Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...