Homeಕರ್ನಾಟಕಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ...

ಬಾಬಾಸಾಹೇಬರ ಫೋಟೋ ತೆರವು ಘಟನೆ; ಈ ಅವಮಾನ ಕೊನೆಯದಲ್ಲ…

- Advertisement -
- Advertisement -

ಸಂವಿಧಾನ ಸಭೆಯಲ್ಲಿ ಮುಖ್ಯನ್ಯಾಯಾಧೀಶ ಹುದ್ದೆಯ ಅಧಿಕಾರದ ಬಗ್ಗೆ ಚರ್ಚೆಗಳಾಗುತ್ತಿದ್ದಾಗ ಡಾ. ಬಿ. ಆರ್. ಅಂಬೇಡ್ಕರ್ ’ನಾನೂ ವೈಯಕ್ತಿಕವಾಗಿ ಒಪ್ಪುತ್ತೇನೆ. ಮುಖ್ಯ ನ್ಯಾಯಾಧೀಶರು ಬಹಳ ಶ್ರೇಷ್ಠ ವ್ಯಕ್ತಿ. ಆದರೆ, ಎಷ್ಟಾದರೂ ಅವರು ನಮ್ಮಂತೆ ಮನುಷ್ಯರೇ. ಎಲ್ಲರಂತೆ ಲೋಪಗಳು, ಭಾವನೆಗಳು ಮತ್ತು ಪೂರ್ವಾಗ್ರಹಗಳನ್ನು ಹೊಂದಿರುತ್ತಾರೆ’ ಎಂದಿದ್ದರು. ಅವರ ಈ ಮಾತುಗಳಲ್ಲಿ ನ್ಯಾಯಾಧೀಶರಾದವರು ಈ ಸಮಾಜದ ಸಹಜ ಲೋಪಗಳನ್ನು ಸದಾ ಮೀರಬೇಕೆಂಬ ತುಡಿತವಿತ್ತು. ಭಾರತದ ಸಂವಿಧಾನ ಪೀಠಿಕೆಯೂ ಸಹ ಸಾಮಾಜಿಕ ನ್ಯಾಯವನ್ನು ಈ ನಿಟ್ಟಿನಲ್ಲಿಯೇ ಎತ್ತಿ ಹಿಡಿಯುತ್ತದೆ. ನ್ಯಾಯವನ್ನು ನೀಡುವ ಮನುಷ್ಯರು ಸಾಧ್ಯವಾದಷ್ಟು ಸಾಮಾಜಿಕ ಪಟ್ಟಭದ್ರ ಹಿತಾಸಕ್ತಿಗಳಿಂದ ದೂರವಿರಬೇಕಾದ್ದು ನ್ಯಾಯಾಂಗದ ಮೊಟ್ಟ ಮೊದಲ ಅರ್ಹತೆ. ಆದರೇನು ಮಾಡುವುದು ನಮ್ಮ ನ್ಯಾಯಾಂಗದ ನಡವಳಿಕೆಗಳು ಕೆಲವೊಮ್ಮೆ ಭಾರತದ ಸಂವಿಧಾನದ ಮೌಲ್ಯಗಳ ವಿರುದ್ಧವಿರುತ್ತದೆ.

ಮಲ್ಲಿಕಾರ್ಜುನ ಗೌಡ

ಕೆಳಹಂತದ ನ್ಯಾಯಾಧೀಶರ ಕತೆಗಳೊಂದಷ್ಟನ್ನು ಕೇಳಿಬಿಟ್ಟರೆ ನಿಜಕ್ಕೂ ಆಶ್ಚರ್ಯವಾಗುತ್ತದೆ. ಒಂದೆರಡು ಉದಾಹರಣೆಗಳನ್ನು ನೋಡುವುದಾದರೆ, 2013ರಲ್ಲಿ ಅಲಹಾಬಾದ್‌ನಲ್ಲಿ ಜಿಲ್ಲಾ ನ್ಯಾಯಾಧೀಶರೊಬ್ಬರು ತಮಗೆ ಗೊತ್ತು ಮಾಡಿದ ಕೊಠಡಿಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದರಂತೆ. ಅದಕ್ಕೆ ಕಾರಣ ಈ ಹಿಂದೆ ಆ ಕೊಠಡಿಯಲ್ಲಿದ್ದದ್ದು ದಲಿತ ನ್ಯಾಯಾಧೀಶರು! ಇದೇ ವರ್ಷದಲ್ಲಿ ಮಧ್ಯಪ್ರದೇಶದ ಜಿಲ್ಲಾ ನ್ಯಾಯಾಧೀಶರೊಬ್ಬರು ಎಲ್ಲಾ ಶಾಲಾಮಕ್ಕಳಿಗೂ ಬ್ರಾಹ್ಮಣ ಜ್ಯೋತಿಷಿಯ ಬಳಿ ಭವಿಷ್ಯ ಕೇಳಿಸಿ ಶಾಲೆಗೆ ದಾಖಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು. ಬಾಂಬೆ ಹೈಕೋರ್ಟ್ ಜ್ಯೋತಿಷ್ಯವನ್ನು ವಿಜ್ಞಾನವೆಂದು ತೀರ್ಪು ನೀಡಿತ್ತು. ಹೀಗಿದ್ದ ನ್ಯಾಯಾಧೀಶರು 2021ರಷ್ಟೊತ್ತಿಗೆ ಯಾವ ಮಟ್ಟ ತಲುಪಿದ್ದಾರೆ ನೋಡಿ. ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರೊಬ್ಬರು ’ಆಕ್ಸಿಜನ್‌ಅನ್ನು ಹೊರಹಾಕುವ ಏಕೈಕ ಪ್ರಾಣಿ ದನವಾಗಿದೆ’ ಎಂದಿದ್ದರು. ’ದನವನ್ನು ರಾಷ್ಟ್ರೀಯ ಪ್ರಾಣಿಯೆಂದು ಘೋಷಿಸಬೇಕು’ ಎಂದಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರಾದ ಅಬ್ದುಲ್ ನಜೀರ್ ಸಾಬ್ ’ಮನು, ಚಾಣಕ್ಯರಂತಹ ದೇಸೀ ನ್ಯಾಯದಿಶಾರದರ ನ್ಯಾಯಸಂಹಿತೆಯನ್ನು ಅಳವಡಿಸಿಕೊಳ್ಳಬೇಕೆಂದು’ ಕರೆ ನೀಡಿದ್ದರು.

ಈ ಮೇಲಿನಂತೆ ನೂರಾರು ಹೇಳಿಕೆಗಳಿವೆ ಬಿಡಿ. ಇಂತಹ ನ್ಯಾಯಾಧೀಶರಿಂದ ಸಂವಿಧಾನ ಮೌಲ್ಯವನ್ನು ಎತ್ತಿಹಿಡಿಯಲಾಗುತ್ತದೆಯೇ ಎಂಬುದು ಮುಖ್ಯ ಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಮುಖಾಮುಖಿಯಾಗಿ ಮೊನ್ನೆ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ತಾರತಮ್ಯಪೂರಿತ ಅವಿವೇಕತನವನ್ನು ನೋಡಬೇಕಿದೆ. ಆತನಿಗೆ ಉದ್ಯೋಗ ನೀಡಿ ಕರ್ತವ್ಯಗಳ ಪಟ್ಟಿಯನ್ನು ನಿಗದಿಪಡಿಸಿರುವುದು ಭಾರತದ ಸಂವಿಧಾನವಾದರೂ ಅವರ ತಲೆಯಲ್ಲಿ ತುಂಬಿರುವುದು ಮಾತ್ರ ಭಾರತದ ವಿಲಕ್ಷಣ ಜಾತಿ ತಾರತಮ್ಯ ವ್ಯವಸ್ಥೆ. ನ್ಯಾಯಾಧೀಶನೊಬ್ಬ ಈ ಹಿಂದೆ ಇಂತಹ ತಾರತಮ್ಯ ಮಾಡಲು ಹಿಂದುಮುಂದು ನೋಡುತ್ತಿದ್ದನೇನೋ (ಕನಿಷ್ಟ 80-90 ರ ದಶಕದಲ್ಲಿ ಇದು ಸತ್ಯವಾಗಿರುತ್ತದೆ). ಕನಿಷ್ಠ ತನ್ನ ಇತರೆ ಜಾತಿಯ ಸಹವರ್ತಿಗಳು ತನ್ನ ಬಗ್ಗೆ ಏನೆಲ್ಲಾ ಭಾವಿಸಬಹುದು ಎಂದು ಅಳುಕುತ್ತಿದ್ದನೇನೋ. ಆದರೆ ಇಂದು ಪ್ರಭುತ್ವವೇ ಇಂತಹ ನ್ಯಾಯಾಧೀಶರ ಪರವಾಗಿ ನಿಂತಿದೆ. ಸುಪ್ರೀಂ ಕೋರ್ಟ್ ಎಸ್.ಸಿ ಮತ್ತು ಎಸ್.ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1989 (ಅಟ್ರಾಸಿಟಿ ತಡೆ ಕಾಯ್ದೆ) ಮತ್ತು ತಿದ್ದುಪಡಿ 2015 ಇದನ್ನು ದಲಿತರು ’ಅತಿರೇಕದ ದುರ್ಬಳಕೆ’ ಮಾಡಿಕೊಳ್ಳುತ್ತಿದ್ದಾರೆ ಎಂದು ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ. ಇಂತಹ ಮನಸ್ಥಿತಿಗಳ ಹಿಂದೆ ಪ್ರಭುತ್ವದ ಒಪ್ಪಿಗೆ ಇರಲೇಬೇಕು. ಪ್ರಭುತ್ವದ ಧೋರಣೆಯೇ ಸಮಾಜದ ಧೋರಣೆಯೆಂದು ಬಿಂಬಿಸುವ ಜಾಗಟೆಗಳಿರಬೇಕು. ಆ ಜಾಗಟೆಗಳು ಇದನ್ನು ಸಾರ್ವತ್ರೀಕರಣಗೊಳಿಸಬೇಕು. ಹೀಗೆ ಪ್ರಭುತ್ವವೊಂದು ನಮ್ಮದೆಂದು ಜನತೆಗೆ ಅನಿಸಿದಾಗ ಪ್ರಭುತ್ವದ ವಿರೋಧಿಗಳೆಲ್ಲ ಜನರ ವಿರೋಧಿಗಳಾಗಿಯೂ ಪ್ರಭುತ್ವಕ್ಕೆ ಬಹುಪರಾಕು ಹೇಳುವವರೆಲ್ಲ ಜನನಾಯಕರಂತೆಯೂ ಕಾಣುತ್ತಾರೆ. ಅಲ್ಲಿಗೆ ಫ್ಯಾಸಿಸಂ ತನ್ನ ಬಲೆಗಳನ್ನು ದೊಡ್ಡದು ಮಾಡಿಕೊಳ್ಳುತ್ತಾ ಹೋಗುತ್ತಿರುತ್ತದೆ.

ಭಾರತದ ಸಂವಿಧಾನ ಜಾರಿಯಾದಾಗಿನಿಂದಲೂ ಅದರ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಎನ್ನುವುದನ್ನು ಒಪ್ಪಿಕೊಳ್ಳಲು ತಿಣುಕಾಡುತ್ತಿದ್ದ ಬೆರಳೆಣಿಕೆಯಷ್ಟು ಜನರ ಸಂಖ್ಯೆ ಇಂದು ಗಮನಾರ್ಹವಾಗಿ ಬೆಳೆದು ನಿಂತಿದೆ. ಸಂವಿಧಾನ ಸಭೆಯ ಚರ್ಚೆಗಳನ್ನು ಹೆಕ್ಕಿ ಮುಂದಿಟ್ಟರೂ ಸತ್ಯವನ್ನು ಅರಿಯಲು ಅವರಿಂದ ಸಾಧ್ಯವಾಗುತ್ತಿಲ್ಲ. ಮತ್ತೊಂದು ಕಡೆ ’ಸಂವಿಧಾನವನ್ನು ಬದಲಾಯಿಸುತ್ತೇವೆ’ ಎಂದು ಸರ್ಕಾರದ ಪಾಲುದಾರನೇ ಹೇಳುತ್ತಿದ್ದರು ಅದನ್ನು ನಂಬಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ’ಗೋಹತ್ಯಾ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ’ಗಳು ಸೇರಿಕೊಳ್ಳಲು ಹೇಗೆ ಸಾಧ್ಯ? ಬ್ರಾಹ್ಮಣರಾದಿಯಾಗಿ ಮೇಲ್ಜಾತಿಗಳಿಗೆ ಕೇವಲ ಆರ್ಥಿಕ ಮಾನದಂಡದ ಆಧಾರದಲ್ಲಿ ಅವರ ಜನಸಂಖ್ಯೆಗಿಂತಲೂ ಹೆಚ್ಚಿಗೆ ಮೀಸಲಾತಿ ಕೊಡಲು ಹೇಗೆ ಸಾಧ್ಯ? 72 ವರ್ಷದ ನಂತರವೂ ಅಸ್ಪೃಶ್ಯತೆ ನಿಷೇಧವಾಗದಿರಲು ಹೇಗೆ ಸಾಧ್ಯ? ಕೇವಲ 10 ಶ್ರೀಮಂತರು ಭಾರತದ ಶೇ. 45 ರಷ್ಟು ಸಂಪತ್ತನ್ನು ಹೊಂದಲು ಹೇಗೆ ಸಾಧ್ಯ? ಈ ಪ್ರಶ್ನೆಗಳಿಗೆ ಉತ್ತರವೇನು? ಎಲ್ಲಾ ಭಾರತೀಯರಿಗಾಗಿ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ಉಳ್ಳವರು ತಮ್ಮ ಪರವಾಗಿ ತಿದ್ದುಪಡಿ ಮಾಡಿಕೊಳ್ಳುತ್ತಿದ್ದಾರೆ ಎಂಬುದಲ್ಲವೇ?

ಅಬ್ದುಲ್ ನಜೀರ್ ಸಾಬ್

ಮೇಲಿನ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಾಗ ಮಾತ್ರ ಜಿಲ್ಲಾ ನ್ಯಾಯಾಧೀಶನೊಬ್ಬ ’ಸಂವಿಧಾನ ಶಿಲ್ಪಿಯ ಭಾವಚಿತ್ರವನ್ನು ಇಡಲು ಹಾಗೂ ಇಟ್ಟ ಭಾವಚಿತ್ರವನ್ನು ನಿರಾಕರಿಸಲು ಇರುವ ಕಾರಣಗಳನ್ನು ತಿಳಿಯಬಹುದಾಗಿದೆ. ಅಂದು ಅಂಬೇಡ್ಕರರ ಭಾವಚಿತ್ರಕ್ಕೆ ಆದ ಅವಮಾನಕ್ಕೆ ಅದೆಷ್ಟು ಜನ ಕೆಂಡಾಮಂಡಲರಾದರೋ ಬಹುಶಃ ಅದಕ್ಕಿಂತಲೂ ಹೆಚ್ಚು ಜನ ಒಳಗೊಳಗೇ ಖುಷಿಗೊಂಡಿಲ್ಲ ಎಂಬುದನ್ನು ಖಚಿತವಾಗಿ ಹೇಳುವ ಧೈರ್ಯ ಯಾರಿಗಿದೆ? ಇದು ಕೇವಲ ಭಾವಚಿತ್ರದ ಕತೆಯಲ್ಲ. ಇಡೀ ದೇಶದ ಕತೆ. ಭಾರತೀಯರ ಕತೆ. ಕೊಳೆತ ಹೆಣವನ್ನು ಹೂಳದೆ ಮಮ್ಮಿಯಾಗಿಸಿಕೊಂಡು ಅದನ್ನೇ ಪರಂಪರೆಯೆಂದು ಕೊಂಡಾಡುತ್ತ ಆಗಾಗ ಸುಗಂಧದ್ರವ್ಯವನ್ನು ಲೇಪಿಸಿಕೊಂಡಿರುವ ಸಮಾಜದಲ್ಲಿ ಸದಾ ಚಿಗುರುತ್ತಲೇ ಇರುವ ಅಂಬೇಡ್ಕರ್ ವಿಚಾರಧಾರೆಯನ್ನು ಸಹಿಸಿಕೊಳ್ಳುವುದಾದರೂ ಹೇಗೆ? ಹಾಗಾಗಿ ಒಮ್ಮೆ ಹೊಗಳಬೇಕು, ಹೊಗಳಿ ದೇವರಾಗಿಸಬೇಕು. ಇಲ್ಲವೇ ಆಗಾಗ ತೆಗಳಿ ಚಿಗುರನ್ನು ಚಿವುಟುತ್ತಿರಬೇಕು. ಈ ಎರಡೂ ಕೆಲಸವನ್ನು ಪ್ರಭುತ್ವ ಈಗಾಗಲೇ ಅಂಬೇಡ್ಕರರ ವಿಷಯದಲ್ಲಿ ಮಾಡಿದೆ, ಮಾಡುತ್ತಿದೆ. ಎರಡನೆಯದರ ಭಾಗವಾಗಿ ಮಲ್ಲಿಕಾರ್ಜುನ ಗೌಡ ತನ್ನ ಕೆಲಸವನ್ನು ಮುಂದುವರೆಸಿದ್ದಾರೆ. ಮೊದಲನೆಯದ್ದರ ಭಾಗವಾಗಿ ಪ್ರಭುತ್ವ ’ಪಂಚತೀರ್ಥ’ವನ್ನಾಗಿಸುತ್ತಿದೆ. ನಿಜವಾದ ಅಂಬೇಡ್ಕರ್ ಅನುಯಾಯಿಗಳ ಮುಂದಿರುವ ಆಯ್ಕೆ ಇವೆರಡರಲ್ಲಿ ಒಂದಾದರೆ ಅದು ಅಂಬೇಡ್ಕರ್ ಅವರಿಗೆ ಬಗೆದ ದ್ರೋಹವಾಗುತ್ತದೆ. ಹಾಗೆಂದರೆ ಮೂರನೆಯದೊಂದಿದೆಯೇ? ಎಂದು ಪ್ರಶ್ನಿಸಿದರೆ ಮೂರನೆಯದ್ದೋ.. ನಾಲ್ಕನೆಯದ್ದೋ.. ಐದನೆಯದ್ದೋ.. ಬನ್ನಿ ಜಾತಿವಿನಾಶದೆಡೆಗೆ ಹಲವು ಪ್ರಯೋಗ ಮಾಡುತ್ತಾ ಅಂಬೇಡ್ಕರರ ರಥವನ್ನು ಮುಂದೆಳೆಯೋಣ ಎಂದು ಹೇಳುತ್ತೇನೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...