Homeಮುಖಪುಟಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಒಡೆದ ಮನಸ್ಸುಗಳ, ಕಂಡ ಕನುಸಗಳ ಕಟ್ಟೆ ಕಟ್ಟುತ್ತೇವ..: ಈ ತಿಂಗಳ ಸೌಹಾರ್ದ-ಸಹಬಾಳ್ವೆ ಸಮಾವೇಶಗಳು

ಶ್ರೀರಂಗ ಪಟ್ಟಣ, ಬೆಂಗಳೂರು, ಸಿಂಧನೂರು, ಉಡುಪಿ ಮತ್ತು ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಕೂಡಿ ಬಾಳುವ ಸಂದೇಶ ಸಾರಲಾಗುತ್ತಿದೆ.

- Advertisement -
- Advertisement -

ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಕಾಣಬೇಕೆಂದು ಕನಸು ಕಂಡವರು ಮಹಾಕವಿ ಕುವೆಂಪು. ಆದರೆ ಕಳೆದ ಆರು ತಿಂಗಳಿನಲ್ಲಿ ಧರ್ಮಾಂಧರ ದ್ವೇಷ ರಾಜಕಾರಣಕ್ಕೆ ಬೆಂದು ಹೋಯಿತು ಕರ್ನಾಟಕ. ಮತೀಯ ಗೂಂಡಾಗಿರಿಗೆ ಸಿಎಂ ಬೊಮ್ಮಾಯಿಯವರೆ ಸಮರ್ಥನೆ ಕೊಟ್ಟಿದ್ದು, ಮತಾಂತರ ನಿಷೇಧ ಮಸೂದೆ ಜಾರಿ ಚರ್ಚೆ, ಹಿಜಾಬ್-ಕೇಸರಿ ಶಾಲು ವಿವಾದ, ಹರ್ಷ ಕೊಲೆ ಪ್ರಕರಣ, ಹಲಾಲ್-ಜಟ್ಕಾ ಕಟ್ ವಿವಾದ, ಮುಸ್ಲಿಂ ವ್ಯಾಪಾರಿಗಳಿಗೆ ಬಾಯ್ಕಾಟ್… ಹೀಗೆ ಸಾಲು ಸಾಲು ವಿವಾದಗಳನ್ನು ಹುಟ್ಟಿಹಾಕಲಾಯ್ತು. ಮಾಧ್ಯಮಗಳು ಅವುಗಳಿಗೆ ಮತ್ತಷ್ಟು ತುಪ್ಪ ಸುರಿದು ಶಾಂತಿ ಕದಡಿದವು. ಎಲ್ಲಾ ಧರ್ಮಗಳ ಬಹುತೇಕರಿಗೆ ಇದು ಅತಿಯಾಯಿತು ಅನ್ನಿಸುವಷ್ಟರ ಮಟ್ಟಿಗೆ ಮಿತಿ ಮೀರಿದವು.

ಇಷ್ಟೆಲ್ಲ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿಗಳು ಕೈಕಟ್ಟಿ ಬಾಯ್ಮುಚ್ಚಿ ತಮ್ಮ ಖುರ್ಚಿ ಉಳಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದರು. ಆದರೆ ರಾಜ್ಯದ ಪ್ರಜ್ಞಾವಂತರು ಮಾತ್ರ ನಮ್ಮ ಕರ್ನಾಟಕ ಹೀಗಾಗಬಾರದು ಎಂದು ಪಣತೊಟ್ಟು ಕೆಲಸ ಮಾಡಿದರು. ಪ್ರತಿ ಸಂದರ್ಭದಲ್ಲಿಯೂ ಶೋಷಿತರ – ನೊಂದ ಜನರ ಜೊತೆಗೆ ನಿಂತರು. ತಮ್ಮ ಕೈಲಾದ ಮಟ್ಟಿಗೆ ಅದನ್ನು ತಡೆಯುವ ಪ್ರಯತ್ನ ಮಾಡಿದರು. ಮತಾಂಧರಿಗೆ ಸರ್ಕಾರದ ಸಂಪೂರ್ಣ ಕೃಪಕಟಾಕ್ಷವಿದ್ದುದರಿಂದ ಅವರ ಕೈ ಮೇಲಾಯಿತು. ಆದರೆ ಏಪ್ರಿಲ್ ತಿಂಗಳಿನಿಂದ ಅದನ್ನು ತಡೆಯುವ ಮತ್ತು ಸೌಹಾರ್ದತೆ-ಸಹಬಾಳ್ವೆ ಸಾರುವ ಕಾರ್ಯಕ್ರಮಗಳು ರಾಜ್ಯದ್ಯಂತ ಜರುಗಿದವು. ಆ ಮೂಲಕ ನಮ್ಮ ಕರ್ನಾಟಕವನ್ನು ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಸಾರಲಾಯಿತು.

ಧಾರವಾಡ ಹನುಮಂತ ದೇವಾಲಯದ ಎದರು ಕಲ್ಲಂಗಡಿ ನಡೆಸುತ್ತಿದ್ದ ನಬಿ ಸಾಬ್‌ರವರ ಮೇಲೆ ದೌರ್ಜನ್ಯವೆಸಗಿದ್ದು ಬಹಳಷ್ಟು ಜನರಿಗೆ ನೋವು ತರಿಸಿತು. ಅಲ್ಲಿಂದ ಎಲ್ಲಾ ಧರ್ಮೀಯರು ಒಟ್ಟು ಸೇರಿ ನಾವೆಲ್ಲ ಒಂದೆ ಎಂದರು. ಬಹಳಷ್ಟು ಹಿಂದೂ ಕುಟುಂಬಗಳು ರಂಜಾನ್ ಮಾಸದಲ್ಲಿ ಮುಸ್ಲಿಮರಿಗೆ ಇಫ್ತಾರ್ ಆಯೋಜಿಸಿದರು. ಅದೇ ರೀತಿಯಾಗಿ ಮುಸ್ಲಿಮರು ರಾಮನವಮಿ, ಹನುಮ ಜಯಂತಿ ಮೆರವಣಿಗೆಯಲ್ಲಿ ಬಂದವರಿಗೆ ಪಾನಕ, ಜ್ಯೂಸ್ ನೀಡಿ ಸತ್ಕರಿಸಿದರು. ಯುಗಾದಿಯಂದು ಹಿರಿಯ ಸಾಹಿತಿ ದೇವನೂರು ಮಹಾದೇವರವರ ನೇತೃತ್ವದಲ್ಲಿ ಮುಸ್ಲಿಂ ಅಂಗಡಿಗಳಲ್ಲಿ ಮಾಂಸ ಖರೀದಿಸಿ ಸೌಹಾರ್ದತೆ ಮೆರಯಲಾಯಿತು. ಈಗ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಸಾಲು ಸಾಲು ಸೌಹಾರ್ದ-ಸಹಬಾಳ್ವೆಯ ಸಮಾವೇಶಗಳನ್ನು ಆಯೋಜಿಸಲಾಗಿದೆ. ಅವುಗಳ ಮಾಹಿತಿ ಇಲ್ಲಿದೆ.

ಬಹುಸಂಸ್ಕೃತಿ ಸಾಮರಸ್ಯ ಮೇಳ: ಮೇ 04, ಶ್ರೀರಂಗಪಟ್ಟಣ

ಸ್ವಾತಂತ್ರ್ಯವೀರ ಟಿಪ್ಪು ಸುಲ್ತಾನ್ ಹುತಾತ್ಮ ದಿನದ ನೆನಪಿನಲ್ಲಿ ಮಂಡ್ಯ ಜಿಲ್ಲೆಯ ರೈತ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಕಾರ್ಮಿಕ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳು ಬಹುಸಂಸ್ಕೃತಿ ಸಾಮರಸ್ಯ ಮೇಳವನ್ನು ಮೇ 04 ರಂದು ಶ್ರೀರಂಗಪಟ್ಟಣದಲ್ಲಿ ಹಮ್ಮಿಕೊಂಡಿವೆ. ಅಂದು ಸಾಮರಸ್ಯ ನಡಿಗೆ, ರಕ್ತದಾನ ಶಿಬಿರ ಮತ್ತು ಹಿರಿಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

ಸೌಹಾರ್ದ ಸಂಸ್ಕೃತಿ ಸಮಾವೇಶ: ಮೇ 05, ಬೆಂಗಳೂರು

ನಾವೆಲ್ಲ ಒಂದೇ ಜಾತಿ ಕುಲ, ನಾವೆಲ್ಲವೂ ಮನುಜರು ಎಂಬ ಸಂದೇಶ ಸಾರುವುದಕ್ಕಾಗಿ ಮೇ 05 ರಂದು ಬೆಂಗಳೂರಿನ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸೌಹಾರ್ದ ಸಂಸ್ಕೃತಿ ಸಮಾವೇಶ ಜರುಗಲಿದೆ. ಹಿರಿಯ ಸಾಹಿತ, ಹೋರಾಟಗಾರ ಬರಗೂರು ರಾಮಚಂದ್ರಪ್ಪ, ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟೀಸ್ ಗೋಪಾಲಗೌಡ, ಜಸ್ಟೀಸ್ ನಾಗಮೋಹನ್ ದಾಸ್, ಎನ್ ಸಂತೋಷ್ ಹೆಗ್ಡೆಯವರು ಜೊತೆ ವಿವಿಧ ಧರ್ಮಗುರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸೌಹಾರ್ದ ಕರ್ನಾಟಕ ಎಂಬ ಸಂಯುಕ್ತಾಶ್ರಯದಲ್ಲಿ ವಿವಿಧ ಸಂಘಟನೆಗಳು ಈ ಕಾರ್ಯಕ್ರಮವನ್ನು ಸಂಘಟಿಸುತ್ತಿವೆ.

ಬಹುತ್ವ ಭಾರತೀಯರ ಸಮಾವೇಶ: ಮೇ 08, ಸಿಂಧನೂರು

ಸೌಹಾರ್ದ ಸಾಮರಸ್ಯ ಭಾರತಕ್ಕಾಗಿ ಬಹುತ್ವ ಭಾರತೀಯರ ಸಮಾವೇಶ ಮೇ 08 ರಂದು ಸಿಂಧನೂರಿನ ಎಪಿಎಂಸಿ ಮೈದಾನದಲ್ಲಿ ಜರುಗಲಿದೆ. ಬೆಳಿಗ್ಗೆ 11 ರಿಂದ ಸಂಜೆ 05ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಬಸವಪ್ರಭು, ಉಪನ್ಯಾಸಕರು, ಬೀದರ್, ಶಿವಸುಂದರ್, ಚಿಂತಕರು, ಹೋರಾಟಗಾರರಾದ ಆರ್ ಮಾನಸಯ್ಯ, ಸಾಮಾಜಿಕ ಕಾರ್ಯಕರ್ತರಾದ ಲಬೀದ್ ಶಫಿ, ಸಾವಿತ್ರಿ ಮುಜುಂದಾರ್, ನ್ಯಾಯವಾದಿಗಳು, ಕೊಪ್ಪಳ, ಬರಹಗಾರರಾದ ಕೆ.‍‍ಷರೀಪ, ದಲಿತ ನಾಯಕರಾದ ಮಾರಸಂದ್ರ ಮುನಿಯಪ್ಪ, ಬಾಲಸ್ವಾಮಿ, ಕೊಡ್ಲಿ ಮತ್ತು ಹೋರಾಟಗಾರರಾದ ಡಿ.ಎಚ್ ಪೂಜಾರ್ ಭಾಗವಹಿಸಲಿದ್ದಾರೆ. ಭಾಗವಹಿಸಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗೆ 9880152070 ಈ ಮೊಬೈಲ್ ನಂಬರ್ ಅನ್ನು ಸಂಪರ್ಕಿಸಬಹುದು.

ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶ: ಮೇ 14, ಉಡುಪಿ

ಯಾವ ಉಡುಪಿಯಲ್ಲಿ ಹಿಜಾಬ್ ಅನ್ನು ವಿವಾದದ ವಸ್ತುವನ್ನಾಗಿ ಮಾಡಲಾಯಿತೊ, ಎಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಬ್ಯಾನರ್ ಹಾಕಲಾಯಿತೊ ಅದೇ ಉಡುಪಿಯಲ್ಲಿ ಮೇ 14 ರಂದು ರಾಜ್ಯದ ನೂರಾರು ಸಂಘಟನೆಗಳು ಸೇರಿ ರಾಜ್ಯ ಮಟ್ಟದ ಸಾಮರಸ್ಯ ನಡಿಗೆ- ಸಹಬಾಳ್ವೆ ಸಮಾವೇಶವನ್ನು ಹಮ್ಮಿಕೊಂಡಿವೆ.

ರಾಜ್ಯ ಹಾಗೂ ದೇಶದಲ್ಲಿ ನಿತ್ಯವೂ ಘಟಿಸುತ್ತಿರುವ ಮತೀಯವಾದಿ ಸಂಗತಿಗಳನ್ನು ಖಂಡಿಸಿ, ದೇಶದ ಜಾತ್ಯತೀತತೆ, ಸಮಗ್ರತೆ, ವೈವಿಧ್ಯತೆ ಹಾಗೂ ಕೋಮು ಸಾಮರಸ್ಯವನ್ನು ಸಾರಲು ಈ ಸಮಾವೇಶ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ನಾಡಿನ ಜನರನ್ನು ಆಹ್ವಾನಿಸುವ ಹಾಗೂ ಸಾಮರಸ್ಯ, ಸಹಬಾಳ್ವೆಯ ಸೊಬಗನ್ನು ಉದ್ದೀಪಿಸುವ ನಿಟ್ಟಿನಲ್ಲಿ ಹಲವು ಚಿಂತಕರು, ಹಿರಿಯ, ಕಿರಿಯ ಬರಹಗಾರರು, ಹೋರಾಟಗಾರರು, ರಂಗಕರ್ಮಿಗಳು, ಚಿತ್ರಕರ್ಮಿಗಳು, ಪತ್ರಕರ್ತರು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಜನರು ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

ಯೋಗೇಂದ್ರ ಯಾದವ್, ಸಸಿಕಾಂತ್ ಸೆಂಥಿಲ್ ಸೇರಿ ವಿವಿಧ ಧರ್ಮದ ಧರ್ಮಗುರುಗಳು, ಹೋರಾಟಗಾರರು ಈ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಾಮರಸ್ಯ ಸಂದೇಶ ಅಭಿಯಾನ: ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌‌ಗಳು ವೈರಲ್‌

ಮೇ ಸಾಹಿತ್ಯ ಮೇಳ: ಮೇ 27 ಮತ್ತು 28, ದಾವಣಗೆರೆ

ಸಂವಿಧಾನ ನಮ್ಮೆಲ್ಲರ ಆಶಯ, ಸತ್ಯದ ಹುಡುಕಾಟಕ್ಕೆ ಸಾಕ್ಷಿಯಾಗೋಣ ಎಂಬ ಉದ್ದೇಶದಿಂದ ಮೇ 27 ಮತ್ತು 28ರಂದು ದಾವಣಗೆರೆಯಲ್ಲಿ ಲಡಾಯಿ ಪ್ರಕಾಶನದ ವತಿಯಿಂದ ಮೇ ಸಾಹಿತ್ಯ ಮೇಳ ನಡೆಯಲಿದೆ. ತಾಜ್ ಪ್ಯಾಲೇಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೂರಾರು ಸಾಹಿತ್ಯ ಆಸಕ್ತರು, ಹೋರಾಟಗಾರರು ಭಾಗವಹಿಸಲಿದ್ದಾರೆ.

ಇದಲ್ಲದೆ ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಸೌಹಾರ್ದ ಕಾರ್ಯಕ್ರಮಗಳು ಮೇ ತಿಂಗಳಿನಲ್ಲಿ ಜರುಗಲಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...