Homeಅಂಕಣಗಳುಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

ಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

- Advertisement -
- Advertisement -

ಉಡುಪಿಯ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶಕ್ಕೆ ರಂಗ ಸಜ್ಜಾಗಿದೆ. ಸಹಪಂಕ್ತಿ ಭೋಜನವನ್ನು ಇನ್ನೂ ಮೈಗೂಡಿಸಿಕೊಳ್ಳದ, ಆದರೆ ದೇಶದ ರಾಜಕೀಯದಲ್ಲಿ ಅಧಿಕಾರಯುತವಾದ ಸ್ಥಾನ ಹೊಂದಿರುವ ಮಠ ನೆಲೆಸಿರುವ, ಮಡಿಮೈಲಿಗೆಗಳನ್ನು, ತಾರತಮ್ಯವನ್ನು ಸಿದ್ಧಾಂತವನ್ನಾಗಿಸಿ-ತತ್ವಶಾಸ್ತ್ರವನ್ನಾಗಿಸಿ ದೊಡ್ಡಮಟ್ಟದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸೆಕ್ಟ್ ಒಂದು ಪ್ರಭಾವಿಯಾಗಿರುವ, ರಾಜ್ಯದಲ್ಲಿ ಕೋಮು ವಿಷಮತೆಯ ಪ್ರಯೋಗಶಾಲೆಯಾಗಿರುವ ನೆಲದಿಂದ ಇಂತಹ ಸೌಹಾರ್ದತೆ ಸಾರುವ ಸಮಾವೇಶ ಈಗ ಮತ್ತೊಮ್ಮೆ ಚಾಲನೆ ಪಡೆದುಕೊಳ್ಳುತ್ತಿದೆ. ಈಗಿನ ಬಹುಸಂಖ್ಯಾತವಾದದಲ್ಲಿ ಮೂಲೆಗುಂಪಾಗುವ-ದೌರ್ಜನ್ಯಕ್ಕೆ ಒಳಗಾಗುವ ಅಪಾಯ ಎದುರಿಸುತ್ತಿರುವ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಮತಧರ್ಮಗಳ ಕೆಲವು ವರ್ಗಗಳಲ್ಲಿ ಕೂಡ ಅವರವರ ಮತಧರ್ಮದ ಶ್ರೇಷ್ಠತೆಯನ್ನು ಮಾತ್ರ ಪ್ರತಿಪಾದಿಸುವ ವ್ಯಕ್ತಿಗಳು-ಗುಂಪುಗಳು ಇಲ್ಲವೆಂದಲ್ಲ. ಆದರೆ, ಸಮಾನತೆಯ ತಳಹದಿಯಲ್ಲಿ ಹೊಂದಾಣಿಕೆ-ಕೂಡುಬಾಳ್ವೆಯೆಡೆಗೆ ಇಲ್ಲಿಯವರೆಗೂ ಸಾಧಿಸಲು ಸಾಧ್ಯವಾಗಿದ್ದ ಚಲನೆಯನ್ನು ಇಂದು ನೆಲೆಸಿರುವ ದ್ವೇಷದ ರಾಜಕೀಯ ವಾತಾವರಣ ಮಣ್ಣುಮುಕ್ಕಿಸಿ, ಅಲ್ಪಸಂಖ್ಯಾತರನ್ನು ಅನ್ಯರನ್ನಾಗಿಸಿ ಎರಡನೇ ದರ್ಜೆಯ ನಾಗರಿಕರನ್ನಾಗಿಸಲು ಹೊರಟಿರುವಾಗ, ಈ ಸಾಮರಸ್ಯ-ಸಹಬಾಳ್ವೆಯ ಪರಿಕಲ್ಪನೆಗಳಿಗೆ ಸಂದರ್ಭಾನುಸಾರ ವಿಶಾಲ ಅರ್ಥಗಳು ದೊರಕುವುದು ಸಹಜ.

ಸದರಿ ಸಮಾವೇಶದ ಬಗ್ಗೆ ಕೆಲವರು ಎತ್ತಿರುವ ಪ್ರಾಮಾಣಿಕ ಮತ್ತು ಕಾಳಜಿಯ ಪ್ರಶ್ನೆಗಳಿಗೆ ಮತ್ತು ಕುಹಕದ ಪ್ರಶ್ನೆಗಳಿಗೂ ಉತ್ತರಗಳನ್ನು ಕಂಡುಕೊಳ್ಳುವುದರ ಮೂಲಕ ನಮ್ಮ ಗುರಿಯನ್ನು ಹೆಚ್ಚು ಸ್ಪಷ್ಟತೆಯಿಂದ ತಲುಪಲು ಪ್ರಯತ್ನಿಸಬಹುದೇನೋ! ಸಾಮರಸ್ಯದ ಪರಿಕಲ್ಪನೆಯನ್ನೇ ತೆಗೆದುಕೊಂಡರೆ, ಅದನ್ನು ಹಲವು ಸಂದರ್ಭಗಳಲ್ಲಿ ಸಮಾನತೆಯ ವಿರುದ್ಧವಾಗಿ ಪ್ರತಿಪಾದಿಸಿರುವುದನ್ನು ನಾವು ನೋಡಬಹುದು. ಆರ್‌ಎಸ್‌ಎಸ್‌ನ ಸಂಸ್ಥಾಪಕ ಗೋಲ್ವಾಲ್ಕರ್ ಹೇಳುವ ಮಾತು ಹೀಗಿದೆ: “ನಮ್ಮ ಧರ್ಮ ಕಮ್ಯುನಿಸ್ಟರು ಹೇಳುವ ಸಮಾನತ್ವ (ಇಕ್ವಾಲಿಟಿ) ಅಲ್ಲ, ಸಾಮರಸ್ಯ (ಹಾರ್ಮೊನಿ). ಪ್ರತಿಯೊಬ್ಬನೂ ತನ್ನ ಸ್ವಧರ್ಮವನ್ನು (ಅದು ಬಾಂಡಲಿ ಹೊರುವುದಾಗಲೂ, ಕಾರಿನಲ್ಲಿ ಕುಳಿತು ತಿರುಗುವುದಾಗಲೀ) ನಿರ್ವಹಿಸುತ್ತಾ ಹೋದರೆ ಎಲ್ಲವೂ ಪ್ರಶಾಂತವಾಗಿ ಸಾಮರಸ್ಯದಿಂದ ಇರುತ್ತದೆ”. ಹೀಗೆ ಸಾಮರಸ್ಯದ ಕಲ್ಪನೆಯನ್ನು ಈ ನೆಲದ ಮುಖ್ಯ ಗುಣವಾಗಿದ್ದ ತಾರತಮ್ಯವನ್ನು ಸಮರ್ಥಿಸಿಕೊಳ್ಳಲು ಬಳಸಲಾಗಿತ್ತು. ಇಂತಹ ಕೃತಕ ಸಾಮರಸ್ಯವನ್ನು ಇಂದಿಗೂ ಪ್ರತಿಪಾದಿಸುವ ಸಂಘ ಪರಿವಾರದ ಸಿದ್ಧಾಂತಿಗಳಿಗೆ ಬರವೇನಿಲ್ಲ. ಆದರೆ ಸದರಿ ಸಮಾವೇಶ ಸಮಾನತೆಯನ್ನು ಪ್ರತಿಪಾದಿಸುವ, ಜಾತಿ-ಧರ್ಮ ಪ್ರೇರಿತ ತಾರತಮ್ಯವನ್ನು ಹೋಗಲಾಡಿಸುವ ಇರಾದೆ ಹೊಂದಿರುವ ಸಂವಿಧಾನವನ್ನು ತನ್ನ ಒಡಲಲ್ಲಿ ಇರಿಸಿಕೊಂಡಿದೆ. ಕನಿಷ್ಠ ಅಂತಹ ನಂಬಿಕೆಯುಳ್ಳ ಮುಖಂಡರು ಈ ಸಮಾವೇಶದ ಅಂತರಂಗವಾಗಿದ್ದಾರೆ. ಆ ನಿಟ್ಟಿನಲ್ಲಿ ಬಾಹ್ಯ ಪ್ರಾತಿನಿಧ್ಯಕ್ಕೂ ಸಮಾನತೆಯ ಮೂಲಕ ಸಾಮರಸ್ಯ ಕಂಡುಕೊಳ್ಳುವ ಹಾದಿ ಹಿಡಿದಿರುವವರನ್ನು ಒಳಗೊಳ್ಳಲು ಸಮಾವೇಶ ಶ್ರಮಿಸುತ್ತಿದೆ. ಯಾರ ಬಗ್ಗೆ ಅಪಸ್ವರ ಬಂದಿದೆಯೋ ಅಂತಹವರ ಬಗ್ಗೆ ಮರುಚಿಂತನೆ ನಡೆಸುವುದಾಗಿ ಕೂಡ ಸಂಘಟಕರು ವಿನಮ್ರವಾಗಿ ಹೇಳಿದ್ದಾರೆ.

ಇದೇ ನೆಲೆಯಲ್ಲಿ ಏಳುವ ಮತ್ತೊಂದು ಪ್ರಶ್ನೆ, ಹಲವು ಧರ್ಮಗುರುಗಳದ್ದು. ಈ ದೇಶದ ಪ್ರತಿಯೊಬ್ಬ ನಿವಾಸಿಗೂ ತನ್ನ ಇಚ್ಛೆಯ ಧರ್ಮವನ್ನು ಅನುಸರಿಸುವುದಕ್ಕೆ, ಪ್ರಸರಿಸುವುದಕ್ಕೆ ನಮ್ಮ ಸಂವಿಧಾನ ಅವಕಾಶವನ್ನಂತೂ ನೀಡಿದೆ. ಈ ಸಮಯದಲ್ಲಿ ವಿವಿಧ ಜಾತಿ ಮತಗಳಿಗೆ ಸೇರಿದ ಧರ್ಮಗುರುಗಳ ಪಾತ್ರವೇನು? ಎಷ್ಟೋ ಜಾತಿ-ಧರ್ಮಗುರುಗಳು ವೇದಿಕೆಗೆ ತಕ್ಕಂತೆ ಮಾತನಾಡುವವರು. ಬಾಬ್ರಿಮಸೀದಿ ಕೆಡವಿದ ಜಾಗದಲ್ಲಿ ರಾಮಮಂದಿರ ಕಟ್ಟಲೇಬೆಕೆಂದು ಕರೆನೀಡುವ, ಮತ್ತೊಂದು ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ರಂಗುರಂಗಾಗಿ ಬಣ್ಣಿಸುವ ಸ್ವಾಮಿಗಳು ಹಲವರು ಇದ್ದಾರೆ. ಸಾಮಾನ್ಯವಾಗಿ ಯಾವುದೇ ಜಾತಿ ಮತಗಳ ಧರ್ಮಗುರುಗಳು ಯಥಾಸ್ಥಿತಿಗೆ ಪುಷ್ಠಿ ನೀಡುವವರು. ಜಾತಿ-ಧರ್ಮ ಪಾರಮ್ಯವನ್ನು ಮೆರೆಯುವವರು. ಪ್ರಗತಿಯನ್ನು ತುಸು ಅನುಸರಿಸುವವರು ಕೆಲವರು ಇದ್ದಾರಾದರೂ, ಅವರ ತರಬೇತಿಯ ಕಾರಣಕ್ಕೆ, ತಮ್ಮ ಪರಂಪರೆಯನ್ನು ಸುಲಭವಾಗಿ ತ್ಯಜಿಸಲಾಗದ ಅವರ ಕೆಲಸದ ಸ್ವಭಾವದ ಕಾರಣಕ್ಕೆ ಅವರು ಎಲ್ಲ ಜನರ ಒಳಿತಿನ ಕಾಳಜಿಗಾಗಿ ದುಡಿಯಲಾರರು; ಪ್ರತಿ ಅಧಿಕಾರ ಕೇಂದ್ರಗಳನ್ನು ಪ್ರಶ್ನಿಸುವ ಇಂಟಲೆಕ್ಚುಯಲ್ ಪಾತ್ರವನ್ನು ಅವರು ವಹಿಸಿರುವುದು ವಿರಳಾತಿ ವಿರಳ. ಆದರೂ ಜನಪ್ರಿಯ ವೇದಿಕೆಗಳನ್ನು ಸೃಷ್ಟಿಸುವಾಗ, ಹಲವು ರೀತಿಯಲ್ಲಿ ಜನರನ್ನು ಪ್ರಭಾವಿಸಬಲ್ಲ ಜನಪ್ರಿಯ ವ್ಯಕ್ತಿಗಳನ್ನು ಕರೆತರುವುದೂ ಮುಖ್ಯವಾದೀತು. ಆ ಮುಖಾಂತರ ಸಹಬಾಳ್ವೆಯ ಪ್ರಾಥಮಿಕ ಪಾಠಗಳನ್ನು ಈ ಕರಾಳ ದಿನಗಳಲ್ಲಿ ಮತ್ತೆಮತ್ತೆ ನೆನಪಿಸುವ ಕೆಲಸಕ್ಕೆ ಸಮಾವೇಶ ಮುಂದಾಗಬಹುದು.

ಇಂದು ಯಾವುದೇ ಸುಳ್ಳು ಸಮರ್ಥನೆಗಳೂ ಬೇಕಾಗದೆ, ಸಮಾಜದಲ್ಲಿ ಕೋಮುಗಳ ನಡುವೆ ದ್ವೇಷ ಮೂಡಿಸಲು ಸಾಧ್ಯವಾಗುತ್ತಿರುವಂತಹ ಸನ್ನಿವೇಶದಲ್ಲಿ, ಎಲ್ಲ ಆಯಾಮಗಳಲ್ಲಿ ’ಪರ್ಫೆಕ್ಟ್’ ಅಲ್ಲದೆ ಇರಬಹುದಾದರೂ ಜನಪ್ರಿಯ ಸಂಸ್ಕೃತಿ ಮಾದರಿಯ ಚಿಂತನೆಗಳನ್ನೂ ಹರಿದುಬಿಡಬೇಕಾದ ತುರ್ತಿನಲ್ಲಿ ನಾವಿದ್ದೇವೆ. ಆ ನಿಟ್ಟಿನಲ್ಲಿ ಪಾರ್ಕ್‌ಗಳಾಗಲೀ, ಸಿನಿಮಾ ಮಂದಿರಗಳಾಗಲೀ, ಬೀಚ್ ಇನ್ನಿತರ ಸಾರ್ವಜನಿಕ ಪ್ರದೇಶಗಳು ಸೆಕ್ಯುಲರ್ ಆದ ಚಹರೆಯನ್ನು ಹೊಂದಿವೆ ಎನ್ನುವ ಮಾತುಗಳನ್ನು ಪದೇಪದೆ ನೆನಪಿಸಬೇಕಾಗುತ್ತದೆ. ಊರಹಬ್ಬಗಳು ಇಂದಿಗೂ ಕಟ್ಟಕಡೆಯ ದಮನಿತನನ್ನು ಒಳಗೊಳ್ಳದೆ ಹೋಗಿರುವ, ದೇವಸ್ಥಾನ ಪ್ರವೇಶಕ್ಕೆ ಇನ್ನೂ ಮುಕ್ತ ಅವಕಾಶ ನೀಡದಿರುವ ನೀಚ ತರತಮವನ್ನು ಮರೆಯದೆಯೂ, ಅಂತಹ ಹಬ್ಬಗಳಲ್ಲಿ ಹಲವು ಕೋಮುಗಳು ಸ್ವಲ್ಪಮಟ್ಟಿಗಾದರೂ ತರತಮತೆಯನ್ನು ತಗ್ಗಿಸಿಕೊಂಡು ಕೂಡಿ ಸಂಭ್ರಮಿಸುವ ಸಂಗತಿಯನ್ನು ಗುರುತಿಸಬೇಕಾಗಿದೆ ಅಲ್ಲವೇ? ಅಲ್ಲಿಂದ ಕನಿಷ್ಠ ಪಕ್ಷ ಇನ್ನೂ ಹಿಂದಕ್ಕೆ ಚಲಿಸದಂತೆ, ಇನ್ನಷ್ಟು ಪ್ರಗತಿಯತ್ತ ದಾಪುಗಾಲು ಇರಿಸಲು ಅನುವಾಗುವಂತೆ ಕೆಲಸಗಳಾಗಬೇಕಿವೆ.

ಇದೇ ಹಿನ್ನೆಲೆಯಲ್ಲಿ ಉಡುಪಿಯ ಸಮಾವೇಶವನ್ನೂ ಕಾಣಬಹುದೇ? ವೈಚಾರಿಕತೆಯಿಂದ ಜೀವನ ದೃಷ್ಟಿಯನ್ನು ಕಟ್ಟಿಕೊಂಡವನೊಬ್ಬನಿಗೆ ಹತ್ತಾರು ಸ್ವಾಮೀಜಿಗಳ ಉಪಸ್ಥಿತಿ ಕಸಿವಿಸಿಯನ್ನುಂಟುಮಾಡಬಲ್ಲದು. ಇಂತಹ ಸಾಮರಸ್ಯ ತೀವ್ರ ಮೇಲ್ಮಟ್ಟದ್ದು ಎಂಬ ಕಳವಳ ಉಂಟಾಗಬಹುದು. ಆದರೆ ಇಂತಹ ಸಮ್ಮೇಳನಗಳು ಕೂಡ ಜನಸಾಮಾನ್ಯರಲ್ಲಿ ಜನಪ್ರಿಯ ಮಟ್ಟದಲ್ಲಿ ಭರವಸೆ ತುಂಬಬಲ್ಲವು (ಇಂದಿನ ಮತೀಯ ಧ್ರುವೀಕರಣದಲ್ಲಿ ಶೋಷಣೆಗೆ ಒಳಗಾಗುತ್ತಿರುವವರಿಗೆ) ಮತ್ತು ವಿವೇಕವನ್ನೂ (ದ್ವೇಷ ಸಿದ್ಧಾಂತಕ್ಕೆ ಮರುಳಾಗುತ್ತಿರುವವರಿಗೆ). ಸಮಾಜದಲ್ಲಿ ಒಟ್ಟಾರೆಯಾಗಿ ಒಳಿತಿನ ಚಲನೆಯ ಕಡೆಗೆ ಒಲವಿರುವವರು ಎತ್ತುವ ಆಕ್ಷೇಪಗಳ ಜೊತೆಗೇ, ಅವುಗಳನ್ನೂ ಸಾಧ್ಯವಾದಷ್ಟು ಅಡ್ರೆಸ್ ಮಾಡುವುದರ ಜೊತೆಗೆ, ಈ ಸಹಬಾಳ್ವೆ ಸಮಾವೇಶ ಯಾವ ಗುರಿಯನ್ನು ಇಟ್ಟುಕೊಂಡಿದೆಯೋ ಅದನ್ನು ಸಾಧಿಸಬೇಕಿದೆ. ಆ ಗುರಿ, ಆಳುವ ಪ್ರಭುತ್ವ ಮತ್ತು ಅದರ ಸೈದ್ಧಾಂತಿಕ ಜತೆಗಾರರು ಸೃಷ್ಟಿಸುವ ಒಡಕಿಗೆ, ಧ್ರುವೀಕರಣಕ್ಕೆ ಇಲ್ಲಿನ ಸಾಮಾನ್ಯ ಜನ ಸಮ್ಮತಿಸುವುದಿಲ್ಲವೆಂದು ತೋರಿಸುವುದು. ಅವರ ಗುರಿಯಾಗಿರುವ ಅಲ್ಪಸಂಖ್ಯಾತ ಮುಸ್ಲಿಂ ಮತ್ತು ಇತರ ಸಮುದಾಯಗಳ ಜೊತೆಗೆ ನಾವಿದ್ದೇವೆ ಎಂಬುದನ್ನು ಗಟ್ಟಿಯಾಗಿ ಪ್ರತಿಪಾದಿಸುವುದು ಮತ್ತು ಕೃತಕವಾಗಿ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಲಾಗುತ್ತಿರುವ ಈ ಕೋಮುಗಳ ನಡುವೆ ಒಡನಾಟ, ಪರಸ್ಪರ ಬಳಕೆ ಮುಂದಿನ ದಿನಗಳಲ್ಲಿ ಹೆಚ್ಚಾಗುವಂತೆ ಮಾಡಲು ಕಾರ್ಯಪ್ರವೃತ್ತರಾಗುವುದು. ಇದಕ್ಕಾಗಿ ಎಲ್ಲರ ಒಳಿತಿಗೆ ತುಡಿಯುವ ನಾಡಿನ ಪ್ರಜ್ಞಾವಂತರೆಲ್ಲರೂ ಕೈಜೋಡಿಸಿದಲ್ಲಿ ಕಷ್ಟವಾಗಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...