Homeಮುಖಪುಟರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

ರೈತ ಹೋರಾಟವನ್ನು ಬೆಂಬಲಿಸಿದ ಮಾವೋವಾದಿಗಳು : ಕಾಡಿನಲ್ಲಿ ಕರಪತ್ರ, ಬ್ಯಾನರ್ ಪತ್ತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮಾವೋವಾದಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾ ಸ್ಥಳದ 1,200 ಕಿಲೋ ಮೀಟರ್‌ ದೂರದಲ್ಲಿರುವ ಮಧ್ಯಪ್ರದೇಶದ ಅರಣ್ಯದಲ್ಲಿ ಮಾವೋವಾದಿಗಳ ಕರಪತ್ರ, ಬ್ಯಾನರ್ ಪತ್ತೆಯಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಆಮರಣಾಂತ ಉಪವಾಸ ಸತ್ಯಾಗ್ರಹ ಮತ್ತು ಮಧ್ಯಪ್ರದೇಶದಲ್ಲಿ ಭದ್ರತಾ ಪಡೆಗಳು-ಮಾವೋವಾದಿಗಳ ನಡುವೆ ಸಂಘರ್ಷ ಉಲ್ಬಣಗೊಂಡಿರುವ ನಡುವೆ ಈ ಬೆಳವಣಿಗೆ ನಡೆದಿದೆ.

ಪೂರ್ವ ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ (ರಾಜ್ಯದ ಮೂರು ಮಾವೋವಾದಿ ಪೀಡಿತ ಜಿಲ್ಲೆಗಳಲ್ಲಿ ಒಂದು) ದಟ್ಟಾರಣ್ಯದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಭದ್ರತಾ ಪಡೆಗಳು ರೂಪಜಾರ್ ಅರಣ್ಯ ಪ್ರದೇಶದಲ್ಲಿ ಎರಡು ಪುಟಗಳ ಕರಪತ್ರಗಳು ಮತ್ತು ಕೆಂಪು ಬ್ಯಾನರ್ ವಶಪಡಿಸಿಕೊಂಡಿವೆ.

“ಪ್ರಸ್ತುತ ನಡೆಯುತ್ತಿರುವ ರೈತರ ಆಂದೋಲನವು ಕೇವಲ ಪಂಜಾಬ್ ಮತ್ತು ಹರಿಯಾಣದ ರೈತರ ಆಂದೋಲನವಲ್ಲ. ಅದು ವಾಸ್ತವವಾಗಿ ಮೋದಿ ಸರ್ಕಾರದ ರೈತ ವಿರೋಧಿ ನೀತಿಗಳಿಂದ ಈಗಾಗಲೇ ನಾಶವಾಗಿರುವ ಅಥವಾ ನಾಶವಾಗುವ ಅಂಚಿನಲ್ಲಿರುವ ದೇಶದ ಪ್ರತಿಯೊಬ್ಬ ರೈತರ ಚಳವಳಿಯಾಗಿದೆ” ಎಂದು ನಿಷೇಧಿತ ಸಿಪಿಐ (ಮಾವೋವಾದಿ) ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಿಶೇಷ ವಲಯ ಸಮಿತಿಯ ಹೆಸರಿನಲ್ಲಿ ಹೊರಡಿಸಲಾದ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ಹೇಳಿವೆ.

“ನಾವು ಮೂರು ರಾಜ್ಯಗಳ (ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ) ಮಿತ್ರ ಸಂಘಟನೆಗಳು, ಪರಿಸರವಾದಿಗಳು ಮತ್ತು ಬುದ್ಧಿಜೀವಿಗಳು ಮಾತ್ರವಲ್ಲದೆ ಜನರು, ರೈತರು ಮತ್ತು ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ನಡೆಯುತ್ತಿರುವ ರೈತ ಚಳವಳಿಯನ್ನು ಬೆಂಬಲಿಸಲು ಮನವಿ ಮಾಡುತ್ತೇವೆ. ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ, ರಸ್ತೆ ತಡೆ, ಉಪವಾಸ ಸತ್ಯಾಗ್ರಹಗಳನ್ನು ನಡೆಸಲು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿ ಪ್ರಚಾರ ಮಾಡಲು ಎಲ್ಲರಿಗೂ ಮನವಿ ಮಾಡುತ್ತೇವೆ. ಸಾಧ್ಯವಾದರೆ, ‘ಶಂಭು ಮತ್ತು ಕನೌರಿ ಗಡಿ ಚಲೋ’ ಎಂಬ ಘೋಷಣೆಯೊಂದಿಗೆ ದೆಹಲಿ ಮತ್ತು ಪಂಜಾಬ್‌ಗೆ ಮೆರವಣಿಗೆ ನಡೆಸಿ” ಎಂಬುವುದಾಗಿ ಕರಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಗಳು ವಿವರಿಸಿವೆ.

ಬಾಲಘಾಟ್ ಜಿಲ್ಲೆಯ ಮಾವೋವಾದಿಗಳ ಪೀಡಿತ ರೂಪಜಾರ್ ಅರಣ್ಯ ಪ್ರದೇಶದ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯ ಸೈನ್ ಬೋರ್ಡ್‌ನಲ್ಲಿ ಹಾಕಿರುವ ಕೆಂಪು ಬ್ಯಾನರ್‌ನಲ್ಲಿಯೂ ಕರಪತ್ರದಲ್ಲಿರುವ ವಿಷಯವನ್ನೇ ಬರೆಯಲಾಗಿದೆ.

ಬಾಲಾಘಾಟ್ ಜಿಲ್ಲೆಯ ಲಾಂಜಿ ಕಾಡಿನಲ್ಲಿ 10-12 ಮಾವೋವಾದಿಗಳ ಗುಂಪು ಮತ್ತು ರಾಜ್ಯ ಪೊಲೀಸರ ಮಾವೋವಾದಿ ವಿರೋಧಿ ಕಾರ್ಯಾಚರಣೆ ಪಡೆಗಳ ನಡುವೆ ಮುಖಾಮುಖಿ ಏರ್ಪಟ್ಟ ಕೆಲ ದಿನಗಳ ಬಳಿಕ ಕರಪತ್ರ, ಬ್ಯಾನರ್ ಪತ್ತೆಯಾಗಿದೆ. ಮುಖಾಮುಖಿ ಏರ್ಪಟ್ಟ ಸ್ಥಳದ ಸುಮಾರು 50 ಕಿಮೀ ದೂರದ ಛತ್ತೀಸ್‌ಗಢ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಕರಪತ್ರ, ಬ್ಯಾನರ್ ಕಂಡು ಬಂದಿವೆ.

ಕಾಡಿನಲ್ಲಿ ಕರಪತ್ರಗಳು ಮತ್ತು ಬ್ಯಾನರ್‌ ಪತ್ತೆಯಾಗಿರುವುದನ್ನು ದೃಢಪಡಿಸಿರುವ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, “ಇಡೀ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ ಮತ್ತು ವಿವರವಾದ ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಪೂರ್ವ ಮಧ್ಯಪ್ರದೇಶದ ಮಾವೋವಾದಿ ಪೀಡಿತ ಅರಣ್ಯ ಪ್ರದೇಶಗಳಲ್ಲಿ ಇಂತಹ ಕರಪತ್ರಗಳು ಪತ್ತೆಯಾಗಿರುವುದು ಇದೇ ಮೊದಲಲ್ಲ. ಏಪ್ರಿಲ್ 2021ರಲ್ಲೂ ರಾಷ್ಟ್ರೀಯ ರೈತರ ಚಳವಳಿಯನ್ನು ಬೆಂಬಲಿಸಿದ ಕರಪತ್ರ ಪತ್ತೆಯಾಗಿತ್ತು. ಡಿಸೆಂಬರ್ 2016ರಲ್ಲಿ, ಮೋದಿ ನೇತೃತ್ವದ ಆಡಳಿತದ ನೋಟು ಅಮಾನ್ಯೀಕರಣ ಕ್ರಮದ ವಿರುದ್ಧ ಕರಪತ್ರಗಳನ್ನು ಬಿಡುಗಡೆ ಮಾಡಿದ್ದರು.

ವರದಿ ಕೃಪೆ : newindianexpress.com

ಚಿಕ್ಕಮಗಳೂರು : ಮುಖ್ಯವಾಹಿನಿಗೆ ಇಂದು ಆರು ನಕ್ಸಲರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...