Homeಮುಖಪುಟಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

ಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಸನ್ನಿಹಿತವಾಗಿದ್ದರೂ ಆಡಳಿತರೂಢ ಬಿಜೆಪಿ ಪಕ್ಷವು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಹಿಂದೇಟು ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಕೆ.ಎಸ್ ಈಶ್ವರಪ್ಪನರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಹಿ ಕನಿಷ್ಟ ಇಪ್ಪತ್ತು ಹಾಲಿ ಶಾಸಕರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳು ಪ್ರಕಟವಾಗುತ್ತಿವೆ. ಇನ್ನು ಯಡಿಯೂರಪ್ಪನವರನ್ನು ಬಿಟ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿರುವುದಕ್ಕೆ ಬೇಸರಗೊಂಡು ಅವರು ದೆಹಲಿಯಿಂದ ವಾಪಸ್ಸಾಗಿದ್ದಾರೆ.

ಯಾರಿಗಿಲ್ಲ ಟಿಕೆಟ್?

ಜಗದೀಶ್ ಶೆಟ್ಟರ್: ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ಜಗದೀಶ್ ಶೆಟ್ಟರ್‌ರವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನಿಂದ ಬೆಳಿಗ್ಗೆ ಫೋನ್ ಕರೆ ಬಂದಿತ್ತು. ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಹೇಳುತ್ತಿದ್ದಾರೆ. ನಾನು ಮೂವತ್ತು ವರ್ಷ ಕಟ್ಟಿದ ಪಕ್ಷದವರು ನನಗೆ ಹೀಗೆ ಹೇಳುವುದು ಸರಿಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ನೂರಾರು ಜನರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇವೆ. ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ. ಪಕ್ಷನಿಷ್ಟನಾಗಿದ್ದೇನೆ. ಹಾಗಿದ್ದರೂ ಟಿಕೆಟ್ ನಿರಾಕರಿಸುತ್ತಿರುವುದಕ್ಕೆ ಎಂದು ಪ್ರಶ್ನಿಸಿದ್ದೇನೆ ಎಂದಿದ್ದಾರೆ.

ಈ ಕುರಿತು ಈಗಾಗಲೇ ಬಿ.ಎಸ್ ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ. ಪಕ್ಷದ ವರಿಷ್ಠರ ನಡೆ ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಈಶ್ವರಪ್ಪನವರ ಪುತ್ರನಿಗಿಲ್ಲ ಟಿಕೆಟ್: ಇನ್ನು ನಿವೃತ್ತಿ ಘೋಷಿಸಿರುವ ಕೆ.ಎಸ್ ಈಶ್ವರಪ್ಪನವರ ಪುತ್ರ ಕೆ.ಇ.ಕಾಂತೇಶ್‌ರವರಿಗೂ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರದಿಂದಲೇ ಟಿಕೆಟ್ ಕೇಳುತ್ತಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಸೇರುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಈಶ್ವರಪ್ಪನ ಪುತ್ರನಿಗೆ ಟಿಕೆಟ್ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ.

ಸಂಸದ ಬಸವರಾಜು ಮಗನಿಗೂ ಟಿಕೆಟ್ ಡೌಟ್: ತುಮಕೂರು ಸಂಸದ ಜಿ.ಎಸ್ ಬಸವರಾಜುರವರ ಪುತ್ರ ಜ್ಯೋತಿಗಣೇಶ್‌ರವರಿಗೂ ಟಿಕೆಟ್ ಸಿಗುವುದು ಅನುಮಾನವಾಗಿದೆ. ಇವರಿಬ್ಬರೂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ತುಮಕೂರು ನಗರ ಟಿಕೆಟ್ ಗಾಗಿ ಮತ್ತೊಬ್ಬ ಆರ್‌ಎಸ್‌ಎಸ್‌ ಕಟ್ಟಾಳು ಮಾಜಿ ಶಾಸಕ ಸೊಗಡು ಶಿವಣ್ಣ ತೀವ್ರ ಪೈಪೋಟಿ ನಡೆಸುತ್ತಿದ್ದು, ಬಹುಶಃ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಹಲವರ ಕ್ಷೇತ್ರ ಬದಲಾವಣೆ

ಸಚಿವ ಆರ್ ಅಶೋಕ್, ಶಾಸಕ ರವಿ ಸುಬ್ರಮಣ್ಯ, ಮಾಜಿ ಶಾಸಕ ನಂದೀಶ್ ರೆಡ್ಡಿ ಹಲವರ ಕ್ಷೇತ್ರ ಬದಲಾವಣೆ ಮಾಡಲಾಗುತ್ತದೆ ಎಂಬ ಮಾಹಿತಿಗಳು ಸಹ ಹರಿದಾಡುತ್ತಿವೆ. ಪದ್ಮನಾಭನಗರ ಮತ್ತು ಬಸವನಗುಡಿಯಲ್ಲಿ ಬಿಜೆಪಿಯಲ್ಲಿ ಯಾರೂ ನಿಂತರೂ ಗೆಲ್ಲುತ್ತಾರೆ. ಹಾಗಾಗಿ ಪೈಪೋಟಿ ಇರುವ ಬಿಟಿಎಂ ಲೇಔಟ್, ಬ್ಯಾಟರಾಯನಪುರದಂತಹ ಕ್ಷೇತ್ರಗಳಲ್ಲಿ ನಿಲ್ಲಬೇಕು ಎಂದು ತಾಕೀತು ಮಾಡಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಚುನಾವಣೆಗಳಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿಯೂ ಬಿಜೆಪಿ ಇದೇ ತಂತ್ರವನ್ನು ಅನುಸರಿಸಿತ್ತು. ಹಲವು ಹಾಲಿ ಶಾಸಕರನ್ನು ಬಿಟ್ಟು ಹೊಸಬರಿಗೆ ಟಿಕೆಟ್ ನೀಡಿತ್ತು. ಗುಜರಾತ್‌ನಲ್ಲಿ ಅದು ಯಶಸ್ವಿಯಾದರೆ, ಹಿಮಾಚಲ ಪ್ರದೇಶದಲ್ಲಿ ಮುಳುವಾಗಿತ್ತು. ಕರ್ನಾಟಕದಲ್ಲಿ ಯಾವ ಫಲಿತಾಂಶ ಬರುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...