Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...