Homeಅಂಕಣಗಳುಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

ಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

- Advertisement -
- Advertisement -

ಉಡುಪಿಯ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶಕ್ಕೆ ರಂಗ ಸಜ್ಜಾಗಿದೆ. ಸಹಪಂಕ್ತಿ ಭೋಜನವನ್ನು ಇನ್ನೂ ಮೈಗೂಡಿಸಿಕೊಳ್ಳದ, ಆದರೆ ದೇಶದ ರಾಜಕೀಯದಲ್ಲಿ ಅಧಿಕಾರಯುತವಾದ ಸ್ಥಾನ ಹೊಂದಿರುವ ಮಠ ನೆಲೆಸಿರುವ, ಮಡಿಮೈಲಿಗೆಗಳನ್ನು, ತಾರತಮ್ಯವನ್ನು ಸಿದ್ಧಾಂತವನ್ನಾಗಿಸಿ-ತತ್ವಶಾಸ್ತ್ರವನ್ನಾಗಿಸಿ ದೊಡ್ಡಮಟ್ಟದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸೆಕ್ಟ್ ಒಂದು ಪ್ರಭಾವಿಯಾಗಿರುವ, ರಾಜ್ಯದಲ್ಲಿ ಕೋಮು ವಿಷಮತೆಯ ಪ್ರಯೋಗಶಾಲೆಯಾಗಿರುವ ನೆಲದಿಂದ ಇಂತಹ ಸೌಹಾರ್ದತೆ ಸಾರುವ ಸಮಾವೇಶ ಈಗ ಮತ್ತೊಮ್ಮೆ ಚಾಲನೆ ಪಡೆದುಕೊಳ್ಳುತ್ತಿದೆ. ಈಗಿನ ಬಹುಸಂಖ್ಯಾತವಾದದಲ್ಲಿ ಮೂಲೆಗುಂಪಾಗುವ-ದೌರ್ಜನ್ಯಕ್ಕೆ ಒಳಗಾಗುವ ಅಪಾಯ ಎದುರಿಸುತ್ತಿರುವ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಮತಧರ್ಮಗಳ ಕೆಲವು ವರ್ಗಗಳಲ್ಲಿ ಕೂಡ ಅವರವರ ಮತಧರ್ಮದ ಶ್ರೇಷ್ಠತೆಯನ್ನು ಮಾತ್ರ ಪ್ರತಿಪಾದಿಸುವ ವ್ಯಕ್ತಿಗಳು-ಗುಂಪುಗಳು ಇಲ್ಲವೆಂದಲ್ಲ. ಆದರೆ, ಸಮಾನತೆಯ ತಳಹದಿಯಲ್ಲಿ ಹೊಂದಾಣಿಕೆ-ಕೂಡುಬಾಳ್ವೆಯೆಡೆಗೆ ಇಲ್ಲಿಯವರೆಗೂ ಸಾಧಿಸಲು ಸಾಧ್ಯವಾಗಿದ್ದ ಚಲನೆಯನ್ನು ಇಂದು ನೆಲೆಸಿರುವ ದ್ವೇಷದ ರಾಜಕೀಯ ವಾತಾವರಣ ಮಣ್ಣುಮುಕ್ಕಿಸಿ, ಅಲ್ಪಸಂಖ್ಯಾತರನ್ನು ಅನ್ಯರನ್ನಾಗಿಸಿ ಎರಡನೇ ದರ್ಜೆಯ ನಾಗರಿಕರನ್ನಾಗಿಸಲು ಹೊರಟಿರುವಾಗ, ಈ ಸಾಮರಸ್ಯ-ಸಹಬಾಳ್ವೆಯ ಪರಿಕಲ್ಪನೆಗಳಿಗೆ ಸಂದರ್ಭಾನುಸಾರ ವಿಶಾಲ ಅರ್ಥಗಳು ದೊರಕುವುದು ಸಹಜ.

ಸದರಿ ಸಮಾವೇಶದ ಬಗ್ಗೆ ಕೆಲವರು ಎತ್ತಿರುವ ಪ್ರಾಮಾಣಿಕ ಮತ್ತು ಕಾಳಜಿಯ ಪ್ರಶ್ನೆಗಳಿಗೆ ಮತ್ತು ಕುಹಕದ ಪ್ರಶ್ನೆಗಳಿಗೂ ಉತ್ತರಗಳನ್ನು ಕಂಡುಕೊಳ್ಳುವುದರ ಮೂಲಕ ನಮ್ಮ ಗುರಿಯನ್ನು ಹೆಚ್ಚು ಸ್ಪಷ್ಟತೆಯಿಂದ ತಲುಪಲು ಪ್ರಯತ್ನಿಸಬಹುದೇನೋ! ಸಾಮರಸ್ಯದ ಪರಿಕಲ್ಪನೆಯನ್ನೇ ತೆಗೆದುಕೊಂಡರೆ, ಅದನ್ನು ಹಲವು ಸಂದರ್ಭಗಳಲ್ಲಿ ಸಮಾನತೆಯ ವಿರುದ್ಧವಾಗಿ ಪ್ರತಿಪಾದಿಸಿರುವುದನ್ನು ನಾವು ನೋಡಬಹುದು. ಆರ್‌ಎಸ್‌ಎಸ್‌ನ ಸಂಸ್ಥಾಪಕ ಗೋಲ್ವಾಲ್ಕರ್ ಹೇಳುವ ಮಾತು ಹೀಗಿದೆ: “ನಮ್ಮ ಧರ್ಮ ಕಮ್ಯುನಿಸ್ಟರು ಹೇಳುವ ಸಮಾನತ್ವ (ಇಕ್ವಾಲಿಟಿ) ಅಲ್ಲ, ಸಾಮರಸ್ಯ (ಹಾರ್ಮೊನಿ). ಪ್ರತಿಯೊಬ್ಬನೂ ತನ್ನ ಸ್ವಧರ್ಮವನ್ನು (ಅದು ಬಾಂಡಲಿ ಹೊರುವುದಾಗಲೂ, ಕಾರಿನಲ್ಲಿ ಕುಳಿತು ತಿರುಗುವುದಾಗಲೀ) ನಿರ್ವಹಿಸುತ್ತಾ ಹೋದರೆ ಎಲ್ಲವೂ ಪ್ರಶಾಂತವಾಗಿ ಸಾಮರಸ್ಯದಿಂದ ಇರುತ್ತದೆ”. ಹೀಗೆ ಸಾಮರಸ್ಯದ ಕಲ್ಪನೆಯನ್ನು ಈ ನೆಲದ ಮುಖ್ಯ ಗುಣವಾಗಿದ್ದ ತಾರತಮ್ಯವನ್ನು ಸಮರ್ಥಿಸಿಕೊಳ್ಳಲು ಬಳಸಲಾಗಿತ್ತು. ಇಂತಹ ಕೃತಕ ಸಾಮರಸ್ಯವನ್ನು ಇಂದಿಗೂ ಪ್ರತಿಪಾದಿಸುವ ಸಂಘ ಪರಿವಾರದ ಸಿದ್ಧಾಂತಿಗಳಿಗೆ ಬರವೇನಿಲ್ಲ. ಆದರೆ ಸದರಿ ಸಮಾವೇಶ ಸಮಾನತೆಯನ್ನು ಪ್ರತಿಪಾದಿಸುವ, ಜಾತಿ-ಧರ್ಮ ಪ್ರೇರಿತ ತಾರತಮ್ಯವನ್ನು ಹೋಗಲಾಡಿಸುವ ಇರಾದೆ ಹೊಂದಿರುವ ಸಂವಿಧಾನವನ್ನು ತನ್ನ ಒಡಲಲ್ಲಿ ಇರಿಸಿಕೊಂಡಿದೆ. ಕನಿಷ್ಠ ಅಂತಹ ನಂಬಿಕೆಯುಳ್ಳ ಮುಖಂಡರು ಈ ಸಮಾವೇಶದ ಅಂತರಂಗವಾಗಿದ್ದಾರೆ. ಆ ನಿಟ್ಟಿನಲ್ಲಿ ಬಾಹ್ಯ ಪ್ರಾತಿನಿಧ್ಯಕ್ಕೂ ಸಮಾನತೆಯ ಮೂಲಕ ಸಾಮರಸ್ಯ ಕಂಡುಕೊಳ್ಳುವ ಹಾದಿ ಹಿಡಿದಿರುವವರನ್ನು ಒಳಗೊಳ್ಳಲು ಸಮಾವೇಶ ಶ್ರಮಿಸುತ್ತಿದೆ. ಯಾರ ಬಗ್ಗೆ ಅಪಸ್ವರ ಬಂದಿದೆಯೋ ಅಂತಹವರ ಬಗ್ಗೆ ಮರುಚಿಂತನೆ ನಡೆಸುವುದಾಗಿ ಕೂಡ ಸಂಘಟಕರು ವಿನಮ್ರವಾಗಿ ಹೇಳಿದ್ದಾರೆ.

ಇದೇ ನೆಲೆಯಲ್ಲಿ ಏಳುವ ಮತ್ತೊಂದು ಪ್ರಶ್ನೆ, ಹಲವು ಧರ್ಮಗುರುಗಳದ್ದು. ಈ ದೇಶದ ಪ್ರತಿಯೊಬ್ಬ ನಿವಾಸಿಗೂ ತನ್ನ ಇಚ್ಛೆಯ ಧರ್ಮವನ್ನು ಅನುಸರಿಸುವುದಕ್ಕೆ, ಪ್ರಸರಿಸುವುದಕ್ಕೆ ನಮ್ಮ ಸಂವಿಧಾನ ಅವಕಾಶವನ್ನಂತೂ ನೀಡಿದೆ. ಈ ಸಮಯದಲ್ಲಿ ವಿವಿಧ ಜಾತಿ ಮತಗಳಿಗೆ ಸೇರಿದ ಧರ್ಮಗುರುಗಳ ಪಾತ್ರವೇನು? ಎಷ್ಟೋ ಜಾತಿ-ಧರ್ಮಗುರುಗಳು ವೇದಿಕೆಗೆ ತಕ್ಕಂತೆ ಮಾತನಾಡುವವರು. ಬಾಬ್ರಿಮಸೀದಿ ಕೆಡವಿದ ಜಾಗದಲ್ಲಿ ರಾಮಮಂದಿರ ಕಟ್ಟಲೇಬೆಕೆಂದು ಕರೆನೀಡುವ, ಮತ್ತೊಂದು ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ರಂಗುರಂಗಾಗಿ ಬಣ್ಣಿಸುವ ಸ್ವಾಮಿಗಳು ಹಲವರು ಇದ್ದಾರೆ. ಸಾಮಾನ್ಯವಾಗಿ ಯಾವುದೇ ಜಾತಿ ಮತಗಳ ಧರ್ಮಗುರುಗಳು ಯಥಾಸ್ಥಿತಿಗೆ ಪುಷ್ಠಿ ನೀಡುವವರು. ಜಾತಿ-ಧರ್ಮ ಪಾರಮ್ಯವನ್ನು ಮೆರೆಯುವವರು. ಪ್ರಗತಿಯನ್ನು ತುಸು ಅನುಸರಿಸುವವರು ಕೆಲವರು ಇದ್ದಾರಾದರೂ, ಅವರ ತರಬೇತಿಯ ಕಾರಣಕ್ಕೆ, ತಮ್ಮ ಪರಂಪರೆಯನ್ನು ಸುಲಭವಾಗಿ ತ್ಯಜಿಸಲಾಗದ ಅವರ ಕೆಲಸದ ಸ್ವಭಾವದ ಕಾರಣಕ್ಕೆ ಅವರು ಎಲ್ಲ ಜನರ ಒಳಿತಿನ ಕಾಳಜಿಗಾಗಿ ದುಡಿಯಲಾರರು; ಪ್ರತಿ ಅಧಿಕಾರ ಕೇಂದ್ರಗಳನ್ನು ಪ್ರಶ್ನಿಸುವ ಇಂಟಲೆಕ್ಚುಯಲ್ ಪಾತ್ರವನ್ನು ಅವರು ವಹಿಸಿರುವುದು ವಿರಳಾತಿ ವಿರಳ. ಆದರೂ ಜನಪ್ರಿಯ ವೇದಿಕೆಗಳನ್ನು ಸೃಷ್ಟಿಸುವಾಗ, ಹಲವು ರೀತಿಯಲ್ಲಿ ಜನರನ್ನು ಪ್ರಭಾವಿಸಬಲ್ಲ ಜನಪ್ರಿಯ ವ್ಯಕ್ತಿಗಳನ್ನು ಕರೆತರುವುದೂ ಮುಖ್ಯವಾದೀತು. ಆ ಮುಖಾಂತರ ಸಹಬಾಳ್ವೆಯ ಪ್ರಾಥಮಿಕ ಪಾಠಗಳನ್ನು ಈ ಕರಾಳ ದಿನಗಳಲ್ಲಿ ಮತ್ತೆಮತ್ತೆ ನೆನಪಿಸುವ ಕೆಲಸಕ್ಕೆ ಸಮಾವೇಶ ಮುಂದಾಗಬಹುದು.

ಇಂದು ಯಾವುದೇ ಸುಳ್ಳು ಸಮರ್ಥನೆಗಳೂ ಬೇಕಾಗದೆ, ಸಮಾಜದಲ್ಲಿ ಕೋಮುಗಳ ನಡುವೆ ದ್ವೇಷ ಮೂಡಿಸಲು ಸಾಧ್ಯವಾಗುತ್ತಿರುವಂತಹ ಸನ್ನಿವೇಶದಲ್ಲಿ, ಎಲ್ಲ ಆಯಾಮಗಳಲ್ಲಿ ’ಪರ್ಫೆಕ್ಟ್’ ಅಲ್ಲದೆ ಇರಬಹುದಾದರೂ ಜನಪ್ರಿಯ ಸಂಸ್ಕೃತಿ ಮಾದರಿಯ ಚಿಂತನೆಗಳನ್ನೂ ಹರಿದುಬಿಡಬೇಕಾದ ತುರ್ತಿನಲ್ಲಿ ನಾವಿದ್ದೇವೆ. ಆ ನಿಟ್ಟಿನಲ್ಲಿ ಪಾರ್ಕ್‌ಗಳಾಗಲೀ, ಸಿನಿಮಾ ಮಂದಿರಗಳಾಗಲೀ, ಬೀಚ್ ಇನ್ನಿತರ ಸಾರ್ವಜನಿಕ ಪ್ರದೇಶಗಳು ಸೆಕ್ಯುಲರ್ ಆದ ಚಹರೆಯನ್ನು ಹೊಂದಿವೆ ಎನ್ನುವ ಮಾತುಗಳನ್ನು ಪದೇಪದೆ ನೆನಪಿಸಬೇಕಾಗುತ್ತದೆ. ಊರಹಬ್ಬಗಳು ಇಂದಿಗೂ ಕಟ್ಟಕಡೆಯ ದಮನಿತನನ್ನು ಒಳಗೊಳ್ಳದೆ ಹೋಗಿರುವ, ದೇವಸ್ಥಾನ ಪ್ರವೇಶಕ್ಕೆ ಇನ್ನೂ ಮುಕ್ತ ಅವಕಾಶ ನೀಡದಿರುವ ನೀಚ ತರತಮವನ್ನು ಮರೆಯದೆಯೂ, ಅಂತಹ ಹಬ್ಬಗಳಲ್ಲಿ ಹಲವು ಕೋಮುಗಳು ಸ್ವಲ್ಪಮಟ್ಟಿಗಾದರೂ ತರತಮತೆಯನ್ನು ತಗ್ಗಿಸಿಕೊಂಡು ಕೂಡಿ ಸಂಭ್ರಮಿಸುವ ಸಂಗತಿಯನ್ನು ಗುರುತಿಸಬೇಕಾಗಿದೆ ಅಲ್ಲವೇ? ಅಲ್ಲಿಂದ ಕನಿಷ್ಠ ಪಕ್ಷ ಇನ್ನೂ ಹಿಂದಕ್ಕೆ ಚಲಿಸದಂತೆ, ಇನ್ನಷ್ಟು ಪ್ರಗತಿಯತ್ತ ದಾಪುಗಾಲು ಇರಿಸಲು ಅನುವಾಗುವಂತೆ ಕೆಲಸಗಳಾಗಬೇಕಿವೆ.

ಇದೇ ಹಿನ್ನೆಲೆಯಲ್ಲಿ ಉಡುಪಿಯ ಸಮಾವೇಶವನ್ನೂ ಕಾಣಬಹುದೇ? ವೈಚಾರಿಕತೆಯಿಂದ ಜೀವನ ದೃಷ್ಟಿಯನ್ನು ಕಟ್ಟಿಕೊಂಡವನೊಬ್ಬನಿಗೆ ಹತ್ತಾರು ಸ್ವಾಮೀಜಿಗಳ ಉಪಸ್ಥಿತಿ ಕಸಿವಿಸಿಯನ್ನುಂಟುಮಾಡಬಲ್ಲದು. ಇಂತಹ ಸಾಮರಸ್ಯ ತೀವ್ರ ಮೇಲ್ಮಟ್ಟದ್ದು ಎಂಬ ಕಳವಳ ಉಂಟಾಗಬಹುದು. ಆದರೆ ಇಂತಹ ಸಮ್ಮೇಳನಗಳು ಕೂಡ ಜನಸಾಮಾನ್ಯರಲ್ಲಿ ಜನಪ್ರಿಯ ಮಟ್ಟದಲ್ಲಿ ಭರವಸೆ ತುಂಬಬಲ್ಲವು (ಇಂದಿನ ಮತೀಯ ಧ್ರುವೀಕರಣದಲ್ಲಿ ಶೋಷಣೆಗೆ ಒಳಗಾಗುತ್ತಿರುವವರಿಗೆ) ಮತ್ತು ವಿವೇಕವನ್ನೂ (ದ್ವೇಷ ಸಿದ್ಧಾಂತಕ್ಕೆ ಮರುಳಾಗುತ್ತಿರುವವರಿಗೆ). ಸಮಾಜದಲ್ಲಿ ಒಟ್ಟಾರೆಯಾಗಿ ಒಳಿತಿನ ಚಲನೆಯ ಕಡೆಗೆ ಒಲವಿರುವವರು ಎತ್ತುವ ಆಕ್ಷೇಪಗಳ ಜೊತೆಗೇ, ಅವುಗಳನ್ನೂ ಸಾಧ್ಯವಾದಷ್ಟು ಅಡ್ರೆಸ್ ಮಾಡುವುದರ ಜೊತೆಗೆ, ಈ ಸಹಬಾಳ್ವೆ ಸಮಾವೇಶ ಯಾವ ಗುರಿಯನ್ನು ಇಟ್ಟುಕೊಂಡಿದೆಯೋ ಅದನ್ನು ಸಾಧಿಸಬೇಕಿದೆ. ಆ ಗುರಿ, ಆಳುವ ಪ್ರಭುತ್ವ ಮತ್ತು ಅದರ ಸೈದ್ಧಾಂತಿಕ ಜತೆಗಾರರು ಸೃಷ್ಟಿಸುವ ಒಡಕಿಗೆ, ಧ್ರುವೀಕರಣಕ್ಕೆ ಇಲ್ಲಿನ ಸಾಮಾನ್ಯ ಜನ ಸಮ್ಮತಿಸುವುದಿಲ್ಲವೆಂದು ತೋರಿಸುವುದು. ಅವರ ಗುರಿಯಾಗಿರುವ ಅಲ್ಪಸಂಖ್ಯಾತ ಮುಸ್ಲಿಂ ಮತ್ತು ಇತರ ಸಮುದಾಯಗಳ ಜೊತೆಗೆ ನಾವಿದ್ದೇವೆ ಎಂಬುದನ್ನು ಗಟ್ಟಿಯಾಗಿ ಪ್ರತಿಪಾದಿಸುವುದು ಮತ್ತು ಕೃತಕವಾಗಿ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಲಾಗುತ್ತಿರುವ ಈ ಕೋಮುಗಳ ನಡುವೆ ಒಡನಾಟ, ಪರಸ್ಪರ ಬಳಕೆ ಮುಂದಿನ ದಿನಗಳಲ್ಲಿ ಹೆಚ್ಚಾಗುವಂತೆ ಮಾಡಲು ಕಾರ್ಯಪ್ರವೃತ್ತರಾಗುವುದು. ಇದಕ್ಕಾಗಿ ಎಲ್ಲರ ಒಳಿತಿಗೆ ತುಡಿಯುವ ನಾಡಿನ ಪ್ರಜ್ಞಾವಂತರೆಲ್ಲರೂ ಕೈಜೋಡಿಸಿದಲ್ಲಿ ಕಷ್ಟವಾಗಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...