Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...