Homeಅಂಕಣಗಳುಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

ಸಹಬಾಳ್ವೆ-ಸಾಮರಸ್ಯ; ಸ್ಪಷ್ಟತೆಯ ಹಾದಿಯಲ್ಲಿ ಸಂಕಷ್ಟದ ಕಲ್ಲುಮುಳ್ಳುಗಳು

- Advertisement -
- Advertisement -

ಉಡುಪಿಯ ಸಾಮರಸ್ಯ ನಡಿಗೆ-ಸಹಬಾಳ್ವೆ ಸಮಾವೇಶಕ್ಕೆ ರಂಗ ಸಜ್ಜಾಗಿದೆ. ಸಹಪಂಕ್ತಿ ಭೋಜನವನ್ನು ಇನ್ನೂ ಮೈಗೂಡಿಸಿಕೊಳ್ಳದ, ಆದರೆ ದೇಶದ ರಾಜಕೀಯದಲ್ಲಿ ಅಧಿಕಾರಯುತವಾದ ಸ್ಥಾನ ಹೊಂದಿರುವ ಮಠ ನೆಲೆಸಿರುವ, ಮಡಿಮೈಲಿಗೆಗಳನ್ನು, ತಾರತಮ್ಯವನ್ನು ಸಿದ್ಧಾಂತವನ್ನಾಗಿಸಿ-ತತ್ವಶಾಸ್ತ್ರವನ್ನಾಗಿಸಿ ದೊಡ್ಡಮಟ್ಟದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸೆಕ್ಟ್ ಒಂದು ಪ್ರಭಾವಿಯಾಗಿರುವ, ರಾಜ್ಯದಲ್ಲಿ ಕೋಮು ವಿಷಮತೆಯ ಪ್ರಯೋಗಶಾಲೆಯಾಗಿರುವ ನೆಲದಿಂದ ಇಂತಹ ಸೌಹಾರ್ದತೆ ಸಾರುವ ಸಮಾವೇಶ ಈಗ ಮತ್ತೊಮ್ಮೆ ಚಾಲನೆ ಪಡೆದುಕೊಳ್ಳುತ್ತಿದೆ. ಈಗಿನ ಬಹುಸಂಖ್ಯಾತವಾದದಲ್ಲಿ ಮೂಲೆಗುಂಪಾಗುವ-ದೌರ್ಜನ್ಯಕ್ಕೆ ಒಳಗಾಗುವ ಅಪಾಯ ಎದುರಿಸುತ್ತಿರುವ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಮತಧರ್ಮಗಳ ಕೆಲವು ವರ್ಗಗಳಲ್ಲಿ ಕೂಡ ಅವರವರ ಮತಧರ್ಮದ ಶ್ರೇಷ್ಠತೆಯನ್ನು ಮಾತ್ರ ಪ್ರತಿಪಾದಿಸುವ ವ್ಯಕ್ತಿಗಳು-ಗುಂಪುಗಳು ಇಲ್ಲವೆಂದಲ್ಲ. ಆದರೆ, ಸಮಾನತೆಯ ತಳಹದಿಯಲ್ಲಿ ಹೊಂದಾಣಿಕೆ-ಕೂಡುಬಾಳ್ವೆಯೆಡೆಗೆ ಇಲ್ಲಿಯವರೆಗೂ ಸಾಧಿಸಲು ಸಾಧ್ಯವಾಗಿದ್ದ ಚಲನೆಯನ್ನು ಇಂದು ನೆಲೆಸಿರುವ ದ್ವೇಷದ ರಾಜಕೀಯ ವಾತಾವರಣ ಮಣ್ಣುಮುಕ್ಕಿಸಿ, ಅಲ್ಪಸಂಖ್ಯಾತರನ್ನು ಅನ್ಯರನ್ನಾಗಿಸಿ ಎರಡನೇ ದರ್ಜೆಯ ನಾಗರಿಕರನ್ನಾಗಿಸಲು ಹೊರಟಿರುವಾಗ, ಈ ಸಾಮರಸ್ಯ-ಸಹಬಾಳ್ವೆಯ ಪರಿಕಲ್ಪನೆಗಳಿಗೆ ಸಂದರ್ಭಾನುಸಾರ ವಿಶಾಲ ಅರ್ಥಗಳು ದೊರಕುವುದು ಸಹಜ.

ಸದರಿ ಸಮಾವೇಶದ ಬಗ್ಗೆ ಕೆಲವರು ಎತ್ತಿರುವ ಪ್ರಾಮಾಣಿಕ ಮತ್ತು ಕಾಳಜಿಯ ಪ್ರಶ್ನೆಗಳಿಗೆ ಮತ್ತು ಕುಹಕದ ಪ್ರಶ್ನೆಗಳಿಗೂ ಉತ್ತರಗಳನ್ನು ಕಂಡುಕೊಳ್ಳುವುದರ ಮೂಲಕ ನಮ್ಮ ಗುರಿಯನ್ನು ಹೆಚ್ಚು ಸ್ಪಷ್ಟತೆಯಿಂದ ತಲುಪಲು ಪ್ರಯತ್ನಿಸಬಹುದೇನೋ! ಸಾಮರಸ್ಯದ ಪರಿಕಲ್ಪನೆಯನ್ನೇ ತೆಗೆದುಕೊಂಡರೆ, ಅದನ್ನು ಹಲವು ಸಂದರ್ಭಗಳಲ್ಲಿ ಸಮಾನತೆಯ ವಿರುದ್ಧವಾಗಿ ಪ್ರತಿಪಾದಿಸಿರುವುದನ್ನು ನಾವು ನೋಡಬಹುದು. ಆರ್‌ಎಸ್‌ಎಸ್‌ನ ಸಂಸ್ಥಾಪಕ ಗೋಲ್ವಾಲ್ಕರ್ ಹೇಳುವ ಮಾತು ಹೀಗಿದೆ: “ನಮ್ಮ ಧರ್ಮ ಕಮ್ಯುನಿಸ್ಟರು ಹೇಳುವ ಸಮಾನತ್ವ (ಇಕ್ವಾಲಿಟಿ) ಅಲ್ಲ, ಸಾಮರಸ್ಯ (ಹಾರ್ಮೊನಿ). ಪ್ರತಿಯೊಬ್ಬನೂ ತನ್ನ ಸ್ವಧರ್ಮವನ್ನು (ಅದು ಬಾಂಡಲಿ ಹೊರುವುದಾಗಲೂ, ಕಾರಿನಲ್ಲಿ ಕುಳಿತು ತಿರುಗುವುದಾಗಲೀ) ನಿರ್ವಹಿಸುತ್ತಾ ಹೋದರೆ ಎಲ್ಲವೂ ಪ್ರಶಾಂತವಾಗಿ ಸಾಮರಸ್ಯದಿಂದ ಇರುತ್ತದೆ”. ಹೀಗೆ ಸಾಮರಸ್ಯದ ಕಲ್ಪನೆಯನ್ನು ಈ ನೆಲದ ಮುಖ್ಯ ಗುಣವಾಗಿದ್ದ ತಾರತಮ್ಯವನ್ನು ಸಮರ್ಥಿಸಿಕೊಳ್ಳಲು ಬಳಸಲಾಗಿತ್ತು. ಇಂತಹ ಕೃತಕ ಸಾಮರಸ್ಯವನ್ನು ಇಂದಿಗೂ ಪ್ರತಿಪಾದಿಸುವ ಸಂಘ ಪರಿವಾರದ ಸಿದ್ಧಾಂತಿಗಳಿಗೆ ಬರವೇನಿಲ್ಲ. ಆದರೆ ಸದರಿ ಸಮಾವೇಶ ಸಮಾನತೆಯನ್ನು ಪ್ರತಿಪಾದಿಸುವ, ಜಾತಿ-ಧರ್ಮ ಪ್ರೇರಿತ ತಾರತಮ್ಯವನ್ನು ಹೋಗಲಾಡಿಸುವ ಇರಾದೆ ಹೊಂದಿರುವ ಸಂವಿಧಾನವನ್ನು ತನ್ನ ಒಡಲಲ್ಲಿ ಇರಿಸಿಕೊಂಡಿದೆ. ಕನಿಷ್ಠ ಅಂತಹ ನಂಬಿಕೆಯುಳ್ಳ ಮುಖಂಡರು ಈ ಸಮಾವೇಶದ ಅಂತರಂಗವಾಗಿದ್ದಾರೆ. ಆ ನಿಟ್ಟಿನಲ್ಲಿ ಬಾಹ್ಯ ಪ್ರಾತಿನಿಧ್ಯಕ್ಕೂ ಸಮಾನತೆಯ ಮೂಲಕ ಸಾಮರಸ್ಯ ಕಂಡುಕೊಳ್ಳುವ ಹಾದಿ ಹಿಡಿದಿರುವವರನ್ನು ಒಳಗೊಳ್ಳಲು ಸಮಾವೇಶ ಶ್ರಮಿಸುತ್ತಿದೆ. ಯಾರ ಬಗ್ಗೆ ಅಪಸ್ವರ ಬಂದಿದೆಯೋ ಅಂತಹವರ ಬಗ್ಗೆ ಮರುಚಿಂತನೆ ನಡೆಸುವುದಾಗಿ ಕೂಡ ಸಂಘಟಕರು ವಿನಮ್ರವಾಗಿ ಹೇಳಿದ್ದಾರೆ.

ಇದೇ ನೆಲೆಯಲ್ಲಿ ಏಳುವ ಮತ್ತೊಂದು ಪ್ರಶ್ನೆ, ಹಲವು ಧರ್ಮಗುರುಗಳದ್ದು. ಈ ದೇಶದ ಪ್ರತಿಯೊಬ್ಬ ನಿವಾಸಿಗೂ ತನ್ನ ಇಚ್ಛೆಯ ಧರ್ಮವನ್ನು ಅನುಸರಿಸುವುದಕ್ಕೆ, ಪ್ರಸರಿಸುವುದಕ್ಕೆ ನಮ್ಮ ಸಂವಿಧಾನ ಅವಕಾಶವನ್ನಂತೂ ನೀಡಿದೆ. ಈ ಸಮಯದಲ್ಲಿ ವಿವಿಧ ಜಾತಿ ಮತಗಳಿಗೆ ಸೇರಿದ ಧರ್ಮಗುರುಗಳ ಪಾತ್ರವೇನು? ಎಷ್ಟೋ ಜಾತಿ-ಧರ್ಮಗುರುಗಳು ವೇದಿಕೆಗೆ ತಕ್ಕಂತೆ ಮಾತನಾಡುವವರು. ಬಾಬ್ರಿಮಸೀದಿ ಕೆಡವಿದ ಜಾಗದಲ್ಲಿ ರಾಮಮಂದಿರ ಕಟ್ಟಲೇಬೆಕೆಂದು ಕರೆನೀಡುವ, ಮತ್ತೊಂದು ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ರಂಗುರಂಗಾಗಿ ಬಣ್ಣಿಸುವ ಸ್ವಾಮಿಗಳು ಹಲವರು ಇದ್ದಾರೆ. ಸಾಮಾನ್ಯವಾಗಿ ಯಾವುದೇ ಜಾತಿ ಮತಗಳ ಧರ್ಮಗುರುಗಳು ಯಥಾಸ್ಥಿತಿಗೆ ಪುಷ್ಠಿ ನೀಡುವವರು. ಜಾತಿ-ಧರ್ಮ ಪಾರಮ್ಯವನ್ನು ಮೆರೆಯುವವರು. ಪ್ರಗತಿಯನ್ನು ತುಸು ಅನುಸರಿಸುವವರು ಕೆಲವರು ಇದ್ದಾರಾದರೂ, ಅವರ ತರಬೇತಿಯ ಕಾರಣಕ್ಕೆ, ತಮ್ಮ ಪರಂಪರೆಯನ್ನು ಸುಲಭವಾಗಿ ತ್ಯಜಿಸಲಾಗದ ಅವರ ಕೆಲಸದ ಸ್ವಭಾವದ ಕಾರಣಕ್ಕೆ ಅವರು ಎಲ್ಲ ಜನರ ಒಳಿತಿನ ಕಾಳಜಿಗಾಗಿ ದುಡಿಯಲಾರರು; ಪ್ರತಿ ಅಧಿಕಾರ ಕೇಂದ್ರಗಳನ್ನು ಪ್ರಶ್ನಿಸುವ ಇಂಟಲೆಕ್ಚುಯಲ್ ಪಾತ್ರವನ್ನು ಅವರು ವಹಿಸಿರುವುದು ವಿರಳಾತಿ ವಿರಳ. ಆದರೂ ಜನಪ್ರಿಯ ವೇದಿಕೆಗಳನ್ನು ಸೃಷ್ಟಿಸುವಾಗ, ಹಲವು ರೀತಿಯಲ್ಲಿ ಜನರನ್ನು ಪ್ರಭಾವಿಸಬಲ್ಲ ಜನಪ್ರಿಯ ವ್ಯಕ್ತಿಗಳನ್ನು ಕರೆತರುವುದೂ ಮುಖ್ಯವಾದೀತು. ಆ ಮುಖಾಂತರ ಸಹಬಾಳ್ವೆಯ ಪ್ರಾಥಮಿಕ ಪಾಠಗಳನ್ನು ಈ ಕರಾಳ ದಿನಗಳಲ್ಲಿ ಮತ್ತೆಮತ್ತೆ ನೆನಪಿಸುವ ಕೆಲಸಕ್ಕೆ ಸಮಾವೇಶ ಮುಂದಾಗಬಹುದು.

ಇಂದು ಯಾವುದೇ ಸುಳ್ಳು ಸಮರ್ಥನೆಗಳೂ ಬೇಕಾಗದೆ, ಸಮಾಜದಲ್ಲಿ ಕೋಮುಗಳ ನಡುವೆ ದ್ವೇಷ ಮೂಡಿಸಲು ಸಾಧ್ಯವಾಗುತ್ತಿರುವಂತಹ ಸನ್ನಿವೇಶದಲ್ಲಿ, ಎಲ್ಲ ಆಯಾಮಗಳಲ್ಲಿ ’ಪರ್ಫೆಕ್ಟ್’ ಅಲ್ಲದೆ ಇರಬಹುದಾದರೂ ಜನಪ್ರಿಯ ಸಂಸ್ಕೃತಿ ಮಾದರಿಯ ಚಿಂತನೆಗಳನ್ನೂ ಹರಿದುಬಿಡಬೇಕಾದ ತುರ್ತಿನಲ್ಲಿ ನಾವಿದ್ದೇವೆ. ಆ ನಿಟ್ಟಿನಲ್ಲಿ ಪಾರ್ಕ್‌ಗಳಾಗಲೀ, ಸಿನಿಮಾ ಮಂದಿರಗಳಾಗಲೀ, ಬೀಚ್ ಇನ್ನಿತರ ಸಾರ್ವಜನಿಕ ಪ್ರದೇಶಗಳು ಸೆಕ್ಯುಲರ್ ಆದ ಚಹರೆಯನ್ನು ಹೊಂದಿವೆ ಎನ್ನುವ ಮಾತುಗಳನ್ನು ಪದೇಪದೆ ನೆನಪಿಸಬೇಕಾಗುತ್ತದೆ. ಊರಹಬ್ಬಗಳು ಇಂದಿಗೂ ಕಟ್ಟಕಡೆಯ ದಮನಿತನನ್ನು ಒಳಗೊಳ್ಳದೆ ಹೋಗಿರುವ, ದೇವಸ್ಥಾನ ಪ್ರವೇಶಕ್ಕೆ ಇನ್ನೂ ಮುಕ್ತ ಅವಕಾಶ ನೀಡದಿರುವ ನೀಚ ತರತಮವನ್ನು ಮರೆಯದೆಯೂ, ಅಂತಹ ಹಬ್ಬಗಳಲ್ಲಿ ಹಲವು ಕೋಮುಗಳು ಸ್ವಲ್ಪಮಟ್ಟಿಗಾದರೂ ತರತಮತೆಯನ್ನು ತಗ್ಗಿಸಿಕೊಂಡು ಕೂಡಿ ಸಂಭ್ರಮಿಸುವ ಸಂಗತಿಯನ್ನು ಗುರುತಿಸಬೇಕಾಗಿದೆ ಅಲ್ಲವೇ? ಅಲ್ಲಿಂದ ಕನಿಷ್ಠ ಪಕ್ಷ ಇನ್ನೂ ಹಿಂದಕ್ಕೆ ಚಲಿಸದಂತೆ, ಇನ್ನಷ್ಟು ಪ್ರಗತಿಯತ್ತ ದಾಪುಗಾಲು ಇರಿಸಲು ಅನುವಾಗುವಂತೆ ಕೆಲಸಗಳಾಗಬೇಕಿವೆ.

ಇದೇ ಹಿನ್ನೆಲೆಯಲ್ಲಿ ಉಡುಪಿಯ ಸಮಾವೇಶವನ್ನೂ ಕಾಣಬಹುದೇ? ವೈಚಾರಿಕತೆಯಿಂದ ಜೀವನ ದೃಷ್ಟಿಯನ್ನು ಕಟ್ಟಿಕೊಂಡವನೊಬ್ಬನಿಗೆ ಹತ್ತಾರು ಸ್ವಾಮೀಜಿಗಳ ಉಪಸ್ಥಿತಿ ಕಸಿವಿಸಿಯನ್ನುಂಟುಮಾಡಬಲ್ಲದು. ಇಂತಹ ಸಾಮರಸ್ಯ ತೀವ್ರ ಮೇಲ್ಮಟ್ಟದ್ದು ಎಂಬ ಕಳವಳ ಉಂಟಾಗಬಹುದು. ಆದರೆ ಇಂತಹ ಸಮ್ಮೇಳನಗಳು ಕೂಡ ಜನಸಾಮಾನ್ಯರಲ್ಲಿ ಜನಪ್ರಿಯ ಮಟ್ಟದಲ್ಲಿ ಭರವಸೆ ತುಂಬಬಲ್ಲವು (ಇಂದಿನ ಮತೀಯ ಧ್ರುವೀಕರಣದಲ್ಲಿ ಶೋಷಣೆಗೆ ಒಳಗಾಗುತ್ತಿರುವವರಿಗೆ) ಮತ್ತು ವಿವೇಕವನ್ನೂ (ದ್ವೇಷ ಸಿದ್ಧಾಂತಕ್ಕೆ ಮರುಳಾಗುತ್ತಿರುವವರಿಗೆ). ಸಮಾಜದಲ್ಲಿ ಒಟ್ಟಾರೆಯಾಗಿ ಒಳಿತಿನ ಚಲನೆಯ ಕಡೆಗೆ ಒಲವಿರುವವರು ಎತ್ತುವ ಆಕ್ಷೇಪಗಳ ಜೊತೆಗೇ, ಅವುಗಳನ್ನೂ ಸಾಧ್ಯವಾದಷ್ಟು ಅಡ್ರೆಸ್ ಮಾಡುವುದರ ಜೊತೆಗೆ, ಈ ಸಹಬಾಳ್ವೆ ಸಮಾವೇಶ ಯಾವ ಗುರಿಯನ್ನು ಇಟ್ಟುಕೊಂಡಿದೆಯೋ ಅದನ್ನು ಸಾಧಿಸಬೇಕಿದೆ. ಆ ಗುರಿ, ಆಳುವ ಪ್ರಭುತ್ವ ಮತ್ತು ಅದರ ಸೈದ್ಧಾಂತಿಕ ಜತೆಗಾರರು ಸೃಷ್ಟಿಸುವ ಒಡಕಿಗೆ, ಧ್ರುವೀಕರಣಕ್ಕೆ ಇಲ್ಲಿನ ಸಾಮಾನ್ಯ ಜನ ಸಮ್ಮತಿಸುವುದಿಲ್ಲವೆಂದು ತೋರಿಸುವುದು. ಅವರ ಗುರಿಯಾಗಿರುವ ಅಲ್ಪಸಂಖ್ಯಾತ ಮುಸ್ಲಿಂ ಮತ್ತು ಇತರ ಸಮುದಾಯಗಳ ಜೊತೆಗೆ ನಾವಿದ್ದೇವೆ ಎಂಬುದನ್ನು ಗಟ್ಟಿಯಾಗಿ ಪ್ರತಿಪಾದಿಸುವುದು ಮತ್ತು ಕೃತಕವಾಗಿ ವಿರುದ್ಧ ದಿಕ್ಕಿನಲ್ಲಿ ನಿಲ್ಲಿಸಲಾಗುತ್ತಿರುವ ಈ ಕೋಮುಗಳ ನಡುವೆ ಒಡನಾಟ, ಪರಸ್ಪರ ಬಳಕೆ ಮುಂದಿನ ದಿನಗಳಲ್ಲಿ ಹೆಚ್ಚಾಗುವಂತೆ ಮಾಡಲು ಕಾರ್ಯಪ್ರವೃತ್ತರಾಗುವುದು. ಇದಕ್ಕಾಗಿ ಎಲ್ಲರ ಒಳಿತಿಗೆ ತುಡಿಯುವ ನಾಡಿನ ಪ್ರಜ್ಞಾವಂತರೆಲ್ಲರೂ ಕೈಜೋಡಿಸಿದಲ್ಲಿ ಕಷ್ಟವಾಗಲಾರದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಪೆದ್ದನಹಳ್ಳಿ ದಲಿತರ ಹತ್ಯೆ ಪ್ರಕರಣ: ಅನುಮಾನಕ್ಕೆ ಆಸ್ಪದ ನೀಡಿದ ತನಿಖಾಧಿಕಾರಿಗಳ ಜಾತಿ, ಹಿನ್ನೆಲೆ; ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...