Homeಮುಖಪುಟಮಹಾರಾಷ್ಟ್ರದ ನಾಗಪುರ ಪೀಠದ ನ್ಯಾಯಮೂರ್ತಿ ರೋಹಿತ್ ದೇವ್ ರಾಜೀನಾಮೆ ಸುತ್ತ ಎದ್ದ ಪ್ರಶ್ನೆಗಳ ಹುತ್ತ

ಮಹಾರಾಷ್ಟ್ರದ ನಾಗಪುರ ಪೀಠದ ನ್ಯಾಯಮೂರ್ತಿ ರೋಹಿತ್ ದೇವ್ ರಾಜೀನಾಮೆ ಸುತ್ತ ಎದ್ದ ಪ್ರಶ್ನೆಗಳ ಹುತ್ತ

- Advertisement -
- Advertisement -

ಆಗಸ್ಟ್ 4 ರಂದು ಮಹಾರಾಷ್ಟ್ರದ ನಾಗಪುರ ಪೀಠದ 2ನೇ ಹಿರಿಯ ನ್ಯಾಯಮೂರ್ತಿ ರೋಹಿತ್ ದೇವ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಆದರೆ ಈ ರಾಜೀನಾಮೆ ಪ್ರಕಟಿಸಿದ ರೀತಿ, ಸಮಯ ಹಾಗೂ ಸಂದರ್ಭಗಳು ದೇಶದಾದ್ಯಂತ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಮಹಾರಾಷ್ಟ್ರದ ಮಾಜಿ ಅಡ್ವೋಕೇಟ್ ಜನರಲ್ ಆಗಿಯೂ ಕಾರ್ಯನಿರ್ವಹಿಸಿರುವ ಜಸ್ಟಿಸ್ ದೇವ್ ಅವರು ಎಂದಿನಂತೆ ಶುಕ್ರವಾರ ತಮ್ಮ ಕೋರ್ಟ್ ಹಾಲ್‌ಗೆ ಬಂದರು. ಆದರೆ ಅಲ್ಲಿ ನೆರೆದಿದ್ದ ಎಲ್ಲ ವಕೀಲರು ಮತ್ತು ಕಕ್ಷಿದಾರರ ಎದುರು ತಾವು ಈ ದಿನ ತಮ್ಮ ಹುದ್ದೆಗೆ ರಾಜೀನಾಮೆಯನ್ನು ನೀಡುತ್ತಿರುವುದಾಗಿ ಘೋಷಿಸಿದರು. ವಕೀಲರಿಗೆ ವೃತ್ತಿಪರತೆಯ ಬಗ್ಗೆ ಕಿವಿಮಾತನ್ನು ಹೇಳುತ್ತ ’ತನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ, ಕಠಿಣ ಶ್ರಮ ವಹಿಸಿ ಕೆಲಸ ಮಾಡಿ’ ಎಂದು ಹೃದಯಸ್ಪರ್ಶಿಯಾಗಿ ಹೇಳಿ ನೆರೆದಿದ್ದ ಜನರಲ್ಲಿ ಆಘಾತ ಉಂಟುಮಾಡಿದರು. ಅವರು ರಾಜೀನಾಮೆಗೆ ವೈಯಕ್ತಿಕ ಕಾರಣ ನೀಡಿದ್ದರೂ ಸಹಿತ ಈ ಘಟನೆ ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸ್ವಲ್ಪವಾದರು ಒಡನಾಟವಿರುವ ಯಾರಿಗೇ ಆಗಲಿ ಸಂಶಯ, ಪ್ರಶ್ನೆ ಹಾಗೂ ಗೊಂದಲಗಳನ್ನು ಮೂಡಿಸಿರುವುದು ನಿಜ.

ಹೈಕೋರ್ಟಿನ ನ್ಯಾಯಮೂರ್ತಿಗಳ ಜೀವನ ಕಾರ್ಯವೈಖರಿ ಎಲ್ಲವೂ ಅತ್ಯಂತ ನಿರ್ಬಂಧಿತ ವಾತಾವರಣದಲ್ಲಿ ಮತ್ತು ನ್ಯಾಯಾಂಗದ ಕಣ್ಗಾವಲಿನಲ್ಲಿ ನಡೆಯುತ್ತದೆ. ಅವರು ರಾಜೀನಾಮೆಯನ್ನು ರಾಷ್ಟ್ರಪತಿಯನ್ನು ಉದ್ದೇಶಿಸಿ ನೀಡಬೇಕಾಗುತ್ತದೆ. ಹೀಗಾಗಿ ಜಸ್ಟಿಸ್ ರೋಹಿತ್ ದೇವ್ ಅವರ ನಡೆ ಐತಿಹಾಸಿಕವಾಗಿದ್ದು ಎನ್ನಬಹುದು.

ಡಿಸೆಂಬರ್ 2025ರವರೆಗೂ ಸೇವೆ ಬಾಕಿ ಇರುವ ಜಸ್ಟಿಸ್ ದೇವ್ 2 ವರ್ಷಗಳಿಗೂ ಅಧಿಕ ಸೇವಾವಧಿ ಬಾಕಿ ಇರುವಂತೆಯೇ ರಾಜೀನಾಮೆ ನೀಡಿರುವುದು ಗಂಭೀರ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರಪತಿಗೆ ರಾಜೀನಾಮೆಯನ್ನು ಇಮೇಲ್ ಮತ್ತು ಪೋಸ್ಟ್‌ನಲ್ಲೂ ಕಳಿಸಿದ್ದಾಗಿ ಜಸ್ಟಿಸ್ ದೇವ್ ತಿಳಿಸಿದ್ದಾರೆ.

2017ರಿಂದ ಈ ಹುದ್ದೆಗೆ ಏರಿದ್ದ ಜಸ್ಟಿಸ್ ರೋಹಿತ್ ದೇವ್ ಮಹಾರಾಷ್ಟ್ರದ 2ನೇ ಹಿರಿಯ ನ್ಯಾಯಮೂರ್ತಿ. ಎಲ್ಲಕ್ಕಿಂತ ಮುಖ್ಯವಾಗಿ ಈ ವಿಷಯ ಇಷ್ಟೊಂದು ಪ್ರಾಮುಖ್ಯತೆ ಪಡೆಯಲು ಕಾರಣವೆಂದರೆ ಕಳೆದ ಅಕ್ಟೋಬರ್ 14, 2022ರಂದು ಜಸ್ಟಿಸ್ ದೇವ್ ನಕ್ಸಲ್ ಸಹಾನುಭೂತಿ ಹೊಂದಿರುವ ಹಣೆಪಟ್ಟಿಯ ಜಿ.ಎನ್. ಸಾಯಿಬಾಬಾ ಮತ್ತು ಇತರ ನಾಲ್ವರನ್ನು ಜೀವಾವಧಿ ಶಿಕ್ಷೆಯಿಂದ ಬಿಡುಗಡೆಗೊಳಿಸಿದ್ದಾರೆ. ಮಹಾರಾಷ್ಟ್ರದ ಗಡಚಿರೋಲಿಯ ಸೆಷನ್ಸ್ ನ್ಯಾಯಾಲಯ ಈ 5 ಜನರಿಗೂ ಯುಎಪಿಎ ಕಾಯ್ದೆಯ ಅಡಿಯಲ್ಲಿ ನಕ್ಸಲ್ ಕಾರ್ಯಾಚರಣೆಗೆ ಸಹಾಯ ಮಾಡಿದ ಹಾಗೂ ದೇಶದ ಮೇಲೆ ಯುದ್ಧ ಘೋಷಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಆರೋಪಿಗಳ ಶಿಕ್ಷೆಯನ್ನು ಜಸ್ಟಿಸ್ ರೋಹಿತ್ ದೇವ್ ಮತ್ತು ಅನಿಲ್ ಪನ್ಸಾರೆ ಅವರ ಪೀಠ ತಳ್ಳಿಹಾಕಿ ಆರೋಪಿಗಳನ್ನು ಬಿಡುಗಡೆಗೊಳಿಸುವ ತೀರ್ಪು ನೀಡಿದ್ದರು. ಆದರೆ ಆ ತೀರ್ಪು ಪ್ರಕಟವಾದ 24 ಗಂಟೆಗಳ ಒಳಗೆ ಸುಪ್ರೀಂ ಕೋರ್ಟ್ ಈ ತೀರ್ಮಾನದ ವಿರುದ್ಧ ತಡೆಯಾಜ್ಞೆ ನೀಡಿ ತೀರ್ಪನ್ನು ತಡೆಹಿಡಿಯುವ ಆದೇಶ ನೀಡಿತು.

ಒಂದು ನ್ಯಾಯಾಲಯ ನೀಡಿರುವ ತೀರ್ಪಿನ ಮೇಲೆ ಅದರ ಮೇಲಿನ ನ್ಯಾಯಾಲಯ ವ್ಯತಿರಿಕ್ತ ತೀರ್ಪು ಕೊಡುವುದು ಇಲ್ಲ ತಡೆಯಾಜ್ಞೆ ಕೊಡುವುದು ಸಾಮಾನ್ಯ; ಇದರಲ್ಲಿ ಅಂಥ ವೈಪರೀತ್ಯ ಏನಿದೆ ಎಂಬ ಮಾತು ಬರಬಹುದು. ಆದರೆ ನೀಡಿರುವ ತೀರ್ಪು ಯಾರದು, ಅದು ಸಮಾಜಕ್ಕೆ ನೀಡುವ ಸಂದೇಶವೇನು? ಯಾವ ಸಂದರ್ಭದಲ್ಲಿ ಆ ತೀರ್ಪು ಹೊರಬಂದಿದೆ ಮತ್ತು ಅದರಿಂದ ಆಡಳಿತ ಪಕ್ಷಕ್ಕೆ ಯಾವ ರೀತಿಯ ಪರಿಣಾಮ ಉಂಟಾಗುತ್ತದೆ ಎಂಬುದರ ಮೇಲೆ ತೀರ್ಪಿನ ಪ್ರಾಮುಖ್ಯತೆಯನ್ನು ಅರ್ಥೈಸಬೇಕಾಗುತ್ತದೆ.

ಸಾಯಿಬಾಬಾ ಕೇಸ್‌ನ ಹಿನ್ನಲೆ

ಆಂಧ್ರ ಮೂಲದ ಸಾಯಿಬಾಬಾ ದೆಹಲಿಯ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಫ್ರೊಫೆಸರ್. ಶೇಕಡ 90% ಅಂಗವೈಕಲ್ಯದಿಂದ ಬಳಲುತ್ತಿರುವ ಸಾಯಿಬಾಬಾ ಅವರಿಗೆ ಸುಮಾರು 15ಕ್ಕಿಂತ ಹೆಚ್ಚಿನ ಗಂಭೀರವಾದ ಕಾಯಿಲೆಗಳಿವೆ. ಇಂತಹ ಗಂಭೀರ ಸಮಸ್ಯೆಗಳ ನಡುವೆಯೂ ಆದಿವಾಸಿಗಳ ಸಮಸ್ಯೆಗಳಿಗೆ ಮರುಗಿ ಅವರ ಹಕ್ಕುಗಳ ಸಲುವಾಗಿ ಹೋರಾಟ ಮಾಡಿದ ಸಾಯಿಬಾಬಾರನ್ನು ಮಹಾರಾಷ್ಟ್ರ ಸರ್ಕಾರ ’ನಿಷೇಧಿತ ಸಿಪಿಐ(ಎಂ)’ ಸಂಘಟನೆಯೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಲಾದ ರೆವಲ್ಯೂಷನರಿ ಡೆಮಾಕ್ರಟಿಕ್ ಫ್ರಂಟ್ (RDF)’ ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಸಾಯಿಬಾಬಾ ಮತ್ತು ಇತರರನ್ನು 2014ರಲ್ಲಿ ಬಂಧಿಸಿತು. ನ್ಯಾಯಾಲಯ ಯುಎಪಿಎ ಕಾಯ್ದೆಯಅಡಿ ಜೀವಾವಧಿ ಶಿಕ್ಷೆಯನ್ನೂ ವಿಧಿಸಿತು. ಜೈಲಿನ ವಾತಾವರಣದಲ್ಲಿ ಜರ್ಝರಿತರಾದ ಸಾಯಿಬಾಬಾರ ಆರೋಗ್ಯದ ಬಗ್ಗೆ ಸಂಯುಕ್ತ ರಾಷ್ಟ್ರ ಸಂಘಟನೆಗಳ ಮಾನವ ಹಕ್ಕು ಅಂಗ ಭಾರತ ಸರ್ಕಾರಕ್ಕೆ ಕಾಳಜಿ ವಹಿಸುವಂತೆ ಕೋರಿದೆ; ಆದರೆ ಪರಿಣಾಮ ಶೂನ್ಯ.

ಇದನ್ನೂ ಓದಿ: ಗಂಡನ ಆಸ್ತಿಯಲ್ಲಿ ಹೆಂಡತಿಗೆ ಸಮಪಾಲು: ಮದ್ರಾಸ್ ಹೈಕೋರ್ಟ್‌ನ ಮಹತ್ವದ ತೀರ್ಪು

ಜೀವಾವಧಿ ಶಿಕ್ಷೆಯ ಮೇಲ್ಮನವಿಯಲ್ಲಿ ಸುಮಾರು 101 ಪುಟಗಳ ಸುದೀರ್ಘ ತೀರ್ಪನ್ನು ನೀಡಿದ ಪೀಠ ಹೇಗೆ ನ್ಯಾಯದಾನದ ಪ್ರತಿ ಹಂತದಲ್ಲೂ ಕಾನೂನುಬದ್ಧ ಕ್ರಮಗಳ ಉಲ್ಲಂಘನೆ ಆಗಿದೆ ಎಂದು ಹೇಳಿರುವುದಲ್ಲದೆ, ಜೊತೆಗೆ ಅತ್ಯಂತ ಪ್ರಮುಖ ಅಂಶವಾದ, “ದೇಶದ ವಿರುದ್ಧ ನಡೆಯುವ ವಿಧ್ವಂಸಕ ಕೃತ್ಯಗಳನ್ನು ತಡೆಯುವ ಅಗತ್ಯಗಳ ಜೊತೆಗೆ, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕ ಹಕ್ಕುಗಳ ರಕ್ಷಣೆ ಪ್ರಮುಖವಾದದ್ದು”, ಈ ನಿಟ್ಟಿನಲ್ಲಿ ಯಾವುದೇ ಕಾರ್ಯವೈಖರಿ ಅಥವಾ ಕರ್ತವ್ಯಲೋಪಗಳನ್ನು ಸಮರ್ಥಿಸಲು ಆಗುವುದಿಲ್ಲ ಎಂದು ಹೇಳಿತ್ತು.

ಜಿ.ಎನ್. ಸಾಯಿಬಾಬಾ

ಈ ತೀರ್ಪಿನ ವಿರುದ್ಧ ಮಹಾರಾಷ್ಟ್ರ ಸರ್ಕಾರ 24 ಗಂಟೆಗಳ ಒಳಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿಗೆ ಹೋದಾಗ ಮೊದಲಿಗೆ ಅದು ಜಸ್ಟಿಸ್ ಚಂದ್ರಚೂಡ್ ಅವರ ಎದುರಿಗೆ ಬಂದಿತ್ತು. ಇನ್ನೆರಡೇ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಆಗಲಿದ್ದ ಅವರು, ಯಾವುದೇ ತುರ್ತು ಅಗತ್ಯ ಇಲ್ಲದ ಕಾರಣ 2 ದಿನಗಳ ನಂತರ ಸೋಮವಾರಕ್ಕೆ ಪ್ರಕರಣ ಕೈಗೆತ್ತಿಕೊಳ್ಳಬಹುದು ಎಂದಾಗ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪ್ರಕರಣವನ್ನು ಬೇರೆ ಪೀಠದ ಮುಂದೆ ತುರ್ತಾಗಿ ತರುವಂತೆ ಕೇಳಿದ ಮೇರೆಗೆ, ಶನಿವಾರ ಜಸ್ಟಿಸ್ ಶಾ ಹಾಗೂ ಬೇಲಾ ತ್ರಿವೇದಿ ಅವರ ಪೀಠದ ಮುಂದೆ ಪ್ರಕರಣವನ್ನು ತಂದು ತಡೆಯಾಜ್ಞೆಯನ್ನು ಪಡೆಯಲಾಯಿತು. ಈ ಪ್ರಕರಣದ ಆಳ ಅಗಲಗಳನ್ನು ಬಗೆಯುತ್ತ ಹೋದರೆ ಅಲ್ಲಿ ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಅಂತಃಸಾಕ್ಷಿಗೆ ಚೂರಿ ಇರಿದ ಅನುಭವವಾಗುತ್ತದೆ.

ಜಸ್ಟಿಸ್ ರೋಹಿತ್ ದೇವ್ ತಮ್ಮ ರಾಜೀನಾಮೆಗೆ ಯಾವುದೇ ಕಾರಣಗಳನ್ನು ನೀಡಿರದೇ ಇರಬಹುದು ಆದರೆ ಇತ್ತೀಚೆಗೆ ಅವರನ್ನು ನಾಗಪುರದಿಂದ ಅಲಹಾಬಾದ್‌ಗೆ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶವೂ ಕಾರಣ ಎನ್ನಲಾಗುತ್ತಿದೆ.

ಕೆಲವೊಂದು ಸಂದರ್ಭಗಳಲ್ಲಿ ಕಾರಣಗಳನ್ನು ನೇರವಾಗಿ ಹೇಳದೆ ಇದ್ದರೂ ಆ ಸಂದರ್ಭದ ಹಿನ್ನೆಲೆ ಹಾಗೂ ಅದನ್ನು ಸುತ್ತುವರಿದ ಘಟನಾವಳಿಗಳ ಹಿನ್ನೆಲೆಯಲ್ಲಿ ಕಾರಣಗಳನ್ನು ವಿಶ್ಲೇಷಿಸಬೇಕಾಗುತ್ತದೆ. ಈ ವಿಶ್ಲೇಷಣೆಗಳು ತರ್ಕದ ಹಿನ್ನಲೆಗಳು ಎಲ್ಲವನ್ನು ಜಾಲಾಡಿದಾಗ ವಸ್ತುಸ್ಥಿತಿ ಗೋಚರವಾಗಬಹುದು. ಇಂದಿನ ಮಾಧ್ಯಮಗಳ ದಿವಾಳಿತನ ಮತ್ತು ಆಡಳಿತ ಪಕ್ಷದೆಡೆಗಿನ ಭಟ್ಟಂಗಿತನವನ್ನು ನೋಡುವ ಯಾವುದೇ ವ್ಯಕ್ತಿಗೆ ವಸ್ತುನಿಷ್ಠ ವರದಿ ಹಾಗೂ ಕಾರಣಗಳು ಕಾಣುವ ಸಾಧ್ಯತೆಗಳಿಲ್ಲ.

ದೇಶದ ಆಗುಹೋಗುಗಳನ್ನು ಕೇವಲ ಆ ದಿನದ ಘಟನೆಗಳಂತೆ ನೋಡುವವರಿಗೆ ಒಂದು ಗಂಭೀರ ಘಟನೆಯ ಚಾರಿತ್ರಿಕ ಹಿನ್ನಲೆಯಾಗಲಿ ಅದು ಮುಂದೆ ದೇಶದ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆಯಾಗಲಿ ಅರಿವು ಇರುವುದಿಲ್ಲ. ಜಸ್ಟಿಸ್ ದೇವ್ ಅವರ ರಾಜೀನಾಮೆ ಕೇವಲ ಒಂದು ಸಣ್ಣ ಘಟನೆ ಅಲ್ಲ.

ಇನ್ನು ವೃತ್ತಿಬಾಂಧವರಿಗೆ ಇದೊಂದು ನೋವಿನ ಸಂಗತಿ. ಒಬ್ಬ ದಕ್ಷ ನ್ಯಾಯಮೂರ್ತಿಯ ರಾಜೀನಾಮೆ ಕೆಲಸದ ಮೇಲೆ ಅಡ್ಡಪರಿಣಾಮಗಳನ್ನು ಬೀರುತ್ತದೆ. ಆದರೆ ಪ್ರಜಾಪ್ರಭುತ್ವದ ತತ್ವಗಳಲ್ಲಿ ನಂಬಿಕೆ ಇರಿಸಿ ದೇಶದ ಆಗುಹೋಗುಗಳನ್ನು ಸೂಕ್ಷ್ಮವಾಗಿ ಗಮನಿಸುವ ಪ್ರತಿಯೊಬ್ಬರಿಗೂ ಇದೊಂದು ಆಘಾತಕಾರಿ ಸುದ್ದಿ.

ಬಾರ್ ಎಂಡ್ ಬೆಂಚ್ ವರದಿಯ ಪ್ರಕಾರ 2017ರಿಂದ ಈಚೆಗೆ ಒಟ್ಟು 15 ಜನ ನ್ಯಾಯಮೂರ್ತಿಗಳು ಬಾಂಬೆ ಹೈಕೋರ್ಟ್‌ಗೆ ರಾಜೀನಾಮೆಯನ್ನು ನೀಡಿದ್ದಾರೆ. ಇನ್ನು ಹೆಚ್ಚುವರಿ ನ್ಯಾಯಮೂರ್ತಿಗಳನ್ನೂ ಸೇರಿಸಿದರೆ ಈ ಸಂಖ್ಯೆ ಇನ್ನೂ ಹೆಚ್ಚಾಗುತ್ತದೆ. ನ್ಯಾಯಮೂರ್ತಿಗಳು ಎಂಥ ಕಠಿಣ ಪರಿಸ್ಥಿತಿಗಳಲ್ಲೂ ತಮ್ಮ ನಿಷ್ಠೆ, ಪ್ರಾಮಾಣಿಕತೆಗಳನ್ನು ಕಾಯ್ದಿಟ್ಟುಕೊಳ್ಳಬೇಕು ಎಂಬುದು ಸಮಾಜದ ಆಶಯ. ಆದರೆ ಒಂದು ವ್ಯತಿರರಿಕ್ತ ಪರಿಸ್ಥಿತಿಯಲ್ಲಿ ಸಮಗ್ರ ವ್ಯವಸ್ಥೆಯನ್ನೇ ಎದುರು ಹಾಕಿಕೊಳ್ಳುವ ದಾಷ್ಟ್ರ್ಯ ಮತ್ತು ಅಗತ್ಯ ಎಷ್ಟು ಜನರಿಗೆ ಇರುತ್ತದೆ? ತಮ್ಮ ತೀರ್ಪುಗಳಲ್ಲಿ ಕಾನೂನುಗಳ ಉಲ್ಲೇಖಾ, ವಿಶ್ಲೇಷಣೆಗಳ ಜೊತೆಗೆ ಧರ್ಮದ ತಿರುಳು, ಸಾರ ಮುಂತಾದ ಉದಾಹರಣೆಗಳನ್ನು ನೀಡುತ್ತಿದ್ದ ಕೆಲವು ನ್ಯಾಯಮೂರ್ತಿಗಳನ್ನು ನಾವು ನೋಡಿದ್ದೇವೆ; ಆದರೆ ಪ್ರಖ್ಯಾತ ಕಾನೂನು ತಜ್ಞ ಡಾ. ಮೋಹನ್ ಗೋಪಾಲ್ ಅವರು ನೀಡಿರುವ ಒಂದು ಉಪನ್ಯಾಸದಲ್ಲಿ “ಸಂವಿಧಾನದಿಂದ ಮೂಲವನ್ನು ಗ್ರಹಿಸುವ ಬದಲು ಧರ್ಮಗ್ರಂಥಗಳಿಂದ ಆಕರಗಳನ್ನು ಹುಡುಕಿ ತೀರ್ಪು ನೀಡುತ್ತಿರುವ ನ್ಯಾಯಮೂರ್ತಿಗಳ ಸಂಖ್ಯೆ ಕಳೆದ ದಶಕದಲ್ಲಿ ಹೆಚ್ಚಾಗಿವೆ” ಎಂದು ಉದಾಹರಣೆಗಳ ಮೂಲಕ ಹೇಳುತ್ತಾರೆ. ಅಂದರೆ ಇವತ್ತಿನ ಧರ್ಮದ ಅಮಲಿನ ಆಡಳಿತ ಪಕ್ಷಕ್ಕೆ ಪೂರಕವಾಗಿ ನಡೆದುಕೊಳ್ಳುತ್ತಿರುವ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅರ್ಥ. ಇನ್ನು ಸಂವಿಧಾನಾತ್ಮಕವಾಗಿ ತೀರ್ಪು ನೀಡಿದರೆ ಅನಪೇಕ್ಷಿತ ಮತ್ತು ಅನಿರೀಕ್ಷಿತ ವರ್ಗಾವಣೆಗಳು ಕಾಯುತ್ತವೆ ಎಂದರೆ ನ್ಯಾಯಮೂರ್ತಿಗಳು ನಿರ್ಭೀತಿಯಿಂದ ಕೆಲಸ ಮಾಡಲು ಹೇಗೆ ಸಾಧ್ಯ?

ನ್ಯಾಯಾಂಗ ಇವತ್ತು ಅಡ್ಡರಸ್ತೆಯಲ್ಲಿ ಇದೆಯಾ? ನ್ಯಾಯದಾನ ಎಂಬುದು ಎಲ್ಲಿದೆ? ಅಸಮಾನತೆ ಮತ್ತು ಅಸಹಿಷ್ಣುತೆಯ ಪ್ರತಿಬಿಂಬವಾದ ಮನು ಮಹಾರಾಜನ ಮೂರ್ತಿಯನ್ನು ತನ್ನ ಆವರಣದಲ್ಲಿ ಪ್ರತಿಷ್ಠಾಪಿಸಿದ ರಾಜಸ್ಥಾನದ ಹೈಕೋರ್ಟ್ ಜನರಿಗೆ ಕೊಡುತ್ತಿರುವ ಸಂದೇಶವೇನು? ಇವೆಲ್ಲಾ ಪ್ರಶ್ನೆಗಳು ಜಸ್ಟಿಸ್ ರೋಹಿತ್ ದೇವ್ ರಾಜೀನಾಮೆ ಹಿನ್ನೆಲೆಯಲ್ಲಿ ಏಳುತ್ತವೆ.

ರಾಜಲಕ್ಷ್ಮಿ ಅಂಕಲಗಿ

ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು, ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...