Homeಅಂಕಣಗಳುಬಹುಜನ ಭಾರತ; ದಲಿತ ನಾಗರಾಜುವಿನ ಹತ್ಯೆ ಹಿಂದೆ ಹಲವು ಪ್ರಶ್ನೆಗಳಿವೆ..

ಬಹುಜನ ಭಾರತ; ದಲಿತ ನಾಗರಾಜುವಿನ ಹತ್ಯೆ ಹಿಂದೆ ಹಲವು ಪ್ರಶ್ನೆಗಳಿವೆ..

- Advertisement -
- Advertisement -

ಮೊನ್ನೆ ಹೈದರಾಬಾದಿನ ಬೀದಿಯೊಂದರಲ್ಲಿ ದಲಿತ ಯುವಕ ನಾಗರಾಜುವನ್ನು ಮತಾಂಧ ಮುಸ್ಲಿಮನೊಬ್ಬ ಭೀಕರವಾಗಿ ಕೊಂದುಹಾಕಿದ. ಹದಿನೈದು ನಿಮಿಷಗಳ ಕಾಲ ನಡೆದ ಈ ಹಲ್ಲೆಯಿದು. ಕಬ್ಬಿಣದ ಸರಳಿನಿಂದ ಬಡಿದು ತಲೆ ಒಡೆಯಲಾಯಿತು. ಈ ಅಮಾನುಷ ಹತ್ಯೆ ಜರುಗಿದ್ದು ಧರ್ಮಕ್ಕಿಂತ ಹೆಚ್ಚಾಗಿ ಜಾತಿಯ ಕಾರಣಕ್ಕೆ ಎಂಬುದನ್ನು ವಿಶೇಷವಾಗಿ ಗಮನಿಸಬೇಕು.

ಶಾಲಾದಿನಗಳಿಂದಲೂ ಪ್ರೀತಿಸುತ್ತಿದ್ದ ಅಶ್ರಿನ್ ಸುಲ್ತಾನಾ ಮತ್ತು ನಾಗರಾಜು ವಿವಾಹವಾಗಿ ಮೂರು ತಿಂಗಳು ಕಳೆದಿತ್ತು. ಈ ಮದುವೆಗೆ ಸುಲ್ತಾನಾ ಮನೆಯವರ ವಿರೋಧವಿತ್ತು. ನಾಗರಾಜು ದಲಿತ ಕುಲದಲ್ಲಿ ಹುಟ್ಟಿದ್ದೇ ಕೊಲ್ಲುವ ಕಡು ಹಗೆಗೆ ಕಾರಣ. ತನ್ನ ಪ್ರೀತಿಯನ್ನು ದಕ್ಕಿಸಿಕೊಂಡು ಬಾಳಲು ಬಯಸಿದ್ದ ನಾಗರಾಜು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಲು ಸಿದ್ಧನಿದ್ದ. ವಿವಾಹಕ್ಕೆ ಮುನ್ನ ಈ ಇರಾದೆಯನ್ನು ಅಶ್ರಿನ್ ಕುಟುಂಬಕ್ಕೆ ತಿಳಿಯಪಡಿಸಿ ಅವರ ಸಮ್ಮತಿ ಬಯಸಿದ್ದ. ಮತಾಂತರ ಹೊಂದಿದರೆ ಸಾಮಾನ್ಯವಾಗಿ ಮದುವೆಗೆ ಸಮ್ಮತಿ ದೊರೆತ ಪ್ರಕರಣಗಳು ಸಾಕಷ್ಟಿವೆ. ಆದರೆ ’ಹೊಲೆಯ’ನೊಂದಿಗೆ ರಕ್ತಸಂಬಂಧ ಬೆಳೆಸಲು ಅಶ್ರಿನ್ ಸೋದರ ಸಿದ್ಧನಿರಲಿಲ್ಲ. ಕುಟುಂಬದ-ಕುಲದ ’ಗರಿಮೆಗೆ ಕಳಂಕ’ ತಂದ ತಂಗಿಯನ್ನು ನೇಣುಹಾಕಿ ಕೊಲ್ಲಲು ಮದುವೆಗೆ ಮುಂಚೆಯೇ ಎರಡು ಸಲ ಪ್ರಯತ್ನಿಸಿದ್ದ. ಪರಾರಿಯಾಗಿ ಆರ್ಯಸಮಾಜ ಮಂದಿರದಲ್ಲಿ ಮದುವೆಯಾಗಿತ್ತು ಈ ಜೋಡಿ. ಆದರೆ ಪ್ರಾಣಾಪಾಯ ತಪ್ಪಿರಲಿಲ್ಲ. ಸೋದರ ಸಾಯಹೊಡೆಯುತ್ತಾನೆಂಬ ಎಚ್ಚರಿಕೆಯನ್ನು ಖುದ್ದು ಅಶ್ರಿನ್ ತಾಯಿಯೇ ನೀಡಿದ್ದಳು. ತಲೆಮರೆಸಿಕೊಂಡಿದ್ದ ಈ ಜೋಡಿ ತಮ್ಮ ಮೊಬೈಲುಗಳ ಸಿಮ್ ಕಾರ್ಡುಗಳನ್ನು ಕೂಡ ಬದಲಾಯಿಸಿದ್ದರು. ಪೊಲೀಸರಿಂದ ರಕ್ಷಣೆ ಕೋರಿದ್ದರು.

ಅಶ್ರಿನ್ ಕುಟುಂಬ ಸೈಯದ್ ಎಂಬ ಅಘೋಷಿತ ಕುಲೀನ ’ಜಾತಿ’ಗೆ ಸೇರಿದ್ದು. ಮೇಲುಕೀಳು- ಜಾತಿಭೇದವನ್ನು ಇಸ್ಲಾಂ ಬೋಧಿಸುವುದಿಲ್ಲ ನಿಜ. ಆದರೆ ಈ ಧರ್ಮದ ಅನುಯಾಯಿಗಳು ಬಹುತೇಕರು ಈ ತಾರತಮ್ಯವನ್ನು ಗಟ್ಟಿಯಾಗಿ ಅಪ್ಪಿ ಹಿಡಿದು ಆಚರಿಸುತ್ತಾರೆ. ಹಿಂದುವಿಗೆ ಅಸ್ಪೃಶ್ಯ ಎನಿಸುವ ವ್ಯಕ್ತಿ, ಮುಸಲ್ಮಾನನಿಗೂ ಅಸ್ಪೃಶ್ಯನೇ ಎಂದು ಬಾಬಾಸಾಹೇಬರು ಹೇಳಿದ್ದಾರೆ.

ನಾಗರಾಜು ಒಂದು ವೇಳೆ ದಲಿತನಾಗಿರದೆ ಹಿಂದು ಸವರ್ಣೀಯನಾಗಿದ್ದರೆ ಹತ್ಯೆಗೆ ಈಡಾಗುತ್ತಿದ್ದನೇ ಎಂಬುದಾಗಿ ಎದ್ದಿರುವ ಪ್ರಶ್ನೆ ಅತ್ಯಂತ ಪ್ರಸ್ತುತ. ಇದೇ ರೀತಿ ಹಿಂದು ಸವರ್ಣೀಯನಿಂದ ಹತ್ಯೆಗೀಡಾಗುವ ದಲಿತನ ಪರ ಏಳುವ ದನಿಗಳು ಅತಿ ಕ್ಷೀಣ. ನಾಗರಾಜುವಿನ ಹತ್ಯೆ ಮೂಲಭೂತವಾಗಿ ಜಾತಿಯ ಪ್ರಶ್ನೆ ಎಂಬುದನ್ನು ಆತನ ಪರ ಎದ್ದಿರುವ ಸಹಾನುಭೂತಿಯ ಬಹುಪಾಲು ದನಿಗಳು ಒಪ್ಪಲು ತಯಾರಿಲ್ಲ. ಈ ದನಿಗಳಿಗೆ ಮುಸ್ಲಿಮರನ್ನು ಖಳನಾಯಕರನ್ನಾಗಿ ಕಟಕಟೆಯಲ್ಲಿ ನಿಲ್ಲಿಸುವುದು ಏಕೈಕ ಉದ್ದೇಶ. ಈ ಉದ್ದೇಶಕ್ಕೆ ಯಾರು ಒದಗಿ ಬಂದರೂ ಅವರನ್ನು ಬಳಸಿಕೊಂಡೇ ಸಿದ್ಧ.

ಹೆಣ್ಣು ಕುಟುಂಬದ ಆಸ್ತಿಪಾಸ್ತಿ ಎಂಬ ಪುರಾತನ ಪುರುಷಾಧಿಪತ್ಯ ಭಾರತೀಯ ಸಮಾಜದಲ್ಲಿ ಸಿಡಿಲಾಗಿ ಅಬ್ಬರಿಸಿದೆ. ಮಧ್ಯಯುಗದ ಅನಾಗರಿಕ ಮನಸ್ಥಿತಿಯಿದು. ಮನಸು ಬಯಸಿದ ಸಂಗಾತಿಯನ್ನು ಆರಿಸಿಕೊಂಡು ಬದುಕುವ ಸ್ವಾತಂತ್ರ್ಯವನ್ನು ಸಮಾನತೆಯನ್ನು ಆಕೆಗೆ ನಿರಾಕರಿಸಲಾಗಿದೆ. ಲಿಂಗ ತಾರತಮ್ಯದ ಮನುವಾದ, ಪುರುಷಾಧಿಪತ್ಯ, ಜಾತಿವ್ಯವಸ್ಥೆ, ಕೋಮುವಾದ, ಮೂಲಭೂತವಾದದ ಹಲವು ಅಂಶಗಳು ಕಲೆತು ಬೆರೆತಿರುವ ಸಂಕೀರ್ಣ ವಿದ್ಯಮಾನವಿದು.

ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಕಾವೇರಿದ ಚರ್ಚೆ ನಡೆದಿದೆ. ನಾಗರಾಜುವಿಗೆ ನ್ಯಾಯ ಕೇಳುವವರು ಹೆಚ್ಚಿನ ಸಂಖ್ಯೆಯಲ್ಲಿ ಯಾಕಿದ್ದಾರೆಂದರೆ ನಾಗರಾಜುವಿನ ಹಂತಕ ಒಬ್ಬ ಮುಸಲ್ಮಾನ. ಒಬ್ಬ ಹಿಂದು ಬಲಿಷ್ಠ ಜಾತಿಯವನು ನಾಗರಾಜುವನ್ನು ಕೊಂದಿದ್ದರೆ ನ್ಯಾಯ ಕೇಳುವವರೇ ದಿಕ್ಕಿರುತ್ತಿರಲಿಲ್ಲ. ಜಾತಿ ಎಂಬುದು ಸಾಮಾಜಿಕ ಅನಿಷ್ಟ. ಅರಿವು, ಅಧಿಕಾರ, ಆಸ್ತಿಪಾಸ್ತಿ, ಸಂಪನ್ಮೂಲಗಳು, ಘನತೆ ಗೌರವ, ಲೈಂಗಿಕ ದೃಷ್ಟಿಕೋನದ ನಿಯಂತ್ರಣ ಮತ್ತು ವಿತರಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಪಿಡುಗು.

ಭಾರತೀಯ ಮುಸಲ್ಮಾನರೂ ಈ ಜಾತಿ ಆಧಾರಿತ ಏಣಿಶ್ರೇಣಿ ವ್ಯವಸ್ಥೆಯ ಬಲಿಪಶುಗಳು. ಈ ಶ್ರೇಣಿಯ ತುತ್ತತುದಿಯಲ್ಲಿರುವವರು ಅಶ್ರಫ್ ಮುಸ್ಲಿಮರು. ಸೈಯದ್, ಶೇಖ್, ಮುಘಲ್, ಪಠಾಣ್ ಎಂದು ಕರೆದುಕೊಳ್ಳುವವರು ತಮ್ಮ ಮೂಲ ಪಶ್ಚಿಮ ಅಥವಾ ಮಧ್ಯ ಏಷ್ಯಾ ಎಂಬುದಾಗಿ ಗುರುತಿಸಿಕೊಳ್ಳುತ್ತಾರೆ. ಭಾರತದ ಬಲಿಷ್ಠ ಜಾತಿಗಳಿಂದ ಇಸ್ಲಾಮಿಗೆ ಮತಾಂತರ ಹೊಂದಿದವರು ತಮ್ಮನ್ನು ಮುಸ್ಲಿಮ್ ರಜಪೂತ, ತಾಗಾ ಅಥವಾ ತ್ಯಾಗಿ ಮುಸ್ಲಿಮ್, ಗಾಢೆ ಅಥವಾ ಗೌಡ್ ಮುಸ್ಲಿಮರೆಂದು ಹೇಳಿಕೊಳ್ಳುತ್ತಾರೆ. ಸೈಯದ್ ಎಂದು ಕರೆದುಕೊಳ್ಳುವವರು ಹಿಂದು ವರ್ಣವ್ಯವಸ್ಥೆಯ ಬ್ರಾಹ್ಮಣ ಜಾತಿಗೆ ಸರಿಸಮಾನ. ಈ ಅಸಮಾನತೆಯನ್ನು ’ಸೈಯದ್ ವಾದ’ ಎಂದು ಕರೆಯಲಾಗಿದೆ. ಈ ಅಶ್ರಫ್ ಯಜಮಾನಿಕೆಯ ವಿರುದ್ಧ ಕೆಳವರ್ಗದ ಅಜ್ಲಾಫ್ (ಹಿಂದುಳಿದವರು) ಮತ್ತು ಅರ್ಜಲ್ (ದಲಿತರು) ಮುಸಲ್ಮಾನರು ಹೋರಾಟ ನಡೆಸಿದ್ದಾರೆ. ಭಾರತೀಯ ಮುಸಲ್ಮಾನರ ಪೈಕಿ ಸವರ್ಣೀಯರ ಪ್ರಮಾಣ ಶೇ.15. ಉಳಿದವರು ಹಿಂದುಳಿದ, ದಲಿತ ಹಾಗು ಬುಡಕಟ್ಟು ಮುಸ್ಲಿಮರು. ಮುಸಲ್ಮಾನರಲ್ಲಿ ಅಸ್ಪೃಶ್ಯತೆ ಆಚರಣೆಯೂ ಉಂಟು. ಸ್ಟ್ಯಾಲಿನ್ ಪದ್ಮಾ ಎಂಬ ಪ್ರತಿಭಾವಂತ ನಿರ್ಮಿಸಿರುವ ಹೊಳಪಿನ ಸಾಕ್ಷ್ಯಚಿತ್ರ ’ಇಂಡಿಯಾ ಅನ್‌ಟಚ್ಡ್’ (India Untouched) ಈ ಮಾತಿಗೆ ಜೀವಂತ ಸಾಕ್ಷ್ಯ ನುಡಿಯುತ್ತದೆ.

ಧೋಬಿ, ಲೋಹಾರ-ಬಧಯಿ, ಧುನಿಯಾ- ಮನ್ಸೂರಿ, ಕಸಾಯಿ-ಖುರೇಶಿ, ಫಕೀರ್-ಆಲ್ವಿ, ಹಜ್ಜಾಮ್-ಸಲ್ಮಾನಿ, ಮೆಹ್ತಾರ್-ಹಲಾಲ್ಖೋರ್, ಗ್ವಾಲ-ಘೋಸಿ, ದರ್ಜಿ-ಇದ್ರಿಸಿ, ಕುಂಜ್ರೆ-ರಯೀನ್, ಜುಲಾಹೆ-ಅನ್ಸಾರಿ ಸಮುದಾಯಗಳು ’ಪಸ್ಮಾಂದ’ ಅಸ್ಮಿತೆಯಡಿ ಒಟ್ಟಾಗಿವೆ. ಪಸ್ಮಾಂದ ಎಂದರೆ ಹಿಂದುಳಿಸಲಾಗಿರುವವರು ಎಂದು ಅರ್ಥ.

ಮುಸ್ಲಿಮ್ ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಕ್ಷೇತ್ರಗಳಲ್ಲಿ ಕುಲೀನ ಮುಸ್ಲಿಮರದೇ ಪ್ರಾಬಲ್ಯ. 1952ರಲ್ಲಿ ರಚಿತವಾದ ಒಂದನೆಯ ಲೋಕಸಭೆಯಿಂದ 2004ರ 14ನೆಯ ಲೋಕಸಭೆಯ ತನಕ ಲೋಕಸಭೆಗೆ ಆಯ್ಕೆಯಾದ ಮುಸಲ್ಮಾನ ಜನಪ್ರತಿನಿಧಿಗಳ ಒಟ್ಟು ಸಂಖ್ಯೆ 400. ಈ ಪೈಕಿ ಸವರ್ಣೀಯ ಅಶ್ರಫ್ ಮುಸಲ್ಮಾನರ ಸಂಖ್ಯೆ 340. ಈ ಹದಿನಾಲ್ಕು ಲೋಕಸಭೆಗಳಲ್ಲಿ ಆಯ್ಕೆಯಾದ ಪಸ್ಮಾಂದ ಮುಸಲ್ಮಾನರ ಸಂಖ್ಯೆ ಕೇವಲ 60.

2011ರ ಜನಗಣತಿಯ ಪ್ರಕಾರ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅಶ್ರಫ್ ಮುಸ್ಲಿಮರ ಪ್ರಮಾಣ ಶೇ.2.1. ಪಸ್ಮಾಂದ ಮುಸ್ಲಿಮರ ಪ್ರಮಾಣ ಶೇ.11.4. ಲೋಕಸಭೆಯಲ್ಲಿ ಅಶ್ರಫ್ ಮುಸಲ್ಮಾನರ ಪ್ರಾತಿನಿಧ್ಯ ಒಟ್ಟು ಪ್ರಾತಿನಿಧ್ಯದ ಶೇ.2.1ರಷ್ಟಿದ್ದರೆ, ಪಸ್ಮಾಂದ ಮುಸಲ್ಮಾನರ ಪ್ರಾತಿನಿಧ್ಯ ಶೇ.0.8.

ಭಾರತೀಯ ಮುಸಲ್ಮಾನರ ಜೊತೆ ಬೆರೆತು ಕೆಲಸ ಮಾಡುವ ಅನುಭವವೊಂದನ್ನು ಕಾನ್ಶೀರಾಮ್ ಅವರು ಹೀಗೆ ಬಣ್ಣಿಸಿದ್ದಾರೆ: “ಮುಸಲ್ಮಾನ ಸಮುದಾಯವನ್ನು ಅವರ ನಾಯಕರ ಮೂಲಕ ಸಂಪರ್ಕಿಸುವುದು ಮೇಲೆಂದು ಅಂದುಕೊಂಡೆ. ಸುಮಾರು 50 ಮಂದಿ ಮುಸ್ಲಿಮ್ ನಾಯಕರನ್ನು ಭೇಟಿ ಮಾಡಿದ ಬಳಿಕ ಅವರಲ್ಲಿನ ಬ್ರಾಹ್ಮಣ್ಯವನ್ನು ಕಂಡು ದಂಗಾದೆ. ಸಮಾನತೆಯನ್ನು ಸಾಧಿಸುವ ಮತ್ತು ಅನ್ಯಾಯದ ವಿರುದ್ಧ ಹೋರಾಡಬೇಕೆಂದು ಇಸ್ಲಾಮ್ ಹೇಳಿಕೊಡುತ್ತದೆ. ಆದರೆ ಮುಸ್ಲಿಮ್ ನಾಯಕತ್ವದಲ್ಲಿ ಸೈಯದ್‌ಗಳು, ಶೇಖ್‌ಗಳು, ಮುಘಲರು ಹಾಗೂ ಪಠಾಣರಂತಹ ಬಲಿಷ್ಠ ಜಾತಿಗಳದೇ ಪ್ರಾಬಲ್ಯ. ಅನ್ಸಾರಿಗಳು, ಧುನಿಯಾಗಳು, ಖುರೇಶಿಗಳಂತಹ ಅಧೀನ ಜಾತಿಗಳು ತಮ್ಮ ಸಮಾನಕ್ಕೆ ಏರುವುದನ್ನು ಈ ಪ್ರಬಲ ಜಾತಿಗಳು ಸಹಿಸುವುದಿಲ್ಲ. ಹೀಗಾಗಿ ಹಿಂದೂ ಪರಿಶಿಷ್ಟ ಸಮುದಾಯಗಳಿಂದ ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿದ ಮುಸಲ್ಮಾನರನ್ನು (ಪಸ್ಮಾಂದ) ಮಾತ್ರವೇ ಪ್ರೋತ್ಸಾಹಿಸಿ ಬೆಳೆಸಲು ನಾನು ತೀರ್ಮಾನಿಸಿದೆ”. (’ಕಾನ್ಶೀರಾಮ್ ಕಿ ನೇಕ್ ಕಮಾಯಿ ಜಿಸ್ನೆ ಸೋಟಿ ಕ್ವಾಮ್ ಜಗಾಯಿ’ ಹೆಸರಿನ ಪುಸ್ತಕವೊಂದರಲ್ಲಿ ಸತ್ನಾಮ್ ಸಿಂಗ್ ಎಂಬ ಲೇಖಕರು ಈ ಸಂಗತಿಯನ್ನು ಉಲ್ಲೇಖಿಸಿದ್ದಾರೆ).

’ಹಿಂದೂ ಸಮಾಜದ ಅದೇ ಸಾಮಾಜಿಕ ಅನಿಷ್ಟಗಳು ಭಾರತೀಯ ಮುಸ್ಲಿಂ ಸಮಾಜಕ್ಕೂ ಬಡಿದುಕೊಂಡಿವೆ’ ಎಂಬ ಡಾ.ಅಂಬೇಡ್ಕರ್ ಅವರ ಮಾತುಗಳು ಈ ಸಂದರ್ಭದಲ್ಲಿ ನೆನಪಾಗುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಹೈದರಾಬಾದ್ ಮಾರ್ಯಾದೆಹೀನ ಹತ್ಯೆ: ಸಂವಿಧಾನ ಮತ್ತು ಇಸ್ಲಾಂ ಪ್ರಕಾರ ಕ್ರಿಮಿನಲ್ ಕೃತ್ಯ – ಅಸಾದುದ್ದೀನ್ ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hope this News is to get attention of anti communal minds.
    First off all know one is aware of arms act.
    They were using airguns which is permitted subject to permission from concerning authority.

    Some people fearing in kodagu.
    It’s so peaceful hear.

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...