Homeಕರ್ನಾಟಕಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

ಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

"ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ" ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಗುರಿಯಾಗಿ ದೋಷಿ ಎಂದು ಪರಿಗಣಿಸ್ಪಟ್ಟಿರುವ ಪ್ರಶಾಂತ್‌ ಭೂಷಣ್‌ ಪರವಾಗಿ ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ದಾಖಲಾಗಿವೆ.

ಇಂದು ಭೂಷಣ್ ಅವರ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ದನಿಯಿಲ್ಲದವರ ದನಿ ಪ್ರಶಾಂತ್ ಭೂಷಣ್ ಜೊತೆ ನಾವಿದ್ದೇವೆ ಎಂದು ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಇದನ್ನೂ ಒದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ನಡೆದಿದ್ದು, “ಹಮ್ ದೇಖೇಂಗೆ”(ನಾವೂ ನೋಡುತ್ತೇವೆ) ಎಂಬ ಬಿತ್ತಿಪತ್ರಗಳನ್ನು ಹಿಡಿದ ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರಶಾಂತ್‌ ಭೂಷಣ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವರು ಸಾಮಾಜಿಕ ಕಾರ್ಯಕರ್ತರು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪ್ರಶಾಂತ್‌ ಭೂಷಣ್ ಪರ ನಾವು ಇದ್ದೇವೆ ಎಂದು ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮದಲ್ಲಿ ಪ್ರಶಾಂತ್ ಭೂಷಣ್‌ಗೆ ಬೆಂಬಲ

ಬೆಂಗಳೂರಿನ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರ ಮುಖ್ಯ ರಸ್ತೆಯಲ್ಲಿ ಹಲವರು ಜನರು ಪ್ರಶಾಂತ್‌ ಭೂಷಣ್ ಪರವಾಗಿ ದನಿಯೆತ್ತಿದರು.

ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ
ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕಾಗಿ ಪ್ರಶಾಂತ್ ಭೂಷಣ್ ಪರ ನಾವು ಇದ್ದೇವೆ ಎಂದು ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿಯ ಸಾಮಾಜಿಕ ಕಾರ್ಯಕರ್ತರು ಸಂವಿಧಾನದ ಆಶಯಗಳ ರಕ್ಷಣೆಗಾಗಿ ಪ್ರಶಾಂತ್ ಭೂಷಣ್ ಪರ ನಾವಿದ್ದೇವೆ ಎಂದು ಘೋಷಿಸಿದರು.

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿ

ಬೆಂಗಳೂರು ನಗರದ ಪಾದರಾಯನಪುರದಲ್ಲಿ ನೂರಾರು ಜನರು ಪ್ರಶಾಂತ್ ಭೂಷಣ್ ಪರ ನಿಂತು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ

ಪ್ರಸ್ತುತ ನಡೆಯುತ್ತಿವ ವಿಚಾರಣೆಯಲ್ಲಿ ಪ್ರಶಾಂತ್ ಭೂಷಣ್, “ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್, ತಾನು ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಘೋಷಿಸಿದ್ದಾರೆ. ಎರಡು ಮೂರು ದಿನಗಳ ಸಮಯ ನೀಡುತ್ತೇವೆ, ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ ಎಂಬ ನ್ಯಾಯಮೂರ್ತಿಗಳ ಮನವಿಗೆ ಯಾವುದೇ ಕಾರಣಕ್ಕೂ ನನ್ನ ಹೇಳಿಕೆಗಳಲ್ಲಿ ಬದಲಾವಣೆ ಇಲ್ಲ ಎಂದು ದಿಟ್ಟತೆ ಮೆರೆದಿದ್ದಾರೆ.


ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...