Homeಕರ್ನಾಟಕಖಾಲಿ ನಿವೇಶನಗಳಿದ್ದರೂ ಹಾಸ್ಟೆಲ್ ಕಟ್ಟಡ ಕಟ್ಟದ ಸರ್ಕಾರ.. ಕಾರಣವೇನು ಗೊತ್ತೆ?

ಖಾಲಿ ನಿವೇಶನಗಳಿದ್ದರೂ ಹಾಸ್ಟೆಲ್ ಕಟ್ಟಡ ಕಟ್ಟದ ಸರ್ಕಾರ.. ಕಾರಣವೇನು ಗೊತ್ತೆ?

- Advertisement -
- Advertisement -

ರಾಜ್ಯದಲ್ಲಿರುವ ಅರ್ಧದಷ್ಟು ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡಗಳಿಲ್ಲ. ಖಾಲಿ ನಿವೇಶನಗಳಿದ್ದರೂ ಕಟ್ಟಡ ಕಟ್ಟಲು ಮುಂದಾಗದ ಸರ್ಕಾರ.. ಹಿಂದಿದೆ ಖಾಸಗಿ ಲಾಬಿ..

ಮೂರು ಹಾಸ್ಟೆಲ್ ಗಳ ವಿದ್ಯಾರ್ಥಿನಿಯರನ್ನು ಲಾಡ್ಜ್ ಗೆ ತಳ್ಳಲು ಮುಂದಾಗಿದ್ದ ಅಧಿಕಾರಿಗಳು: ಕೆವಿಎಸ್ ಮಧ್ಯಪ್ರವೇಶದಿಂದ ಬಚಾವ್..

ಕಲಬುರ್ಗಿ ಜಿಲ್ಲೆಯ ಅಂಬಿಕನಗರ, ವೇಂಕಟೇಶನಗರ ಹಾಗೂ ಎನ್.ಜಿ.ಓ ನಗರಗಳ ಮೂರು ಹೆಣ್ಣುಮಕ್ಕಳ ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡಗಳಿಲ್ಲ. ಖಾಸಗಿ ಕಟ್ಟಡಗಳು ಸಹ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸ್ಥಳಾಂತರ ಮಾಡಬೇಕಾಗಿತ್ತು. ಹೊಸ ಕಟ್ಟಡ ಕಟ್ಟುವವರೆಗೆ ಇಲ್ಲಿರುವ ವಿದ್ಯಾರ್ಥಿನಿಯರನ್ನು ಲಾಡ್ಜ್ ಒಂದಕ್ಕೆ ಕಳಿಸಿ ಲಾಭ ಹೊಡೆಯಲು ಹೊಂಚಿಸಿದ್ದರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ. ಲಾಡ್ಜ್ ನ ಮಾಲೀಕರೊಂದಿಗೆ ಮಾತಾಡಿ ಆಗಲೇ ಕಮಿಷನ್ ಕೂಡ ಮಾತಾಡಿ ಮುಗಿದಿತ್ತು.

ಇನ್ನು ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೆದರಿಸಿ ಸ್ಥಳಾಂತರಕ್ಕೆ ಅವರ ಸಹಿ ಮೂಲಕ ಒಪ್ಪಿಗೆಯನ್ನು ಪಡೆಯಲಾಗಿತ್ತು. ವಿಷಯ ತಿಳಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಅಧಿಕಾರಿಗಳನ್ನು ಸಂಪರ್ಕಿಸಿದರೆ ಉಡಾಫೆಯ ಉತ್ತರ ಸಿಕ್ಕಿತ್ತು. ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಸ್ಟೆಲ್ ನ ವಿದ್ಯಾರ್ಥಿನಿಯರನ್ನು ಒಟ್ಟುಗೂಡಿಸಿ, ಈ ಎಲ್ಲಾ ವಿದ್ಯಾರ್ಥಿ ವಿರೋಧಿ ನಿಲುವುಗಳನ್ನು ವಿರೋಧಿಸಿ ಆಗಸ್ಟ್ 10 ರಂದು KVS ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯ ಎದುರು ದೊಡ್ಡ ಪ್ರತಿಭಟನೆಯನ್ನು ನಡೆಸಿದ್ದರು. ನಾಗರೀಕ ಸಮಾಜದ ಗಮನಕ್ಕೆ ಬಂದ ಕೂಡಲೇ ಹಲವರು ಇದನ್ನು ಖಂಡಿಸಿದರು. ಮಾಧ್ಯಮಗಳಲ್ಲಿ ವಿಷಯ ಹೊರಬಂದ ನಂತರ ಸ್ಥಳಾಂತರವನ್ನು ನಿಲ್ಲಿಸುವುದಾಗಿ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಒಪ್ಪಿಕೊಂಡರು.

ಲಾಡ್ಜ್ ಗೆ ಸ್ಥಳಾಂತರ ವಿರೋಧಿಸಿ ನಡೆದ ಪ್ರತಿಭಟನೆ

ಹೋರಾಟದ ಮುಂದುವರೆದ ಭಾಗವಾಗಿ ಬೆಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ವಸಂತ್ ಕುಮಾರ್ ಅವರನ್ನು KVS ತಂಡ ಭೇಟಿ ಮಾಡಿ ಸ್ಥಳಾಂತರ ಮಾಡಬಾರದು, ಶೀಘ್ರದಲ್ಲಿಯೇ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡಗಳನ್ನು ನಿರ್ಮಿಸಬೇಕು, ಈಗಿರುವ ಹಾಸ್ಟೆಲ್ ಗಳನ್ನೇ ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗಿ ಅಭಿವೃದ್ಧಿ ಮಾಡುವುದರ ಜೊತೆಗೆ ವಿದ್ಯಾರ್ಥಿಗಳನ್ನು ಬೆದರಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮವನ್ನು ಜರುಗಿಸಬೇಕೇಂದು ಆಗ್ರಹಿಸಿಲಾಯಿತು.

ವಿದ್ಯಾರ್ಥಿಗಳ ಹಕ್ಕೊತ್ತಾಯಕ್ಕೆ ಒಪ್ಪಿದ ಆಯುಕ್ತರು, ”ಹಾಸ್ಟೆಲ್ ಸ್ಥಳಾಂತರವನ್ನು ಯಾವುದೇ ಕಾರಣಕ್ಕೆ ಮಾಡುವುದಿಲ್ಲ ಎಂದು ತಿಳಿಸಿ, ಅಧಿಕಾರಿ ಮೆಹಬೂಬ್ ಪಾಷಾ ಅವರ ಮೇಲೆ ಶಿಸ್ತು ಕ್ರಮ ಜಾರಿ ಮಾಡುವಂತೆ ಹಿಂದುಳಿದ ವರ್ಗದ ಸಚಿವಾಲಯದ ಆಪ್ತ ಕಾರ್ಯದರ್ಶಿಗಳಿಗೆ ಸೂಚನಾ ಪತ್ರವನ್ನು ನೀಡಿದ್ದಾರೆ.” KVS ತಂಡ ಸಚಿವಾಲಯದ ಆಪ್ತ ಕಾರ್ಯದರ್ಶಿಗಳಿಗೂ ಆಗ್ರಹ ಪತ್ರವನ್ನು ನೀಡಿ ಶೀಘ್ರವಾಗಿ ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ. ಅಲ್ಲಿಗೆ ಸದ್ಯಕ್ಕೆ ಆ ವಿದ್ಯಾರ್ಥಿನಿಯರು ನಿಟ್ಟುಸಿರು ಬಿಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಕೊಪ್ಪಳದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯವೊಂದಕ್ಕೆ ಸ್ವಂತ ಕಟ್ಟಡವಿಲ್ಲದೇ ಖಾಸಗಿ ಕಟ್ಟಡದಲ್ಲಿ ಧ್ವಜಕಂಬ ಇಳಿಸಲು ಹೋಗಿ ಕರೆಂಟ್ ಶಾಕ್ ನಿಂದ ಐವರು ವಿದ್ಯಾರ್ಥಿಗಳು ದುರಂತದ ಸಾವನಪ್ಪಿರುವ ದುರ್ಘಟನೆ ಜರುಗಿದೆ. ಇಲ್ಲಿಯೂ ಇದೇ ಸಮಸ್ಯೆ.. ಸ್ವಂತ ಕಟ್ಟಡವಿಲ್ಲ, ಖಾಸಗಿ ಕಟ್ಟಡಗಳಲ್ಲಿ ಸುರಕ್ಷತೆಯಿಲ್ಲ..

 

ವಾಸ್ತವವೇನು?

RTI ನಿಂದ ಪಡೆದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಒಟ್ಟು 2438 ಸರ್ಕಾರಿ ವಿದ್ಯಾರ್ಥಿ ನಿಲಯಗಳಿವೆ. ಇವುಗಳಲ್ಲಿ ಕೇವಲ 1325 ವಿದ್ಯಾರ್ಥಿ ನಿಲಯಗಳಿಗೆ ಮಾತ್ರ ಸ್ವಂತ ಕಟ್ಟಡಗಳಿವೆ. ಉಳಿದಂತೆ 1031 ವಿದ್ಯಾರ್ಥಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಸುಮಾರು ಅಷ್ಟೇ ಸಂಖ್ಯೆಯ ಸರ್ಕಾರಿ  ನಿವೇಶನಗಳು ಇದ್ದರೂ ಸಹ ಕೇವಲ 340 ಕಟ್ಟಡಗಳು ಮಾತ್ರ ಕಾಮಗಾರಿ ಹಂತದಲ್ಲಿವೆ. ಇನ್ನು 602 ಸರ್ಕಾರಿ ನಿವೇಶನಗಳು ಖಾಲಿ ಬಿದ್ದಿದ್ದರೂ ಸಹ ಹಾಸ್ಟೆಲ್ ಕಟ್ಟಡ ಕಟ್ಟಲು ಸರ್ಕಾರ ಮುಂದಾಗಿಲ್ಲ.

ಸ್ವಂತ ಕಟ್ಟಡವಿಲ್ಲದೇ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಲಯಗಳು ಉತ್ತರ ಕರ್ನಾಟಕದಲ್ಲಿಯೇ ಹೆಚ್ಚಿವೆ. ಒಂದೇ ರೂಮಿನಲ್ಲಿ 4 ವಿದ್ಯಾರ್ಥಿಗಳು ಮಾತ್ರ ಇರಬೇಕೆಂಬ ನಿಯಮವಿದ್ದರೂ ಸಹ ಹತ್ತಾರು ವಿದ್ಯಾರ್ಥಿಗಳು ವಾಸಿಸಬೇಕಾದ ಪರಿಸ್ಥಿತಿ ಇದೆ. ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ. ನಿಲಯ ಪಾಲಕರು ಸಹ ದಿನನಿತ್ಯ ಬರುವುದಿಲ್ಲ.

ಇದರ ಹಿಂದಿದೆ ಖಾಸಗಿ ಲಾಬಿ

ನಿವೇಶನಗಳಿದ್ದರೂ ಸಹ ಸರ್ಕಾರಿ ಕಟ್ಟಡ ಕಟ್ಟದಿರುವುದರ ಹಿಂದೆ ದೊಡ್ಡ ಖಾಸಗಿ ಮಾಫಿಯಾ ಕೆಲಸ ಮಾಡುತ್ತಿದೆ. ಖಾಸಗಿ ಕಟ್ಟಡದ ಮಾಲೀಕರು, ರಿಯಲ್ ಎಸ್ಟೇಟ್ ಕುಳಗಳು ಸ್ಥಳೀಯ ವಾರ್ಡನ್ ಗಳೊಂದಿಗೆ ಶಾಮೀಲಾಗಿ ಸರ್ಕಾರದ ದುಡ್ಡನ್ನು ನುಂಗಿ ನೀರು ಕುಡಿಯುತ್ತಿದ್ದಾರೆ. ಮಾಸಿಕ ಲಕ್ಷಾಂತರ ರೂಪಾಯಿ ಬಾಡಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ. ಒಂದು ವೇಳೆ ಸರ್ಕಾರ ಸ್ವಂತ ಕಟ್ಟಡ ಕಟ್ಟಿಬಿಟ್ಟರೆ ಇವರ ಕಮಾಯಿಗೆ ಬ್ರೇಕ್ ಬೀಳುತ್ತದೆ ಅದಕ್ಕೆ ಅವರು ಯಥಾಸ್ಥಿತಿ ಕಾಪಾಡಿಕೊಳ್ಳಲು ನಿಂತಿದ್ದಾರೆ.

ಇವರುಗಳೆಲ್ಲಾ ಸಚಿವರ ಲೆವೆಲ್ ನಲ್ಲಿ ಆಪರೇಟ್ ಆಗುತ್ತಿದ್ದಾರೆ. ಬೆಂಗಳೂರಿನಲ್ಲಿ ಲಾಬಿ ನಡೆಸಿ ಕಟ್ಟಡ ನಿರ್ಮಾಣದ ಟೆಂಡರ್ ಗಾಗಿ ಇಲ್ಲವೇ ಕಟ್ಟಡ ಕಟ್ಟಬಾರದಾಗಿ ಒತ್ತಡ ತರುತ್ತಿದ್ದಾರೆ. ಇದೆಲ್ಲದರ ದುಷ್ಪರಿಣಾಮಗಳನ್ನು ಅಮಾಯಕ ವಿದ್ಯಾರ್ಥಿಗಳು ಅನುಭವಿಸಬೇಕಿದೆ.

ಸರ್ಕಾರಿ ಹಾಸ್ಟೆಲ್ ಗಳ ದುಸ್ಥಿತಿ

ಇನ್ನು ಸರಕಾರದ ಕೆಲ ಹಾಸ್ಟೆಲ್ ಗಳು ಇಂದು ದನದ ಕೊಟ್ಟಿಗೆಗಳಿಗಿಂತ ಕಡೆಯಾಗಿವೆ. ಬಡ, ಮಧ್ಯಮ ವರ್ಗವನ್ನು ಶೈಕ್ಷಣಿಕ ಸೌಲಭ್ಯದಿಂದ ವಂಚಿಸುವ ವ್ಯವಸ್ಥಿತ ಹುನ್ನಾರದ ಭಾಗವಾಗಿಯೇ ಹಾಸ್ಟೆಲ್ ಗಳನ್ನು ದಿವಾಳಿ ಎಬ್ಬಿಸಲಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳಾದರೂ ಬಹುತೇಕ ಹಾಸ್ಟೆಲ್ ಗಳಿಗೆ ಬಾಡಿಗೆ ಕಟ್ಟಡಗಳೇ ಗತಿಯಾಗಿವೆ! ರೈಲು ಬೋಗಿಯಂತೆ ವರ್ಷದಿಂದ ವರ್ಷಕ್ಕೆ ಇವು ವಾರ್ಡ್ ನಿಂದ ವಾರ್ಡ್ ಗೆ ಚಲಿಸುತ್ತಲೇ ಇರುತ್ತವೆ!

ಹಿಂದುಳಿದ, ಎಸ್ಸಿ, ಎಸ್ಟಿ ಹಾಸ್ಟೆಲ್ ವಿದ್ಯಾರ್ಥಿಗಳು ಉತ್ತಮ ಊಟಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಇಲ್ಲವೇ ಸಂಬಂಧಿಸಿದ ಅಧಿಕಾರಿಗಳ ಕಾರ್ಯಾಲಯದ ಮುಂದೆ ದಿನಗಟ್ಟಲೇ ಹೋರಾಟ ಮಾಡಲೇಬೇಕಾದ ದುಃಸ್ಥಿತಿ ಇದೆ. ಬಹುತೇಕ ಎಲ್ಲಾ ವಾರ್ಡನ್ ಗಳು ಮಕ್ಕಳ ಅನುದಾನವನ್ನು ಕದಿಯುತ್ತಿರುವುದು ಎಲ್ಲರಿಗೂ ಗೊತ್ತಿದ್ದರೂ ಅದನ್ನು ನಿಯಂತ್ರಿಸಲು ಯಾರೂ ಮುಂದಾಗುತ್ತಿಲ್ಲ ಎಂದು ಪತ್ರಕರ್ತರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.

ಈ ದುರಂತದ ಪರಿಸ್ಥಿತಿಯಲ್ಲಿ ಉತ್ತಮ ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಸೌಲಭ್ಯ, ಆಟದ ಮೈದಾನವನ್ನು ನಿರೀಕ್ಷಿಸುವುದು ದುರಾಸೆಯಲ್ಲವೇ?

ಇದೇ ಸಂದರ್ಭದಲ್ಲಿ ಕೆಲವೊಂದು ಅತ್ಯುತ್ತಮ ಹಾಸ್ಟೆಲ್ ಗಳು ಇವೆ. ಬೆಂಗಳೂರನ ನೆಲಮಂಗಲದ ಸರ್ಕಾರಿ ಹಾಸ್ಟೆಲ್ ಫೈವ್ ಸ್ಟಾರ್ ಹೋಟೆಲ್ ನಂತೆ ಕಂಗೊಳಿಸುತ್ತದೆ. ಶುಚಿತ್ವಕ್ಕೆ ಮಹತ್ವ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಶಿಸ್ತನ್ನು ಕಲಿಸಲಾಗುತ್ತಿದೆ. ಇದು ಸಹ ಸರ್ಕಾರಿ ಹಾಸ್ಟೆಲ್ ಆದರೂ ಇದು ಹೇಗೆ ಸಾಧ್ಯ? ಹೇಗೆಂದರೆ ಸ್ಥಳೀಯ ದಲಿತ ಸಂಘಟನೆಗಳ ಹೋರಾಟದಿಂದ ಕಟ್ಟಡ ನಿರ್ಮಾಣದಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದೇ ಅತ್ಯುತ್ತಮ ಕಟ್ಟಡ ಕಟ್ಟಲು ಸಾಧ್ಯವಾಯಿತು. ಅಲ್ಲಿನ ವಾರ್ಡನ್ ಹೋರಾಟದ ಹಿನ್ನೆಲೆಯಿಂದ ಬಂದವರು. ಅವರು ಮಕ್ಕಳ ಭವಿಷ್ಯದ ಮೇಲಿನ ಪ್ರೀತಿಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಇದು ನಿಜಕ್ಕೂ ಮಾದರಿ ಹಾಸ್ಟೆಲ್ ಆಗಿದೆ.

ಅಂದರೆ ಇಚ್ಛಾಶಕ್ತಿ ಇದ್ದರೆ ಸಾಕು ಇರುವ ಅನುದಾನದಲ್ಲಿಯೇ ಹಾಸ್ಟೆಲ್ ಗಳನ್ನು ಅತ್ಯುತ್ತಮವಾಗಿ ನಡೆಸಲು ಸಾಧ್ಯ. ಅಂತಹ ಇಚ್ಛಾಶಕ್ತಿಯನ್ನು ಸರ್ಕಾರದಲ್ಲಿ, ಸಮಾಜ ಕಲ್ಯಾಣ/ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ, ವಾರ್ಡನ್ ಗಳಲ್ಲಿ ತರುವವರು ಯಾರು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಉತ್ತರ ಕಂಡುಕೊಂಡಾಗ ಮಾತ್ರ ಶಿಕ್ಷಣದ ನಿಜವಾದ ಉದ್ದೇಶವನ್ನು ಈಡೇರಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಟ್ಟಡದ ಗುತ್ತಿಗೆದಾರ,ರಾಜಕಾರಣಿ, ಕೆಲವು ಸರ್ಕಾರಿ ಕೆಲಸಗಾರರು ಮತ್ತು rti ಹಾಕುವವರವರೆವಿಗೂ ಹಣ ಸೋರಿಕೆ ಇದೆ…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...