Homeಮುಖಪುಟಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

ಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

- Advertisement -
- Advertisement -

ಸ್ವಯಂಘೋಷಿತ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಪೊಲೀಸರು ಸಲ್ಲಿಸಿದ ‘ಕೌಂಟರ್’ ಅರ್ಜಿಯಲ್ಲಿ, “ಪ್ರತಿಷ್ಠಾನಕ್ಕೆ ಹೋದ ಅನೇಕ ಜನರು ನಾಪತ್ತೆಯಾಗಿದ್ದಾರೆ, ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದಲ್ಲಿ ಸ್ಮಶಾನವನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಪೊಲೀಸರು ತಿಳಿಸಿದ್ದಾರೆ. ಇಶಾ ಫೌಂಡೇಶನ್‌ನೊಳಗಿರುವ ಆಸ್ಪತ್ರೆಯುಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಲಾಗುತ್ತಿದೆ ಎಂದು ‘ಕೌಂಟರ್ ಅಫಿಡವಿಟ್’ ಹೇಳಿದೆ.

ಜಗ್ಗಿ ವಾಸುದೇವ್ ಸ್ಥಾಪಿಸಿದ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಕೊಯಮತ್ತೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಿವರಗಳು 23 ಪುಟಗಳ ವರದಿಯ ಪ್ರಕಾರ, “ಕೋರ್ಸ್‌ಗಾಗಿ ಅಲ್ಲಿಗೆ ಬಂದವರು ಮತ್ತು ಕಾಣೆಯಾದವರು ಇತ್ಯಾದಿ” ಕುರಿತು ದೂರುಗಳನ್ನು ಒಳಗೊಂಡಿದೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೆ.ಕಾರ್ತಿಕೇಯನ್ ಅವರು ಸಲ್ಲಿಸಿದ ವರದಿಯಲ್ಲಿ, ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ 15 ವರ್ಷಗಳಲ್ಲಿ ಒಟ್ಟು ಆರು ನಾಪತ್ತೆ ಪ್ರಕರಣಗಳು ನ್ಯಾಯವ್ಯಾಪ್ತಿಯ ಆಲಂದೂರೈ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಆರರಲ್ಲಿ ಐದು ಪ್ರಕರಣಗಳನ್ನು, “ಕಾಣೆಯಾದ ವ್ಯಕ್ತಿ ಇನ್ನೂ ಪತ್ತೆಯಾಗದ ಕಾರಣ, ಕೈಬಿಡಲಾಗಿದೆ ಎಂದು ಮುಚ್ಚಲಾಯಿತು. ಒಂದು ಪ್ರಕರಣವು ಇನ್ನೂ ತನಿಖೆಯಲ್ಲಿದೆ” ಎಂದು ಹೇಳಿದ್ದಾರೆ.

ಇದಲ್ಲದೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 174 (ಆತ್ಮಹತ್ಯೆಯ ಕುರಿತು ವಿಚಾರಣೆ ಮತ್ತು ವರದಿ ಮಾಡಲು) ಅಡಿಯಲ್ಲಿ ಪೊಲೀಸರು ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಎರಡು ಪ್ರಕರಣಗಳು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ಕೊರತೆಯಿಂದಾಗಿ ತನಿಖೆಯಲ್ಲಿವೆ ಎಂದು ಸ್ಥಿತಿ ವರದಿ ಹೇಳಿದೆ.

ಇಶಾ ಫೌಂಡೇಶನ್ ನಿರ್ಮಿಸುತ್ತಿರುವ ಸ್ಮಶಾನವನ್ನು ತೆಗೆಯುವಂತೆ ನೆರೆಹೊರೆಯವರು ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ, ಪ್ರಕರಣವು ಬಾಕಿ ಉಳಿದಿದ್ದು, ಪ್ರಸ್ತುತ ಸ್ಮಶಾನವು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸೇರಿಸಲಾಗಿದೆ.

ಇಶಾ ಔಟ್‌ರೀಚ್‌ನಲ್ಲಿ ಉದ್ಯೋಗಿಯಾಗಿದ್ದ ವೈದ್ಯರ ವಿರುದ್ಧ ಸ್ಥಳೀಯ ಶಾಲೆಯ ಪ್ರಾಂಶುಪಾಲರು ಪೋಕ್ಸೊ ಪ್ರಕರಣ ದಾಖಲಿಸಿರುವ ಕುರಿತು ವರದಿಯಲ್ಲಿ ವಿವರ ನೀಡಲಾಗಿದೆ. ವೈದ್ಯರನ್ನು ಬಂಧಿಸಲಾಗಿದ್ದು, ಜಾಮೀನು ನಿರಾಕರಿಸಲಾಗಿದೆ. ದೆಹಲಿಯ ಸಾಕೇತ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರನ್ನೂ ಅದರಲ್ಲಿ ಉಲ್ಲೇಖಿಸಲಾಗಿದೆ.

ಅವರು 2021 ರಲ್ಲಿ ಇಶಾ ಯೋಗ ಕೇಂದ್ರದಲ್ಲಿ ಯೋಗ ಕೋರ್ಸ್‌ಗೆ ಹಾಜರಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಿತಿ ವರದಿಯ ಪ್ರಕಾರ, ಮಹಿಳೆ ತನ್ನ ಮೇಲೆ ಒಬ್ಬ ಪುರುಷನಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾಳೆ. ಶೂನ್ಯ ಎಫ್‌ಐಆರ್ ಅನ್ನು ಕೊಯಮತ್ತೂರು ಪೊಲೀಸರಿಗೆ ವರ್ಗಾಯಿಸಲಾಗಿದೆ.

ಮಹಿಳೆ ನಂತರ ದೂರನ್ನು ಹಿಂಪಡೆದಿದ್ದರೂ, ಸೆಕ್ಷನ್ 164 ಸಿಆರ್‌ಪಿಸಿ ಹೇಳಿಕೆಯನ್ನು ದಾಖಲಿಸಿಲ್ಲ ಮತ್ತು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿಲ್ಲವಾದ್ದರಿಂದ ಹೆಚ್ಚಿನ ತನಿಖೆಗೆ ಅನುಮತಿ ಕೋರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬುಡಕಟ್ಟು ಜನರಿಗೆ ನೀಡಿರುವ ಭೂಮಿಯನ್ನು ಅತಿಕ್ರಮಣ ಮಾಡಿರುವ ಇಶಾ ಯೋಗ ಕೇಂದ್ರದ ವಿರುದ್ಧದ ಎಫ್‌ಐಆರ್ ಕೂಡ ತನಿಖೆಯಲ್ಲಿದೆ ಎಂದು ವರದಿ ತಿಳಿಸಿದೆ.

ಅಕ್ಟೋಬರ್ 1, 2024 ರಂತೆ ಫೌಂಡೇಶನ್‌ನಿಂದ ಪಡೆದ ಮಾಹಿತಿಯ ಪ್ರಕಾರ, 217 ಬ್ರಹ್ಮಚಾರಿಗಳು, 2455 ಸ್ವಯಂಸೇವಕರು, 891 ವೇತನದಾರರ ಸಿಬ್ಬಂದಿ, 1475 ವೇತನದಾರರು, 342 ಇಶಾ ಹೋಮ್ ಸ್ಕೂಲ್ ವಿದ್ಯಾರ್ಥಿಗಳು, 175 ಇಶಾ ಸಂಸ್ಕೃತಿ ವಿದ್ಯಾರ್ಥಿಗಳು, 704 ಅತಿಥಿಗಳು/ಸ್ವಯಂಸೇವಕರು ಮತ್ತು 912 ಅತಿಥಿಗಳು ಕೊಯಮತ್ತೂರಿನ ಇಶಾ ಯೋಗ ಕೇಂದ್ರದ ಕಾಟೇಜ್‌ಗಳಲ್ಲಿ ವಾಸಿಸುತ್ತಿದ್ದಾರೆ.

42 ಮತ್ತು 39 ವರ್ಷ ವಯಸ್ಸಿನ ತನ್ನ ಪುತ್ರಿಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಇಬ್ಬರು ಮಹಿಳೆಯರನ್ನು ಹೊರತುಪಡಿಸಿ 558 ವ್ಯಕ್ತಿಗಳಿಂದ ಪೊಲೀಸರು ಆಹಾರ, ಸುರಕ್ಷತೆ ಮತ್ತು ಇತರ ಅಂಶಗಳ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದ್ದಾರೆ ಎಂದು ವರದಿ ಹೇಳಿದೆ.

ಇಶಾ ಫೌಂಡೇಶನ್‌ನಲ್ಲಿ ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದು ವಿಚಾರಣಾ ತಂಡದಲ್ಲಿರುವ ಮಕ್ಕಳ ತಜ್ಞರು ಹೇಳಿದ್ದಾರೆ.

ಕೊಯಮತ್ತೂರಿನ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕರು ಮಾರ್ಚ್ 2027 ರವರೆಗೆ ಮಾನ್ಯ ಪರವಾನಗಿಯನ್ನು ಹೊಂದಿರುವ ಇಶಾ ಕ್ಲಿನಿಕ್ ಬಗ್ಗೆ ವಿವರವಾದ ವರದಿಯನ್ನು ನೀಡಿದರು. ಆದರೂ ಅಲ್ಲಿ ಅವಧಿ ಮೀರಿದ ವೈದ್ಯಕೀಯ ಉಪಕರಣಗಳು ಮತ್ತು ಅರ್ಹರಲ್ಲದ ವ್ಯಕ್ತಿ ಎಕ್ಸ್-ರೇ ತೆಗೆದುಕೊಳ್ಳುವ ಬಗ್ಗೆ ವರದಿಯು ಕಳವಳ ವ್ಯಕ್ತಪಡಿಸಿದೆ.

ವಿಚಾರಣೆ ನಡೆಸಿದ ಮಹಿಳೆಯರು ಸ್ವಯಂಪ್ರೇರಣೆಯಿಂದ ಅಲ್ಲಿ ವಾಸಿಸುತ್ತಿದ್ದಾರೆಂದು ಹೇಳಿದ್ದರೂ, ಪಾಶ್‌ (POSH) ಕಾಯಿದೆಯಡಿ ಕಡ್ಡಾಯವಾಗಿರುವ ಆಂತರಿಕ ದೂರುಗಳ ಸಮಿತಿಯು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಎಂದು ತಂಡ ಹೇಳಿದೆ.

ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.

ಇದನ್ನೂ ಓದಿ; ಕೆನಡಾ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ: ನಿಜ್ಜರ್ ಹತ್ಯೆಯ ಕುರಿತು ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...

ಇರಾನ್ ನಮ್ಮ ದೀರ್ಘಕಾಲೀನ ಮಿತ್ರ ರಾಷ್ಟ್ರ; ವಿಶ್ವಾಸಾರ್ಹ ಪಾಲುದಾರರೊಂದಿಗೆ ನಿಲ್ಲಲು ವಿಫಲವಾದರೆ ಭಾರತಕ್ಕೆ ಭಾರಿ ನಷ್ಟ: ರಾಜ್ ಠಾಕ್ರೆ

ಸೂಕ್ತ ಸಮಯದಲ್ಲಿ ಕೇಂದ್ರ ಸರ್ಕಾರ ಇರಾನ್‌ಗೆ ಬೆಂಬಲ ನೀಡದಿರುವುದನ್ನು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನಿಸಿದ್ದಾರೆ.​ ಈ ಕುರಿತು ಗುರುವಾರ (ಮಾ.19) ಮಾತನಾಡಿರುವ ಅವರು, "ಇರಾನ್ ಭಾರತದ ದೀರ್ಘಕಾಲೀನ ಮಿತ್ರ...

ಕೇರಳ: 2026 ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ; ಹಾಲಿ ಸಂಸದರು, ಲೈಂಗಿಕ ಪ್ರಕರಣದ ಆರೋಪಿಗಳಿಗಿಲ್ಲ ಸ್ಥಾನ

ತಿರುವನಂತಪುರಂ: ಬಹಳ ದಿನಗಳ ನಂತರ, ಏಪ್ರಿಲ್ 9 ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಕೇರಳದ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.  ಕಣ್ಣೂರು ಕಾರ್ಪೊರೇಷನ್‌ನ ಮಾಜಿ ಮೇಯರ್ ಟಿ.ಒ. ಮೋಹನನ್ ಅವರನ್ನು ಕಣ್ಣೂರಿನಲ್ಲಿ...

‘ನೀವು ಶಂಕಿತ’ : ಮುಹಮ್ಮದ್ ದೀಪಕ್‌ಗೆ ಉತ್ತರಾಖಂಡ ಹೈಕೋರ್ಟ್ ತರಾಟೆ!

ಇತ್ತೀಚೆಗೆ ಹಿಂದುತ್ವವಾದಿಗಳ ದಾಳಿಯಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿ ಶ್ಲಾಘನೆಗೆ ಪಾತ್ರರಾದ ಮುಹಮ್ಮದ್ ದೀಪಕ್ (ದೀಪಕ್ ಕುಮಾರ್) ಅವರನ್ನು ಉತ್ತರಾಖಂಡ ಹೈಕೋರ್ಟ್ ಗುರುವಾರ (ಮಾ.19) ತೀವ್ರ ತರಾಟೆಗೆ ತೆಗೆದುಕೊಂಡಿದೆ ಎಂದು barandbench.com ವರದಿ...

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...