Homeಕರ್ನಾಟಕಖಾಲಿ ನಿವೇಶನಗಳಿದ್ದರೂ ಹಾಸ್ಟೆಲ್ ಕಟ್ಟಡ ಕಟ್ಟದ ಸರ್ಕಾರ.. ಕಾರಣವೇನು ಗೊತ್ತೆ?

ಖಾಲಿ ನಿವೇಶನಗಳಿದ್ದರೂ ಹಾಸ್ಟೆಲ್ ಕಟ್ಟಡ ಕಟ್ಟದ ಸರ್ಕಾರ.. ಕಾರಣವೇನು ಗೊತ್ತೆ?

- Advertisement -
- Advertisement -

ರಾಜ್ಯದಲ್ಲಿರುವ ಅರ್ಧದಷ್ಟು ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡಗಳಿಲ್ಲ. ಖಾಲಿ ನಿವೇಶನಗಳಿದ್ದರೂ ಕಟ್ಟಡ ಕಟ್ಟಲು ಮುಂದಾಗದ ಸರ್ಕಾರ.. ಹಿಂದಿದೆ ಖಾಸಗಿ ಲಾಬಿ..

ಮೂರು ಹಾಸ್ಟೆಲ್ ಗಳ ವಿದ್ಯಾರ್ಥಿನಿಯರನ್ನು ಲಾಡ್ಜ್ ಗೆ ತಳ್ಳಲು ಮುಂದಾಗಿದ್ದ ಅಧಿಕಾರಿಗಳು: ಕೆವಿಎಸ್ ಮಧ್ಯಪ್ರವೇಶದಿಂದ ಬಚಾವ್..

ಕಲಬುರ್ಗಿ ಜಿಲ್ಲೆಯ ಅಂಬಿಕನಗರ, ವೇಂಕಟೇಶನಗರ ಹಾಗೂ ಎನ್.ಜಿ.ಓ ನಗರಗಳ ಮೂರು ಹೆಣ್ಣುಮಕ್ಕಳ ಹಾಸ್ಟೆಲ್ ಗಳಿಗೆ ಸ್ವಂತ ಕಟ್ಟಡಗಳಿಲ್ಲ. ಖಾಸಗಿ ಕಟ್ಟಡಗಳು ಸಹ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಸ್ಥಳಾಂತರ ಮಾಡಬೇಕಾಗಿತ್ತು. ಹೊಸ ಕಟ್ಟಡ ಕಟ್ಟುವವರೆಗೆ ಇಲ್ಲಿರುವ ವಿದ್ಯಾರ್ಥಿನಿಯರನ್ನು ಲಾಡ್ಜ್ ಒಂದಕ್ಕೆ ಕಳಿಸಿ ಲಾಭ ಹೊಡೆಯಲು ಹೊಂಚಿಸಿದ್ದರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ. ಲಾಡ್ಜ್ ನ ಮಾಲೀಕರೊಂದಿಗೆ ಮಾತಾಡಿ ಆಗಲೇ ಕಮಿಷನ್ ಕೂಡ ಮಾತಾಡಿ ಮುಗಿದಿತ್ತು.

ಇನ್ನು ಇದಕ್ಕೆ ಒಪ್ಪದ ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೆದರಿಸಿ ಸ್ಥಳಾಂತರಕ್ಕೆ ಅವರ ಸಹಿ ಮೂಲಕ ಒಪ್ಪಿಗೆಯನ್ನು ಪಡೆಯಲಾಗಿತ್ತು. ವಿಷಯ ತಿಳಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಅಧಿಕಾರಿಗಳನ್ನು ಸಂಪರ್ಕಿಸಿದರೆ ಉಡಾಫೆಯ ಉತ್ತರ ಸಿಕ್ಕಿತ್ತು. ಆಕ್ರೋಶಗೊಂಡ ವಿದ್ಯಾರ್ಥಿಗಳು ಹಾಸ್ಟೆಲ್ ನ ವಿದ್ಯಾರ್ಥಿನಿಯರನ್ನು ಒಟ್ಟುಗೂಡಿಸಿ, ಈ ಎಲ್ಲಾ ವಿದ್ಯಾರ್ಥಿ ವಿರೋಧಿ ನಿಲುವುಗಳನ್ನು ವಿರೋಧಿಸಿ ಆಗಸ್ಟ್ 10 ರಂದು KVS ನೇತೃತ್ವದಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯ ಎದುರು ದೊಡ್ಡ ಪ್ರತಿಭಟನೆಯನ್ನು ನಡೆಸಿದ್ದರು. ನಾಗರೀಕ ಸಮಾಜದ ಗಮನಕ್ಕೆ ಬಂದ ಕೂಡಲೇ ಹಲವರು ಇದನ್ನು ಖಂಡಿಸಿದರು. ಮಾಧ್ಯಮಗಳಲ್ಲಿ ವಿಷಯ ಹೊರಬಂದ ನಂತರ ಸ್ಥಳಾಂತರವನ್ನು ನಿಲ್ಲಿಸುವುದಾಗಿ ಜಿಲ್ಲೆಯ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಒಪ್ಪಿಕೊಂಡರು.

ಲಾಡ್ಜ್ ಗೆ ಸ್ಥಳಾಂತರ ವಿರೋಧಿಸಿ ನಡೆದ ಪ್ರತಿಭಟನೆ

ಹೋರಾಟದ ಮುಂದುವರೆದ ಭಾಗವಾಗಿ ಬೆಂಗಳೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರಾದ ವಸಂತ್ ಕುಮಾರ್ ಅವರನ್ನು KVS ತಂಡ ಭೇಟಿ ಮಾಡಿ ಸ್ಥಳಾಂತರ ಮಾಡಬಾರದು, ಶೀಘ್ರದಲ್ಲಿಯೇ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡಗಳನ್ನು ನಿರ್ಮಿಸಬೇಕು, ಈಗಿರುವ ಹಾಸ್ಟೆಲ್ ಗಳನ್ನೇ ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗಿ ಅಭಿವೃದ್ಧಿ ಮಾಡುವುದರ ಜೊತೆಗೆ ವಿದ್ಯಾರ್ಥಿಗಳನ್ನು ಬೆದರಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮವನ್ನು ಜರುಗಿಸಬೇಕೇಂದು ಆಗ್ರಹಿಸಿಲಾಯಿತು.

ವಿದ್ಯಾರ್ಥಿಗಳ ಹಕ್ಕೊತ್ತಾಯಕ್ಕೆ ಒಪ್ಪಿದ ಆಯುಕ್ತರು, ”ಹಾಸ್ಟೆಲ್ ಸ್ಥಳಾಂತರವನ್ನು ಯಾವುದೇ ಕಾರಣಕ್ಕೆ ಮಾಡುವುದಿಲ್ಲ ಎಂದು ತಿಳಿಸಿ, ಅಧಿಕಾರಿ ಮೆಹಬೂಬ್ ಪಾಷಾ ಅವರ ಮೇಲೆ ಶಿಸ್ತು ಕ್ರಮ ಜಾರಿ ಮಾಡುವಂತೆ ಹಿಂದುಳಿದ ವರ್ಗದ ಸಚಿವಾಲಯದ ಆಪ್ತ ಕಾರ್ಯದರ್ಶಿಗಳಿಗೆ ಸೂಚನಾ ಪತ್ರವನ್ನು ನೀಡಿದ್ದಾರೆ.” KVS ತಂಡ ಸಚಿವಾಲಯದ ಆಪ್ತ ಕಾರ್ಯದರ್ಶಿಗಳಿಗೂ ಆಗ್ರಹ ಪತ್ರವನ್ನು ನೀಡಿ ಶೀಘ್ರವಾಗಿ ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ. ಅಲ್ಲಿಗೆ ಸದ್ಯಕ್ಕೆ ಆ ವಿದ್ಯಾರ್ಥಿನಿಯರು ನಿಟ್ಟುಸಿರು ಬಿಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಕೊಪ್ಪಳದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯವೊಂದಕ್ಕೆ ಸ್ವಂತ ಕಟ್ಟಡವಿಲ್ಲದೇ ಖಾಸಗಿ ಕಟ್ಟಡದಲ್ಲಿ ಧ್ವಜಕಂಬ ಇಳಿಸಲು ಹೋಗಿ ಕರೆಂಟ್ ಶಾಕ್ ನಿಂದ ಐವರು ವಿದ್ಯಾರ್ಥಿಗಳು ದುರಂತದ ಸಾವನಪ್ಪಿರುವ ದುರ್ಘಟನೆ ಜರುಗಿದೆ. ಇಲ್ಲಿಯೂ ಇದೇ ಸಮಸ್ಯೆ.. ಸ್ವಂತ ಕಟ್ಟಡವಿಲ್ಲ, ಖಾಸಗಿ ಕಟ್ಟಡಗಳಲ್ಲಿ ಸುರಕ್ಷತೆಯಿಲ್ಲ..

 

ವಾಸ್ತವವೇನು?

RTI ನಿಂದ ಪಡೆದ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಒಟ್ಟು 2438 ಸರ್ಕಾರಿ ವಿದ್ಯಾರ್ಥಿ ನಿಲಯಗಳಿವೆ. ಇವುಗಳಲ್ಲಿ ಕೇವಲ 1325 ವಿದ್ಯಾರ್ಥಿ ನಿಲಯಗಳಿಗೆ ಮಾತ್ರ ಸ್ವಂತ ಕಟ್ಟಡಗಳಿವೆ. ಉಳಿದಂತೆ 1031 ವಿದ್ಯಾರ್ಥಿ ನಿಲಯಗಳು ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿವೆ. ಸುಮಾರು ಅಷ್ಟೇ ಸಂಖ್ಯೆಯ ಸರ್ಕಾರಿ  ನಿವೇಶನಗಳು ಇದ್ದರೂ ಸಹ ಕೇವಲ 340 ಕಟ್ಟಡಗಳು ಮಾತ್ರ ಕಾಮಗಾರಿ ಹಂತದಲ್ಲಿವೆ. ಇನ್ನು 602 ಸರ್ಕಾರಿ ನಿವೇಶನಗಳು ಖಾಲಿ ಬಿದ್ದಿದ್ದರೂ ಸಹ ಹಾಸ್ಟೆಲ್ ಕಟ್ಟಡ ಕಟ್ಟಲು ಸರ್ಕಾರ ಮುಂದಾಗಿಲ್ಲ.

ಸ್ವಂತ ಕಟ್ಟಡವಿಲ್ಲದೇ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿರುವ ವಿದ್ಯಾರ್ಥಿನಿಲಯಗಳು ಉತ್ತರ ಕರ್ನಾಟಕದಲ್ಲಿಯೇ ಹೆಚ್ಚಿವೆ. ಒಂದೇ ರೂಮಿನಲ್ಲಿ 4 ವಿದ್ಯಾರ್ಥಿಗಳು ಮಾತ್ರ ಇರಬೇಕೆಂಬ ನಿಯಮವಿದ್ದರೂ ಸಹ ಹತ್ತಾರು ವಿದ್ಯಾರ್ಥಿಗಳು ವಾಸಿಸಬೇಕಾದ ಪರಿಸ್ಥಿತಿ ಇದೆ. ಇಲ್ಲಿ ಹೇಳುವವರು ಕೇಳುವವರು ಯಾರು ಇಲ್ಲ. ನಿಲಯ ಪಾಲಕರು ಸಹ ದಿನನಿತ್ಯ ಬರುವುದಿಲ್ಲ.

ಇದರ ಹಿಂದಿದೆ ಖಾಸಗಿ ಲಾಬಿ

ನಿವೇಶನಗಳಿದ್ದರೂ ಸಹ ಸರ್ಕಾರಿ ಕಟ್ಟಡ ಕಟ್ಟದಿರುವುದರ ಹಿಂದೆ ದೊಡ್ಡ ಖಾಸಗಿ ಮಾಫಿಯಾ ಕೆಲಸ ಮಾಡುತ್ತಿದೆ. ಖಾಸಗಿ ಕಟ್ಟಡದ ಮಾಲೀಕರು, ರಿಯಲ್ ಎಸ್ಟೇಟ್ ಕುಳಗಳು ಸ್ಥಳೀಯ ವಾರ್ಡನ್ ಗಳೊಂದಿಗೆ ಶಾಮೀಲಾಗಿ ಸರ್ಕಾರದ ದುಡ್ಡನ್ನು ನುಂಗಿ ನೀರು ಕುಡಿಯುತ್ತಿದ್ದಾರೆ. ಮಾಸಿಕ ಲಕ್ಷಾಂತರ ರೂಪಾಯಿ ಬಾಡಿಗೆ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ. ಒಂದು ವೇಳೆ ಸರ್ಕಾರ ಸ್ವಂತ ಕಟ್ಟಡ ಕಟ್ಟಿಬಿಟ್ಟರೆ ಇವರ ಕಮಾಯಿಗೆ ಬ್ರೇಕ್ ಬೀಳುತ್ತದೆ ಅದಕ್ಕೆ ಅವರು ಯಥಾಸ್ಥಿತಿ ಕಾಪಾಡಿಕೊಳ್ಳಲು ನಿಂತಿದ್ದಾರೆ.

ಇವರುಗಳೆಲ್ಲಾ ಸಚಿವರ ಲೆವೆಲ್ ನಲ್ಲಿ ಆಪರೇಟ್ ಆಗುತ್ತಿದ್ದಾರೆ. ಬೆಂಗಳೂರಿನಲ್ಲಿ ಲಾಬಿ ನಡೆಸಿ ಕಟ್ಟಡ ನಿರ್ಮಾಣದ ಟೆಂಡರ್ ಗಾಗಿ ಇಲ್ಲವೇ ಕಟ್ಟಡ ಕಟ್ಟಬಾರದಾಗಿ ಒತ್ತಡ ತರುತ್ತಿದ್ದಾರೆ. ಇದೆಲ್ಲದರ ದುಷ್ಪರಿಣಾಮಗಳನ್ನು ಅಮಾಯಕ ವಿದ್ಯಾರ್ಥಿಗಳು ಅನುಭವಿಸಬೇಕಿದೆ.

ಸರ್ಕಾರಿ ಹಾಸ್ಟೆಲ್ ಗಳ ದುಸ್ಥಿತಿ

ಇನ್ನು ಸರಕಾರದ ಕೆಲ ಹಾಸ್ಟೆಲ್ ಗಳು ಇಂದು ದನದ ಕೊಟ್ಟಿಗೆಗಳಿಗಿಂತ ಕಡೆಯಾಗಿವೆ. ಬಡ, ಮಧ್ಯಮ ವರ್ಗವನ್ನು ಶೈಕ್ಷಣಿಕ ಸೌಲಭ್ಯದಿಂದ ವಂಚಿಸುವ ವ್ಯವಸ್ಥಿತ ಹುನ್ನಾರದ ಭಾಗವಾಗಿಯೇ ಹಾಸ್ಟೆಲ್ ಗಳನ್ನು ದಿವಾಳಿ ಎಬ್ಬಿಸಲಾಗುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳಾದರೂ ಬಹುತೇಕ ಹಾಸ್ಟೆಲ್ ಗಳಿಗೆ ಬಾಡಿಗೆ ಕಟ್ಟಡಗಳೇ ಗತಿಯಾಗಿವೆ! ರೈಲು ಬೋಗಿಯಂತೆ ವರ್ಷದಿಂದ ವರ್ಷಕ್ಕೆ ಇವು ವಾರ್ಡ್ ನಿಂದ ವಾರ್ಡ್ ಗೆ ಚಲಿಸುತ್ತಲೇ ಇರುತ್ತವೆ!

ಹಿಂದುಳಿದ, ಎಸ್ಸಿ, ಎಸ್ಟಿ ಹಾಸ್ಟೆಲ್ ವಿದ್ಯಾರ್ಥಿಗಳು ಉತ್ತಮ ಊಟಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಇಲ್ಲವೇ ಸಂಬಂಧಿಸಿದ ಅಧಿಕಾರಿಗಳ ಕಾರ್ಯಾಲಯದ ಮುಂದೆ ದಿನಗಟ್ಟಲೇ ಹೋರಾಟ ಮಾಡಲೇಬೇಕಾದ ದುಃಸ್ಥಿತಿ ಇದೆ. ಬಹುತೇಕ ಎಲ್ಲಾ ವಾರ್ಡನ್ ಗಳು ಮಕ್ಕಳ ಅನುದಾನವನ್ನು ಕದಿಯುತ್ತಿರುವುದು ಎಲ್ಲರಿಗೂ ಗೊತ್ತಿದ್ದರೂ ಅದನ್ನು ನಿಯಂತ್ರಿಸಲು ಯಾರೂ ಮುಂದಾಗುತ್ತಿಲ್ಲ ಎಂದು ಪತ್ರಕರ್ತರೊಬ್ಬರು ಅಸಮಾಧಾನ ಹೊರಹಾಕಿದ್ದಾರೆ.

ಈ ದುರಂತದ ಪರಿಸ್ಥಿತಿಯಲ್ಲಿ ಉತ್ತಮ ಗುಣಮಟ್ಟದ ಆಹಾರ, ಸುಸಜ್ಜಿತ ಗ್ರಂಥಾಲಯ, ಕಂಪ್ಯೂಟರ್ ಸೌಲಭ್ಯ, ಆಟದ ಮೈದಾನವನ್ನು ನಿರೀಕ್ಷಿಸುವುದು ದುರಾಸೆಯಲ್ಲವೇ?

ಇದೇ ಸಂದರ್ಭದಲ್ಲಿ ಕೆಲವೊಂದು ಅತ್ಯುತ್ತಮ ಹಾಸ್ಟೆಲ್ ಗಳು ಇವೆ. ಬೆಂಗಳೂರನ ನೆಲಮಂಗಲದ ಸರ್ಕಾರಿ ಹಾಸ್ಟೆಲ್ ಫೈವ್ ಸ್ಟಾರ್ ಹೋಟೆಲ್ ನಂತೆ ಕಂಗೊಳಿಸುತ್ತದೆ. ಶುಚಿತ್ವಕ್ಕೆ ಮಹತ್ವ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಶಿಸ್ತನ್ನು ಕಲಿಸಲಾಗುತ್ತಿದೆ. ಇದು ಸಹ ಸರ್ಕಾರಿ ಹಾಸ್ಟೆಲ್ ಆದರೂ ಇದು ಹೇಗೆ ಸಾಧ್ಯ? ಹೇಗೆಂದರೆ ಸ್ಥಳೀಯ ದಲಿತ ಸಂಘಟನೆಗಳ ಹೋರಾಟದಿಂದ ಕಟ್ಟಡ ನಿರ್ಮಾಣದಲ್ಲಿ ಯಾವುದೇ ಭ್ರಷ್ಟಾಚಾರ ನಡೆಯದೇ ಅತ್ಯುತ್ತಮ ಕಟ್ಟಡ ಕಟ್ಟಲು ಸಾಧ್ಯವಾಯಿತು. ಅಲ್ಲಿನ ವಾರ್ಡನ್ ಹೋರಾಟದ ಹಿನ್ನೆಲೆಯಿಂದ ಬಂದವರು. ಅವರು ಮಕ್ಕಳ ಭವಿಷ್ಯದ ಮೇಲಿನ ಪ್ರೀತಿಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಇದು ನಿಜಕ್ಕೂ ಮಾದರಿ ಹಾಸ್ಟೆಲ್ ಆಗಿದೆ.

ಅಂದರೆ ಇಚ್ಛಾಶಕ್ತಿ ಇದ್ದರೆ ಸಾಕು ಇರುವ ಅನುದಾನದಲ್ಲಿಯೇ ಹಾಸ್ಟೆಲ್ ಗಳನ್ನು ಅತ್ಯುತ್ತಮವಾಗಿ ನಡೆಸಲು ಸಾಧ್ಯ. ಅಂತಹ ಇಚ್ಛಾಶಕ್ತಿಯನ್ನು ಸರ್ಕಾರದಲ್ಲಿ, ಸಮಾಜ ಕಲ್ಯಾಣ/ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ, ವಾರ್ಡನ್ ಗಳಲ್ಲಿ ತರುವವರು ಯಾರು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ಈ ಪ್ರಶ್ನೆಗೆ ಉತ್ತರ ಕಂಡುಕೊಂಡಾಗ ಮಾತ್ರ ಶಿಕ್ಷಣದ ನಿಜವಾದ ಉದ್ದೇಶವನ್ನು ಈಡೇರಿಸಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಟ್ಟಡದ ಗುತ್ತಿಗೆದಾರ,ರಾಜಕಾರಣಿ, ಕೆಲವು ಸರ್ಕಾರಿ ಕೆಲಸಗಾರರು ಮತ್ತು rti ಹಾಕುವವರವರೆವಿಗೂ ಹಣ ಸೋರಿಕೆ ಇದೆ…

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...