Homeಅಂಕಣಗಳುಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

ಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

- Advertisement -
- Advertisement -

ಉಡುಪಿಯ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶಕ್ಕೆ ರಂಗ ಸಜ್ಜಾಗಿದೆ. ಸಹಪಂಕ್ತಿ ಭೋಜನವನ್ನು ಇನ್ನೂ ಮೈಗೂಡಿಸಿಕೊಳ್ಳದ, ಆದರೆ ದೇಶದ ರಾಜಕೀಯದಲ್ಲಿ ಅಧಿಕಾರಯುತವಾದ ಸ್ಥಾನ ಹೊಂದಿರುವ ಮಠ ನೆಲೆಸಿರುವ, ಮಡಿಮೈಲಿಗೆಗಳನ್ನು, ತಾರತಮ್ಯವನ್ನು ಸಿದ್ಧಾಂತವನ್ನಾಗಿಸಿ-ತತ್ವಶಾಸ್ತ್ರವನ್ನಾಗಿಸಿ ದೊಡ್ಡಮಟ್ಟದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸೆಕ್ಟ್ ಒಂದು ಪ್ರಭಾವಿಯಾಗಿರುವ, ರಾಜ್ಯದಲ್ಲಿ ಕೋಮು ವಿಷಮತೆಯ ಪ್ರಯೋಗಶಾಲೆಯಾಗಿರುವ ನೆಲದಿಂದ ಇಂತಹ ಸೌಹಾರ್ದತೆ ಸಾರುವ ಸಮಾವೇಶ ಈಗ ಮತ್ತೊಮ್ಮೆ ಚಾಲನೆ ಪಡೆದುಕೊಳ್ಳುತ್ತಿದೆ. ಈಗಿನ ಬಹುಸಂಖ್ಯಾತವಾದದಲ್ಲಿ ಮೂಲೆಗುಂಪಾಗುವ-ದೌರ್ಜನ್ಯಕ್ಕೆ ಒಳಗಾಗುವ ಅಪಾಯ ಎದುರಿಸುತ್ತಿರುವ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಮತಧರ್ಮಗಳ ಕೆಲವು ವರ್ಗಗಳಲ್ಲಿ ಕೂಡ ಅವರವರ ಮತಧರ್ಮದ ಶ್ರೇಷ್ಠತೆಯನ್ನು ಮಾತ್ರ ಪ್ರತಿಪಾದಿಸುವ ವ್ಯಕ್ತಿಗಳು-ಗುಂಪುಗಳು ಇಲ್ಲವೆಂದಲ್ಲ. ಆದರೆ, ಸಮಾನತೆಯ ತಳಹದಿಯಲ್ಲಿ ಹೊಂದಾಣಿಕೆ-ಕೂಡುಬಾಳ್ವೆಯೆಡೆಗೆ ಇಲ್ಲಿಯವರೆಗೂ ಸಾಧಿಸಲು ಸಾಧ್ಯವಾಗಿದ್ದ ಚಲನೆಯನ್ನು ಇಂದು ನೆಲೆಸಿರುವ ದ್ವೇಷದ ರಾಜಕೀಯ ವಾತಾವರಣ ಮಣ್ಣುಮುಕ್ಕಿಸಿ, ಅಲ್ಪಸಂಖ್ಯಾತರನ್ನು ಅನ್ಯರನ್ನಾಗಿಸಿ ಎರಡನೇ ದರ್ಜೆಯ ನಾಗರಿಕರನ್ನಾಗಿಸಲು ಹೊರಟಿರುವಾಗ, ಈ ಸಾಮರಸ್ಯ-ಸಹಬಾಳ್ವೆಯ ಪರಿಕಲ್ಪನೆಗಳಿಗೆ ಸಂದರ್ಭಾನುಸಾರ ವಿಶಾಲ ಅರ್ಥಗಳು ದೊರಕುವುದು ಸಹಜ.

ಸದರಿ ಸಮಾವೇಶದ ಬಗ್ಗೆ ಕೆಲವರು ಎತ್ತಿರುವ ಪ್ರಾಮಾಣಿಕ ಮತ್ತು ಕಾಳಜಿಯ ಪ್ರಶ್ನೆಗಳಿಗೆ ಮತ್ತು ಕುಹಕದ ಪ್ರಶ್ನೆಗಳಿಗೂ ಉತ್ತರಗಳನ್ನು ಕಂಡುಕೊಳ್ಳುವುದರ ಮೂಲಕ ನಮ್ಮ ಗುರಿಯನ್ನು ಹೆಚ್ಚು ಸ್ಪಷ್ಟತೆಯಿಂದ ತಲುಪಲು ಪ್ರಯತ್ನಿಸಬಹುದೇನೋ! ಸಾಮರಸ್ಯದ ಪರಿಕಲ್ಪನೆಯನ್ನೇ ತೆಗೆದುಕೊಂಡರೆ, ಅದನ್ನು ಹಲವು ಸಂದರ್ಭಗಳಲ್ಲಿ ಸಮಾನತೆಯ ವಿರುದ್ಧವಾಗಿ ಪ್ರತಿಪಾದಿಸಿರುವುದನ್ನು ನಾವು ನೋಡಬಹುದು. ಆರ್‌ಎಸ್‌ಎಸ್‌ನ ಸಂಸ್ಥಾಪಕ ಗೋಲ್ವಾಲ್ಕರ್ ಹೇಳುವ ಮಾತು ಹೀಗಿದೆ: “ನಮ್ಮ ಧರ್ಮ ಕಮ್ಯುನಿಸ್ಟರು ಹೇಳುವ ಸಮಾನತ್ವ (ಇಕ್ವಾಲಿಟಿ) ಅಲ್ಲ, ಸಾಮರಸ್ಯ (ಹಾರ್ಮೊನಿ). ಪ್ರತಿಯೊಬ್ಬನೂ ತನ್ನ ಸ್ವಧರ್ಮವನ್ನು (ಅದು ಬಾಂಡಲಿ ಹೊರುವುದಾಗಲೂ, ಕಾರಿನಲ್ಲಿ ಕುಳಿತು ತಿರುಗುವುದಾಗಲೀ) ನಿರ್ವಹಿಸುತ್ತಾ ಹೋದರೆ ಎಲ್ಲವೂ ಪ್ರಶಾಂತವಾಗಿ ಸಾಮರಸ್ಯದಿಂದ ಇರುತ್ತದೆ”. ಹೀಗೆ ಸಾಮರಸ್ಯದ ಕಲ್ಪನೆಯನ್ನು ಈ ನೆಲದ ಮುಖ್ಯ ಗುಣವಾಗಿದ್ದ ತಾರತಮ್ಯವನ್ನು ಸಮರ್ಥಿಸಿಕೊಳ್ಳಲು ಬಳಸಲಾಗಿತ್ತು. ಇಂತಹ ಕೃತಕ ಸಾಮರಸ್ಯವನ್ನು ಇಂದಿಗೂ ಪ್ರತಿಪಾದಿಸುವ ಸಂಘ ಪರಿವಾರದ ಸಿದ್ಧಾಂತಿಗಳಿಗೆ ಬರವೇನಿಲ್ಲ. ಆದರೆ ಸದರಿ ಸಮಾವೇಶ ಸಮಾನತೆಯನ್ನು ಪ್ರತಿಪಾದಿಸುವ, ಜಾತಿ-ಧರ್ಮ ಪ್ರೇರಿತ ತಾರತಮ್ಯವನ್ನು ಹೋಗಲಾಡಿಸುವ ಇರಾದೆ ಹೊಂದಿರುವ ಸಂವಿಧಾನವನ್ನು ತನ್ನ ಒಡಲಲ್ಲಿ ಇರಿಸಿಕೊಂಡಿದೆ. ಕನಿಷ್ಠ ಅಂತಹ ನಂಬಿಕೆಯುಳ್ಳ ಮುಖಂಡರು ಈ ಸಮಾವೇಶದ ಅಂತರಂಗವಾಗಿದ್ದಾರೆ. ಆ ನಿಟ್ಟಿನಲ್ಲಿ ಬಾಹ್ಯ ಪ್ರಾತಿನಿಧ್ಯಕ್ಕೂ ಸಮಾನತೆಯ ಮೂಲಕ ಸಾಮರಸ್ಯ ಕಂಡುಕೊಳ್ಳುವ ಹಾದಿ ಹಿಡಿದಿರುವವರನ್ನು ಒಳಗೊಳ್ಳಲು ಸಮಾವೇಶ ಶ್ರಮಿಸುತ್ತಿದೆ. ಯಾರ ಬಗ್ಗೆ ಅಪಸ್ವರ ಬಂದಿದೆಯೋ ಅಂತಹವರ ಬಗ್ಗೆ ಮರುಚಿಂತನೆ ನಡೆಸುವುದಾಗಿ ಕೂಡ ಸಂಘಟಕರು ವಿನಮ್ರವಾಗಿ ಹೇಳಿದ್ದಾರೆ.

ಇದೇ ನೆಲೆಯಲ್ಲಿ ಏಳುವ ಮತ್ತೊಂದು ಪ್ರಶ್ನೆ, ಹಲವು ಧರ್ಮಗುರುಗಳದ್ದು. ಈ ದೇಶದ ಪ್ರತಿಯೊಬ್ಬ ನಿವಾಸಿಗೂ ತನ್ನ ಇಚ್ಛೆಯ ಧರ್ಮವನ್ನು ಅನುಸರಿಸುವುದಕ್ಕೆ, ಪ್ರಸರಿಸುವುದಕ್ಕೆ ನಮ್ಮ ಸಂವಿಧಾನ ಅವಕಾಶವನ್ನಂತೂ ನೀಡಿದೆ. ಈ ಸಮಯದಲ್ಲಿ ವಿವಿಧ ಜಾತಿ ಮತಗಳಿಗೆ ಸೇರಿದ ಧರ್ಮಗುರುಗಳ ಪಾತ್ರವೇನು? ಎಷ್ಟೋ ಜಾತಿ-ಧರ್ಮಗುರುಗಳು ವೇದಿಕೆಗೆ ತಕ್ಕಂತೆ ಮಾತನಾಡುವವರು. ಬಾಬ್ರಿಮಸೀದಿ ಕೆಡವಿದ ಜಾಗದಲ್ಲಿ ರಾಮಮಂದಿರ ಕಟ್ಟಲೇಬೆಕೆಂದು ಕರೆನೀಡುವ, ಮತ್ತೊಂದು ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ರಂಗುರಂಗಾಗಿ ಬಣ್ಣಿಸುವ ಸ್ವಾಮಿಗಳು ಹಲವರು ಇದ್ದಾರೆ. ಸಾಮಾನ್ಯವಾಗಿ ಯಾವುದೇ ಜಾತಿ ಮತಗಳ ಧರ್ಮಗುರುಗಳು ಯಥಾಸ್ಥಿತಿಗೆ ಪುಷ್ಠಿ ನೀಡುವವರು. ಜಾತಿ-ಧರ್ಮ ಪಾರಮ್ಯವನ್ನು ಮೆರೆಯುವವರು. ಪ್ರಗತಿಯನ್ನು ತುಸು ಅನುಸರಿಸುವವರು ಕೆಲವರು ಇದ್ದಾರಾದರೂ, ಅವರ ತರಬೇತಿಯ ಕಾರಣಕ್ಕೆ, ತಮ್ಮ ಪರಂಪರೆಯನ್ನು ಸುಲಭವಾಗಿ ತ್ಯಜಿಸಲಾಗದ ಅವರ ಕೆಲಸದ ಸ್ವಭಾವದ ಕಾರಣಕ್ಕೆ ಅವರು ಎಲ್ಲ ಜನರ ಒಳಿತಿನ ಕಾಳಜಿಗಾಗಿ ದುಡಿಯಲಾರರು; ಪ್ರತಿ ಅಧಿಕಾರ ಕೇಂದ್ರಗಳನ್ನು ಪ್ರಶ್ನಿಸುವ ಇಂಟಲೆಕ್ಚುಯಲ್ ಪಾತ್ರವನ್ನು ಅವರು ವಹಿಸಿರುವುದು ವಿರಳಾತಿ ವಿರಳ. ಆದರೂ ಜನಪ್ರಿಯ ವೇದಿಕೆಗಳನ್ನು ಸೃಷ್ಟಿಸುವಾಗ, ಹಲವು ರೀತಿಯಲ್ಲಿ ಜನರನ್ನು ಪ್ರಭಾವಿಸಬಲ್ಲ ಜನಪ್ರಿಯ ವ್ಯಕ್ತಿಗಳನ್ನು ಕರೆತರುವುದೂ ಮುಖ್ಯವಾದೀತು. ಆ ಮುಖಾಂತರ ಸಹಬಾಳ್ವೆಯ ಪ್ರಾಥಮಿಕ ಪಾಠಗಳನ್ನು ಈ ಕರಾಳ ದಿನಗಳಲ್ಲಿ ಮತ್ತೆಮತ್ತೆ ನೆನಪಿಸುವ ಕೆಲಸಕ್ಕೆ ಸಮಾವೇಶ ಮುಂದಾಗಬಹುದು.

ಇಂದು ಯಾವುದೇ ಸುಳ್ಳು ಸಮರ್ಥನೆಗಳೂ ಬೇಕಾಗದೆ, ಸಮಾಜದಲ್ಲಿ ಕೋಮುಗಳ ನಡುವೆ ದ್ವೇಷ ಮೂಡಿಸಲು ಸಾಧ್ಯವಾಗುತ್ತಿರುವಂತಹ ಸನ್ನಿವೇಶದಲ್ಲಿ, ಎಲ್ಲ ಆಯಾಮಗಳಲ್ಲಿ ’ಪರ್ಫೆಕ್ಟ್’ ಅಲ್ಲದೆ ಇರಬಹುದಾದರೂ ಜನಪ್ರಿಯ ಸಂಸ್ಕೃತಿ ಮಾದರಿಯ ಚಿಂತನೆಗಳನ್ನೂ ಹರಿದುಬಿಡಬೇಕಾದ ತುರ್ತಿನಲ್ಲಿ ನಾವಿದ್ದೇವೆ. ಆ ನಿಟ್ಟಿನಲ್ಲಿ ಪಾರ್ಕ್‌ಗಳಾಗಲೀ, ಸಿನಿಮಾ ಮಂದಿರಗಳಾಗಲೀ, ಬೀಚ್ ಇನ್ನಿತರ ಸಾರ್ವಜನಿಕ ಪ್ರದೇಶಗಳು ಸೆಕ್ಯುಲರ್ ಆದ ಚಹರೆಯನ್ನು ಹೊಂದಿವೆ ಎನ್ನುವ ಮಾತುಗಳನ್ನು ಪದೇಪದೆ ನೆನಪಿಸಬೇಕಾಗುತ್ತದೆ. ಊರಹಬ್ಬಗಳು ಇಂದಿಗೂ ಕಟ್ಟಕಡೆಯ ದಮನಿತನನ್ನು ಒಳಗೊಳ್ಳದೆ ಹೋಗಿರುವ, ದೇವಸ್ಥಾನ ಪ್ರವೇಶಕ್ಕೆ ಇನ್ನೂ ಮುಕ್ತ ಅವಕಾಶ ನೀಡದಿರುವ ನೀಚ ತರತಮವನ್ನು ಮರೆಯದೆಯೂ, ಅಂತಹ ಹಬ್ಬಗಳಲ್ಲಿ ಹಲವು ಕೋಮುಗಳು ಸ್ವಲ್ಪಮಟ್ಟಿಗಾದರೂ ತರತಮತೆಯನ್ನು ತಗ್ಗಿಸಿಕೊಂಡು ಕೂಡಿ ಸಂಭ್ರಮಿಸುವ ಸಂಗತಿಯನ್ನು ಗುರುತಿಸಬೇಕಾಗಿದೆ ಅಲ್ಲವೇ? ಅಲ್ಲಿಂದ ಕನಿಷ್ಠ ಪಕ್ಷ ಇನ್ನೂ ಹಿಂದಕ್ಕೆ ಚಲಿಸದಂತೆ, ಇನ್ನಷ್ಟು ಪ್ರಗತಿಯತ್ತ ದಾಪುಗಾಲು ಇರಿಸಲು ಅನುವಾಗುವಂತೆ ಕೆಲಸಗಳಾಗಬೇಕಿವೆ.

ಇದೇ ಹಿನ್ನೆಲೆಯಲ್ಲಿ ಉಡುಪಿಯ ಸಮಾವೇಶವನ್ನೂ ಕಾಣಬಹುದೇ? ವೈಚಾರಿಕತೆಯಿಂದ ಜೀವನ ದೃಷ್ಟಿಯನ್ನು ಕಟ್ಟಿಕೊಂಡವನೊಬ್ಬನಿಗೆ ಹತ್ತಾರು ಸ್ವಾಮೀಜಿಗಳ ಉಪಸ್ಥಿತಿ ಕಸಿವಿಸಿಯನ್ನುಂಟುಮಾಡಬಲ್ಲದು. ಇಂತಹ ಸಾಮರಸ್ಯ ತೀವ್ರ ಮೇಲ್ಮಟ್ಟದ್ದು ಎಂಬ ಕಳವಳ ಉಂಟಾಗಬಹುದು. ಆದರೆ ಇಂತಹ ಸಮ್ಮೇಳನಗಳು ಕೂಡ ಜನಸಾಮಾನ್ಯರಲ್ಲಿ ಜನಪ್ರಿಯ ಮಟ್ಟದಲ್ಲಿ ಭರವಸೆ ತುಂಬಬಲ್ಲವು (ಇಂದಿನ ಮತೀಯ ಧ್ರುವೀಕರಣದಲ್ಲಿ ಶೋಷಣೆಗೆ ಒಳಗಾಗುತ್ತಿರುವವರಿಗೆ) ಮತ್ತು ವಿವೇಕವನ್ನೂ (ದ್ವೇಷ ಸಿದ್ಧಾಂತಕ್ಕೆ ಮರುಳಾಗುತ್ತಿರುವವರಿಗೆ). ಸಮಾಜದಲ್ಲಿ ಒಟ್ಟಾರೆಯಾಗಿ ಒಳಿತಿನ ಚಲನೆಯ ಕಡೆಗೆ ಒಲವಿರುವವರು ಎತ್ತುವ ಆಕ್ಷೇಪಗಳ ಜೊತೆಗೇ, ಅವುಗಳನ್ನೂ ಸಾಧ್ಯವಾದಷ್ಟು ಅಡ್ರೆಸ್ ಮಾಡುವುದರ ಜೊತೆಗೆ, ಈ ಸಹಬಾಳ್ವೆ ಸಮಾವೇಶ ಯಾವ ಗುರಿಯನ್ನು ಇಟ್ಟುಕೊಂಡಿದೆಯೋ ಅದನ್ನು ಸಾಧಿಸಬೇಕಿದೆ. ಆ ಗುರಿ, ಆಳುವ ಪ್ರಭುತ್ವ ಮತ್ತು ಅದರ ಸೈದ್ಧಾಂತಿಕ ಜತೆಗಾರರು ಸೃಷ್ಟಿಸುವ ಒಡಕಿಗೆ, ಧ್ರುವೀಕರಣಕ್ಕೆ ಇಲ್ಲಿನ ಸಾಮಾನ್ಯ ಜನ ಸಮ್ಮತಿಸುವುದಿಲ್ಲವೆಂದು ತೋರಿಸುವುದು. ಅವರ ಗುರಿಯಾಗಿರುವ ಅಲ್ಪಸಂಖ್ಯಾತ ಮುಸ್ಲಿಂ ಮತ್ತು ಇತರ ಸಮುದಾಯಗಳ ಜೊತೆಗೆ ನಾವಿದ್ದೇವೆ ಎಂಬುದನ್ನು ಗಟ್ಟಿಯಾಗಿ ಪ್ರತಿಪಾದಿಸುವುದು ಮತ್ತು ಕೃತಕವಾಗಿ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಲಾಗುತ್ತಿರುವ ಈ ಕೋಮುಗಳ ನಡುವೆ ಒಡನಾಟ, ಪರಸ್ಪರ ಬಳಕೆ ಮುಂದಿನ ದಿನಗಳಲ್ಲಿ ಹೆಚ್ಚಾಗುವಂತೆ ಮಾಡಲು ಕಾರ್ಯಪ್ರವೃತ್ತರಾಗುವುದು. ಇದಕ್ಕಾಗಿ ಎಲ್ಲರ ಒಳಿತಿಗೆ ತುಡಿಯುವ ನಾಡಿನ ಪ್ರಜ್ಞಾವಂತರೆಲ್ಲರೂ ಕೈಜೋಡಿಸಿದಲ್ಲಿ ಕಷ್ಟವಾಗಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...