Homeಮುಖಪುಟಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌...

ಅಭಿನಂದನೆಗಳ ಸುರಿಮಳೆಯಲ್ಲಿ ಮಿಂದೆದ್ದ ಆಪ್‌ ನಾಯಕ ಕೇಜ್ರಿವಾಲ್‌…

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ ಆಪ್‌ನ ಅರವಿಂದ್‌ ಕೇಜ್ರಿವಾಲ್‌ಗೆ ದೇಶಾದ್ಯಂತ ಹಲವು ಗಣ್ಯರು ಅಭಿನಂದನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ರಾಹುಲ್‌ ಗಾಂಧಿ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಪ್ರಶಂಸಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ: ದೆಹಲಿ ವಿಧಾನಸಭಾ ಚುನಾವಣೆಯ ಜಯಕ್ಕಾಗಿ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಅಭಿನಂದನೆಗಳು. ದೆಹಲಿಯ ಜನರ ಆಕಾಂಕ್ಷೆಗಳನ್ನು ಈಡೇರಿಸಲಿ ಎಂದು ಹಾರೈಸುತ್ತೇನೆ.

ರಾಹುಲ್‌ ಗಾಂಧಿ: ದೆಹಲಿ ವಿಧಾನಸಭೆಯಲ್ಲಿ ಜಯಗಳಿಸಿದ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ರವರಿಗೆ ಶುಭಾಶಯಗಳು ಮತ್ತು ಅಭಿನಂದನೆಗಳು.

ಎಚ್‌.ಡಿ ದೇವೇಗೌಡ: ಈ ಗೆಲುವು “ಕೋಮು ಧ್ರುವೀಕರಣದ ಹತಾಶ ಕೃತ್ಯಗಳು ಸೀಮಿತ ಕರೆನ್ಸಿಯನ್ನು ಹೊಂದಿವೆ” ಎಂದು ಭಾರತದ ಉಳಿದ ಭಾಗಗಳಿಗೆ ಮತ್ತೊಮ್ಮೆ ಭರವಸೆ ನೀಡುತ್ತದೆ. ನೀವು ಈ ಗೆಲುವಿಗೆ ಸಮೃದ್ಧವಾಗಿ ಅರ್ಹರಾಗಿದ್ದೀರಿ. ಅಭಿವೃದ್ಧಿಯತ್ತ ನಿಮ್ಮ ಗಮನವು ಅಪಾರವಾಗಿದೆ ಎಂಬುದು ಭಾರತೀಯ ರಾಜಕಾರಣದಲ್ಲಿ ಗಮನಾರ್ಹವಾದ ಸಂಕೇತವಾಗಿದೆ.

ಮಮತಾ ಬ್ಯಾನರ್ಜಿ: ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಅಭಿವೃದ್ಧಿ ಮಾತ್ರ ಕೆಲಸ ಮಾಡುತ್ತದೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಅನ್ನು ತಿರಸ್ಕರಿಸಲಾಗುವುದು. ದೆಹಲಿ ಫಲಿತಾಂಶಗಳನ್ನು ನೋಡಿದರೆ ಆಮ್ ಆದ್ಮಿ ಪಕ್ಷವು ಮತ್ತೊಮ್ಮೆ ಬಹುಮತದೊಂದಿಗೆ ಗೆಲ್ಲುವುದು ಸ್ಪಷ್ಟವಾಗಿದೆ. ದ್ವೇಷದ ಮಾತು ಮತ್ತು ವಿಭಜಕ ರಾಜಕಾರಣ ಮಾಡುವವರಿಗಗೆ ಒಂದು ಮಾತು ಹೇಳಲು ಬಯಸುತ್ತೇನೆ. ಕೊಟ್ಟ ಭರವಸೆಗಳನ್ನು ಪೂರೈಸುವವರು ಮಾತ್ರ ಗೌರವಿಸಲ್ಪಡುತ್ತಾರೆ.

ನವೀನ್‌ ಪಟ್ನಾಯಕ್‌: ದೆಹಲಿ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಅರವಿಂದ್‌ ಕೇಜ್ರಿವಾಲ್ ಮತ್ತು  ಆಮ್ ಆದ್ಮಿ ಪಾರ್ಟಿಗೆ ಅಭಿನಂದನೆಗಳು. ಅವರ ಯಶಸ್ವಿ ಅಧಿಕಾರಾವಧಿಗೆ ಶುಭಾಶಯಗಳು.

ಸಿದ್ದರಾಮಯ್ಯ: ದೆಹಲಿ ಚುನಾವಣೆಯನ್ನು ಗೆದ್ದ ಆಮ್ ಆದ್ಮಿ‌ ಪಕ್ಷದ ನಾಯಕ‌ ಅರವಿಂದ ಕೇಜ್ರಿವಾಲ್‌ ಅವರಿಗೆ ಅಭಿನಂದನೆಗಳು. ಅಭಿವೃದ್ಧಿ ಅಜೆಂಡಾದ ಜೊತೆಗೆ ಸಾಮಾಜಿಕ ಬದಲಾವಣೆಯ‌ ಅಜೆಂಡಾದ ಬಗ್ಗೆಯೂ‌ ಅವರ ಮನಸ್ಸು ಮುಕ್ತವಾಗಿರಲಿ ಎನ್ನುವುದು ನನ್ನ ನಮ್ರ ಸಲಹೆ.

ರಾಜನಾಥ್‌ ಸಿಂಗ್‌: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷವನ್ನು ನಾನು ಅಭಿನಂದಿಸುತ್ತೇನೆ.

ಅಲ್ಲದೇ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ಯಾಂತರ ಜನ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷಕ್ಕೆ ಶುಭ ಹಾರೈಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...