Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...