Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...