Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...