Homeಮುಖಪುಟಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

ಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

- Advertisement -
- Advertisement -

ಸ್ವಯಂಘೋಷಿತ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಪೊಲೀಸರು ಸಲ್ಲಿಸಿದ ‘ಕೌಂಟರ್’ ಅರ್ಜಿಯಲ್ಲಿ, “ಪ್ರತಿಷ್ಠಾನಕ್ಕೆ ಹೋದ ಅನೇಕ ಜನರು ನಾಪತ್ತೆಯಾಗಿದ್ದಾರೆ, ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದಲ್ಲಿ ಸ್ಮಶಾನವನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಪೊಲೀಸರು ತಿಳಿಸಿದ್ದಾರೆ. ಇಶಾ ಫೌಂಡೇಶನ್‌ನೊಳಗಿರುವ ಆಸ್ಪತ್ರೆಯುಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಲಾಗುತ್ತಿದೆ ಎಂದು ‘ಕೌಂಟರ್ ಅಫಿಡವಿಟ್’ ಹೇಳಿದೆ.

ಜಗ್ಗಿ ವಾಸುದೇವ್ ಸ್ಥಾಪಿಸಿದ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಕೊಯಮತ್ತೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಿವರಗಳು 23 ಪುಟಗಳ ವರದಿಯ ಪ್ರಕಾರ, “ಕೋರ್ಸ್‌ಗಾಗಿ ಅಲ್ಲಿಗೆ ಬಂದವರು ಮತ್ತು ಕಾಣೆಯಾದವರು ಇತ್ಯಾದಿ” ಕುರಿತು ದೂರುಗಳನ್ನು ಒಳಗೊಂಡಿದೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೆ.ಕಾರ್ತಿಕೇಯನ್ ಅವರು ಸಲ್ಲಿಸಿದ ವರದಿಯಲ್ಲಿ, ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ 15 ವರ್ಷಗಳಲ್ಲಿ ಒಟ್ಟು ಆರು ನಾಪತ್ತೆ ಪ್ರಕರಣಗಳು ನ್ಯಾಯವ್ಯಾಪ್ತಿಯ ಆಲಂದೂರೈ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಆರರಲ್ಲಿ ಐದು ಪ್ರಕರಣಗಳನ್ನು, “ಕಾಣೆಯಾದ ವ್ಯಕ್ತಿ ಇನ್ನೂ ಪತ್ತೆಯಾಗದ ಕಾರಣ, ಕೈಬಿಡಲಾಗಿದೆ ಎಂದು ಮುಚ್ಚಲಾಯಿತು. ಒಂದು ಪ್ರಕರಣವು ಇನ್ನೂ ತನಿಖೆಯಲ್ಲಿದೆ” ಎಂದು ಹೇಳಿದ್ದಾರೆ.

ಇದಲ್ಲದೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 174 (ಆತ್ಮಹತ್ಯೆಯ ಕುರಿತು ವಿಚಾರಣೆ ಮತ್ತು ವರದಿ ಮಾಡಲು) ಅಡಿಯಲ್ಲಿ ಪೊಲೀಸರು ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಎರಡು ಪ್ರಕರಣಗಳು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ಕೊರತೆಯಿಂದಾಗಿ ತನಿಖೆಯಲ್ಲಿವೆ ಎಂದು ಸ್ಥಿತಿ ವರದಿ ಹೇಳಿದೆ.

ಇಶಾ ಫೌಂಡೇಶನ್ ನಿರ್ಮಿಸುತ್ತಿರುವ ಸ್ಮಶಾನವನ್ನು ತೆಗೆಯುವಂತೆ ನೆರೆಹೊರೆಯವರು ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ, ಪ್ರಕರಣವು ಬಾಕಿ ಉಳಿದಿದ್ದು, ಪ್ರಸ್ತುತ ಸ್ಮಶಾನವು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸೇರಿಸಲಾಗಿದೆ.

ಇಶಾ ಔಟ್‌ರೀಚ್‌ನಲ್ಲಿ ಉದ್ಯೋಗಿಯಾಗಿದ್ದ ವೈದ್ಯರ ವಿರುದ್ಧ ಸ್ಥಳೀಯ ಶಾಲೆಯ ಪ್ರಾಂಶುಪಾಲರು ಪೋಕ್ಸೊ ಪ್ರಕರಣ ದಾಖಲಿಸಿರುವ ಕುರಿತು ವರದಿಯಲ್ಲಿ ವಿವರ ನೀಡಲಾಗಿದೆ. ವೈದ್ಯರನ್ನು ಬಂಧಿಸಲಾಗಿದ್ದು, ಜಾಮೀನು ನಿರಾಕರಿಸಲಾಗಿದೆ. ದೆಹಲಿಯ ಸಾಕೇತ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರನ್ನೂ ಅದರಲ್ಲಿ ಉಲ್ಲೇಖಿಸಲಾಗಿದೆ.

ಅವರು 2021 ರಲ್ಲಿ ಇಶಾ ಯೋಗ ಕೇಂದ್ರದಲ್ಲಿ ಯೋಗ ಕೋರ್ಸ್‌ಗೆ ಹಾಜರಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಿತಿ ವರದಿಯ ಪ್ರಕಾರ, ಮಹಿಳೆ ತನ್ನ ಮೇಲೆ ಒಬ್ಬ ಪುರುಷನಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾಳೆ. ಶೂನ್ಯ ಎಫ್‌ಐಆರ್ ಅನ್ನು ಕೊಯಮತ್ತೂರು ಪೊಲೀಸರಿಗೆ ವರ್ಗಾಯಿಸಲಾಗಿದೆ.

ಮಹಿಳೆ ನಂತರ ದೂರನ್ನು ಹಿಂಪಡೆದಿದ್ದರೂ, ಸೆಕ್ಷನ್ 164 ಸಿಆರ್‌ಪಿಸಿ ಹೇಳಿಕೆಯನ್ನು ದಾಖಲಿಸಿಲ್ಲ ಮತ್ತು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿಲ್ಲವಾದ್ದರಿಂದ ಹೆಚ್ಚಿನ ತನಿಖೆಗೆ ಅನುಮತಿ ಕೋರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬುಡಕಟ್ಟು ಜನರಿಗೆ ನೀಡಿರುವ ಭೂಮಿಯನ್ನು ಅತಿಕ್ರಮಣ ಮಾಡಿರುವ ಇಶಾ ಯೋಗ ಕೇಂದ್ರದ ವಿರುದ್ಧದ ಎಫ್‌ಐಆರ್ ಕೂಡ ತನಿಖೆಯಲ್ಲಿದೆ ಎಂದು ವರದಿ ತಿಳಿಸಿದೆ.

ಅಕ್ಟೋಬರ್ 1, 2024 ರಂತೆ ಫೌಂಡೇಶನ್‌ನಿಂದ ಪಡೆದ ಮಾಹಿತಿಯ ಪ್ರಕಾರ, 217 ಬ್ರಹ್ಮಚಾರಿಗಳು, 2455 ಸ್ವಯಂಸೇವಕರು, 891 ವೇತನದಾರರ ಸಿಬ್ಬಂದಿ, 1475 ವೇತನದಾರರು, 342 ಇಶಾ ಹೋಮ್ ಸ್ಕೂಲ್ ವಿದ್ಯಾರ್ಥಿಗಳು, 175 ಇಶಾ ಸಂಸ್ಕೃತಿ ವಿದ್ಯಾರ್ಥಿಗಳು, 704 ಅತಿಥಿಗಳು/ಸ್ವಯಂಸೇವಕರು ಮತ್ತು 912 ಅತಿಥಿಗಳು ಕೊಯಮತ್ತೂರಿನ ಇಶಾ ಯೋಗ ಕೇಂದ್ರದ ಕಾಟೇಜ್‌ಗಳಲ್ಲಿ ವಾಸಿಸುತ್ತಿದ್ದಾರೆ.

42 ಮತ್ತು 39 ವರ್ಷ ವಯಸ್ಸಿನ ತನ್ನ ಪುತ್ರಿಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಇಬ್ಬರು ಮಹಿಳೆಯರನ್ನು ಹೊರತುಪಡಿಸಿ 558 ವ್ಯಕ್ತಿಗಳಿಂದ ಪೊಲೀಸರು ಆಹಾರ, ಸುರಕ್ಷತೆ ಮತ್ತು ಇತರ ಅಂಶಗಳ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದ್ದಾರೆ ಎಂದು ವರದಿ ಹೇಳಿದೆ.

ಇಶಾ ಫೌಂಡೇಶನ್‌ನಲ್ಲಿ ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದು ವಿಚಾರಣಾ ತಂಡದಲ್ಲಿರುವ ಮಕ್ಕಳ ತಜ್ಞರು ಹೇಳಿದ್ದಾರೆ.

ಕೊಯಮತ್ತೂರಿನ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕರು ಮಾರ್ಚ್ 2027 ರವರೆಗೆ ಮಾನ್ಯ ಪರವಾನಗಿಯನ್ನು ಹೊಂದಿರುವ ಇಶಾ ಕ್ಲಿನಿಕ್ ಬಗ್ಗೆ ವಿವರವಾದ ವರದಿಯನ್ನು ನೀಡಿದರು. ಆದರೂ ಅಲ್ಲಿ ಅವಧಿ ಮೀರಿದ ವೈದ್ಯಕೀಯ ಉಪಕರಣಗಳು ಮತ್ತು ಅರ್ಹರಲ್ಲದ ವ್ಯಕ್ತಿ ಎಕ್ಸ್-ರೇ ತೆಗೆದುಕೊಳ್ಳುವ ಬಗ್ಗೆ ವರದಿಯು ಕಳವಳ ವ್ಯಕ್ತಪಡಿಸಿದೆ.

ವಿಚಾರಣೆ ನಡೆಸಿದ ಮಹಿಳೆಯರು ಸ್ವಯಂಪ್ರೇರಣೆಯಿಂದ ಅಲ್ಲಿ ವಾಸಿಸುತ್ತಿದ್ದಾರೆಂದು ಹೇಳಿದ್ದರೂ, ಪಾಶ್‌ (POSH) ಕಾಯಿದೆಯಡಿ ಕಡ್ಡಾಯವಾಗಿರುವ ಆಂತರಿಕ ದೂರುಗಳ ಸಮಿತಿಯು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಎಂದು ತಂಡ ಹೇಳಿದೆ.

ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.

ಇದನ್ನೂ ಓದಿ; ಕೆನಡಾ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ: ನಿಜ್ಜರ್ ಹತ್ಯೆಯ ಕುರಿತು ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...