Homeಮುಖಪುಟಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

ಆರ್‌‌ಎಸ್‌‌ಎಸ್‌ನ ಅನೇಕ ವಿಚಾರಗಳು ಎಡಪಂಥೀಯದಂತಿವೆ: ದತ್ತಾತ್ರೇಯ ಹೊಸಬಾಳೆ

- Advertisement -
- Advertisement -

ಆರ್‌ಎಸ್‌ಎಸ್‌ನ ಹಲವು ವಿಚಾರಗಳು ಎಡಪಂಥೀಯದಂತಿವೆ. ಹಿಂದುತ್ವವು ಎಡವೂ ಅಲ್ಲ, ಬಲವೂ ಅಲ್ಲ ಎಂದು ಆರ್‌ಎಸ್‌ಎಸ್‌ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಮುಖಂಡ ರಾಮ್‌ ಮಹದೇವ್‌ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ದೆಹಲಿಯಲ್ಲಿ ಮಾತನಾಡಿರುವ ಅವರು, ಭೌಗೋಳಿಕ, ಧಾರ್ಮಿಕ ಮತ್ತು ರಾಜಕೀಯ ವಿಭಜನೆಯಾದ ಎಡ-ಬಲ, ಪೂರ್ವ-ಪಶ್ಚಿಮಗಳು ಮಸುಕಾಗಿವೆ, ಕರಗಿಹೋಗಿವೆ ಎಂದು ತಿಳಿಸಿದ್ದಾರೆ.

“ಇದುವರೆಗೆ ಜಗತ್ತು ಎಡಕ್ಕೆ ನಡೆದಿದೆ ಅಥವಾ ಬಲವಂತವಾಗಿ ಎಡಕ್ಕೆ ಹೋಗಿದೆ. ಈಗಿನ ಪರಿಸ್ಥಿತಿಯಲ್ಲಿ ಜಗತ್ತು ಬಲಕ್ಕೆ ಚಲಿಸುತ್ತಿರುವುದರಿಂದ ಅದು ಕೇಂದ್ರದಲ್ಲಿದೆ. ಹಿಂದುತ್ವ ಎಂದರೆ ಎಡವೂ ಅಲ್ಲ, ಬಲವೂ ಅಲ್ಲ” ಎಂದು ಹೇಳಿರುವ ಹೊಸಬಾಳೆ, “ಮಾನವತಾವಾದವು ಹಿಂದುತ್ವದ ಅವಿಭಾಜ್ಯ ಅಂಗ” ಎಂದು ಪ್ರತಿಪಾದಿಸಿದ್ದಾರೆ.

“ನಾನು ಆರ್‌ಎಸ್‌ಎಸ್‌ನಿಂದ ಬಂದವನು. ಸಂಘದ ತರಬೇತಿ ಶಿಬಿರಗಳಲ್ಲಿ ನಮ್ಮ ಬೋಧನೆಯಲ್ಲಿ ನಾವು ಎಂದಿಗೂ ಬಲಪಂಥೀಯರು ಎಂದು ಹೇಳಿಲ್ಲ. ನಮ್ಮ ಅನೇಕ ವಿಚಾರಗಳು ಎಡಪಂಥೀಯ ವಿಚಾರಗಳಂತೆ ಮತ್ತು ಅನೇಕವು ಖಂಡಿತವಾಗಿಯೂ ಬಲಪಂಥೀಯ ವಿಚಾರಗಳಂತೆ ಇವೆ” ಎಂದಿದ್ದಾರೆ.

ಹೀಗಾಗಿ ಬಲ-ಎಡ, ಪೂರ್ವ ಪಶ್ಚಿಮ ಎಂಬ ಭೌಗೋಳಿಕ, ಧಾರ್ಮಿಕ ರಾಜಕೀಯ ವಿಭಾಗೀಕರಣ ಆಗಿದೆ. ಆ ಎಲ್ಲ ವಿಷಯಗಳು ಮಸುಕಾಗಿವೆ, ಮಂಕಾಗಿವೆ ಮತ್ತು ಕರಗಿದೆ ಎಂದು ನಾನು ಭಾವಿಸುತ್ತೇನೆ. ಇಂದು ಜಗತ್ತು ಪರಸ್ಪರರ ಆಲೋಚನೆಗಳನ್ನು ಸ್ವೀಕರಿಸುತ್ತಿದೆ, ಹೊಸ ಮನುಷ್ಯ ಹೊರಹೊಮ್ಮುತ್ತಿದ್ದಾನೆ ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್‌ ಪ್ರಚಾರಕ್‌ ಹಾಗೂ ಭಾರತೀಯ ಜನ ಸಂಘದ ಅಧ್ಯಕ್ಷರಾಗಿದ್ದ ದೀನ್‌ದಯಾಳ್‌ ಉಪಾಧ್ಯಾಯ ಅವರು, ಪ್ರಾಚೀನ ಭಾರತದ ವಿಚಾರಗಳನ್ನು ಆಧುನಿಕ ಪರಿಭಾಷೆಗೆ ತಂದು ನವಪೀಳಿಗೆ ಹೇಗೆ ಆಚರಿಸಬೇಕೆಂದು ತಿಳಿಸಲು ಯತ್ನಿಸಿದ್ದಾರೆ ಎಂದು ಹೊಸಬಾಳೆ ವಿವರಿಸಿದ್ದಾರೆ.

ಭಾರತದ ವಿಚಾರಗಳಿಗೆ ಹಾಗೂ ಸಂಪ್ರದಾಯಕ್ಕೆ ಪೂರ್ಣ ವಿರಾಮ ಎಂಬುದಿಲ್ಲ. ಪೂರ್ವ- ಪಶ್ಚಿಮ, ಎಡ- ಬಲಗಳೆಲ್ಲವೂ ಪ್ರಸ್ತುತ ರಾಜಕೀಯ ಡಿಸ್‌ಕೋರ್ಸ್ ಹಾಗೂ ಭೌಗೋಳಿಕ ರಾಜಕೀಯ ಎಂದು ಹೇಳಲು ಬಯಸುತ್ತೇನೆ. ಪ್ರಸ್ತುತ ಎಂದರೆ ಎರಡನೇ ಮಹಾಯುದ್ಧ ನಂತರದ ಹಾಗೂ ಜಾಗತೀಕರಣ ಕಾಲವಾಗಿದೆ” ಎಂದು ವಿವರಿಸಿದ್ದಾರೆ.

“ಪಶ್ಚಿಮವು ಸಂಪೂರ್ಣವಾಗಿ ಪೂರ್ವವಲ್ಲ, ಪೂರ್ವವು ಸಂಪೂರ್ಣವಾಗಿ ಪೂರ್ವವಲ್ಲ. ಎಡವು ಸಂಪೂರ್ಣವಾಗಿ ಎಡವಲ್ಲ ಅಥವಾ ಬಲವು ಸಂಪೂರ್ಣವಾಗಿ ಬಲವಲ್ಲ” ಎಂದು ಹೊಸಬಾಳೆ ಅವರು ಒತ್ತಿ ಹೇಳಿದ್ದಾರೆ.

ದೀನದಯಾಳ್ ಉಪಾಧ್ಯಾಯ ಅವರು ಹಿಂದುತ್ವ ಮಾದರಿ ಎಂಬ ಪದವನ್ನು ಬಳಸಿಲ್ಲ, ಆದರೆ ಸಮಗ್ರ ಮಾನವತಾವಾದಿ ತತ್ವಶಾಸ್ತ್ರ ಎಂದು ಬಳಸಿದ್ದಾರೆ ಎಂದು ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ತಿಂಗಳು ಕಾನೂನಿನ ಭಾರತೀಕರಣ ಕುರಿತು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ  ಎನ್‌.ವಿ.ರಮಣ ಅವರು ಹೇಳಿದ್ದಾರೆಂದು ಉಲ್ಲೇಖಿಸಿರುವ ಹೊಸಬಾಳೆ, “ಸಾಮಾನ್ಯವಾಗಿ ನಮ್ಮ ನ್ಯಾಯ ವಿತರಣೆಯು ಸಾಮಾನ್ಯ ಜನರಿಗೆ ಅನೇಕ ಅಡೆತಡೆಗಳನ್ನು ಉಂಟುಮಾಡುತ್ತಿದೆ. ನ್ಯಾಯಾಲಯದ ಕೆಲಸ ಮತ್ತು ಶೈಲಿಯು ಭಾರತದ ಸಂಕೀರ್ಣತೆಗಳಿಗೆ ಸರಿಹೊಂದುವುದಿಲ್ಲ. ವಸಾಹತುಶಾಹಿ ಮೂಲದ ಕಾನೂನುಗಳು, ಭಾರತೀಯ ಜನಸಂಖ್ಯೆಯ ಅಗತ್ಯಗಳಿಗೆ ಸೂಕ್ತವಾಗಿರುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯವಾಗಿದೆ” ಎಂದಿದ್ದಾರೆ.


ಇದನ್ನೂ ಓದಿರಿ: ಆರ್‌ಎಸ್‌ಎಸ್‌ ಸಾಮಾಜಿಕ ನ್ಯಾಯದ ವಿರೋಧಿ, ಅದು ಮನುಸ್ಮೃತಿಯನ್ನು ನಂಬುತ್ತದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸಬಾಲೆಯವರ RSS ಬಗೆಗಿನ ವ್ಯಾಖ್ಯಾನ, ಅಚ್ಚರಿದಾಯಕವಾದರೂ ಸ್ವಾಗತರ್ಹವಾಗಿದೆ.
    ಭಾರತ ಮತ್ತು ಅಲ್ಪಸಂಖ್ಯಾತರ ಬಗ್ಗೆ, ಶ್ರೀ ಮೋಹನ್ ಭಾಗವತ್ ಅವರ ವಿಚಾರಗಳು, ಹೆಗಡೆವರ್ ಮತ್ತು ಇತರೆ ಆರ್ಎಸ್ಎಸ್ ನ ಹಿರಿಯರ ಪರಿಕಲ್ಪನೆಗಿಂತ ಹೆಚ್ಚು ವಾಸ್ತವಿಕ ಮತ್ತು ಇಂದಿನ ಪರಿಸ್ಥಿತಿಗೆ ಅನುಗುಣವಾಗಿದೆ.
    ತಮ್ಮ ವಿಚಾರಧಾರೆ ಹಾಗು ವಾಸ್ತವಂಶಗಳನ್ನು ಸಂಘದ ಎಲ್ಲಾ ಸದಸ್ಯರಿಗೆ ಮನವರಿಕೆ ಮಾಡಿಕೊಡಲು ಅನಿವಾರ್ಯವಾಗಿರುವ ತರಬೇತಿ ಶಿಬಿರಗಳನ್ನು ಶೀಘ್ರವಾಗಿ ಹಮ್ಮಿಕೊಳ್ಳಬೇಕು.
    ಅನಿವಾರ್ಯವಾದರೆ ರಾಜಕೀಯ ಸಂಘಟನೆಯಾದ BJP ಯಿಂದ ಸ್ವಲ್ಪ ಮಟ್ಟದ ಅಂತರವನ್ನು ಕಾಯ್ದು ಕೊಳ್ಳುವತ್ತಾಲೂ ಯೋಚಿಸಬೇಕು.
    ವಿಚಾರಧಾರೆ ಹಾಗು ಅದರ ಅಳವಡಿಕೆ ಮುಖ್ಯವೇ ಹೊರತು ರಾಜಕೀಯ ಅಧಿಕಾರವಲ್ಲ.
    ಈ ನಿಟ್ಟಿನಲ್ಲಿ ಯೋಚಿಸಲಿಕ್ಕದರೂ ಪ್ರಾರಂಭಿಸೋಣ

    ??

    Jai Hind

    Innie

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...