Homeಕರ್ನಾಟಕಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

ಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

"ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ" ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಗುರಿಯಾಗಿ ದೋಷಿ ಎಂದು ಪರಿಗಣಿಸ್ಪಟ್ಟಿರುವ ಪ್ರಶಾಂತ್‌ ಭೂಷಣ್‌ ಪರವಾಗಿ ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ದಾಖಲಾಗಿವೆ.

ಇಂದು ಭೂಷಣ್ ಅವರ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ದನಿಯಿಲ್ಲದವರ ದನಿ ಪ್ರಶಾಂತ್ ಭೂಷಣ್ ಜೊತೆ ನಾವಿದ್ದೇವೆ ಎಂದು ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಇದನ್ನೂ ಒದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ನಡೆದಿದ್ದು, “ಹಮ್ ದೇಖೇಂಗೆ”(ನಾವೂ ನೋಡುತ್ತೇವೆ) ಎಂಬ ಬಿತ್ತಿಪತ್ರಗಳನ್ನು ಹಿಡಿದ ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರಶಾಂತ್‌ ಭೂಷಣ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವರು ಸಾಮಾಜಿಕ ಕಾರ್ಯಕರ್ತರು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪ್ರಶಾಂತ್‌ ಭೂಷಣ್ ಪರ ನಾವು ಇದ್ದೇವೆ ಎಂದು ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮದಲ್ಲಿ ಪ್ರಶಾಂತ್ ಭೂಷಣ್‌ಗೆ ಬೆಂಬಲ

ಬೆಂಗಳೂರಿನ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರ ಮುಖ್ಯ ರಸ್ತೆಯಲ್ಲಿ ಹಲವರು ಜನರು ಪ್ರಶಾಂತ್‌ ಭೂಷಣ್ ಪರವಾಗಿ ದನಿಯೆತ್ತಿದರು.

ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ
ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕಾಗಿ ಪ್ರಶಾಂತ್ ಭೂಷಣ್ ಪರ ನಾವು ಇದ್ದೇವೆ ಎಂದು ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿಯ ಸಾಮಾಜಿಕ ಕಾರ್ಯಕರ್ತರು ಸಂವಿಧಾನದ ಆಶಯಗಳ ರಕ್ಷಣೆಗಾಗಿ ಪ್ರಶಾಂತ್ ಭೂಷಣ್ ಪರ ನಾವಿದ್ದೇವೆ ಎಂದು ಘೋಷಿಸಿದರು.

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿ

ಬೆಂಗಳೂರು ನಗರದ ಪಾದರಾಯನಪುರದಲ್ಲಿ ನೂರಾರು ಜನರು ಪ್ರಶಾಂತ್ ಭೂಷಣ್ ಪರ ನಿಂತು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ

ಪ್ರಸ್ತುತ ನಡೆಯುತ್ತಿವ ವಿಚಾರಣೆಯಲ್ಲಿ ಪ್ರಶಾಂತ್ ಭೂಷಣ್, “ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್, ತಾನು ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಘೋಷಿಸಿದ್ದಾರೆ. ಎರಡು ಮೂರು ದಿನಗಳ ಸಮಯ ನೀಡುತ್ತೇವೆ, ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ ಎಂಬ ನ್ಯಾಯಮೂರ್ತಿಗಳ ಮನವಿಗೆ ಯಾವುದೇ ಕಾರಣಕ್ಕೂ ನನ್ನ ಹೇಳಿಕೆಗಳಲ್ಲಿ ಬದಲಾವಣೆ ಇಲ್ಲ ಎಂದು ದಿಟ್ಟತೆ ಮೆರೆದಿದ್ದಾರೆ.


ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...