Homeಮುಖಪುಟಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಶ್ರೀರಂಗ ಪಟ್ಟಣ, ಬೆಂಗಳೂರು, ಸಿಂಧನೂರು, ಉಡುಪಿ ಮತ್ತು ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಕೂಡಿ ಬಾಳುವ ಸಂದೇಶ ಸಾರಲಾಗುತ್ತಿದೆ.

- Advertisement -
- Advertisement -

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕಾಣಬೇಕೆಂದು ಕನಸು ಕಂಡವರು ಮಹಾಕವಿ ಕುವೆಂಪು. ಆದರೆ ಕಳೆದ ಆರು ತಿಂಗಳಿನಲ್ಲಿ ಧರ್ಮಾಂಧರ ದ್ವೇಷ ರಾಜಕಾರಣಕ್ಕೆ ಬೆಂದು ಹೋಯಿತು ಕರ್ನಾಟಕ. ಮತೀಯ ಗೂಂಡಾಗಿರಿಗೆ ಸಿಎಂ ಬೊಮ್ಮಾಯಿಯವರೆ ಸಮರ್ಥನೆ ಕೊಟ್ಟಿದ್ದು, ಮತಾಂತರ ನಿಷೇಧ ಮಸೂದೆ ಜಾರಿ ಚರ್ಚೆ, ಹಿಜಾಬ್-ಕೇಸರಿ ಶಾಲು ವಿವಾದ, ಹರ್ಷ ಕೊಲೆ ಪ್ರಕರಣ, ಹಲಾಲ್-ಜಟ್ಕಾ ಕಟ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್… ಹೀಗೆ ಸಾಲು ಸಾಲು ವಿವಾದಗಳನ್ನು ಹುಟ್ಟಿಹಾಕಲಾಯ್ತು. ಮಾಧ್ಯಮಗಳು ಅವುಗಳಿಗೆ ಮತ್ತಷ್ಟು ತುಪ್ಪ ಸುರಿದು ಶಾಂತಿ ಕದಡಿದವು. ಎಲ್ಲಾ ಧರ್ಮಗಳ ಬಹುತೇಕರಿಗೆ ಇದು ಅತಿಯಾಯಿತು ಅನ್ನಿಸುವಷ್ಟರ ಮಟ್ಟಿಗೆ ಮಿತಿ ಮೀರಿದವು.

ಇಷ್ಟೆಲ್ಲ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿಗಳು ಕೈಕಟ್ಟಿ ಬಾಯ್ಮುಚ್ಚಿ ತಮ್ಮ ಖುರ್ಚಿ ಉಳಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದರು. ಆದರೆ ರಾಜ್ಯದ ಪ್ರಜ್ಞಾವಂತರು ಮಾತ್ರ ನಮ್ಮ ಕರ್ನಾಟಕ ಹೀಗಾಗಬಾರದು ಎಂದು ಪಣತೊಟ್ಟು ಕೆಲಸ ಮಾಡಿದರು. ಪ್ರತಿ ಸಂದರ್ಭದಲ್ಲಿಯೂ ಶೋಷಿತರ – ನೊಂದ ಜನರ ಜೊತೆಗೆ ನಿಂತರು. ತಮ್ಮ ಕೈಲಾದ ಮಟ್ಟಿಗೆ ಅದನ್ನು ತಡೆಯುವ ಪ್ರಯತ್ನ ಮಾಡಿದರು. ಮತಾಂಧರಿಗೆ ಸರ್ಕಾರದ ಸಂಪೂರ್ಣ ಕೃಪಕಟಾಕ್ಷವಿದ್ದುದರಿಂದ ಅವರ ಕೈ ಮೇಲಾಯಿತು. ಆದರೆ ಏಪ್ರಿಲ್ ತಿಂಗಳಿನಿಂದ ಅದನ್ನು ತಡೆಯುವ ಮತ್ತು ಸೌಹಾರ್ದತೆ-ಸಹಬಾಳ್ವೆ ಸಾರುವ ಕಾರ್ಯಕ್ರಮಗಳು ರಾಜ್ಯದ್ಯಂತ ಜರುಗಿದವು. ಆ ಮೂಲಕ ನಮ್ಮ ಕರ್ನಾಟಕವನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಸಾರಲಾಯಿತು.

ಧಾರವಾಡ ಹನುಮಂತ ದೇವಾಲಯದ ಎದರು ಕಲ್ಲಂಗಡಿ ನಡೆಸುತ್ತಿದ್ದ ನಬಿ ಸಾಬ್‌ರವರ ಮೇಲೆ ದೌರ್ಜನ್ಯವೆಸಗಿದ್ದು ಬಹಳಷ್ಟು ಜನರಿಗೆ ನೋವು ತರಿಸಿತು. ಅಲ್ಲಿಂದ ಎಲ್ಲಾ ಧರ್ಮೀಯರು ಒಟ್ಟು ಸೇರಿ ನಾವೆಲ್ಲ ಒಂದೆ ಎಂದರು. ಬಹಳಷ್ಟು ಹಿಂದೂ ಕುಟುಂಬಗಳು ರಂಜಾನ್ ಮಾಸದಲ್ಲಿ ಮುಸ್ಲಿಮರಿಗೆ ಇಫ್ತಾರ್ ಆಯೋಜಿಸಿದರು. ಅದೇ ರೀತಿಯಾಗಿ ಮುಸ್ಲಿಮರು ರಾಮನವಮಿ, ಹನುಮ ಜಯಂತಿ ಮೆರವಣಿಗೆಯಲ್ಲಿ ಬಂದವರಿಗೆ ಪಾನಕ, ಜ್ಯೂಸ್ ನೀಡಿ ಸತ್ಕರಿಸಿದರು. ಯುಗಾದಿಯಂದು ಹಿರಿಯ ಸಾಹಿತಿ ದೇವನೂರು ಮಹಾದೇವರವರ ನೇತೃತ್ವದಲ್ಲಿ ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿಸಿ ಸೌಹಾರ್ದತೆ ಮೆರಯಲಾಯಿತು. ಈಗ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಸಾಲು ಸಾಲು ಸೌಹಾರ್ದ-ಸಹಬಾಳ್ವೆಯ ಸಮಾವೇಶಗಳನ್ನು ಆಯೋಜಿಸಲಾಗಿದೆ. ಅವುಗಳ ಮಾಹಿತಿ ಇಲ್ಲಿದೆ.

ಬಹುಸಂಸ್ಕೃತಿ ಸಾಮರಸ್ಯ ಮೇಳ: ಮೇ 04, ಶ್ರೀರಂಗಪಟ್ಟಣ

ಸ್ವಾತಂತ್ರ್ಯವೀರ ಟಿಪ್ಪು ಸುಲ್ತಾನ್ ಹುತಾತ್ಮ ದಿನದ ನೆನಪಿನಲ್ಲಿ ಮಂಡ್ಯ ಜಿಲ್ಲೆಯ ರೈತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಬಹುಸಂಸ್ಕೃತಿ ಸಾಮರಸ್ಯ ಮೇಳವನ್ನು ಮೇ 04 ರಂದು ಶ್ರೀರಂಗಪಟ್ಟಣದಲ್ಲಿ ಹಮ್ಮಿಕೊಂಡಿವೆ. ಅಂದು ಸಾಮರಸ್ಯ ನಡಿಗೆ, ರಕ್ತದಾನ ಶಿಬಿರ ಮತ್ತು ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸೌಹಾರ್ದ ಸಂಸ್ಕೃತಿ ಸಮಾವೇಶ: ಮೇ 05, ಬೆಂಗಳೂರು

ನಾವೆಲ್ಲ ಒಂದೇ ಜಾತಿ ಕುಲ, ನಾವೆಲ್ಲವೂ ಮನುಜರು ಎಂಬ ಸಂದೇಶ ಸಾರುವುದಕ್ಕಾಗಿ ಮೇ 05 ರಂದು ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸೌಹಾರ್ದ ಸಂಸ್ಕೃತಿ ಸಮಾವೇಶ ಜರುಗಲಿದೆ. ಹಿರಿಯ ಸಾಹಿತ, ಹೋರಾಟಗಾರ ಬರಗೂರು ರಾಮಚಂದ್ರಪ್ಪ, ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ಗೋಪಾಲಗೌಡ, ಜಸ್ಟೀಸ್ ನಾಗಮೋಹನ್ ದಾಸ್, ಎನ್ ಸಂತೋಷ್ ಹೆಗ್ಡೆಯವರು ಜೊತೆ ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೌಹಾರ್ದ ಕರ್ನಾಟಕ ಎಂಬ ಸಂಯುಕ್ತಾಶ್ರಯದಲ್ಲಿ ವಿವಿಧ ಸಂಘಟನೆಗಳು ಈ ಕಾರ್ಯಕ್ರಮವನ್ನು ಸಂಘಟಿಸುತ್ತಿವೆ.

ಬಹುತ್ವ ಭಾರತೀಯರ ಸಮಾವೇಶ: ಮೇ 08, ಸಿಂಧನೂರು

ಸೌಹಾರ್ದ ಸಾಮರಸ್ಯ ಭಾರತಕ್ಕಾಗಿ ಬಹುತ್ವ ಭಾರತೀಯರ ಸಮಾವೇಶ ಮೇ 08 ರಂದು ಸಿಂಧನೂರಿನ ಎಪಿಎಂಸಿ ಮೈದಾನದಲ್ಲಿ ಜರುಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 05ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಬಸವಪ್ರಭು, ಉಪನ್ಯಾಸಕರು, ಬೀದರ್, ಶಿವಸುಂದರ್, ಚಿಂತಕರು, ಹೋರಾಟಗಾರರಾದ ಆರ್ ಮಾನಸಯ್ಯ, ಸಾಮಾಜಿಕ ಕಾರ್ಯಕರ್ತರಾದ ಲಬೀದ್ ಶಫಿ, ಸಾವಿತ್ರಿ ಮುಜುಂದಾರ್, ನ್ಯಾಯವಾದಿಗಳು, ಕೊಪ್ಪಳ, ಬರಹಗಾರರಾದ ಕೆ.‍‍ಷರೀಪ, ದಲಿತ ನಾಯಕರಾದ ಮಾರಸಂದ್ರ ಮುನಿಯಪ್ಪ, ಬಾಲಸ್ವಾಮಿ, ಕೊಡ್ಲಿ ಮತ್ತು ಹೋರಾಟಗಾರರಾದ ಡಿ.ಎಚ್ ಪೂಜಾರ್ ಭಾಗವಹಿಸಲಿದ್ದಾರೆ. ಭಾಗವಹಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗೆ 9880152070 ಈ ಮೊಬೈಲ್ ನಂಬರ್ ಅನ್ನು ಸಂಪರ್ಕಿಸಬಹುದು.

ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶ: ಮೇ 14, ಉಡುಪಿ

ಯಾವ ಉಡುಪಿಯಲ್ಲಿ ಹಿಜಾಬ್ ಅನ್ನು ವಿವಾದದ ವಸ್ತುವನ್ನಾಗಿ ಮಾಡಲಾಯಿತೊ, ಎಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಬ್ಯಾನರ್ ಹಾಕಲಾಯಿತೊ ಅದೇ ಉಡುಪಿಯಲ್ಲಿ ಮೇ 14 ರಂದು ರಾಜ್ಯದ ನೂರಾರು ಸಂಘಟನೆಗಳು ಸೇರಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶವನ್ನು ಹಮ್ಮಿಕೊಂಡಿವೆ.

ರಾಜ್ಯ ಹಾಗೂ ದೇಶದಲ್ಲಿ ನಿತ್ಯವೂ ಘಟಿಸುತ್ತಿರುವ ಮತೀಯವಾದಿ ಸಂಗತಿಗಳನ್ನು ಖಂಡಿಸಿ, ದೇಶದ ಜಾತ್ಯತೀತತೆ, ಸಮಗ್ರತೆ, ವೈವಿಧ್ಯತೆ ಹಾಗೂ ಕೋಮು ಸಾಮರಸ್ಯವನ್ನು ಸಾರಲು ಈ ಸಮಾವೇಶ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ನಾಡಿನ ಜನರನ್ನು ಆಹ್ವಾನಿಸುವ ಹಾಗೂ ಸಾಮರಸ್ಯ, ಸಹಬಾಳ್ವೆಯ ಸೊಬಗನ್ನು ಉದ್ದೀಪಿಸುವ ನಿಟ್ಟಿನಲ್ಲಿ ಹಲವು ಚಿಂತಕರು, ಹಿರಿಯ, ಕಿರಿಯ ಬರಹಗಾರರು, ಹೋರಾಟಗಾರರು, ರಂಗಕರ್ಮಿಗಳು, ಚಿತ್ರಕರ್ಮಿಗಳು, ಪತ್ರಕರ್ತರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಯೋಗೇಂದ್ರ ಯಾದವ್, ಸಸಿಕಾಂತ್ ಸೆಂಥಿಲ್ ಸೇರಿ ವಿವಿಧ ಧರ್ಮದ ಧರ್ಮಗುರುಗಳು, ಹೋರಾಟಗಾರರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಾಮರಸ್ಯ ಸಂದೇಶ ಅಭಿಯಾನ: ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌‌ಗಳು ವೈರಲ್‌

ಮೇ ಸಾಹಿತ್ಯ ಮೇಳ: ಮೇ 27 ಮತ್ತು 28, ದಾವಣಗೆರೆ

ಸಂವಿಧಾನ ನಮ್ಮೆಲ್ಲರ ಆಶಯ, ಸತ್ಯದ ಹುಡುಕಾಟಕ್ಕೆ ಸಾಕ್ಷಿಯಾಗೋಣ ಎಂಬ ಉದ್ದೇಶದಿಂದ ಮೇ 27 ಮತ್ತು 28ರಂದು ದಾವಣಗೆರೆಯಲ್ಲಿ ಲಡಾಯಿ ಪ್ರಕಾಶನದ ವತಿಯಿಂದ ಮೇ ಸಾಹಿತ್ಯ ಮೇಳ ನಡೆಯಲಿದೆ. ತಾಜ್ ಪ್ಯಾಲೇಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂರಾರು ಸಾಹಿತ್ಯ ಆಸಕ್ತರು, ಹೋರಾಟಗಾರರು ಭಾಗವಹಿಸಲಿದ್ದಾರೆ.

ಇದಲ್ಲದೆ ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಸೌಹಾರ್ದ ಕಾರ್ಯಕ್ರಮಗಳು ಮೇ ತಿಂಗಳಿನಲ್ಲಿ ಜರುಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...