Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...