Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...