Homeಮುಖಪುಟಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌...

ಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌…

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ ಆಪ್‌ನ ಅರವಿಂದ್‌ ಕೇಜ್ರಿವಾಲ್‌ಗೆ ದೇಶಾದ್ಯಂತ ಹಲವು ಗಣ್ಯರು ಅಭಿನಂದನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಪ್ರಶಂಸಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ: ದೆಹಲಿ ವಿಧಾನಸಭಾ ಚುನಾವಣೆಯ ಜಯಕ್ಕಾಗಿ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಅಭಿನಂದನೆಗಳು. ದೆಹಲಿಯ ಜನರ ಆಕಾಂಕ್ಷೆಗಳನ್ನು ಈಡೇರಿಸಲಿ ಎಂದು ಹಾರೈಸುತ್ತೇನೆ.

ರಾಹುಲ್‌ ಗಾಂಧಿ: ದೆಹಲಿ ವಿಧಾನಸಭೆಯಲ್ಲಿ ಜಯಗಳಿಸಿದ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಶುಭಾಶಯಗಳು ಮತ್ತು ಅಭಿನಂದನೆಗಳು.

ಎಚ್‌.ಡಿ ದೇವೇಗೌಡ: ಈ ಗೆಲುವು “ಕೋಮು ಧ್ರುವೀಕರಣದ ಹತಾಶ ಕೃತ್ಯಗಳು ಸೀಮಿತ ಕರೆನ್ಸಿಯನ್ನು ಹೊಂದಿವೆ” ಎಂದು ಭಾರತದ ಉಳಿದ ಭಾಗಗಳಿಗೆ ಮತ್ತೊಮ್ಮೆ ಭರವಸೆ ನೀಡುತ್ತದೆ. ನೀವು ಈ ಗೆಲುವಿಗೆ ಸಮೃದ್ಧವಾಗಿ ಅರ್ಹರಾಗಿದ್ದೀರಿ. ಅಭಿವೃದ್ಧಿಯತ್ತ ನಿಮ್ಮ ಗಮನವು ಅಪಾರವಾಗಿದೆ ಎಂಬುದು ಭಾರತೀಯ ರಾಜಕಾರಣದಲ್ಲಿ ಗಮನಾರ್ಹವಾದ ಸಂಕೇತವಾಗಿದೆ.

ಮಮತಾ ಬ್ಯಾನರ್ಜಿ: ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅಭಿವೃದ್ಧಿ ಮಾತ್ರ ಕೆಲಸ ಮಾಡುತ್ತದೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಅನ್ನು ತಿರಸ್ಕರಿಸಲಾಗುವುದು. ದೆಹಲಿ ಫಲಿತಾಂಶಗಳನ್ನು ನೋಡಿದರೆ ಆಮ್ ಆದ್ಮಿ ಪಕ್ಷವು ಮತ್ತೊಮ್ಮೆ ಬಹುಮತದೊಂದಿಗೆ ಗೆಲ್ಲುವುದು ಸ್ಪಷ್ಟವಾಗಿದೆ. ದ್ವೇಷದ ಮಾತು ಮತ್ತು ವಿಭಜಕ ರಾಜಕಾರಣ ಮಾಡುವವರಿಗಗೆ ಒಂದು ಮಾತು ಹೇಳಲು ಬಯಸುತ್ತೇನೆ. ಕೊಟ್ಟ ಭರವಸೆಗಳನ್ನು ಪೂರೈಸುವವರು ಮಾತ್ರ ಗೌರವಿಸಲ್ಪಡುತ್ತಾರೆ.

ನವೀನ್‌ ಪಟ್ನಾಯಕ್‌: ದೆಹಲಿ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಅರವಿಂದ್‌ ಕೇಜ್ರಿವಾಲ್ ಮತ್ತು  ಆಮ್ ಆದ್ಮಿ ಪಾರ್ಟಿಗೆ ಅಭಿನಂದನೆಗಳು. ಅವರ ಯಶಸ್ವಿ ಅಧಿಕಾರಾವಧಿಗೆ ಶುಭಾಶಯಗಳು.

ಸಿದ್ದರಾಮಯ್ಯ: ದೆಹಲಿ ಚುನಾವಣೆಯನ್ನು ಗೆದ್ದ ಆಮ್ ಆದ್ಮಿ‌ ಪಕ್ಷದ ನಾಯಕ‌ ಅರವಿಂದ ಕೇಜ್ರಿವಾಲ್‌ ಅವರಿಗೆ ಅಭಿನಂದನೆಗಳು. ಅಭಿವೃದ್ಧಿ ಅಜೆಂಡಾದ ಜೊತೆಗೆ ಸಾಮಾಜಿಕ ಬದಲಾವಣೆಯ‌ ಅಜೆಂಡಾದ ಬಗ್ಗೆಯೂ‌ ಅವರ ಮನಸ್ಸು ಮುಕ್ತವಾಗಿರಲಿ ಎನ್ನುವುದು ನನ್ನ ನಮ್ರ ಸಲಹೆ.

ರಾಜನಾಥ್‌ ಸಿಂಗ್‌: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷವನ್ನು ನಾನು ಅಭಿನಂದಿಸುತ್ತೇನೆ.

ಅಲ್ಲದೇ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಾಂತರ ಜನ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷಕ್ಕೆ ಶುಭ ಹಾರೈಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...