Homeಮುಖಪುಟಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌...

ಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌…

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ ಆಪ್‌ನ ಅರವಿಂದ್‌ ಕೇಜ್ರಿವಾಲ್‌ಗೆ ದೇಶಾದ್ಯಂತ ಹಲವು ಗಣ್ಯರು ಅಭಿನಂದನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಪ್ರಶಂಸಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ: ದೆಹಲಿ ವಿಧಾನಸಭಾ ಚುನಾವಣೆಯ ಜಯಕ್ಕಾಗಿ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಅಭಿನಂದನೆಗಳು. ದೆಹಲಿಯ ಜನರ ಆಕಾಂಕ್ಷೆಗಳನ್ನು ಈಡೇರಿಸಲಿ ಎಂದು ಹಾರೈಸುತ್ತೇನೆ.

ರಾಹುಲ್‌ ಗಾಂಧಿ: ದೆಹಲಿ ವಿಧಾನಸಭೆಯಲ್ಲಿ ಜಯಗಳಿಸಿದ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಶುಭಾಶಯಗಳು ಮತ್ತು ಅಭಿನಂದನೆಗಳು.

ಎಚ್‌.ಡಿ ದೇವೇಗೌಡ: ಈ ಗೆಲುವು “ಕೋಮು ಧ್ರುವೀಕರಣದ ಹತಾಶ ಕೃತ್ಯಗಳು ಸೀಮಿತ ಕರೆನ್ಸಿಯನ್ನು ಹೊಂದಿವೆ” ಎಂದು ಭಾರತದ ಉಳಿದ ಭಾಗಗಳಿಗೆ ಮತ್ತೊಮ್ಮೆ ಭರವಸೆ ನೀಡುತ್ತದೆ. ನೀವು ಈ ಗೆಲುವಿಗೆ ಸಮೃದ್ಧವಾಗಿ ಅರ್ಹರಾಗಿದ್ದೀರಿ. ಅಭಿವೃದ್ಧಿಯತ್ತ ನಿಮ್ಮ ಗಮನವು ಅಪಾರವಾಗಿದೆ ಎಂಬುದು ಭಾರತೀಯ ರಾಜಕಾರಣದಲ್ಲಿ ಗಮನಾರ್ಹವಾದ ಸಂಕೇತವಾಗಿದೆ.

ಮಮತಾ ಬ್ಯಾನರ್ಜಿ: ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅಭಿವೃದ್ಧಿ ಮಾತ್ರ ಕೆಲಸ ಮಾಡುತ್ತದೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಅನ್ನು ತಿರಸ್ಕರಿಸಲಾಗುವುದು. ದೆಹಲಿ ಫಲಿತಾಂಶಗಳನ್ನು ನೋಡಿದರೆ ಆಮ್ ಆದ್ಮಿ ಪಕ್ಷವು ಮತ್ತೊಮ್ಮೆ ಬಹುಮತದೊಂದಿಗೆ ಗೆಲ್ಲುವುದು ಸ್ಪಷ್ಟವಾಗಿದೆ. ದ್ವೇಷದ ಮಾತು ಮತ್ತು ವಿಭಜಕ ರಾಜಕಾರಣ ಮಾಡುವವರಿಗಗೆ ಒಂದು ಮಾತು ಹೇಳಲು ಬಯಸುತ್ತೇನೆ. ಕೊಟ್ಟ ಭರವಸೆಗಳನ್ನು ಪೂರೈಸುವವರು ಮಾತ್ರ ಗೌರವಿಸಲ್ಪಡುತ್ತಾರೆ.

ನವೀನ್‌ ಪಟ್ನಾಯಕ್‌: ದೆಹಲಿ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಅರವಿಂದ್‌ ಕೇಜ್ರಿವಾಲ್ ಮತ್ತು  ಆಮ್ ಆದ್ಮಿ ಪಾರ್ಟಿಗೆ ಅಭಿನಂದನೆಗಳು. ಅವರ ಯಶಸ್ವಿ ಅಧಿಕಾರಾವಧಿಗೆ ಶುಭಾಶಯಗಳು.

ಸಿದ್ದರಾಮಯ್ಯ: ದೆಹಲಿ ಚುನಾವಣೆಯನ್ನು ಗೆದ್ದ ಆಮ್ ಆದ್ಮಿ‌ ಪಕ್ಷದ ನಾಯಕ‌ ಅರವಿಂದ ಕೇಜ್ರಿವಾಲ್‌ ಅವರಿಗೆ ಅಭಿನಂದನೆಗಳು. ಅಭಿವೃದ್ಧಿ ಅಜೆಂಡಾದ ಜೊತೆಗೆ ಸಾಮಾಜಿಕ ಬದಲಾವಣೆಯ‌ ಅಜೆಂಡಾದ ಬಗ್ಗೆಯೂ‌ ಅವರ ಮನಸ್ಸು ಮುಕ್ತವಾಗಿರಲಿ ಎನ್ನುವುದು ನನ್ನ ನಮ್ರ ಸಲಹೆ.

ರಾಜನಾಥ್‌ ಸಿಂಗ್‌: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷವನ್ನು ನಾನು ಅಭಿನಂದಿಸುತ್ತೇನೆ.

ಅಲ್ಲದೇ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಾಂತರ ಜನ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷಕ್ಕೆ ಶುಭ ಹಾರೈಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...