Homeಮುಖಪುಟಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ಒಂದನ್ನು ದಾಖಲಿಸಿದ್ದಾರೆ.

ಅಜಿತ್ ಪವಾರ್ ಅವರ ಸೋದರ ಸಂಬಂಧಿಯ ಮಗನಾದ ರೋಹಿತ್ ರಾಜೇಂದ್ರ ಪವಾರ್, ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕರ್ಜತ್-ಜಮಖೇಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಎನ್‌ಸಿಪಿ ಶರದ್ ಪವಾರ್ ಬಣದಲ್ಲಿದ್ದಾರೆ.

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರ ಹಿಂದೆ ‘ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ’ಯ ಅನುಮಾನವನ್ನು ವ್ಯಕ್ತಪಡಿಸಿ ಅಥವಾ ಆರೋಪ ಮಾಡಿ ರೋಹಿತ್ ಪವಾರ್ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದನ್ನು ಆಧರಿಸಿ ಪೊಲೀಸರು ಝೀರೋ ಎಫ್‌ಐಆರ್‌ ದಾಖಲಿಸಿದ್ದಾರೆ.

ಝೀರೋ ಎಫ್‌ಐಆರ್ ಎಂದರೆ ಅಪರಾಧ ಎಲ್ಲಿ ಸಂಭವಿಸಿದೆ ಎಂಬುದನ್ನು ಲೆಕ್ಕಿಸದೆ ದೇಶದ ಯಾವುದೇ ಪೊಲೀಸ್ ಠಾಣೆಯಲ್ಲಿ ದಾಖಲಿಸಬಹುದಾದ ದೂರು. ಈ ಎಫ್‌ಐಆರ್ ಅನ್ನು ಆರಂಭದಲ್ಲಿ ಕ್ರಮ ಸಂಖ್ಯೆ 0 ಯೊಂದಿಗೆ ನೋಂದಾಯಿಸಿ, ನಂತರ ತನಿಖೆಗಾಗಿ ಸೂಕ್ತ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುತ್ತದೆ.

ಬೆಂಗಳೂರು ಪೊಲೀಸರು ರೋಹಿತ್ ಪವಾರ್ ದೂರಿನ ಎಫ್‌ಐಆರ್ ಅನ್ನು ಹೆಚ್ಚಿನ ತನಿಖೆಗಾಗಿ ಈಗಾಗಲೇ ಮಹಾರಾಷ್ಟ್ರ ಪೊಲೀಸರಿಗೆ ವರ್ಗಾಯಿಸಿದ್ದಾರೆ ಎಂದು indianexpress.com ಬುಧವಾರ (ಮಾ.25) ವರದಿ ಮಾಡಿದೆ.

ಬೆಂಗಳೂರಿನಲ್ಲಿ ದೂರು ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದ ರೋಹಿತ್ ಪವಾರ್, “ಈ ಹಿಂದೆ ದೂರು ನೀಡಿದ್ದರೂ ಮಹಾರಾಷ್ಟ್ರದಲ್ಲಿ ಪ್ರಕರಣ ದಾಖಲಾಗಿಲ್ಲ. ಆದ್ದರಿಂದ ತಾನು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಬೇಕಾಯಿತು” ಎಂದು ಹೇಳಿರುವುದಾಗಿ ವರದಿಯಾಗಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಿವೃತ್ತ ಸಿಜೆಐ ಬಿ.ಆರ್‌ ಗವಾಯಿ ಅವರ ಮೇಲೆ ನಡೆದ  ಅವರ ಮೇಲೆ ನಡೆದ ಹಲ್ಲೆಯ ಯತ್ನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ‘ಝೀರೋ ಎಫ್‌ಐಆರ್’ ದಾಖಲಾದ ಉದಾಹರಣೆಯನ್ನು  ರೋಹಿತ್ ಪವಾರ್ ಸ್ಮರಿಸಿದ್ದು, ಮಹಾರಾಷ್ಟ್ರ ಪೊಲೀಸರ ನಿಷ್ಕ್ರಿಯತೆಯಿಂದಾಗಿ ಅಜಿತ್ ಪವಾರ್ ಅವರ ಪ್ರಕರಣದಲ್ಲೂ ಇದೇ ಮಾದರಿಯ ಕಾನೂನು ಪ್ರಕ್ರಿಯೆಯನ್ನು ಅನುಸರಿಸಬೇಕಾಯಿತು ಎಂದು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ರೋಹಿತ್ ಪವಾರ್ ಅವರು ಬೆಂಗಳೂರಿನಲ್ಲಿ ದಾಖಲಿಸಿರುವ ‘ಝೀರೋ ಎಫ್‌ಐಆರ್’ನಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಪ್ರಮುಖ ಸೆಕ್ಷನ್‌ಗಳನ್ನು ಉಲ್ಲೇಖಿಸಲಾಗಿದೆ. ಈ ದೂರಿನಲ್ಲಿ ಪ್ರಮುಖವಾಗಿ ಅಜಿತ್ ಪವಾರ್ ಅವರ ಸಾವಿನ ಹಿಂದೆ ವ್ಯವಸ್ಥಿತ ಕ್ರಿಮಿನಲ್ ಪಿತೂರಿ ನಡೆದಿದೆ ಎಂದು ಆರೋಪಿಸಲಾಗಿದೆ.

ದೂರಿನ ಪ್ರಕಾರ, ವಿಎಸ್‌ಆರ್‌ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಖಾಸಗಿ ಸಂಸ್ಥೆ ನಿರ್ವಹಿಸುತ್ತಿದ್ದ ವಿಮಾನವು ಹಾರಾಟಕ್ಕೆ ಯೋಗ್ಯವಾಗಿರಲಿಲ್ಲ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ವಿಮಾನದ ನಿರ್ವಹಣಾ ದಾಖಲೆಗಳನ್ನು ತಿದ್ದಲಾಗಿದೆ ಮತ್ತು ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಅಂಶಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೈಲಟ್‌ನ ಹಳೆಯ ದಾಖಲೆಗಳು, ಕೊನೆಯ ಕ್ಷಣದಲ್ಲಿ ವಿಮಾನದ ಸಿಬ್ಬಂದಿಯನ್ನು ಬದಲಾಯಿಸಿದ್ದು ಮತ್ತು ಹವಾಮಾನ ವೈಪರೀತ್ಯದ ನಡುವೆಯೂ ವಿಮಾನವನ್ನು ಇಳಿಸಲು ತೆಗೆದುಕೊಂಡ ಸಂಶಯಾಸ್ಪದ ನಿರ್ಧಾರಗಳ ಬಗ್ಗೆಯೂ ರೋಹಿತ್ ಪವಾರ್ ದೂರಿನಲ್ಲಿ ಅನುಮಾಣ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಿಸಲು ಮಾಡಿದ ಪ್ರಯತ್ನಗಳು ವಿಫಲವಾದ ಹಿನ್ನೆಲೆಯಲ್ಲಿ ತಾವು ಬೆಂಗಳೂರು ಪೊಲೀಸರನ್ನು ಸಂಪರ್ಕಿಸಬೇಕಾಯಿತು ಎಂದು ರೋಹಿತ್ ಪವಾರ್ ತಿಳಿಸಿದ್ದಾರೆ. ಬೆಂಗಳೂರು ಪೊಲೀಸರು ಈ ದೂರಿನ ಆಧಾರದ ಮೇಲೆ ‘ಝೀರೋ ಎಫ್‌ಐಆರ್’ ದಾಖಲಿಸಿಕೊಂಡು, ನಂತರ ಅದನ್ನು ಮುಂದಿನ ತನಿಖೆಗಾಗಿ ಪುಣೆಯ ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದಾರೆ. 

ರೋಹಿತ್ ಪವಾರ್ ಅವರ ಪ್ರಕಾರ, ಅವರು ಫೆಬ್ರವರಿ 25ರಂದು ಮೆರೈನ್ ಡ್ರೈವ್ ಪೊಲೀಸ್ ಠಾಣೆ ಮತ್ತು ಫೆಬ್ರವರಿ 26ರಂದು ಬಾರಾಮತಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದರು. ಆದರೆ ಅಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿರಲಿಲ್ಲ. ನಂತರ ಪುಣೆ ಸಿಐಡಿಯು ಕೇವಲ ಆಕಸ್ಮಿಕ ಸಾವು ವರದಿ (ಎಡಿಆರ್) ಬಗ್ಗೆ ಮಾತ್ರ ತನಿಖೆ ನಡೆಸಲಾಗುತ್ತಿದೆ ಎಂದು ತಮಗೆ ತಿಳಿಸಿತ್ತು ಎಂದು ಅವರು ಹೇಳಿದ್ದಾರೆ.

ತಮ್ಮ ದೂರಿನಲ್ಲಿ ಪವಾರ್ ಅವರು, ‘ಉಪಮುಖ್ಯಮಂತ್ರಿಯನ್ನು ಮಟ್ಟಹಾಕುವ ಉದ್ದೇಶದಿಂದ ನಡೆದ ದೊಡ್ಡ ಕ್ರಿಮಿನಲ್ ಪಿತೂರಿ’ ಇದಾಗಿದೆ ಎಂದು ಆರೋಪಿಸಿದ್ದಾರೆ. ವಿಮಾನಯಾನ ಸುರಕ್ಷತಾ ನಿಯಮಗಳ ವ್ಯವಸ್ಥಿತ ಉಲ್ಲಂಘನೆ, ದಾಖಲೆಗಳ ತಿದ್ದುಪಡಿ ಮತ್ತು ವಿಎಸ್‌ಆರ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಘೋರ ನಿರ್ಲಕ್ಷ್ಯವನ್ನು ಅವರು ದೂರಿನಲ್ಲಿ ಎತ್ತಿ ತೋರಿಸಿದ್ದಾರೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ನಡೆಸಿದ ಸುರಕ್ಷತಾ ತಪಾಸಣೆಯನ್ನು ಉಲ್ಲೇಖಿಸಿದ ಅವರು, ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನವು ‘ನಿರ್ಲಕ್ಷ್ಯಕ್ಕೊಳಗಾಗಿತ್ತು, ಹಾರಾಟಕ್ಕೆ ಯೋಗ್ಯವಾಗಿರಲಿಲ್ಲ’ ಮತ್ತು ಅದನ್ನು ನೆಲಕ್ಕಿಳಿಸಲಾಗಿತ್ತು ಎಂದು ಪ್ರತಿಪಾದಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಜೆಟ್ ವಿಮಾನವನ್ನು ಅದರ ಓವರ್‌ಹಾಲ್ ಮಿತಿಯ ಅಪಾಯಕಾರಿ ಹತ್ತಿರದ ಅವಧಿಯಲ್ಲಿ ಕಾರ್ಯಾಚರಣೆ ಮಾಡಲಾಗಿತ್ತು ಮತ್ತು ವಿಮಾನದ ಹಾರಾಟದ ದತ್ತಾಂಶಗಳನ್ನು ಮರೆಮಾಚಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ವಿಮಾನದ ಸಿಬ್ಬಂದಿ ಬದಲಾವಣೆಯ ಬಗ್ಗೆಯೂ ಪ್ರಶ್ನೆ ಎತ್ತಿರುವ ಪವಾರ್, ಅದಕ್ಕೆ ನೀಡಲಾದ ವಿವರಣೆಯು ‘ಅಪನಂಬಿಕೆಯಿಂದ ಕೂಡಿದೆ’ ಎಂದು ಕರೆದಿದ್ದಾರೆ. ಮುಖ್ಯ ಪೈಲಟ್ ಸುಮಿತ್ ಕಪೂರ್ ಅವರಿಗೆ ಮದ್ಯಪಾನಕ್ಕೆ ಸಂಬಂಧಿಸಿದ ನಿಯಮ ಉಲ್ಲಂಘನೆಯ ಇತಿಹಾಸವಿದೆ ಎಂದು ಅವರು ಆರೋಪಿಸಿದ್ದಾರೆ. ವಿವರಿಸಲಾಗದ ವಿಳಂಬಗಳು, ರನ್‌ವೇಯ ಹಠಾತ್ ಬದಲಾವಣೆ ಮತ್ತು ಅಂತಿಮ ಕ್ಷಣಗಳಲ್ಲಿ ಪೈಲಟ್‌ನ ಮೌನವನ್ನು ಅವರು ಎತ್ತಿ ತೋರಿಸಿದ್ದು, ಇದು ಮದ್ಯಪಾನದಿಂದ ಉಂಟಾದ ಅಶಕ್ತತೆ ಅಥವಾ ಉದ್ದೇಶಪೂರ್ವಕ ನಿರ್ಲಕ್ಷ್ಯ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನದ ಪ್ರಮಾಣೀಕರಣದಲ್ಲಿ ಕಾರ್ಯವಿಧಾನದ ಲೋಪಗಳಿತ್ತು ಎಂದು ಎಫ್‌ಐಆರ್‌ನಲ್ಲಿ ಪ್ರತಿಪಾದಿಸಲಾಗಿದೆ. ಅಲ್ಲದೆ, ಇದು ನಿಯಂತ್ರಕ ಸಂಸ್ಥೆಗಳ ವೈಫಲ್ಯದ ಸಾಧ್ಯತೆಯನ್ನು ಎತ್ತಿ ತೋರಿಸಿದ್ದು, ಪ್ರಸ್ತುತ ನಡೆಯುತ್ತಿರುವ ತಾಂತ್ರಿಕ ತನಿಖೆಯ ಆಚೆಗೆ ಸಮಗ್ರ ಕ್ರಿಮಿನಲ್ ತನಿಖೆಗೆ ಒತ್ತಾಯಿಸಲಾಗಿದೆ.

ಜನವರಿ 28ರಂದು ಮುಂಬೈನಿಂದ ಹೊರಟಿದ್ದ ವಿಎಸ್‌ಆರ್ ವೆಂಚರ್ಸ್ ಪ್ರೈವೆಟ್‌ ಲಿಮಿಟೆಡ್ ಸಂಸ್ಥೆಯ ಬೊಂಬಾರ್ಡಿಯರ್ ಲಿಯರ್‌ಜೆಟ್ 45 ವಿಮಾನವು ಬಾರಾಮತಿ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ್ದರು.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...