Homeಮುಖಪುಟಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಶ್ರೀರಂಗ ಪಟ್ಟಣ, ಬೆಂಗಳೂರು, ಸಿಂಧನೂರು, ಉಡುಪಿ ಮತ್ತು ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಕೂಡಿ ಬಾಳುವ ಸಂದೇಶ ಸಾರಲಾಗುತ್ತಿದೆ.

- Advertisement -
- Advertisement -

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕಾಣಬೇಕೆಂದು ಕನಸು ಕಂಡವರು ಮಹಾಕವಿ ಕುವೆಂಪು. ಆದರೆ ಕಳೆದ ಆರು ತಿಂಗಳಿನಲ್ಲಿ ಧರ್ಮಾಂಧರ ದ್ವೇಷ ರಾಜಕಾರಣಕ್ಕೆ ಬೆಂದು ಹೋಯಿತು ಕರ್ನಾಟಕ. ಮತೀಯ ಗೂಂಡಾಗಿರಿಗೆ ಸಿಎಂ ಬೊಮ್ಮಾಯಿಯವರೆ ಸಮರ್ಥನೆ ಕೊಟ್ಟಿದ್ದು, ಮತಾಂತರ ನಿಷೇಧ ಮಸೂದೆ ಜಾರಿ ಚರ್ಚೆ, ಹಿಜಾಬ್-ಕೇಸರಿ ಶಾಲು ವಿವಾದ, ಹರ್ಷ ಕೊಲೆ ಪ್ರಕರಣ, ಹಲಾಲ್-ಜಟ್ಕಾ ಕಟ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್… ಹೀಗೆ ಸಾಲು ಸಾಲು ವಿವಾದಗಳನ್ನು ಹುಟ್ಟಿಹಾಕಲಾಯ್ತು. ಮಾಧ್ಯಮಗಳು ಅವುಗಳಿಗೆ ಮತ್ತಷ್ಟು ತುಪ್ಪ ಸುರಿದು ಶಾಂತಿ ಕದಡಿದವು. ಎಲ್ಲಾ ಧರ್ಮಗಳ ಬಹುತೇಕರಿಗೆ ಇದು ಅತಿಯಾಯಿತು ಅನ್ನಿಸುವಷ್ಟರ ಮಟ್ಟಿಗೆ ಮಿತಿ ಮೀರಿದವು.

ಇಷ್ಟೆಲ್ಲ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿಗಳು ಕೈಕಟ್ಟಿ ಬಾಯ್ಮುಚ್ಚಿ ತಮ್ಮ ಖುರ್ಚಿ ಉಳಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದರು. ಆದರೆ ರಾಜ್ಯದ ಪ್ರಜ್ಞಾವಂತರು ಮಾತ್ರ ನಮ್ಮ ಕರ್ನಾಟಕ ಹೀಗಾಗಬಾರದು ಎಂದು ಪಣತೊಟ್ಟು ಕೆಲಸ ಮಾಡಿದರು. ಪ್ರತಿ ಸಂದರ್ಭದಲ್ಲಿಯೂ ಶೋಷಿತರ – ನೊಂದ ಜನರ ಜೊತೆಗೆ ನಿಂತರು. ತಮ್ಮ ಕೈಲಾದ ಮಟ್ಟಿಗೆ ಅದನ್ನು ತಡೆಯುವ ಪ್ರಯತ್ನ ಮಾಡಿದರು. ಮತಾಂಧರಿಗೆ ಸರ್ಕಾರದ ಸಂಪೂರ್ಣ ಕೃಪಕಟಾಕ್ಷವಿದ್ದುದರಿಂದ ಅವರ ಕೈ ಮೇಲಾಯಿತು. ಆದರೆ ಏಪ್ರಿಲ್ ತಿಂಗಳಿನಿಂದ ಅದನ್ನು ತಡೆಯುವ ಮತ್ತು ಸೌಹಾರ್ದತೆ-ಸಹಬಾಳ್ವೆ ಸಾರುವ ಕಾರ್ಯಕ್ರಮಗಳು ರಾಜ್ಯದ್ಯಂತ ಜರುಗಿದವು. ಆ ಮೂಲಕ ನಮ್ಮ ಕರ್ನಾಟಕವನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಸಾರಲಾಯಿತು.

ಧಾರವಾಡ ಹನುಮಂತ ದೇವಾಲಯದ ಎದರು ಕಲ್ಲಂಗಡಿ ನಡೆಸುತ್ತಿದ್ದ ನಬಿ ಸಾಬ್‌ರವರ ಮೇಲೆ ದೌರ್ಜನ್ಯವೆಸಗಿದ್ದು ಬಹಳಷ್ಟು ಜನರಿಗೆ ನೋವು ತರಿಸಿತು. ಅಲ್ಲಿಂದ ಎಲ್ಲಾ ಧರ್ಮೀಯರು ಒಟ್ಟು ಸೇರಿ ನಾವೆಲ್ಲ ಒಂದೆ ಎಂದರು. ಬಹಳಷ್ಟು ಹಿಂದೂ ಕುಟುಂಬಗಳು ರಂಜಾನ್ ಮಾಸದಲ್ಲಿ ಮುಸ್ಲಿಮರಿಗೆ ಇಫ್ತಾರ್ ಆಯೋಜಿಸಿದರು. ಅದೇ ರೀತಿಯಾಗಿ ಮುಸ್ಲಿಮರು ರಾಮನವಮಿ, ಹನುಮ ಜಯಂತಿ ಮೆರವಣಿಗೆಯಲ್ಲಿ ಬಂದವರಿಗೆ ಪಾನಕ, ಜ್ಯೂಸ್ ನೀಡಿ ಸತ್ಕರಿಸಿದರು. ಯುಗಾದಿಯಂದು ಹಿರಿಯ ಸಾಹಿತಿ ದೇವನೂರು ಮಹಾದೇವರವರ ನೇತೃತ್ವದಲ್ಲಿ ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿಸಿ ಸೌಹಾರ್ದತೆ ಮೆರಯಲಾಯಿತು. ಈಗ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಸಾಲು ಸಾಲು ಸೌಹಾರ್ದ-ಸಹಬಾಳ್ವೆಯ ಸಮಾವೇಶಗಳನ್ನು ಆಯೋಜಿಸಲಾಗಿದೆ. ಅವುಗಳ ಮಾಹಿತಿ ಇಲ್ಲಿದೆ.

ಬಹುಸಂಸ್ಕೃತಿ ಸಾಮರಸ್ಯ ಮೇಳ: ಮೇ 04, ಶ್ರೀರಂಗಪಟ್ಟಣ

ಸ್ವಾತಂತ್ರ್ಯವೀರ ಟಿಪ್ಪು ಸುಲ್ತಾನ್ ಹುತಾತ್ಮ ದಿನದ ನೆನಪಿನಲ್ಲಿ ಮಂಡ್ಯ ಜಿಲ್ಲೆಯ ರೈತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಬಹುಸಂಸ್ಕೃತಿ ಸಾಮರಸ್ಯ ಮೇಳವನ್ನು ಮೇ 04 ರಂದು ಶ್ರೀರಂಗಪಟ್ಟಣದಲ್ಲಿ ಹಮ್ಮಿಕೊಂಡಿವೆ. ಅಂದು ಸಾಮರಸ್ಯ ನಡಿಗೆ, ರಕ್ತದಾನ ಶಿಬಿರ ಮತ್ತು ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸೌಹಾರ್ದ ಸಂಸ್ಕೃತಿ ಸಮಾವೇಶ: ಮೇ 05, ಬೆಂಗಳೂರು

ನಾವೆಲ್ಲ ಒಂದೇ ಜಾತಿ ಕುಲ, ನಾವೆಲ್ಲವೂ ಮನುಜರು ಎಂಬ ಸಂದೇಶ ಸಾರುವುದಕ್ಕಾಗಿ ಮೇ 05 ರಂದು ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸೌಹಾರ್ದ ಸಂಸ್ಕೃತಿ ಸಮಾವೇಶ ಜರುಗಲಿದೆ. ಹಿರಿಯ ಸಾಹಿತ, ಹೋರಾಟಗಾರ ಬರಗೂರು ರಾಮಚಂದ್ರಪ್ಪ, ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ಗೋಪಾಲಗೌಡ, ಜಸ್ಟೀಸ್ ನಾಗಮೋಹನ್ ದಾಸ್, ಎನ್ ಸಂತೋಷ್ ಹೆಗ್ಡೆಯವರು ಜೊತೆ ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೌಹಾರ್ದ ಕರ್ನಾಟಕ ಎಂಬ ಸಂಯುಕ್ತಾಶ್ರಯದಲ್ಲಿ ವಿವಿಧ ಸಂಘಟನೆಗಳು ಈ ಕಾರ್ಯಕ್ರಮವನ್ನು ಸಂಘಟಿಸುತ್ತಿವೆ.

ಬಹುತ್ವ ಭಾರತೀಯರ ಸಮಾವೇಶ: ಮೇ 08, ಸಿಂಧನೂರು

ಸೌಹಾರ್ದ ಸಾಮರಸ್ಯ ಭಾರತಕ್ಕಾಗಿ ಬಹುತ್ವ ಭಾರತೀಯರ ಸಮಾವೇಶ ಮೇ 08 ರಂದು ಸಿಂಧನೂರಿನ ಎಪಿಎಂಸಿ ಮೈದಾನದಲ್ಲಿ ಜರುಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 05ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಬಸವಪ್ರಭು, ಉಪನ್ಯಾಸಕರು, ಬೀದರ್, ಶಿವಸುಂದರ್, ಚಿಂತಕರು, ಹೋರಾಟಗಾರರಾದ ಆರ್ ಮಾನಸಯ್ಯ, ಸಾಮಾಜಿಕ ಕಾರ್ಯಕರ್ತರಾದ ಲಬೀದ್ ಶಫಿ, ಸಾವಿತ್ರಿ ಮುಜುಂದಾರ್, ನ್ಯಾಯವಾದಿಗಳು, ಕೊಪ್ಪಳ, ಬರಹಗಾರರಾದ ಕೆ.‍‍ಷರೀಪ, ದಲಿತ ನಾಯಕರಾದ ಮಾರಸಂದ್ರ ಮುನಿಯಪ್ಪ, ಬಾಲಸ್ವಾಮಿ, ಕೊಡ್ಲಿ ಮತ್ತು ಹೋರಾಟಗಾರರಾದ ಡಿ.ಎಚ್ ಪೂಜಾರ್ ಭಾಗವಹಿಸಲಿದ್ದಾರೆ. ಭಾಗವಹಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗೆ 9880152070 ಈ ಮೊಬೈಲ್ ನಂಬರ್ ಅನ್ನು ಸಂಪರ್ಕಿಸಬಹುದು.

ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶ: ಮೇ 14, ಉಡುಪಿ

ಯಾವ ಉಡುಪಿಯಲ್ಲಿ ಹಿಜಾಬ್ ಅನ್ನು ವಿವಾದದ ವಸ್ತುವನ್ನಾಗಿ ಮಾಡಲಾಯಿತೊ, ಎಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಬ್ಯಾನರ್ ಹಾಕಲಾಯಿತೊ ಅದೇ ಉಡುಪಿಯಲ್ಲಿ ಮೇ 14 ರಂದು ರಾಜ್ಯದ ನೂರಾರು ಸಂಘಟನೆಗಳು ಸೇರಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶವನ್ನು ಹಮ್ಮಿಕೊಂಡಿವೆ.

ರಾಜ್ಯ ಹಾಗೂ ದೇಶದಲ್ಲಿ ನಿತ್ಯವೂ ಘಟಿಸುತ್ತಿರುವ ಮತೀಯವಾದಿ ಸಂಗತಿಗಳನ್ನು ಖಂಡಿಸಿ, ದೇಶದ ಜಾತ್ಯತೀತತೆ, ಸಮಗ್ರತೆ, ವೈವಿಧ್ಯತೆ ಹಾಗೂ ಕೋಮು ಸಾಮರಸ್ಯವನ್ನು ಸಾರಲು ಈ ಸಮಾವೇಶ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ನಾಡಿನ ಜನರನ್ನು ಆಹ್ವಾನಿಸುವ ಹಾಗೂ ಸಾಮರಸ್ಯ, ಸಹಬಾಳ್ವೆಯ ಸೊಬಗನ್ನು ಉದ್ದೀಪಿಸುವ ನಿಟ್ಟಿನಲ್ಲಿ ಹಲವು ಚಿಂತಕರು, ಹಿರಿಯ, ಕಿರಿಯ ಬರಹಗಾರರು, ಹೋರಾಟಗಾರರು, ರಂಗಕರ್ಮಿಗಳು, ಚಿತ್ರಕರ್ಮಿಗಳು, ಪತ್ರಕರ್ತರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಯೋಗೇಂದ್ರ ಯಾದವ್, ಸಸಿಕಾಂತ್ ಸೆಂಥಿಲ್ ಸೇರಿ ವಿವಿಧ ಧರ್ಮದ ಧರ್ಮಗುರುಗಳು, ಹೋರಾಟಗಾರರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಾಮರಸ್ಯ ಸಂದೇಶ ಅಭಿಯಾನ: ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌‌ಗಳು ವೈರಲ್‌

ಮೇ ಸಾಹಿತ್ಯ ಮೇಳ: ಮೇ 27 ಮತ್ತು 28, ದಾವಣಗೆರೆ

ಸಂವಿಧಾನ ನಮ್ಮೆಲ್ಲರ ಆಶಯ, ಸತ್ಯದ ಹುಡುಕಾಟಕ್ಕೆ ಸಾಕ್ಷಿಯಾಗೋಣ ಎಂಬ ಉದ್ದೇಶದಿಂದ ಮೇ 27 ಮತ್ತು 28ರಂದು ದಾವಣಗೆರೆಯಲ್ಲಿ ಲಡಾಯಿ ಪ್ರಕಾಶನದ ವತಿಯಿಂದ ಮೇ ಸಾಹಿತ್ಯ ಮೇಳ ನಡೆಯಲಿದೆ. ತಾಜ್ ಪ್ಯಾಲೇಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂರಾರು ಸಾಹಿತ್ಯ ಆಸಕ್ತರು, ಹೋರಾಟಗಾರರು ಭಾಗವಹಿಸಲಿದ್ದಾರೆ.

ಇದಲ್ಲದೆ ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಸೌಹಾರ್ದ ಕಾರ್ಯಕ್ರಮಗಳು ಮೇ ತಿಂಗಳಿನಲ್ಲಿ ಜರುಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...