Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...