Homeಕರ್ನಾಟಕಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

ಪ್ರಶಾಂತ್‌ ಭೂಷಣ್‌ ಪರ ಬೆಂಗಳೂರಿನಾದ್ಯಂತ ಹಲವು ಪ್ರತಿಭಟನೆಗಳು

"ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ" ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಗುರಿಯಾಗಿ ದೋಷಿ ಎಂದು ಪರಿಗಣಿಸ್ಪಟ್ಟಿರುವ ಪ್ರಶಾಂತ್‌ ಭೂಷಣ್‌ ಪರವಾಗಿ ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ದಾಖಲಾಗಿವೆ.

ಇಂದು ಭೂಷಣ್ ಅವರ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ದನಿಯಿಲ್ಲದವರ ದನಿ ಪ್ರಶಾಂತ್ ಭೂಷಣ್ ಜೊತೆ ನಾವಿದ್ದೇವೆ ಎಂದು ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಇದನ್ನೂ ಒದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಬೆಂಗಳೂರಿನ ಹಲವಾರು ಕಡೆ ಪ್ರತಿಭಟನೆಗಳು ನಡೆದಿದ್ದು, “ಹಮ್ ದೇಖೇಂಗೆ”(ನಾವೂ ನೋಡುತ್ತೇವೆ) ಎಂಬ ಬಿತ್ತಿಪತ್ರಗಳನ್ನು ಹಿಡಿದ ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರಶಾಂತ್‌ ಭೂಷಣ್‌ಗೆ ಬೆಂಬಲ ವ್ಯಕ್ತಪಡಿಸಿದರು. ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವರು ಸಾಮಾಜಿಕ ಕಾರ್ಯಕರ್ತರು ಕೊರೊನಾ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪ್ರಶಾಂತ್‌ ಭೂಷಣ್ ಪರ ನಾವು ಇದ್ದೇವೆ ಎಂದು ಪ್ರತಿಭಟನೆ ನಡೆಸಿದರು.

ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಗ್ರಾಮದಲ್ಲಿ ಪ್ರಶಾಂತ್ ಭೂಷಣ್‌ಗೆ ಬೆಂಬಲ

ಬೆಂಗಳೂರಿನ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರ ಮುಖ್ಯ ರಸ್ತೆಯಲ್ಲಿ ಹಲವರು ಜನರು ಪ್ರಶಾಂತ್‌ ಭೂಷಣ್ ಪರವಾಗಿ ದನಿಯೆತ್ತಿದರು.

ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ
ಬೆಂಗಳೂರು ನಗರದ ಸಂಜಯ್ ನಗರ ವಾರ್ಡ್‌ನ ಭೂಪಸಂದ್ರದ ಮುಖ್ಯರಸ್ತೆ

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯಕ್ಕಾಗಿ ಪ್ರಶಾಂತ್ ಭೂಷಣ್ ಪರ ನಾವು ಇದ್ದೇವೆ ಎಂದು ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌ನಲ್ಲಿ ಸಾಮಾಜಿಕ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಯಲಚೇನಹಳ್ಳಿ ವಾರ್ಡ್‌

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿಯ ಸಾಮಾಜಿಕ ಕಾರ್ಯಕರ್ತರು ಸಂವಿಧಾನದ ಆಶಯಗಳ ರಕ್ಷಣೆಗಾಗಿ ಪ್ರಶಾಂತ್ ಭೂಷಣ್ ಪರ ನಾವಿದ್ದೇವೆ ಎಂದು ಘೋಷಿಸಿದರು.

ಬೆಂಗಳೂರು ನಗರ ಜಿಲ್ಲೆಯ ಸೂಲಿಕೆರೆ ಗ್ರಾಮ ಪಂಚಾಯಿತಿ

ಬೆಂಗಳೂರು ನಗರದ ಪಾದರಾಯನಪುರದಲ್ಲಿ ನೂರಾರು ಜನರು ಪ್ರಶಾಂತ್ ಭೂಷಣ್ ಪರ ನಿಂತು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ
ಬೆಂಗಳೂರಿನ ಪಾದರಾಯಣಪುರ

ಪ್ರಸ್ತುತ ನಡೆಯುತ್ತಿವ ವಿಚಾರಣೆಯಲ್ಲಿ ಪ್ರಶಾಂತ್ ಭೂಷಣ್, “ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ” ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತನ್ನ ಹೇಳಿಕೆ ದಾಖಲಿಸಿದ ಪ್ರಶಾಂತ್ ಭೂಷಣ್, ತಾನು ಕ್ಷಮೆ ಕೇಳುವುದಿಲ್ಲ, ಶಿಕ್ಷೆ ಸ್ವೀಕರಿಸುತ್ತೇನೆ ಎಂದು ಮಹಾತ್ಮ ಗಾಂಧಿಯನ್ನು ಉಲ್ಲೇಖಿಸಿ ಘೋಷಿಸಿದ್ದಾರೆ. ಎರಡು ಮೂರು ದಿನಗಳ ಸಮಯ ನೀಡುತ್ತೇವೆ, ನಿಮ್ಮ ಹೇಳಿಕೆಯನ್ನು ಮರುಪರಿಶೀಲಿಸುತ್ತೀರಾ ಎಂಬ ನ್ಯಾಯಮೂರ್ತಿಗಳ ಮನವಿಗೆ ಯಾವುದೇ ಕಾರಣಕ್ಕೂ ನನ್ನ ಹೇಳಿಕೆಗಳಲ್ಲಿ ಬದಲಾವಣೆ ಇಲ್ಲ ಎಂದು ದಿಟ್ಟತೆ ಮೆರೆದಿದ್ದಾರೆ.


ಓದಿ: ನ್ಯಾಯಾಧೀಶರು ಹಾಗೂ ವಕೀಲರು ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಜನರಿಂದ ಪ್ರಶಾಂತ್‌ ಭೂಷಣ್ ಪರ ಸಹಿ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...