನು ಖಚಿತವಾಗಿ ಹೇಳುವ ಧೈರ್ಯ ಯಾರಿಗಿದೆ? ಇದು ಕೇವಲ ಭಾವಚಿತ್ರದ ಕತೆಯಲ್ಲ. ಇಡೀ ದೇಶದ ಕತೆ. ಭಾರತೀಯರ ಕತೆ. ಕೊಳೆತ ಹೆಣವನ್ನು ಹೂಳದೆ ಮಮ್ಮಿಯಾಗಿಸಿಕೊಂಡು ಅದನ್ನೇ ಪರಂಪರೆಯೆಂದು ಕೊಂಡಾಡುತ್ತ ಆಗಾಗ ಸುಗಂಧದ್ರವ್ಯವನ್ನು ಲೇಪಿಸಿಕೊಂಡಿರುವ ಸಮಾಜದಲ್ಲಿ ಸದಾ ಚಿಗುರುತ್ತಲೇ ಇರುವ ಅಂಬೇಡ್ಕರ್ ವಿಚಾರಧಾರೆಯನ್ನು ಸಹಿಸಿಕೊಳ್ಳುವುದಾದರೂ ಹೇಗೆ? ಹಾಗಾಗಿ ಒಮ್ಮೆ ಹೊಗಳಬೇಕು, ಹೊಗಳಿ ದೇವರಾಗಿಸಬೇಕು. ಇಲ್ಲವೇ ಆಗಾಗ ತೆಗಳಿ ಚಿಗುರನ್ನು ಚಿವುಟುತ್ತಿರಬೇಕು. ಈ ಎರಡೂ ಕೆಲಸವನ್ನು ಪ್ರಭುತ್ವ ಈಗಾಗಲೇ ಅಂಬೇಡ್ಕರರ ವಿಷಯದಲ್ಲಿ ಮಾಡಿದೆ, ಮಾಡುತ್ತಿದೆ. ಎರಡನೆಯದರ ಭಾಗವಾಗಿ ಮಲ್ಲಿಕಾರ್ಜುನ ಗೌಡ ತನ್ನ ಕೆಲಸವನ್ನು ಮುಂದುವರೆಸಿದ್ದಾರೆ. ಮೊದಲನೆಯದ್ದರ ಭಾಗವಾಗಿ ಪ್ರಭುತ್ವ ’ಪಂಚತೀರ್ಥ’ವನ್ನಾಗಿಸುತ್ತಿದೆ. ನಿಜವಾದ ಅಂಬೇಡ್ಕರ್ ಅನುಯಾಯಿಗಳ ಮುಂದಿರುವ ಆಯ್ಕೆ ಇವೆರಡರಲ್ಲಿ ಒಂದಾದರೆ ಅದು ಅಂಬೇಡ್ಕರ್ ಅವರಿಗೆ ಬಗೆದ ದ್ರೋಹವಾಗುತ್ತದೆ. ಹಾಗೆಂದರೆ ಮೂರನೆಯದೊಂದಿದೆಯೇ? ಎಂದು ಪ್ರಶ್ನಿಸಿದರೆ ಮೂರನೆಯದ್ದೋ.. ನಾಲ್ಕನೆಯದ್ದೋ.. ಐದನೆಯದ್ದೋ.. ಬನ್ನಿ ಜಾತಿವಿನಾಶದೆಡೆಗೆ ಹಲವು ಪ್ರಯೋಗ ಮಾಡುತ್ತಾ ಅಂಬೇಡ್ಕರರ ರಥವನ್ನು ಮುಂದೆಳೆಯೋಣ ಎಂದು ಹೇಳುತ್ತೇನೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...