Homeಮುಖಪುಟಅನೇಕರು ಲಾಕ್‌ಡೌನ್ ಅನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ: ಮೋದಿ ಅಸಮಾಧಾನ

ಅನೇಕರು ಲಾಕ್‌ಡೌನ್ ಅನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ: ಮೋದಿ ಅಸಮಾಧಾನ

ನಿನ್ನೆ ದೇಶದ ಒಂದಷ್ಟು ಜನ ಗುಂಪು ಗುಂಪಾಗಿ ಸೇರಿ ರಸ್ತೆಯಲ್ಲಿ, ಬೀದಿಗಳಲ್ಲಿ ಚಪ್ಪಾಳೆ ತಟ್ಟುತ್ತಾ, ಜಾಗಟೆ ಬಡಿಯುತ್ತಾ ಮೆರವಣಿಗೆ ಮತ್ತು ಸಾಮೂಹಿಕ ನೃತ್ಯ ಮಾಡುವ ಮೂಲಕ ಮೋದಿಯವರ ಉದ್ದೇಶವನ್ನೇ ಮಣ್ಣು ಪಾಲು ಮಾಡಿದ್ದಾರೆ.

- Advertisement -
- Advertisement -

ಭಾರತದಲ್ಲಿ 390 ಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿ ಎಂಟು ಮಂದಿ ಸಾವನ್ನಪ್ಪಿದ್ದರೂ, ಬಹಳಷ್ಟು ಜನ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರ ದೇಶಾದ್ಯಂತ ತೀವ್ರ ನಿರ್ಬಂಧಗಳನ್ನು ಹೇರಿದ ನಂತರವೂ ಲಾಕ್‌ಡೌನ್ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Stupidity has no limitsThe purpose of Janta Curfew was to promote social distancing. And people coming out like this to clap is doing the exact opposite!

Posted by Dhruv Rathee on Sunday, March 22, 2020

ನಿನ್ನೆ ಇಡೀ ದಿನ ಜನತಾ ಕರ್ಫ್ಯೂ ಆಚರಿಸುವಂತೆ ಮೋದಿ ಮನವಿ ಮಾಡಿದ್ದರು. ಮನೆಯಿಂದ ಹೊರಗೆ ಬಾರದೇ ಮನೆಯಲ್ಲಿಯೇ ಇದ್ದುಕೊಂಡು ಸಂಜೆ 5 ಗಂಟೆಗೆ ಕಿಟಿಕಿ, ಬಾಲ್ಕನಿಗಳಲ್ಲಿ ನಿಂತು ಚಪ್ಪಾಳೆ ತಟ್ಟುವ ಮೂಲಕ ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗೆ ಗೌರವ ಸಲ್ಲಿಸಲು ಸೂಚಿಸಿದ್ದರು. ಆದರೆ ದೇಶದ ಒಂದಷ್ಟು ಜನ ಗುಂಪು ಗುಂಪಾಗಿ ಸೇರಿ ರಸ್ತೆಯಲ್ಲಿ, ಬೀದಿಗಳಲ್ಲಿ ಚಪ್ಪಾಳೆ ತಟ್ಟುತ್ತಾ, ಜಾಗಟೆ ಬಡಿಯುತ್ತಾ ಮೆರವಣಿಗೆ ಮತ್ತು ಸಾಮೂಹಿಕ ನೃತ್ಯ ಮಾಡುವ ಮೂಲಕ ಮೋದಿಯವರ ಉದ್ದೇಶವನ್ನೇ ಮಣ್ಣು ಪಾಲು ಮಾಡಿದ್ದರು.

ಕರೋನಮ್ಮನ ಸಾವಿನ ಕೊನೆಯ ಗಳಿಗೆಯಲ್ಲಿ… ?#BalajiMKambale #BMACEF #BanEVM

Posted by Balaji M Kamble on Sunday, March 22, 2020

ಕರ್ನಾಟಕದ ರಾಜ್ಯಪಾಲರಾದ ವಜುಬಾಯಿವಾಲರವರೂ ಸಹ ಜನಸಮೂಹದೊಂದಿಗೆ ಸೇರಿ ಜಾಗಟೆ ಬಾರಿಸುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು ಜನರ ಟೀಕೆಗೆ ಒಳಗಾಗಿದೆ.

His excellency Governor of Karnataka is strictly following social distance….???

Posted by J S Patil on Sunday, March 22, 2020

ಈ ನಡುವೆ ಜನರು ನಿರ್ದೇಶನಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿಯವರು ರಾಜ್ಯಗಳಿಗೆ ಆಗ್ರಹಿಸಿದ್ದಾರೆ. “ಅನೇಕ ಜನರು ಇನ್ನೂ ಲಾಕ್‌ಡೌನ್ ಅನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ದಯವಿಟ್ಟು ನಿಮ್ಮನ್ನು ಉಳಿಸಿ, ನಿಮ್ಮ ಕುಟುಂಬವನ್ನು ಉಳಿಸಿ, ನಿರ್ದೇಶನಗಳನ್ನು ಗಂಭೀರವಾಗಿ ಅನುಸರಿಸಿ. ನಿಯಮಗಳು ಮತ್ತು ಕಾನೂನುಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕೆಂದು ನಾನು ರಾಜ್ಯ ಸರ್ಕಾರಗಳಿಗೆ ವಿನಂತಿಸುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಸದ್ಯಕ್ಕೆ ಭಾರತದಲ್ಲಿ 82 ಜಿಲ್ಲೆಗಳನ್ನು ಸಂಪೂರ್ಣವಾಗಿ ಲ್ಯಾಕ್‌ಡೌನ್‌ ಮಾಡಲಾಗಿದ್ದು ಮುಂದಿನ ದಿನಗಳಲ್ಲಿ ಇದರ ಸಂಖ್ಯೆ ಹೆಚ್ಚುವ ಸೂಚನೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...