Homeಮುಖಪುಟಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

ಜಗದೀಶ್ ಶೆಟ್ಟರ್ ಸಹಿತ ಹಲವು ಹಾಲಿ ಶಾಸಕರಿಗಿಲ್ಲ ಬಿಜೆಪಿ ಟಿಕೆಟ್: ಹಲವರ ಕ್ಷೇತ್ರ ಬದಲಾವಣೆ

- Advertisement -
- Advertisement -

ಕರ್ನಾಟಕದ ವಿಧಾನಸಭಾ ಚುನಾವಣೆ ಸನ್ನಿಹಿತವಾಗಿದ್ದರೂ ಆಡಳಿತರೂಢ ಬಿಜೆಪಿ ಪಕ್ಷವು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಹಿಂದೇಟು ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಕೆ.ಎಸ್ ಈಶ್ವರಪ್ಪನರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಹಿ ಕನಿಷ್ಟ ಇಪ್ಪತ್ತು ಹಾಲಿ ಶಾಸಕರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದಿಲ್ಲ ಎಂಬ ವರದಿಗಳು ಪ್ರಕಟವಾಗುತ್ತಿವೆ. ಇನ್ನು ಯಡಿಯೂರಪ್ಪನವರನ್ನು ಬಿಟ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿರುವುದಕ್ಕೆ ಬೇಸರಗೊಂಡು ಅವರು ದೆಹಲಿಯಿಂದ ವಾಪಸ್ಸಾಗಿದ್ದಾರೆ.

ಯಾರಿಗಿಲ್ಲ ಟಿಕೆಟ್?

ಜಗದೀಶ್ ಶೆಟ್ಟರ್: ಮಾಜಿ ಮುಖ್ಯಮಂತ್ರಿ, ಹಾಲಿ ಸಚಿವ ಜಗದೀಶ್ ಶೆಟ್ಟರ್‌ರವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ನಿಂದ ಬೆಳಿಗ್ಗೆ ಫೋನ್ ಕರೆ ಬಂದಿತ್ತು. ಹೊಸಬರಿಗೆ ಅವಕಾಶ ಮಾಡಿಕೊಡಿ ಎಂದು ಹೇಳುತ್ತಿದ್ದಾರೆ. ನಾನು ಮೂವತ್ತು ವರ್ಷ ಕಟ್ಟಿದ ಪಕ್ಷದವರು ನನಗೆ ಹೀಗೆ ಹೇಳುವುದು ಸರಿಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ನೂರಾರು ಜನರಿಗೆ ಬಿಜೆಪಿ ಟಿಕೆಟ್ ಕೊಟ್ಟಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇವೆ. ಯಾವುದೇ ಕಪ್ಪು ಚುಕ್ಕೆ ಹೊಂದಿಲ್ಲ. ಪಕ್ಷನಿಷ್ಟನಾಗಿದ್ದೇನೆ. ಹಾಗಿದ್ದರೂ ಟಿಕೆಟ್ ನಿರಾಕರಿಸುತ್ತಿರುವುದಕ್ಕೆ ಎಂದು ಪ್ರಶ್ನಿಸಿದ್ದೇನೆ ಎಂದಿದ್ದಾರೆ.

ಈ ಕುರಿತು ಈಗಾಗಲೇ ಬಿ.ಎಸ್ ಯಡಿಯೂರಪ್ಪನವರ ಜೊತೆ ಮಾತನಾಡಿದ್ದೇನೆ. ಪಕ್ಷದ ವರಿಷ್ಠರ ನಡೆ ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಈಶ್ವರಪ್ಪನವರ ಪುತ್ರನಿಗಿಲ್ಲ ಟಿಕೆಟ್: ಇನ್ನು ನಿವೃತ್ತಿ ಘೋಷಿಸಿರುವ ಕೆ.ಎಸ್ ಈಶ್ವರಪ್ಪನವರ ಪುತ್ರ ಕೆ.ಇ.ಕಾಂತೇಶ್‌ರವರಿಗೂ ಟಿಕೆಟ್ ನೀಡುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್ ಸುಳಿವು ನೀಡಿದೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರದಿಂದಲೇ ಟಿಕೆಟ್ ಕೇಳುತ್ತಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಸೇರುವ ಆಲೋಚನೆಯಲ್ಲಿದ್ದಾರೆ. ಹಾಗಾಗಿ ಈಶ್ವರಪ್ಪನ ಪುತ್ರನಿಗೆ ಟಿಕೆಟ್ ನೀಡಲು ಬಿಜೆಪಿ ಹಿಂದೇಟು ಹಾಕುತ್ತಿದೆ.

ಸಂಸದ ಬಸವರಾಜು ಮಗನಿಗೂ ಟಿಕೆಟ್ ಡೌಟ್: ತುಮಕೂರು ಸಂಸದ ಜಿ.ಎಸ್ ಬಸವರಾಜುರವರ ಪುತ್ರ ಜ್ಯೋತಿಗಣೇಶ್‌ರವರಿಗೂ ಟಿಕೆಟ್ ಸಿಗುವುದು ಅನುಮಾನವಾಗಿದೆ. ಇವರಿಬ್ಬರೂ ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು. ತುಮಕೂರು ನಗರ ಟಿಕೆಟ್ ಗಾಗಿ ಮತ್ತೊಬ್ಬ ಆರ್‌ಎಸ್‌ಎಸ್‌ ಕಟ್ಟಾಳು ಮಾಜಿ ಶಾಸಕ ಸೊಗಡು ಶಿವಣ್ಣ ತೀವ್ರ ಪೈಪೋಟಿ ನಡೆಸುತ್ತಿದ್ದು, ಬಹುಶಃ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ.

ಹಲವರ ಕ್ಷೇತ್ರ ಬದಲಾವಣೆ

ಸಚಿವ ಆರ್ ಅಶೋಕ್, ಶಾಸಕ ರವಿ ಸುಬ್ರಮಣ್ಯ, ಮಾಜಿ ಶಾಸಕ ನಂದೀಶ್ ರೆಡ್ಡಿ ಹಲವರ ಕ್ಷೇತ್ರ ಬದಲಾವಣೆ ಮಾಡಲಾಗುತ್ತದೆ ಎಂಬ ಮಾಹಿತಿಗಳು ಸಹ ಹರಿದಾಡುತ್ತಿವೆ. ಪದ್ಮನಾಭನಗರ ಮತ್ತು ಬಸವನಗುಡಿಯಲ್ಲಿ ಬಿಜೆಪಿಯಲ್ಲಿ ಯಾರೂ ನಿಂತರೂ ಗೆಲ್ಲುತ್ತಾರೆ. ಹಾಗಾಗಿ ಪೈಪೋಟಿ ಇರುವ ಬಿಟಿಎಂ ಲೇಔಟ್, ಬ್ಯಾಟರಾಯನಪುರದಂತಹ ಕ್ಷೇತ್ರಗಳಲ್ಲಿ ನಿಲ್ಲಬೇಕು ಎಂದು ತಾಕೀತು ಮಾಡಲಾಗಿದೆ ಎನ್ನಲಾಗಿದೆ.

ಇತ್ತೀಚಿನ ಚುನಾವಣೆಗಳಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿಯೂ ಬಿಜೆಪಿ ಇದೇ ತಂತ್ರವನ್ನು ಅನುಸರಿಸಿತ್ತು. ಹಲವು ಹಾಲಿ ಶಾಸಕರನ್ನು ಬಿಟ್ಟು ಹೊಸಬರಿಗೆ ಟಿಕೆಟ್ ನೀಡಿತ್ತು. ಗುಜರಾತ್‌ನಲ್ಲಿ ಅದು ಯಶಸ್ವಿಯಾದರೆ, ಹಿಮಾಚಲ ಪ್ರದೇಶದಲ್ಲಿ ಮುಳುವಾಗಿತ್ತು. ಕರ್ನಾಟಕದಲ್ಲಿ ಯಾವ ಫಲಿತಾಂಶ ಬರುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಣೆ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...