Homeಮುಖಪುಟಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಶ್ರೀರಂಗ ಪಟ್ಟಣ, ಬೆಂಗಳೂರು, ಸಿಂಧನೂರು, ಉಡುಪಿ ಮತ್ತು ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಕೂಡಿ ಬಾಳುವ ಸಂದೇಶ ಸಾರಲಾಗುತ್ತಿದೆ.

- Advertisement -
- Advertisement -

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕಾಣಬೇಕೆಂದು ಕನಸು ಕಂಡವರು ಮಹಾಕವಿ ಕುವೆಂಪು. ಆದರೆ ಕಳೆದ ಆರು ತಿಂಗಳಿನಲ್ಲಿ ಧರ್ಮಾಂಧರ ದ್ವೇಷ ರಾಜಕಾರಣಕ್ಕೆ ಬೆಂದು ಹೋಯಿತು ಕರ್ನಾಟಕ. ಮತೀಯ ಗೂಂಡಾಗಿರಿಗೆ ಸಿಎಂ ಬೊಮ್ಮಾಯಿಯವರೆ ಸಮರ್ಥನೆ ಕೊಟ್ಟಿದ್ದು, ಮತಾಂತರ ನಿಷೇಧ ಮಸೂದೆ ಜಾರಿ ಚರ್ಚೆ, ಹಿಜಾಬ್-ಕೇಸರಿ ಶಾಲು ವಿವಾದ, ಹರ್ಷ ಕೊಲೆ ಪ್ರಕರಣ, ಹಲಾಲ್-ಜಟ್ಕಾ ಕಟ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್… ಹೀಗೆ ಸಾಲು ಸಾಲು ವಿವಾದಗಳನ್ನು ಹುಟ್ಟಿಹಾಕಲಾಯ್ತು. ಮಾಧ್ಯಮಗಳು ಅವುಗಳಿಗೆ ಮತ್ತಷ್ಟು ತುಪ್ಪ ಸುರಿದು ಶಾಂತಿ ಕದಡಿದವು. ಎಲ್ಲಾ ಧರ್ಮಗಳ ಬಹುತೇಕರಿಗೆ ಇದು ಅತಿಯಾಯಿತು ಅನ್ನಿಸುವಷ್ಟರ ಮಟ್ಟಿಗೆ ಮಿತಿ ಮೀರಿದವು.

ಇಷ್ಟೆಲ್ಲ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿಗಳು ಕೈಕಟ್ಟಿ ಬಾಯ್ಮುಚ್ಚಿ ತಮ್ಮ ಖುರ್ಚಿ ಉಳಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದರು. ಆದರೆ ರಾಜ್ಯದ ಪ್ರಜ್ಞಾವಂತರು ಮಾತ್ರ ನಮ್ಮ ಕರ್ನಾಟಕ ಹೀಗಾಗಬಾರದು ಎಂದು ಪಣತೊಟ್ಟು ಕೆಲಸ ಮಾಡಿದರು. ಪ್ರತಿ ಸಂದರ್ಭದಲ್ಲಿಯೂ ಶೋಷಿತರ – ನೊಂದ ಜನರ ಜೊತೆಗೆ ನಿಂತರು. ತಮ್ಮ ಕೈಲಾದ ಮಟ್ಟಿಗೆ ಅದನ್ನು ತಡೆಯುವ ಪ್ರಯತ್ನ ಮಾಡಿದರು. ಮತಾಂಧರಿಗೆ ಸರ್ಕಾರದ ಸಂಪೂರ್ಣ ಕೃಪಕಟಾಕ್ಷವಿದ್ದುದರಿಂದ ಅವರ ಕೈ ಮೇಲಾಯಿತು. ಆದರೆ ಏಪ್ರಿಲ್ ತಿಂಗಳಿನಿಂದ ಅದನ್ನು ತಡೆಯುವ ಮತ್ತು ಸೌಹಾರ್ದತೆ-ಸಹಬಾಳ್ವೆ ಸಾರುವ ಕಾರ್ಯಕ್ರಮಗಳು ರಾಜ್ಯದ್ಯಂತ ಜರುಗಿದವು. ಆ ಮೂಲಕ ನಮ್ಮ ಕರ್ನಾಟಕವನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಸಾರಲಾಯಿತು.

ಧಾರವಾಡ ಹನುಮಂತ ದೇವಾಲಯದ ಎದರು ಕಲ್ಲಂಗಡಿ ನಡೆಸುತ್ತಿದ್ದ ನಬಿ ಸಾಬ್‌ರವರ ಮೇಲೆ ದೌರ್ಜನ್ಯವೆಸಗಿದ್ದು ಬಹಳಷ್ಟು ಜನರಿಗೆ ನೋವು ತರಿಸಿತು. ಅಲ್ಲಿಂದ ಎಲ್ಲಾ ಧರ್ಮೀಯರು ಒಟ್ಟು ಸೇರಿ ನಾವೆಲ್ಲ ಒಂದೆ ಎಂದರು. ಬಹಳಷ್ಟು ಹಿಂದೂ ಕುಟುಂಬಗಳು ರಂಜಾನ್ ಮಾಸದಲ್ಲಿ ಮುಸ್ಲಿಮರಿಗೆ ಇಫ್ತಾರ್ ಆಯೋಜಿಸಿದರು. ಅದೇ ರೀತಿಯಾಗಿ ಮುಸ್ಲಿಮರು ರಾಮನವಮಿ, ಹನುಮ ಜಯಂತಿ ಮೆರವಣಿಗೆಯಲ್ಲಿ ಬಂದವರಿಗೆ ಪಾನಕ, ಜ್ಯೂಸ್ ನೀಡಿ ಸತ್ಕರಿಸಿದರು. ಯುಗಾದಿಯಂದು ಹಿರಿಯ ಸಾಹಿತಿ ದೇವನೂರು ಮಹಾದೇವರವರ ನೇತೃತ್ವದಲ್ಲಿ ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿಸಿ ಸೌಹಾರ್ದತೆ ಮೆರಯಲಾಯಿತು. ಈಗ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಸಾಲು ಸಾಲು ಸೌಹಾರ್ದ-ಸಹಬಾಳ್ವೆಯ ಸಮಾವೇಶಗಳನ್ನು ಆಯೋಜಿಸಲಾಗಿದೆ. ಅವುಗಳ ಮಾಹಿತಿ ಇಲ್ಲಿದೆ.

ಬಹುಸಂಸ್ಕೃತಿ ಸಾಮರಸ್ಯ ಮೇಳ: ಮೇ 04, ಶ್ರೀರಂಗಪಟ್ಟಣ

ಸ್ವಾತಂತ್ರ್ಯವೀರ ಟಿಪ್ಪು ಸುಲ್ತಾನ್ ಹುತಾತ್ಮ ದಿನದ ನೆನಪಿನಲ್ಲಿ ಮಂಡ್ಯ ಜಿಲ್ಲೆಯ ರೈತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಬಹುಸಂಸ್ಕೃತಿ ಸಾಮರಸ್ಯ ಮೇಳವನ್ನು ಮೇ 04 ರಂದು ಶ್ರೀರಂಗಪಟ್ಟಣದಲ್ಲಿ ಹಮ್ಮಿಕೊಂಡಿವೆ. ಅಂದು ಸಾಮರಸ್ಯ ನಡಿಗೆ, ರಕ್ತದಾನ ಶಿಬಿರ ಮತ್ತು ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸೌಹಾರ್ದ ಸಂಸ್ಕೃತಿ ಸಮಾವೇಶ: ಮೇ 05, ಬೆಂಗಳೂರು

ನಾವೆಲ್ಲ ಒಂದೇ ಜಾತಿ ಕುಲ, ನಾವೆಲ್ಲವೂ ಮನುಜರು ಎಂಬ ಸಂದೇಶ ಸಾರುವುದಕ್ಕಾಗಿ ಮೇ 05 ರಂದು ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸೌಹಾರ್ದ ಸಂಸ್ಕೃತಿ ಸಮಾವೇಶ ಜರುಗಲಿದೆ. ಹಿರಿಯ ಸಾಹಿತ, ಹೋರಾಟಗಾರ ಬರಗೂರು ರಾಮಚಂದ್ರಪ್ಪ, ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ಗೋಪಾಲಗೌಡ, ಜಸ್ಟೀಸ್ ನಾಗಮೋಹನ್ ದಾಸ್, ಎನ್ ಸಂತೋಷ್ ಹೆಗ್ಡೆಯವರು ಜೊತೆ ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೌಹಾರ್ದ ಕರ್ನಾಟಕ ಎಂಬ ಸಂಯುಕ್ತಾಶ್ರಯದಲ್ಲಿ ವಿವಿಧ ಸಂಘಟನೆಗಳು ಈ ಕಾರ್ಯಕ್ರಮವನ್ನು ಸಂಘಟಿಸುತ್ತಿವೆ.

ಬಹುತ್ವ ಭಾರತೀಯರ ಸಮಾವೇಶ: ಮೇ 08, ಸಿಂಧನೂರು

ಸೌಹಾರ್ದ ಸಾಮರಸ್ಯ ಭಾರತಕ್ಕಾಗಿ ಬಹುತ್ವ ಭಾರತೀಯರ ಸಮಾವೇಶ ಮೇ 08 ರಂದು ಸಿಂಧನೂರಿನ ಎಪಿಎಂಸಿ ಮೈದಾನದಲ್ಲಿ ಜರುಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 05ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಬಸವಪ್ರಭು, ಉಪನ್ಯಾಸಕರು, ಬೀದರ್, ಶಿವಸುಂದರ್, ಚಿಂತಕರು, ಹೋರಾಟಗಾರರಾದ ಆರ್ ಮಾನಸಯ್ಯ, ಸಾಮಾಜಿಕ ಕಾರ್ಯಕರ್ತರಾದ ಲಬೀದ್ ಶಫಿ, ಸಾವಿತ್ರಿ ಮುಜುಂದಾರ್, ನ್ಯಾಯವಾದಿಗಳು, ಕೊಪ್ಪಳ, ಬರಹಗಾರರಾದ ಕೆ.‍‍ಷರೀಪ, ದಲಿತ ನಾಯಕರಾದ ಮಾರಸಂದ್ರ ಮುನಿಯಪ್ಪ, ಬಾಲಸ್ವಾಮಿ, ಕೊಡ್ಲಿ ಮತ್ತು ಹೋರಾಟಗಾರರಾದ ಡಿ.ಎಚ್ ಪೂಜಾರ್ ಭಾಗವಹಿಸಲಿದ್ದಾರೆ. ಭಾಗವಹಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗೆ 9880152070 ಈ ಮೊಬೈಲ್ ನಂಬರ್ ಅನ್ನು ಸಂಪರ್ಕಿಸಬಹುದು.

ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶ: ಮೇ 14, ಉಡುಪಿ

ಯಾವ ಉಡುಪಿಯಲ್ಲಿ ಹಿಜಾಬ್ ಅನ್ನು ವಿವಾದದ ವಸ್ತುವನ್ನಾಗಿ ಮಾಡಲಾಯಿತೊ, ಎಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಬ್ಯಾನರ್ ಹಾಕಲಾಯಿತೊ ಅದೇ ಉಡುಪಿಯಲ್ಲಿ ಮೇ 14 ರಂದು ರಾಜ್ಯದ ನೂರಾರು ಸಂಘಟನೆಗಳು ಸೇರಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶವನ್ನು ಹಮ್ಮಿಕೊಂಡಿವೆ.

ರಾಜ್ಯ ಹಾಗೂ ದೇಶದಲ್ಲಿ ನಿತ್ಯವೂ ಘಟಿಸುತ್ತಿರುವ ಮತೀಯವಾದಿ ಸಂಗತಿಗಳನ್ನು ಖಂಡಿಸಿ, ದೇಶದ ಜಾತ್ಯತೀತತೆ, ಸಮಗ್ರತೆ, ವೈವಿಧ್ಯತೆ ಹಾಗೂ ಕೋಮು ಸಾಮರಸ್ಯವನ್ನು ಸಾರಲು ಈ ಸಮಾವೇಶ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ನಾಡಿನ ಜನರನ್ನು ಆಹ್ವಾನಿಸುವ ಹಾಗೂ ಸಾಮರಸ್ಯ, ಸಹಬಾಳ್ವೆಯ ಸೊಬಗನ್ನು ಉದ್ದೀಪಿಸುವ ನಿಟ್ಟಿನಲ್ಲಿ ಹಲವು ಚಿಂತಕರು, ಹಿರಿಯ, ಕಿರಿಯ ಬರಹಗಾರರು, ಹೋರಾಟಗಾರರು, ರಂಗಕರ್ಮಿಗಳು, ಚಿತ್ರಕರ್ಮಿಗಳು, ಪತ್ರಕರ್ತರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಯೋಗೇಂದ್ರ ಯಾದವ್, ಸಸಿಕಾಂತ್ ಸೆಂಥಿಲ್ ಸೇರಿ ವಿವಿಧ ಧರ್ಮದ ಧರ್ಮಗುರುಗಳು, ಹೋರಾಟಗಾರರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಾಮರಸ್ಯ ಸಂದೇಶ ಅಭಿಯಾನ: ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌‌ಗಳು ವೈರಲ್‌

ಮೇ ಸಾಹಿತ್ಯ ಮೇಳ: ಮೇ 27 ಮತ್ತು 28, ದಾವಣಗೆರೆ

ಸಂವಿಧಾನ ನಮ್ಮೆಲ್ಲರ ಆಶಯ, ಸತ್ಯದ ಹುಡುಕಾಟಕ್ಕೆ ಸಾಕ್ಷಿಯಾಗೋಣ ಎಂಬ ಉದ್ದೇಶದಿಂದ ಮೇ 27 ಮತ್ತು 28ರಂದು ದಾವಣಗೆರೆಯಲ್ಲಿ ಲಡಾಯಿ ಪ್ರಕಾಶನದ ವತಿಯಿಂದ ಮೇ ಸಾಹಿತ್ಯ ಮೇಳ ನಡೆಯಲಿದೆ. ತಾಜ್ ಪ್ಯಾಲೇಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂರಾರು ಸಾಹಿತ್ಯ ಆಸಕ್ತರು, ಹೋರಾಟಗಾರರು ಭಾಗವಹಿಸಲಿದ್ದಾರೆ.

ಇದಲ್ಲದೆ ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಸೌಹಾರ್ದ ಕಾರ್ಯಕ್ರಮಗಳು ಮೇ ತಿಂಗಳಿನಲ್ಲಿ ಜರುಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...