Homeಮುಖಪುಟಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಶ್ರೀರಂಗ ಪಟ್ಟಣ, ಬೆಂಗಳೂರು, ಸಿಂಧನೂರು, ಉಡುಪಿ ಮತ್ತು ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಕೂಡಿ ಬಾಳುವ ಸಂದೇಶ ಸಾರಲಾಗುತ್ತಿದೆ.

- Advertisement -
- Advertisement -

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕಾಣಬೇಕೆಂದು ಕನಸು ಕಂಡವರು ಮಹಾಕವಿ ಕುವೆಂಪು. ಆದರೆ ಕಳೆದ ಆರು ತಿಂಗಳಿನಲ್ಲಿ ಧರ್ಮಾಂಧರ ದ್ವೇಷ ರಾಜಕಾರಣಕ್ಕೆ ಬೆಂದು ಹೋಯಿತು ಕರ್ನಾಟಕ. ಮತೀಯ ಗೂಂಡಾಗಿರಿಗೆ ಸಿಎಂ ಬೊಮ್ಮಾಯಿಯವರೆ ಸಮರ್ಥನೆ ಕೊಟ್ಟಿದ್ದು, ಮತಾಂತರ ನಿಷೇಧ ಮಸೂದೆ ಜಾರಿ ಚರ್ಚೆ, ಹಿಜಾಬ್-ಕೇಸರಿ ಶಾಲು ವಿವಾದ, ಹರ್ಷ ಕೊಲೆ ಪ್ರಕರಣ, ಹಲಾಲ್-ಜಟ್ಕಾ ಕಟ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್… ಹೀಗೆ ಸಾಲು ಸಾಲು ವಿವಾದಗಳನ್ನು ಹುಟ್ಟಿಹಾಕಲಾಯ್ತು. ಮಾಧ್ಯಮಗಳು ಅವುಗಳಿಗೆ ಮತ್ತಷ್ಟು ತುಪ್ಪ ಸುರಿದು ಶಾಂತಿ ಕದಡಿದವು. ಎಲ್ಲಾ ಧರ್ಮಗಳ ಬಹುತೇಕರಿಗೆ ಇದು ಅತಿಯಾಯಿತು ಅನ್ನಿಸುವಷ್ಟರ ಮಟ್ಟಿಗೆ ಮಿತಿ ಮೀರಿದವು.

ಇಷ್ಟೆಲ್ಲ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿಗಳು ಕೈಕಟ್ಟಿ ಬಾಯ್ಮುಚ್ಚಿ ತಮ್ಮ ಖುರ್ಚಿ ಉಳಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದರು. ಆದರೆ ರಾಜ್ಯದ ಪ್ರಜ್ಞಾವಂತರು ಮಾತ್ರ ನಮ್ಮ ಕರ್ನಾಟಕ ಹೀಗಾಗಬಾರದು ಎಂದು ಪಣತೊಟ್ಟು ಕೆಲಸ ಮಾಡಿದರು. ಪ್ರತಿ ಸಂದರ್ಭದಲ್ಲಿಯೂ ಶೋಷಿತರ – ನೊಂದ ಜನರ ಜೊತೆಗೆ ನಿಂತರು. ತಮ್ಮ ಕೈಲಾದ ಮಟ್ಟಿಗೆ ಅದನ್ನು ತಡೆಯುವ ಪ್ರಯತ್ನ ಮಾಡಿದರು. ಮತಾಂಧರಿಗೆ ಸರ್ಕಾರದ ಸಂಪೂರ್ಣ ಕೃಪಕಟಾಕ್ಷವಿದ್ದುದರಿಂದ ಅವರ ಕೈ ಮೇಲಾಯಿತು. ಆದರೆ ಏಪ್ರಿಲ್ ತಿಂಗಳಿನಿಂದ ಅದನ್ನು ತಡೆಯುವ ಮತ್ತು ಸೌಹಾರ್ದತೆ-ಸಹಬಾಳ್ವೆ ಸಾರುವ ಕಾರ್ಯಕ್ರಮಗಳು ರಾಜ್ಯದ್ಯಂತ ಜರುಗಿದವು. ಆ ಮೂಲಕ ನಮ್ಮ ಕರ್ನಾಟಕವನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಸಾರಲಾಯಿತು.

ಧಾರವಾಡ ಹನುಮಂತ ದೇವಾಲಯದ ಎದರು ಕಲ್ಲಂಗಡಿ ನಡೆಸುತ್ತಿದ್ದ ನಬಿ ಸಾಬ್‌ರವರ ಮೇಲೆ ದೌರ್ಜನ್ಯವೆಸಗಿದ್ದು ಬಹಳಷ್ಟು ಜನರಿಗೆ ನೋವು ತರಿಸಿತು. ಅಲ್ಲಿಂದ ಎಲ್ಲಾ ಧರ್ಮೀಯರು ಒಟ್ಟು ಸೇರಿ ನಾವೆಲ್ಲ ಒಂದೆ ಎಂದರು. ಬಹಳಷ್ಟು ಹಿಂದೂ ಕುಟುಂಬಗಳು ರಂಜಾನ್ ಮಾಸದಲ್ಲಿ ಮುಸ್ಲಿಮರಿಗೆ ಇಫ್ತಾರ್ ಆಯೋಜಿಸಿದರು. ಅದೇ ರೀತಿಯಾಗಿ ಮುಸ್ಲಿಮರು ರಾಮನವಮಿ, ಹನುಮ ಜಯಂತಿ ಮೆರವಣಿಗೆಯಲ್ಲಿ ಬಂದವರಿಗೆ ಪಾನಕ, ಜ್ಯೂಸ್ ನೀಡಿ ಸತ್ಕರಿಸಿದರು. ಯುಗಾದಿಯಂದು ಹಿರಿಯ ಸಾಹಿತಿ ದೇವನೂರು ಮಹಾದೇವರವರ ನೇತೃತ್ವದಲ್ಲಿ ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿಸಿ ಸೌಹಾರ್ದತೆ ಮೆರಯಲಾಯಿತು. ಈಗ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಸಾಲು ಸಾಲು ಸೌಹಾರ್ದ-ಸಹಬಾಳ್ವೆಯ ಸಮಾವೇಶಗಳನ್ನು ಆಯೋಜಿಸಲಾಗಿದೆ. ಅವುಗಳ ಮಾಹಿತಿ ಇಲ್ಲಿದೆ.

ಬಹುಸಂಸ್ಕೃತಿ ಸಾಮರಸ್ಯ ಮೇಳ: ಮೇ 04, ಶ್ರೀರಂಗಪಟ್ಟಣ

ಸ್ವಾತಂತ್ರ್ಯವೀರ ಟಿಪ್ಪು ಸುಲ್ತಾನ್ ಹುತಾತ್ಮ ದಿನದ ನೆನಪಿನಲ್ಲಿ ಮಂಡ್ಯ ಜಿಲ್ಲೆಯ ರೈತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಬಹುಸಂಸ್ಕೃತಿ ಸಾಮರಸ್ಯ ಮೇಳವನ್ನು ಮೇ 04 ರಂದು ಶ್ರೀರಂಗಪಟ್ಟಣದಲ್ಲಿ ಹಮ್ಮಿಕೊಂಡಿವೆ. ಅಂದು ಸಾಮರಸ್ಯ ನಡಿಗೆ, ರಕ್ತದಾನ ಶಿಬಿರ ಮತ್ತು ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸೌಹಾರ್ದ ಸಂಸ್ಕೃತಿ ಸಮಾವೇಶ: ಮೇ 05, ಬೆಂಗಳೂರು

ನಾವೆಲ್ಲ ಒಂದೇ ಜಾತಿ ಕುಲ, ನಾವೆಲ್ಲವೂ ಮನುಜರು ಎಂಬ ಸಂದೇಶ ಸಾರುವುದಕ್ಕಾಗಿ ಮೇ 05 ರಂದು ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸೌಹಾರ್ದ ಸಂಸ್ಕೃತಿ ಸಮಾವೇಶ ಜರುಗಲಿದೆ. ಹಿರಿಯ ಸಾಹಿತ, ಹೋರಾಟಗಾರ ಬರಗೂರು ರಾಮಚಂದ್ರಪ್ಪ, ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ಗೋಪಾಲಗೌಡ, ಜಸ್ಟೀಸ್ ನಾಗಮೋಹನ್ ದಾಸ್, ಎನ್ ಸಂತೋಷ್ ಹೆಗ್ಡೆಯವರು ಜೊತೆ ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೌಹಾರ್ದ ಕರ್ನಾಟಕ ಎಂಬ ಸಂಯುಕ್ತಾಶ್ರಯದಲ್ಲಿ ವಿವಿಧ ಸಂಘಟನೆಗಳು ಈ ಕಾರ್ಯಕ್ರಮವನ್ನು ಸಂಘಟಿಸುತ್ತಿವೆ.

ಬಹುತ್ವ ಭಾರತೀಯರ ಸಮಾವೇಶ: ಮೇ 08, ಸಿಂಧನೂರು

ಸೌಹಾರ್ದ ಸಾಮರಸ್ಯ ಭಾರತಕ್ಕಾಗಿ ಬಹುತ್ವ ಭಾರತೀಯರ ಸಮಾವೇಶ ಮೇ 08 ರಂದು ಸಿಂಧನೂರಿನ ಎಪಿಎಂಸಿ ಮೈದಾನದಲ್ಲಿ ಜರುಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 05ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಬಸವಪ್ರಭು, ಉಪನ್ಯಾಸಕರು, ಬೀದರ್, ಶಿವಸುಂದರ್, ಚಿಂತಕರು, ಹೋರಾಟಗಾರರಾದ ಆರ್ ಮಾನಸಯ್ಯ, ಸಾಮಾಜಿಕ ಕಾರ್ಯಕರ್ತರಾದ ಲಬೀದ್ ಶಫಿ, ಸಾವಿತ್ರಿ ಮುಜುಂದಾರ್, ನ್ಯಾಯವಾದಿಗಳು, ಕೊಪ್ಪಳ, ಬರಹಗಾರರಾದ ಕೆ.‍‍ಷರೀಪ, ದಲಿತ ನಾಯಕರಾದ ಮಾರಸಂದ್ರ ಮುನಿಯಪ್ಪ, ಬಾಲಸ್ವಾಮಿ, ಕೊಡ್ಲಿ ಮತ್ತು ಹೋರಾಟಗಾರರಾದ ಡಿ.ಎಚ್ ಪೂಜಾರ್ ಭಾಗವಹಿಸಲಿದ್ದಾರೆ. ಭಾಗವಹಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗೆ 9880152070 ಈ ಮೊಬೈಲ್ ನಂಬರ್ ಅನ್ನು ಸಂಪರ್ಕಿಸಬಹುದು.

ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶ: ಮೇ 14, ಉಡುಪಿ

ಯಾವ ಉಡುಪಿಯಲ್ಲಿ ಹಿಜಾಬ್ ಅನ್ನು ವಿವಾದದ ವಸ್ತುವನ್ನಾಗಿ ಮಾಡಲಾಯಿತೊ, ಎಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಬ್ಯಾನರ್ ಹಾಕಲಾಯಿತೊ ಅದೇ ಉಡುಪಿಯಲ್ಲಿ ಮೇ 14 ರಂದು ರಾಜ್ಯದ ನೂರಾರು ಸಂಘಟನೆಗಳು ಸೇರಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶವನ್ನು ಹಮ್ಮಿಕೊಂಡಿವೆ.

ರಾಜ್ಯ ಹಾಗೂ ದೇಶದಲ್ಲಿ ನಿತ್ಯವೂ ಘಟಿಸುತ್ತಿರುವ ಮತೀಯವಾದಿ ಸಂಗತಿಗಳನ್ನು ಖಂಡಿಸಿ, ದೇಶದ ಜಾತ್ಯತೀತತೆ, ಸಮಗ್ರತೆ, ವೈವಿಧ್ಯತೆ ಹಾಗೂ ಕೋಮು ಸಾಮರಸ್ಯವನ್ನು ಸಾರಲು ಈ ಸಮಾವೇಶ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ನಾಡಿನ ಜನರನ್ನು ಆಹ್ವಾನಿಸುವ ಹಾಗೂ ಸಾಮರಸ್ಯ, ಸಹಬಾಳ್ವೆಯ ಸೊಬಗನ್ನು ಉದ್ದೀಪಿಸುವ ನಿಟ್ಟಿನಲ್ಲಿ ಹಲವು ಚಿಂತಕರು, ಹಿರಿಯ, ಕಿರಿಯ ಬರಹಗಾರರು, ಹೋರಾಟಗಾರರು, ರಂಗಕರ್ಮಿಗಳು, ಚಿತ್ರಕರ್ಮಿಗಳು, ಪತ್ರಕರ್ತರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಯೋಗೇಂದ್ರ ಯಾದವ್, ಸಸಿಕಾಂತ್ ಸೆಂಥಿಲ್ ಸೇರಿ ವಿವಿಧ ಧರ್ಮದ ಧರ್ಮಗುರುಗಳು, ಹೋರಾಟಗಾರರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಾಮರಸ್ಯ ಸಂದೇಶ ಅಭಿಯಾನ: ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌‌ಗಳು ವೈರಲ್‌

ಮೇ ಸಾಹಿತ್ಯ ಮೇಳ: ಮೇ 27 ಮತ್ತು 28, ದಾವಣಗೆರೆ

ಸಂವಿಧಾನ ನಮ್ಮೆಲ್ಲರ ಆಶಯ, ಸತ್ಯದ ಹುಡುಕಾಟಕ್ಕೆ ಸಾಕ್ಷಿಯಾಗೋಣ ಎಂಬ ಉದ್ದೇಶದಿಂದ ಮೇ 27 ಮತ್ತು 28ರಂದು ದಾವಣಗೆರೆಯಲ್ಲಿ ಲಡಾಯಿ ಪ್ರಕಾಶನದ ವತಿಯಿಂದ ಮೇ ಸಾಹಿತ್ಯ ಮೇಳ ನಡೆಯಲಿದೆ. ತಾಜ್ ಪ್ಯಾಲೇಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂರಾರು ಸಾಹಿತ್ಯ ಆಸಕ್ತರು, ಹೋರಾಟಗಾರರು ಭಾಗವಹಿಸಲಿದ್ದಾರೆ.

ಇದಲ್ಲದೆ ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಸೌಹಾರ್ದ ಕಾರ್ಯಕ್ರಮಗಳು ಮೇ ತಿಂಗಳಿನಲ್ಲಿ ಜರುಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....