Homeಮುಖಪುಟಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಶ್ರೀರಂಗ ಪಟ್ಟಣ, ಬೆಂಗಳೂರು, ಸಿಂಧನೂರು, ಉಡುಪಿ ಮತ್ತು ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಕೂಡಿ ಬಾಳುವ ಸಂದೇಶ ಸಾರಲಾಗುತ್ತಿದೆ.

- Advertisement -
- Advertisement -

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕಾಣಬೇಕೆಂದು ಕನಸು ಕಂಡವರು ಮಹಾಕವಿ ಕುವೆಂಪು. ಆದರೆ ಕಳೆದ ಆರು ತಿಂಗಳಿನಲ್ಲಿ ಧರ್ಮಾಂಧರ ದ್ವೇಷ ರಾಜಕಾರಣಕ್ಕೆ ಬೆಂದು ಹೋಯಿತು ಕರ್ನಾಟಕ. ಮತೀಯ ಗೂಂಡಾಗಿರಿಗೆ ಸಿಎಂ ಬೊಮ್ಮಾಯಿಯವರೆ ಸಮರ್ಥನೆ ಕೊಟ್ಟಿದ್ದು, ಮತಾಂತರ ನಿಷೇಧ ಮಸೂದೆ ಜಾರಿ ಚರ್ಚೆ, ಹಿಜಾಬ್-ಕೇಸರಿ ಶಾಲು ವಿವಾದ, ಹರ್ಷ ಕೊಲೆ ಪ್ರಕರಣ, ಹಲಾಲ್-ಜಟ್ಕಾ ಕಟ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್… ಹೀಗೆ ಸಾಲು ಸಾಲು ವಿವಾದಗಳನ್ನು ಹುಟ್ಟಿಹಾಕಲಾಯ್ತು. ಮಾಧ್ಯಮಗಳು ಅವುಗಳಿಗೆ ಮತ್ತಷ್ಟು ತುಪ್ಪ ಸುರಿದು ಶಾಂತಿ ಕದಡಿದವು. ಎಲ್ಲಾ ಧರ್ಮಗಳ ಬಹುತೇಕರಿಗೆ ಇದು ಅತಿಯಾಯಿತು ಅನ್ನಿಸುವಷ್ಟರ ಮಟ್ಟಿಗೆ ಮಿತಿ ಮೀರಿದವು.

ಇಷ್ಟೆಲ್ಲ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿಗಳು ಕೈಕಟ್ಟಿ ಬಾಯ್ಮುಚ್ಚಿ ತಮ್ಮ ಖುರ್ಚಿ ಉಳಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದರು. ಆದರೆ ರಾಜ್ಯದ ಪ್ರಜ್ಞಾವಂತರು ಮಾತ್ರ ನಮ್ಮ ಕರ್ನಾಟಕ ಹೀಗಾಗಬಾರದು ಎಂದು ಪಣತೊಟ್ಟು ಕೆಲಸ ಮಾಡಿದರು. ಪ್ರತಿ ಸಂದರ್ಭದಲ್ಲಿಯೂ ಶೋಷಿತರ – ನೊಂದ ಜನರ ಜೊತೆಗೆ ನಿಂತರು. ತಮ್ಮ ಕೈಲಾದ ಮಟ್ಟಿಗೆ ಅದನ್ನು ತಡೆಯುವ ಪ್ರಯತ್ನ ಮಾಡಿದರು. ಮತಾಂಧರಿಗೆ ಸರ್ಕಾರದ ಸಂಪೂರ್ಣ ಕೃಪಕಟಾಕ್ಷವಿದ್ದುದರಿಂದ ಅವರ ಕೈ ಮೇಲಾಯಿತು. ಆದರೆ ಏಪ್ರಿಲ್ ತಿಂಗಳಿನಿಂದ ಅದನ್ನು ತಡೆಯುವ ಮತ್ತು ಸೌಹಾರ್ದತೆ-ಸಹಬಾಳ್ವೆ ಸಾರುವ ಕಾರ್ಯಕ್ರಮಗಳು ರಾಜ್ಯದ್ಯಂತ ಜರುಗಿದವು. ಆ ಮೂಲಕ ನಮ್ಮ ಕರ್ನಾಟಕವನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಸಾರಲಾಯಿತು.

ಧಾರವಾಡ ಹನುಮಂತ ದೇವಾಲಯದ ಎದರು ಕಲ್ಲಂಗಡಿ ನಡೆಸುತ್ತಿದ್ದ ನಬಿ ಸಾಬ್‌ರವರ ಮೇಲೆ ದೌರ್ಜನ್ಯವೆಸಗಿದ್ದು ಬಹಳಷ್ಟು ಜನರಿಗೆ ನೋವು ತರಿಸಿತು. ಅಲ್ಲಿಂದ ಎಲ್ಲಾ ಧರ್ಮೀಯರು ಒಟ್ಟು ಸೇರಿ ನಾವೆಲ್ಲ ಒಂದೆ ಎಂದರು. ಬಹಳಷ್ಟು ಹಿಂದೂ ಕುಟುಂಬಗಳು ರಂಜಾನ್ ಮಾಸದಲ್ಲಿ ಮುಸ್ಲಿಮರಿಗೆ ಇಫ್ತಾರ್ ಆಯೋಜಿಸಿದರು. ಅದೇ ರೀತಿಯಾಗಿ ಮುಸ್ಲಿಮರು ರಾಮನವಮಿ, ಹನುಮ ಜಯಂತಿ ಮೆರವಣಿಗೆಯಲ್ಲಿ ಬಂದವರಿಗೆ ಪಾನಕ, ಜ್ಯೂಸ್ ನೀಡಿ ಸತ್ಕರಿಸಿದರು. ಯುಗಾದಿಯಂದು ಹಿರಿಯ ಸಾಹಿತಿ ದೇವನೂರು ಮಹಾದೇವರವರ ನೇತೃತ್ವದಲ್ಲಿ ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿಸಿ ಸೌಹಾರ್ದತೆ ಮೆರಯಲಾಯಿತು. ಈಗ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಸಾಲು ಸಾಲು ಸೌಹಾರ್ದ-ಸಹಬಾಳ್ವೆಯ ಸಮಾವೇಶಗಳನ್ನು ಆಯೋಜಿಸಲಾಗಿದೆ. ಅವುಗಳ ಮಾಹಿತಿ ಇಲ್ಲಿದೆ.

ಬಹುಸಂಸ್ಕೃತಿ ಸಾಮರಸ್ಯ ಮೇಳ: ಮೇ 04, ಶ್ರೀರಂಗಪಟ್ಟಣ

ಸ್ವಾತಂತ್ರ್ಯವೀರ ಟಿಪ್ಪು ಸುಲ್ತಾನ್ ಹುತಾತ್ಮ ದಿನದ ನೆನಪಿನಲ್ಲಿ ಮಂಡ್ಯ ಜಿಲ್ಲೆಯ ರೈತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಬಹುಸಂಸ್ಕೃತಿ ಸಾಮರಸ್ಯ ಮೇಳವನ್ನು ಮೇ 04 ರಂದು ಶ್ರೀರಂಗಪಟ್ಟಣದಲ್ಲಿ ಹಮ್ಮಿಕೊಂಡಿವೆ. ಅಂದು ಸಾಮರಸ್ಯ ನಡಿಗೆ, ರಕ್ತದಾನ ಶಿಬಿರ ಮತ್ತು ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸೌಹಾರ್ದ ಸಂಸ್ಕೃತಿ ಸಮಾವೇಶ: ಮೇ 05, ಬೆಂಗಳೂರು

ನಾವೆಲ್ಲ ಒಂದೇ ಜಾತಿ ಕುಲ, ನಾವೆಲ್ಲವೂ ಮನುಜರು ಎಂಬ ಸಂದೇಶ ಸಾರುವುದಕ್ಕಾಗಿ ಮೇ 05 ರಂದು ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸೌಹಾರ್ದ ಸಂಸ್ಕೃತಿ ಸಮಾವೇಶ ಜರುಗಲಿದೆ. ಹಿರಿಯ ಸಾಹಿತ, ಹೋರಾಟಗಾರ ಬರಗೂರು ರಾಮಚಂದ್ರಪ್ಪ, ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ಗೋಪಾಲಗೌಡ, ಜಸ್ಟೀಸ್ ನಾಗಮೋಹನ್ ದಾಸ್, ಎನ್ ಸಂತೋಷ್ ಹೆಗ್ಡೆಯವರು ಜೊತೆ ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೌಹಾರ್ದ ಕರ್ನಾಟಕ ಎಂಬ ಸಂಯುಕ್ತಾಶ್ರಯದಲ್ಲಿ ವಿವಿಧ ಸಂಘಟನೆಗಳು ಈ ಕಾರ್ಯಕ್ರಮವನ್ನು ಸಂಘಟಿಸುತ್ತಿವೆ.

ಬಹುತ್ವ ಭಾರತೀಯರ ಸಮಾವೇಶ: ಮೇ 08, ಸಿಂಧನೂರು

ಸೌಹಾರ್ದ ಸಾಮರಸ್ಯ ಭಾರತಕ್ಕಾಗಿ ಬಹುತ್ವ ಭಾರತೀಯರ ಸಮಾವೇಶ ಮೇ 08 ರಂದು ಸಿಂಧನೂರಿನ ಎಪಿಎಂಸಿ ಮೈದಾನದಲ್ಲಿ ಜರುಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 05ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಬಸವಪ್ರಭು, ಉಪನ್ಯಾಸಕರು, ಬೀದರ್, ಶಿವಸುಂದರ್, ಚಿಂತಕರು, ಹೋರಾಟಗಾರರಾದ ಆರ್ ಮಾನಸಯ್ಯ, ಸಾಮಾಜಿಕ ಕಾರ್ಯಕರ್ತರಾದ ಲಬೀದ್ ಶಫಿ, ಸಾವಿತ್ರಿ ಮುಜುಂದಾರ್, ನ್ಯಾಯವಾದಿಗಳು, ಕೊಪ್ಪಳ, ಬರಹಗಾರರಾದ ಕೆ.‍‍ಷರೀಪ, ದಲಿತ ನಾಯಕರಾದ ಮಾರಸಂದ್ರ ಮುನಿಯಪ್ಪ, ಬಾಲಸ್ವಾಮಿ, ಕೊಡ್ಲಿ ಮತ್ತು ಹೋರಾಟಗಾರರಾದ ಡಿ.ಎಚ್ ಪೂಜಾರ್ ಭಾಗವಹಿಸಲಿದ್ದಾರೆ. ಭಾಗವಹಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗೆ 9880152070 ಈ ಮೊಬೈಲ್ ನಂಬರ್ ಅನ್ನು ಸಂಪರ್ಕಿಸಬಹುದು.

ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶ: ಮೇ 14, ಉಡುಪಿ

ಯಾವ ಉಡುಪಿಯಲ್ಲಿ ಹಿಜಾಬ್ ಅನ್ನು ವಿವಾದದ ವಸ್ತುವನ್ನಾಗಿ ಮಾಡಲಾಯಿತೊ, ಎಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಬ್ಯಾನರ್ ಹಾಕಲಾಯಿತೊ ಅದೇ ಉಡುಪಿಯಲ್ಲಿ ಮೇ 14 ರಂದು ರಾಜ್ಯದ ನೂರಾರು ಸಂಘಟನೆಗಳು ಸೇರಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶವನ್ನು ಹಮ್ಮಿಕೊಂಡಿವೆ.

ರಾಜ್ಯ ಹಾಗೂ ದೇಶದಲ್ಲಿ ನಿತ್ಯವೂ ಘಟಿಸುತ್ತಿರುವ ಮತೀಯವಾದಿ ಸಂಗತಿಗಳನ್ನು ಖಂಡಿಸಿ, ದೇಶದ ಜಾತ್ಯತೀತತೆ, ಸಮಗ್ರತೆ, ವೈವಿಧ್ಯತೆ ಹಾಗೂ ಕೋಮು ಸಾಮರಸ್ಯವನ್ನು ಸಾರಲು ಈ ಸಮಾವೇಶ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ನಾಡಿನ ಜನರನ್ನು ಆಹ್ವಾನಿಸುವ ಹಾಗೂ ಸಾಮರಸ್ಯ, ಸಹಬಾಳ್ವೆಯ ಸೊಬಗನ್ನು ಉದ್ದೀಪಿಸುವ ನಿಟ್ಟಿನಲ್ಲಿ ಹಲವು ಚಿಂತಕರು, ಹಿರಿಯ, ಕಿರಿಯ ಬರಹಗಾರರು, ಹೋರಾಟಗಾರರು, ರಂಗಕರ್ಮಿಗಳು, ಚಿತ್ರಕರ್ಮಿಗಳು, ಪತ್ರಕರ್ತರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಯೋಗೇಂದ್ರ ಯಾದವ್, ಸಸಿಕಾಂತ್ ಸೆಂಥಿಲ್ ಸೇರಿ ವಿವಿಧ ಧರ್ಮದ ಧರ್ಮಗುರುಗಳು, ಹೋರಾಟಗಾರರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಾಮರಸ್ಯ ಸಂದೇಶ ಅಭಿಯಾನ: ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌‌ಗಳು ವೈರಲ್‌

ಮೇ ಸಾಹಿತ್ಯ ಮೇಳ: ಮೇ 27 ಮತ್ತು 28, ದಾವಣಗೆರೆ

ಸಂವಿಧಾನ ನಮ್ಮೆಲ್ಲರ ಆಶಯ, ಸತ್ಯದ ಹುಡುಕಾಟಕ್ಕೆ ಸಾಕ್ಷಿಯಾಗೋಣ ಎಂಬ ಉದ್ದೇಶದಿಂದ ಮೇ 27 ಮತ್ತು 28ರಂದು ದಾವಣಗೆರೆಯಲ್ಲಿ ಲಡಾಯಿ ಪ್ರಕಾಶನದ ವತಿಯಿಂದ ಮೇ ಸಾಹಿತ್ಯ ಮೇಳ ನಡೆಯಲಿದೆ. ತಾಜ್ ಪ್ಯಾಲೇಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂರಾರು ಸಾಹಿತ್ಯ ಆಸಕ್ತರು, ಹೋರಾಟಗಾರರು ಭಾಗವಹಿಸಲಿದ್ದಾರೆ.

ಇದಲ್ಲದೆ ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಸೌಹಾರ್ದ ಕಾರ್ಯಕ್ರಮಗಳು ಮೇ ತಿಂಗಳಿನಲ್ಲಿ ಜರುಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...