Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...