Homeಮುಖಪುಟಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌...

ಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌…

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ ಆಪ್‌ನ ಅರವಿಂದ್‌ ಕೇಜ್ರಿವಾಲ್‌ಗೆ ದೇಶಾದ್ಯಂತ ಹಲವು ಗಣ್ಯರು ಅಭಿನಂದನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಪ್ರಶಂಸಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ: ದೆಹಲಿ ವಿಧಾನಸಭಾ ಚುನಾವಣೆಯ ಜಯಕ್ಕಾಗಿ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಅಭಿನಂದನೆಗಳು. ದೆಹಲಿಯ ಜನರ ಆಕಾಂಕ್ಷೆಗಳನ್ನು ಈಡೇರಿಸಲಿ ಎಂದು ಹಾರೈಸುತ್ತೇನೆ.

ರಾಹುಲ್‌ ಗಾಂಧಿ: ದೆಹಲಿ ವಿಧಾನಸಭೆಯಲ್ಲಿ ಜಯಗಳಿಸಿದ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಶುಭಾಶಯಗಳು ಮತ್ತು ಅಭಿನಂದನೆಗಳು.

ಎಚ್‌.ಡಿ ದೇವೇಗೌಡ: ಈ ಗೆಲುವು “ಕೋಮು ಧ್ರುವೀಕರಣದ ಹತಾಶ ಕೃತ್ಯಗಳು ಸೀಮಿತ ಕರೆನ್ಸಿಯನ್ನು ಹೊಂದಿವೆ” ಎಂದು ಭಾರತದ ಉಳಿದ ಭಾಗಗಳಿಗೆ ಮತ್ತೊಮ್ಮೆ ಭರವಸೆ ನೀಡುತ್ತದೆ. ನೀವು ಈ ಗೆಲುವಿಗೆ ಸಮೃದ್ಧವಾಗಿ ಅರ್ಹರಾಗಿದ್ದೀರಿ. ಅಭಿವೃದ್ಧಿಯತ್ತ ನಿಮ್ಮ ಗಮನವು ಅಪಾರವಾಗಿದೆ ಎಂಬುದು ಭಾರತೀಯ ರಾಜಕಾರಣದಲ್ಲಿ ಗಮನಾರ್ಹವಾದ ಸಂಕೇತವಾಗಿದೆ.

ಮಮತಾ ಬ್ಯಾನರ್ಜಿ: ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅಭಿವೃದ್ಧಿ ಮಾತ್ರ ಕೆಲಸ ಮಾಡುತ್ತದೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಅನ್ನು ತಿರಸ್ಕರಿಸಲಾಗುವುದು. ದೆಹಲಿ ಫಲಿತಾಂಶಗಳನ್ನು ನೋಡಿದರೆ ಆಮ್ ಆದ್ಮಿ ಪಕ್ಷವು ಮತ್ತೊಮ್ಮೆ ಬಹುಮತದೊಂದಿಗೆ ಗೆಲ್ಲುವುದು ಸ್ಪಷ್ಟವಾಗಿದೆ. ದ್ವೇಷದ ಮಾತು ಮತ್ತು ವಿಭಜಕ ರಾಜಕಾರಣ ಮಾಡುವವರಿಗಗೆ ಒಂದು ಮಾತು ಹೇಳಲು ಬಯಸುತ್ತೇನೆ. ಕೊಟ್ಟ ಭರವಸೆಗಳನ್ನು ಪೂರೈಸುವವರು ಮಾತ್ರ ಗೌರವಿಸಲ್ಪಡುತ್ತಾರೆ.

ನವೀನ್‌ ಪಟ್ನಾಯಕ್‌: ದೆಹಲಿ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಅರವಿಂದ್‌ ಕೇಜ್ರಿವಾಲ್ ಮತ್ತು  ಆಮ್ ಆದ್ಮಿ ಪಾರ್ಟಿಗೆ ಅಭಿನಂದನೆಗಳು. ಅವರ ಯಶಸ್ವಿ ಅಧಿಕಾರಾವಧಿಗೆ ಶುಭಾಶಯಗಳು.

ಸಿದ್ದರಾಮಯ್ಯ: ದೆಹಲಿ ಚುನಾವಣೆಯನ್ನು ಗೆದ್ದ ಆಮ್ ಆದ್ಮಿ‌ ಪಕ್ಷದ ನಾಯಕ‌ ಅರವಿಂದ ಕೇಜ್ರಿವಾಲ್‌ ಅವರಿಗೆ ಅಭಿನಂದನೆಗಳು. ಅಭಿವೃದ್ಧಿ ಅಜೆಂಡಾದ ಜೊತೆಗೆ ಸಾಮಾಜಿಕ ಬದಲಾವಣೆಯ‌ ಅಜೆಂಡಾದ ಬಗ್ಗೆಯೂ‌ ಅವರ ಮನಸ್ಸು ಮುಕ್ತವಾಗಿರಲಿ ಎನ್ನುವುದು ನನ್ನ ನಮ್ರ ಸಲಹೆ.

ರಾಜನಾಥ್‌ ಸಿಂಗ್‌: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷವನ್ನು ನಾನು ಅಭಿನಂದಿಸುತ್ತೇನೆ.

ಅಲ್ಲದೇ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಾಂತರ ಜನ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷಕ್ಕೆ ಶುಭ ಹಾರೈಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...