Homeಕರ್ನಾಟಕಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

ಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

"ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ" ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಗುರಿಯಾಗಿ ದೋಷಿ ಎಂದು ಪರಿಗಣಿಸ್ಪಟ್ಟಿರುವ ಪ್ರಶಾಂತ್‌ ಭೂಷಣ್‌ ಪರವಾಗಿ ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ದಾಖಲಾಗಿವೆ.

ಇಂದು ಭೂಷಣ್ ಅವರ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ದನಿಯಿಲ್ಲದವರ ದನಿ ಪ್ರಶಾಂತ್ ಭೂಷಣ್ ಜೊತೆ ನಾವಿದ್ದೇವೆ ಎಂದು ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಇದನ್ನೂ ಒದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ನಡೆದಿದ್ದು, “ಹಮ್ ದೇಖೇಂಗೆ”(ನಾವೂ ನೋಡುತ್ತೇವೆ) ಎಂಬ ಬಿತ್ತಿಪತ್ರಗಳನ್ನು ಹಿಡಿದ ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರಶಾಂತ್‌ ಭೂಷಣ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವರು ಸಾಮಾಜಿಕ ಕಾರ್ಯಕರ್ತರು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪ್ರಶಾಂತ್‌ ಭೂಷಣ್ ಪರ ನಾವು ಇದ್ದೇವೆ ಎಂದು ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮದಲ್ಲಿ ಪ್ರಶಾಂತ್ ಭೂಷಣ್‌ಗೆ ಬೆಂಬಲ

ಬೆಂಗಳೂರಿನ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರ ಮುಖ್ಯ ರಸ್ತೆಯಲ್ಲಿ ಹಲವರು ಜನರು ಪ್ರಶಾಂತ್‌ ಭೂಷಣ್ ಪರವಾಗಿ ದನಿಯೆತ್ತಿದರು.

ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ
ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕಾಗಿ ಪ್ರಶಾಂತ್ ಭೂಷಣ್ ಪರ ನಾವು ಇದ್ದೇವೆ ಎಂದು ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿಯ ಸಾಮಾಜಿಕ ಕಾರ್ಯಕರ್ತರು ಸಂವಿಧಾನದ ಆಶಯಗಳ ರಕ್ಷಣೆಗಾಗಿ ಪ್ರಶಾಂತ್ ಭೂಷಣ್ ಪರ ನಾವಿದ್ದೇವೆ ಎಂದು ಘೋಷಿಸಿದರು.

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿ

ಬೆಂಗಳೂರು ನಗರದ ಪಾದರಾಯನಪುರದಲ್ಲಿ ನೂರಾರು ಜನರು ಪ್ರಶಾಂತ್ ಭೂಷಣ್ ಪರ ನಿಂತು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ

ಪ್ರಸ್ತುತ ನಡೆಯುತ್ತಿವ ವಿಚಾರಣೆಯಲ್ಲಿ ಪ್ರಶಾಂತ್ ಭೂಷಣ್, “ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್, ತಾನು ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಘೋಷಿಸಿದ್ದಾರೆ. ಎರಡು ಮೂರು ದಿನಗಳ ಸಮಯ ನೀಡುತ್ತೇವೆ, ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ ಎಂಬ ನ್ಯಾಯಮೂರ್ತಿಗಳ ಮನವಿಗೆ ಯಾವುದೇ ಕಾರಣಕ್ಕೂ ನನ್ನ ಹೇಳಿಕೆಗಳಲ್ಲಿ ಬದಲಾವಣೆ ಇಲ್ಲ ಎಂದು ದಿಟ್ಟತೆ ಮೆರೆದಿದ್ದಾರೆ.


ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...