Homeಮುಖಪುಟಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

ಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

- Advertisement -
- Advertisement -

ಸ್ವಯಂಘೋಷಿತ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಪೊಲೀಸರು ಸಲ್ಲಿಸಿದ ‘ಕೌಂಟರ್’ ಅರ್ಜಿಯಲ್ಲಿ, “ಪ್ರತಿಷ್ಠಾನಕ್ಕೆ ಹೋದ ಅನೇಕ ಜನರು ನಾಪತ್ತೆಯಾಗಿದ್ದಾರೆ, ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದಲ್ಲಿ ಸ್ಮಶಾನವನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಪೊಲೀಸರು ತಿಳಿಸಿದ್ದಾರೆ. ಇಶಾ ಫೌಂಡೇಶನ್‌ನೊಳಗಿರುವ ಆಸ್ಪತ್ರೆಯುಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಲಾಗುತ್ತಿದೆ ಎಂದು ‘ಕೌಂಟರ್ ಅಫಿಡವಿಟ್’ ಹೇಳಿದೆ.

ಜಗ್ಗಿ ವಾಸುದೇವ್ ಸ್ಥಾಪಿಸಿದ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಕೊಯಮತ್ತೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಿವರಗಳು 23 ಪುಟಗಳ ವರದಿಯ ಪ್ರಕಾರ, “ಕೋರ್ಸ್‌ಗಾಗಿ ಅಲ್ಲಿಗೆ ಬಂದವರು ಮತ್ತು ಕಾಣೆಯಾದವರು ಇತ್ಯಾದಿ” ಕುರಿತು ದೂರುಗಳನ್ನು ಒಳಗೊಂಡಿದೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೆ.ಕಾರ್ತಿಕೇಯನ್ ಅವರು ಸಲ್ಲಿಸಿದ ವರದಿಯಲ್ಲಿ, ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ 15 ವರ್ಷಗಳಲ್ಲಿ ಒಟ್ಟು ಆರು ನಾಪತ್ತೆ ಪ್ರಕರಣಗಳು ನ್ಯಾಯವ್ಯಾಪ್ತಿಯ ಆಲಂದೂರೈ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಆರರಲ್ಲಿ ಐದು ಪ್ರಕರಣಗಳನ್ನು, “ಕಾಣೆಯಾದ ವ್ಯಕ್ತಿ ಇನ್ನೂ ಪತ್ತೆಯಾಗದ ಕಾರಣ, ಕೈಬಿಡಲಾಗಿದೆ ಎಂದು ಮುಚ್ಚಲಾಯಿತು. ಒಂದು ಪ್ರಕರಣವು ಇನ್ನೂ ತನಿಖೆಯಲ್ಲಿದೆ” ಎಂದು ಹೇಳಿದ್ದಾರೆ.

ಇದಲ್ಲದೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 174 (ಆತ್ಮಹತ್ಯೆಯ ಕುರಿತು ವಿಚಾರಣೆ ಮತ್ತು ವರದಿ ಮಾಡಲು) ಅಡಿಯಲ್ಲಿ ಪೊಲೀಸರು ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಎರಡು ಪ್ರಕರಣಗಳು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ಕೊರತೆಯಿಂದಾಗಿ ತನಿಖೆಯಲ್ಲಿವೆ ಎಂದು ಸ್ಥಿತಿ ವರದಿ ಹೇಳಿದೆ.

ಇಶಾ ಫೌಂಡೇಶನ್ ನಿರ್ಮಿಸುತ್ತಿರುವ ಸ್ಮಶಾನವನ್ನು ತೆಗೆಯುವಂತೆ ನೆರೆಹೊರೆಯವರು ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ, ಪ್ರಕರಣವು ಬಾಕಿ ಉಳಿದಿದ್ದು, ಪ್ರಸ್ತುತ ಸ್ಮಶಾನವು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸೇರಿಸಲಾಗಿದೆ.

ಇಶಾ ಔಟ್‌ರೀಚ್‌ನಲ್ಲಿ ಉದ್ಯೋಗಿಯಾಗಿದ್ದ ವೈದ್ಯರ ವಿರುದ್ಧ ಸ್ಥಳೀಯ ಶಾಲೆಯ ಪ್ರಾಂಶುಪಾಲರು ಪೋಕ್ಸೊ ಪ್ರಕರಣ ದಾಖಲಿಸಿರುವ ಕುರಿತು ವರದಿಯಲ್ಲಿ ವಿವರ ನೀಡಲಾಗಿದೆ. ವೈದ್ಯರನ್ನು ಬಂಧಿಸಲಾಗಿದ್ದು, ಜಾಮೀನು ನಿರಾಕರಿಸಲಾಗಿದೆ. ದೆಹಲಿಯ ಸಾಕೇತ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರನ್ನೂ ಅದರಲ್ಲಿ ಉಲ್ಲೇಖಿಸಲಾಗಿದೆ.

ಅವರು 2021 ರಲ್ಲಿ ಇಶಾ ಯೋಗ ಕೇಂದ್ರದಲ್ಲಿ ಯೋಗ ಕೋರ್ಸ್‌ಗೆ ಹಾಜರಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಿತಿ ವರದಿಯ ಪ್ರಕಾರ, ಮಹಿಳೆ ತನ್ನ ಮೇಲೆ ಒಬ್ಬ ಪುರುಷನಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾಳೆ. ಶೂನ್ಯ ಎಫ್‌ಐಆರ್ ಅನ್ನು ಕೊಯಮತ್ತೂರು ಪೊಲೀಸರಿಗೆ ವರ್ಗಾಯಿಸಲಾಗಿದೆ.

ಮಹಿಳೆ ನಂತರ ದೂರನ್ನು ಹಿಂಪಡೆದಿದ್ದರೂ, ಸೆಕ್ಷನ್ 164 ಸಿಆರ್‌ಪಿಸಿ ಹೇಳಿಕೆಯನ್ನು ದಾಖಲಿಸಿಲ್ಲ ಮತ್ತು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿಲ್ಲವಾದ್ದರಿಂದ ಹೆಚ್ಚಿನ ತನಿಖೆಗೆ ಅನುಮತಿ ಕೋರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬುಡಕಟ್ಟು ಜನರಿಗೆ ನೀಡಿರುವ ಭೂಮಿಯನ್ನು ಅತಿಕ್ರಮಣ ಮಾಡಿರುವ ಇಶಾ ಯೋಗ ಕೇಂದ್ರದ ವಿರುದ್ಧದ ಎಫ್‌ಐಆರ್ ಕೂಡ ತನಿಖೆಯಲ್ಲಿದೆ ಎಂದು ವರದಿ ತಿಳಿಸಿದೆ.

ಅಕ್ಟೋಬರ್ 1, 2024 ರಂತೆ ಫೌಂಡೇಶನ್‌ನಿಂದ ಪಡೆದ ಮಾಹಿತಿಯ ಪ್ರಕಾರ, 217 ಬ್ರಹ್ಮಚಾರಿಗಳು, 2455 ಸ್ವಯಂಸೇವಕರು, 891 ವೇತನದಾರರ ಸಿಬ್ಬಂದಿ, 1475 ವೇತನದಾರರು, 342 ಇಶಾ ಹೋಮ್ ಸ್ಕೂಲ್ ವಿದ್ಯಾರ್ಥಿಗಳು, 175 ಇಶಾ ಸಂಸ್ಕೃತಿ ವಿದ್ಯಾರ್ಥಿಗಳು, 704 ಅತಿಥಿಗಳು/ಸ್ವಯಂಸೇವಕರು ಮತ್ತು 912 ಅತಿಥಿಗಳು ಕೊಯಮತ್ತೂರಿನ ಇಶಾ ಯೋಗ ಕೇಂದ್ರದ ಕಾಟೇಜ್‌ಗಳಲ್ಲಿ ವಾಸಿಸುತ್ತಿದ್ದಾರೆ.

42 ಮತ್ತು 39 ವರ್ಷ ವಯಸ್ಸಿನ ತನ್ನ ಪುತ್ರಿಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಇಬ್ಬರು ಮಹಿಳೆಯರನ್ನು ಹೊರತುಪಡಿಸಿ 558 ವ್ಯಕ್ತಿಗಳಿಂದ ಪೊಲೀಸರು ಆಹಾರ, ಸುರಕ್ಷತೆ ಮತ್ತು ಇತರ ಅಂಶಗಳ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದ್ದಾರೆ ಎಂದು ವರದಿ ಹೇಳಿದೆ.

ಇಶಾ ಫೌಂಡೇಶನ್‌ನಲ್ಲಿ ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದು ವಿಚಾರಣಾ ತಂಡದಲ್ಲಿರುವ ಮಕ್ಕಳ ತಜ್ಞರು ಹೇಳಿದ್ದಾರೆ.

ಕೊಯಮತ್ತೂರಿನ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕರು ಮಾರ್ಚ್ 2027 ರವರೆಗೆ ಮಾನ್ಯ ಪರವಾನಗಿಯನ್ನು ಹೊಂದಿರುವ ಇಶಾ ಕ್ಲಿನಿಕ್ ಬಗ್ಗೆ ವಿವರವಾದ ವರದಿಯನ್ನು ನೀಡಿದರು. ಆದರೂ ಅಲ್ಲಿ ಅವಧಿ ಮೀರಿದ ವೈದ್ಯಕೀಯ ಉಪಕರಣಗಳು ಮತ್ತು ಅರ್ಹರಲ್ಲದ ವ್ಯಕ್ತಿ ಎಕ್ಸ್-ರೇ ತೆಗೆದುಕೊಳ್ಳುವ ಬಗ್ಗೆ ವರದಿಯು ಕಳವಳ ವ್ಯಕ್ತಪಡಿಸಿದೆ.

ವಿಚಾರಣೆ ನಡೆಸಿದ ಮಹಿಳೆಯರು ಸ್ವಯಂಪ್ರೇರಣೆಯಿಂದ ಅಲ್ಲಿ ವಾಸಿಸುತ್ತಿದ್ದಾರೆಂದು ಹೇಳಿದ್ದರೂ, ಪಾಶ್‌ (POSH) ಕಾಯಿದೆಯಡಿ ಕಡ್ಡಾಯವಾಗಿರುವ ಆಂತರಿಕ ದೂರುಗಳ ಸಮಿತಿಯು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಎಂದು ತಂಡ ಹೇಳಿದೆ.

ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.

ಇದನ್ನೂ ಓದಿ; ಕೆನಡಾ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ: ನಿಜ್ಜರ್ ಹತ್ಯೆಯ ಕುರಿತು ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...