Homeಮುಖಪುಟಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

- Advertisement -
- Advertisement -

ಛತ್ತೀಸ್‌ಗಢದಲ್ಲಿ ನಕ್ಸಲರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಅವರ ಈ ದಾಳಿಯಲ್ಲಿ 10 ಪೊಲೀಸರು ಜೀವ ಕಳೆದುಕೊಂಡಿದ್ದಾರೆ. ಸುಧಾರಿತ ಸ್ಪೋಟಕ ಬಳಕೆ ಮಾಡಿಕೊಂಡು ಮಿನಿ ವ್ಯಾನ್‌ನಲ್ಲಿ ಸಂಚಾರ ನಡೆಸುತ್ತಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ಈ ದಾಳಿ ನಡೆಸಿದ್ದಾರೆ.

ಛತ್ತೀಸ್‌ಗಢದ ದಾಂತೇವಾಡದಲ್ಲಿ ಬುಧವಾರ ಮಧ್ಯಾಹ್ನ ಮಾವೋವಾದಿಗಳು ಈ ಘಟನೆ ನಡೆದಿದೆ. ಚಾಲಕ ಸೇರಿದಂತೆ ಒಟ್ಟು 10 ಪೊಲೀಸ್ ಸಿಬ್ಬಂದಿ ಈ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರು ವಾಪಸ್ ಆಗುವಾಗ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಛತ್ತೀಸ್​ಗಢದ ರಾಜ್ಯ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧರಿಸಿ ಪೊಲೀಸರು ಆ್ಯಂಟಿ ಮಾವೋಈಸ್ಟ್​ ಕಾರ್ಯಾಚರಣೆಯನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಪೊಲೀಸ್​ ಅಧಿಕಾರಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ(DRG)ಗೆ ಸೇರಿದ್ದವರು ಎಂದು ತಿಳಿದು ಬಂದಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಛತ್ತೀಸ್‌ಗಢದ ಮುಖ್ಯಮಂತ್ರಿಗಳು, ತಕ್ಷಣದ ನಕ್ಸಲರ ವಿರುದ್ಧ ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿವರಣೆ ನೀಡಿದ್ದಾರೆ.

”ದಾಂತೇವಾಡದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಅವರ ವಿರುದ್ಧ ಕಾರ್ಯಾಚರಣೆ ನಡೆಸಲು ಪೊಲೀಸರು ತೆರಳಿದ್ದರು. ಅಲ್ಲಿಂದ ವಾಹನದಲ್ಲಿ ವಾಪಸ್ ಆಗುವಾಗ ಸುಧಾರಿತ ಸ್ಫೋಟಕಗಳನ್ನು ಬಳಸಿ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

”ನಕ್ಸಲರು ಪೊಲೀಸ್ ವಾಹನವನ್ನು ಸ್ಫೋಟಗೊಳಿಸಿದ ಘಟನೆ ಅರನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುತಾತ್ಮ ಪೊಲೀಸರು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಗೆ ಸೇರಿದವರು. ಈ ಘಟನೆ ರಾಜಧಾನಿ ರಾಯ್‌ಪುರ್‌ನಿಂದ ಸುಮಾರು 450 ಕಿ. ಮೀ. ದೂರದಲ್ಲಿ ನಡೆದಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಅಮಿತ್ ಶಾ, ನಕ್ಸಲರ ವಿರುದ್ಧದ ಕಾರ್ಯಾಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.

ಭೂಪೇಶ್ ಬಘೇಲ್ ಘಟನೆ ಕುರಿತು ಟ್ವೀಟ್ ಮಾಡಿದ್ದು, ”ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಪೊಲೀಸರ ವಾಹನವದ ಮೇಲೆ ಸುಧಾರಿತ ಸ್ಫೋಟಕಗಳನ್ನು ಬಳಸಿಕೊಂಡು ದಾಳಿ ನಡೆಸಲಾಗಿದೆ. ಇದು ಅತ್ಯಂತ ದುಃಖಕರ ಸುದ್ದಿಯಾಗಿದ್ದು ಮೃತರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗುತ್ತೇವೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮುಖ್ಯಮಂತ್ರಿ ಭೂಪೇಶ್​ ಭಘೇಲ್​ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ”ದಾಂತೇವಾಡದಲ್ಲಿ ಛತ್ತೀಸ್‌ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ನಾವು ಕಳೆದುಕೊಂಡ ವೀರ ಯೋಧರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ತ್ಯಾಗ ಸದಾ ಸ್ಮರಣೀಯ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು,  ಘಟನೆ ಕುರಿತು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ಬಾಗಲ್ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ನಕ್ಸಲಿಸಂ ಕೊನೆಗಾಣಿಸಲು ಕಾಂಗ್ರೆಸ್ ಸರಕಾರಗಳು ಸದಾ ಕ್ರಮಗಳನ್ನು ಕೈಗೊಂಡಿವೆ. ನಮ್ಮ ನಾಯಕರು ನಕ್ಸಲ್‌ರನ್ನು ನಿಗ್ರಹಿಸಲು ಶ್ರಮವಹಿಸಿದ್ದಾರೆ. ನಕ್ಸಲಿಸಂ ವಿರುದ್ಧ ನಾವು ಒಗ್ಗಟ್ಟಾಗಿದ್ದೇವೆ ಮತ್ತು ಅದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದಿದ್ದಾರೆ.

”ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಹೇಡಿಗಳ ದಾಳಿಯಲ್ಲಿ ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾಗಿರುವುದು ತೀವ್ರ ದುಃಖ ತಂದಿದೆ. ಆ ಧೀರರಿಗೆ ನಮನಗಳು. ನಾವು ದುಃಖತಪ್ತ ಕುಟುಂಬಗಳೊಂದಿಗೆ ಇದ್ದೇವೆ. ಛತ್ತೀಸ್‌ಗಢದಲ್ಲಿ ನಕ್ಸಲಿಸಂ ವಿರುದ್ಧದ ಹೋರಾಟ ಕೊನೆಯ ಹಂತದಲ್ಲಿದೆ, ಅದರಲ್ಲಿ ನಮ್ಮ ಸರ್ಕಾರ ಗೆಲ್ಲಲಿದೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

ಈ ಮಾವೋವಾದಿಗಳು ದೇಶದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಛತ್ತೀಸ್‌ಗಢದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಈ ಹಿಂದೆ ಹಲವು ಬಾರಿ ಪೊಲೀಸರ ಜೊತೆ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಬಾರಿ ಪೊಲೀಸ್​ ವಾಹನದ ಮೇಲೆಯೇ ಮಾವೋವಾದಿಗಳು ಬಾಂಬ್​ ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...