Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...