Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...